ದ.ಕ. ಕ್ಲಸ್ಟರ್‌ ಹಾಟ್‌ಸ್ಪಾಟ್‌; ಉಡುಪಿ: ಆರೆಂಜ್‌ ಝೋನ್‌


Team Udayavani, Apr 16, 2020, 5:00 PM IST

ದ.ಕ. ಕ್ಲಸ್ಟರ್‌ ಹಾಟ್‌ಸ್ಪಾಟ್‌; ಉಡುಪಿ: ಆರೆಂಜ್‌ ಝೋನ್‌

ಉಡುಪಿ / ಮಂಗಳೂರು: ಕೋವಿಡ್ ನಿಯಂತ್ರಣದಲ್ಲಿ ಉಡುಪಿ ಜಿಲ್ಲೆ ಆರೆಂಜ್‌ ಝೋನ್‌ ಮತ್ತು ನಾನ್‌ಹಾಟ್‌ಸ್ಪಾಟ್‌ ಆಗಿ ಹಾಗೂ ದ.ಕ. ಜಿಲ್ಲೆ ಕ್ಲಸ್ಟರ್‌ ಹಾಟ್‌ಸ್ಪಾಟ್‌ ಆಗಿ ಗುರುತಿಸಿಕೊಂಡಿದೆ.

ಗ್ರೀನ್‌ ಝೋನ್‌ ಅಂದರೆ ಒಂದೇ ಒಂದು ಪಾಸಿಟಿವ್‌ ಪ್ರಕರಣ ಇಲ್ಲದ ಲಕ್ಷಣ. ಹೆಚ್ಚು ಪ್ರಕರಣಗಳು ದಾಖಲಾಗಿದ್ದರೆ ರೆಡ್‌ ಝೋನ್‌ ಎಂದು ಗುರುತಿಸಲಾಗುತ್ತದೆ. ಆರೆಂಜ್‌ ಝೋನ್‌ ಅತ್ತ ಸಂಪೂರ್ಣ ಮುಕ್ತವೂ ಅಲ್ಲದ, ಇತ್ತ ಅತಿ ಅಪಾಯಕಾರಿ ಹಂತವೂ ಅಲ್ಲದ ಸ್ಥಿತಿ. ಆದರೆ ಜಾಗೃತರಾಗಬೇಕಾದ ಸೂಚನೆ ಇದೆ.

ಉಡುಪಿ ಜಿಲ್ಲೆಯಲ್ಲಿ ಮೊದಲ ಮೂರು ಪಾಸಿಟಿವ್‌ ಪ್ರಕರಣದ ಬಳಿಕ ಅವರಿಂದ ಸಂಪರ್ಕಕ್ಕೆ ಒಳಗಾದ ಯಾರೊಬ್ಬರಿಗೂ ಸೋಂಕು ತಗಲದಂತೆ ನೋಡಿಕೊಂಡಿದ್ದು ಆರೆಂಜ್‌ ಝೋನ್‌ ಪ್ರಾಪ್ತವಾಗಲು ಕಾರಣವಾಗಿದೆ. ಇಲ್ಲಿ ಸಮುದಾಯಕ್ಕೆ ಸೋಂಕು ತಗುಲಿಲ್ಲ.

ಕೋವಿಡ್ ಪಾಸಿಟಿವ್‌ ಸಂಪರ್ಕಕ್ಕೆ ಬಂದವರಲ್ಲದೆ ಮೂರನೆಯ ಸಂಪರ್ಕದವರ ಗಂಟಲು ದ್ರವವನ್ನೂ ಸಂಗ್ರಹಿಸಲಾಗುತ್ತಿದೆ. ಬುಧವಾರ 106, ಮಂಗಳವಾರ 108 ಜನರ ಮಾದರಿಗಳನ್ನು ಸಂಗ್ರಹಿಸಲಾಗಿದೆ. ಸತತ 17 ದಿನಗಳಿಂದ ಯಾವುದೇ ಪಾಸಿಟಿವ್‌ ಪ್ರಕರಣಗಳು ದಾಖಲಾಗಿಲ್ಲ. 28 ದಿನಗಳು ಇದೇ ರೀತಿ ಮುಂದುವರಿದರೆ ಉಡುಪಿ ಕೋವಿಡ್ ಮುಕ್ತ ಜಿಲ್ಲೆ ಆಗಲಿದೆ.

ಗಡಿ ಬಂದ್‌ಗೆ ಇನ್ನಷ್ಟು ಆದ್ಯತೆ
ನಮ್ಮ ಜಿಲ್ಲೆ ಸುರಕ್ಷಿತವಾಗಿದ್ದರೂ ಗಡಿಯ ಬಂದೋಬಸ್ತನ್ನು ಇನ್ನಷ್ಟು ಬಿಗಿಗೊಳಿಸಲು ಜಿಲ್ಲಾಧಿಕಾರಿ ಅವರಿಗೆ ಮನವಿ ಮಾಡಿದ್ದೇವೆ. ಹೊರ ಜಿಲ್ಲೆ ಮತ್ತು ರಾಜ್ಯಗಳಿಂದ ಜನರು ಬಂದು ಅವರ ಆರೋಗ್ಯದಲ್ಲಿ ಸಮಸ್ಯೆ ಇದ್ದರೆ ಕಷ್ಟವಾಗುತ್ತದೆ. ಹಾಗೋ ಹೀಗೋ ಬಂದವರಿಗೆ ಮನೆಯಲ್ಲಿ ಕ್ವಾರಂಟೈನ್‌ನಲ್ಲಿರಲು ತಿಳಿಸಿದ್ದೇವೆ. ಅಗತ್ಯವಿದ್ದರೆ ಮಾದರಿ ಪರೀಕ್ಷೆಗಳನ್ನೂ ನಡೆಸುತ್ತಿದ್ದೇವೆ ಎಂದು ಉಡುಪಿ ಜಿಲ್ಲಾ ಆರೋಗ್ಯಾಧಿಕಾರಿ ಡಾ| ಸುಧೀರ್‌ಚಂದ್ರ  ಸೂಡ ತಿಳಿಸಿದ್ದಾರೆ.

ನಿಯಮ ಬದಲಾವಣೆ ಇಲ್ಲ
ದ.ಕ. ಜಿಲ್ಲೆಯಲ್ಲಿ ಒಟ್ಟು 12 ಪ್ರಕರಣಗಳು ಪತ್ತೆಯಾಗಿದ್ದು, 9 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಸತತ 17 ದಿನಗಳಿಂದ ಹೊಸ ಪ್ರಕರಣಗಳು ದಾಖಲಾಗಿಲ್ಲ. ಮೂವರು ಚಿಕಿತ್ಸೆ ಪಡೆಯುತ್ತಿರುವುದರಿಂದ ಜಿಲ್ಲೆಯನ್ನು ಕ್ಲಸ್ಟರ್‌ ಹಾಟ್‌ಸ್ಪಾಟ್‌ ಎಂದು ಗುರುತಿಸಲಾಗಿದೆ. ಆದರೆ, ಈ ಕುರಿತು ಪ್ರತಿಕ್ರಿಯಿಸಿರುವ ಮಂಗಳೂರು ಪೊಲೀಸ್‌ ಆಯುಕ್ತ ಡಾ| ಪಿ.ಎಸ್‌. ಹರ್ಷ ಅವರು, ಜಿಲ್ಲೆ ಯಾವುದೇ ಝೋನ್‌ನಲ್ಲಿ ಬಂದರೂ ನಗರ ವ್ಯಾಪ್ತಿಯಲ್ಲಿ ಲಾಕ್‌ಡೌನ್‌ ನಿಯಮಾವಳಿಗಳನ್ನು ಬದಲಿಸುವುದಿಲ್ಲ. ಈವರೆಗೆ ಯಾವ ರೀತಿಯ ಕಾನೂನು ಹಾಗೂ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿತ್ತೋ, ಅವುಗಳೇ ಮುಂದುವರಿಯಲಿವೆ. ಜನರು ಮನೆಯೊಳಗಿದ್ದು, ಕೋವಿಡ್ ಪ್ರಕರಣಗಳನ್ನು ಶೂನ್ಯಕ್ಕಿಳಿಸಲು ಹಾಗೂ ಹೊಸ ಪ್ರಕರಣಗಳು ಪತ್ತೆಯಾಗದಂತೆ ಮಾಡಲು ಸಹಕರಿಸಬೇಕು. ಅವಶ್ಯವಿಲ್ಲದಿಲ್ಲರೆ ಹೊರಗೆ ಬಾರದೆ ಲಾಕ್‌ಡೌನ್‌ ಯಶಸ್ವಿಯಾಗಿಸಬೇಕು ಎಂದು ಮನವಿ ಮಾಡಿದ್ದಾರೆ.

ಕಾಸರಗೋಡು ಹಾಟ್‌ಸ್ಪಾಟ್‌
ಒಂದು ಪ್ರಕರಣ ಮಾತ್ರ ಪತ್ತೆಯಾಗಿರುವ ಕೊಡಗು ಜಿಲ್ಲೆ ಆರೆಂಜ್‌ ಝೋನ್‌ನಲ್ಲಿ ಸೇರ್ಪಡೆಯಾಗಿದೆ. ಆದರೆ, ಇನ್ನೂ ಹಲವು ಪಾಸಿಟಿವ್‌ ಪ್ರಕರಣಗಳಿರುವ ಕಾಸರಗೋಡು ಜಿಲ್ಲೆ ಹಾಟ್‌ಸ್ಪಾಟ್‌ ಎಂದು ಗುರುತಿಸಿಕೊಂಡಿದೆ.

ಎ. 20: ಹೊಸ ಮಾರ್ಗದರ್ಶಿ ಸೂತ್ರ
ಲಾಕ್‌ಡೌನ್‌ ಮೇ 3ರ ವರೆಗೆ ಮುಂದುವರಿಯಲಿದ್ದು, ಎ. 20ರಂದು ಸರಕಾರ ಹೊಸ ಮಾರ್ಗದರ್ಶಿ ಸೂತ್ರಗಳನ್ನು ಪ್ರಕಟಿಸಲಿದೆ. ಆಗ ಗ್ರಾಮೀಣ ಪ್ರದೇಶಕ್ಕೆ ಸಂಬಂಧಿಸಿ ರಿಯಾಯಿತಿಗಳು ದೊರೆಯಬಹುದು. ಅಲ್ಲಿಯವರೆಗೆ ಯಥಾಸ್ಥಿತಿ ಮುಂದುವರಿಯಲಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್‌ ಹೇಳಿದ್ದಾರೆ.

ಟಾಪ್ ನ್ಯೂಸ್

AC ಸ್ಫೋಟದಿಂದ ಗಾಯಗೊಂಡಿದ್ದ ಸೂರಿಂಜೆ ಮೂಲದ ವ್ಯಕ್ತಿ ಸಾವು

AC ಸ್ಫೋಟದಿಂದ ಗಾಯಗೊಂಡಿದ್ದ ಸೂರಿಂಜೆ ಮೂಲದ ವ್ಯಕ್ತಿ ಸಾವು

Udupi ಶಿಕ್ಷಕರನ್ನು ಅವಮಾನಿಸಿದರೆ ಸಹಿಸಲು ಸಾಧ್ಯವಿಲ್ಲ: ಯಶ್‌ಪಾಲ್‌ ಸುವರ್ಣ

Udupi ಶಿಕ್ಷಕರನ್ನು ಅವಮಾನಿಸಿದರೆ ಸಹಿಸಲು ಸಾಧ್ಯವಿಲ್ಲ: ಯಶ್‌ಪಾಲ್‌ ಸುವರ್ಣ

Govt.,ಆದಾಯ ಮೂಲಕ್ಕೆ ಸಮಿತಿ ರಚಿಸಿದ ಸರಕಾರ

Govt.,ಆದಾಯ ಮೂಲಕ್ಕೆ ಸಮಿತಿ ರಚಿಸಿದ ಸರಕಾರ

BSY ಪೋಕ್ಸೋ ಪ್ರಕರಣ: ಸೆ. 19ಕ್ಕೆ ವಿಚಾರಣೆ ಮುಂದೂಡಿಕೆ

BSY ಪೋಕ್ಸೋ ಪ್ರಕರಣ: ಸೆ. 19ಕ್ಕೆ ವಿಚಾರಣೆ ಮುಂದೂಡಿಕೆ

Farmers ಪಾತಾಳಕ್ಕಿಳಿದ ಶುಂಠಿ ಬೆಲೆ; ಬೆಳೆಗಾರ ಕಂಗಾಲು

Farmers ಪಾತಾಳಕ್ಕಿಳಿದ ಶುಂಠಿ ಬೆಲೆ; ಬೆಳೆಗಾರ ಕಂಗಾಲು

ಕೊನೆಗೂ 3 ವಿಧೇಯಕಕ್ಕೆ ಗವರ್ನರ ಅಸ್ತು

Bengaluru: ಕೊನೆಗೂ 3 ವಿಧೇಯಕಕ್ಕೆ ಗವರ್ನರ ಅಸ್ತು

Kharge 2

CM ಹುದ್ದೆ ವಿಚಾರದಲ್ಲಿ ಸಚಿವರಿಂದಲೇ ಗೊಂದಲ: ಖರ್ಗೆಗೆ ಪತ್ರ ಬರೆದ ಪರಿಷತ್ ಸದಸ್ಯರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶಿಕ್ಷಕರನ್ನು ಅವಮಾನಿಸಿದರೆ ಸಹಿಸಲು ಸಾಧ್ಯವಿಲ್ಲ: ಯಶ್‌ಪಾಲ್‌ ಸುವರ್ಣ

Udupi ಶಿಕ್ಷಕರನ್ನು ಅವಮಾನಿಸಿದರೆ ಸಹಿಸಲು ಸಾಧ್ಯವಿಲ್ಲ: ಯಶ್‌ಪಾಲ್‌ ಸುವರ್ಣ

21

CM ಪ್ರತಿಕೃತಿಗೆ ಚಪ್ಪಲಿ ಏಟು; ಶಾಸಕ ಯಶ್‌ಪಾಲ್‌ ಸುವರ್ಣ ಸೇರಿ 11 ಮಂದಿ ವಿರುದ್ಧ ಎಫ್ಐಆರ್‌

car-parkala

Bramavara: ಅಪಘಾತ: ಸ್ಕೂಟಿ ಸವಾರ ಸಾವು

Hebri ಶತಾಯುಷಿ ಕಜ್ಕೆ ಮಂಜುನಾಥ ಕಾಮತ್ ನಿಧನ

Hebri ಶತಾಯುಷಿ ಕಜ್ಕೆ ಮಂಜುನಾಥ ಕಾಮತ್ ನಿಧನ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 13ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 13ನೇ ರೀಲ್ಸ್ ಪ್ರಸಾರ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

AC ಸ್ಫೋಟದಿಂದ ಗಾಯಗೊಂಡಿದ್ದ ಸೂರಿಂಜೆ ಮೂಲದ ವ್ಯಕ್ತಿ ಸಾವು

AC ಸ್ಫೋಟದಿಂದ ಗಾಯಗೊಂಡಿದ್ದ ಸೂರಿಂಜೆ ಮೂಲದ ವ್ಯಕ್ತಿ ಸಾವು

BC Road ಕಾರು ಅಪಘಾತವಾದ ಸ್ಥಳ ಪರಿಶೀಲಿಸಿದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ

BC Road ಕಾರು ಅಪಘಾತವಾದ ಸ್ಥಳ ಪರಿಶೀಲಿಸಿದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ

Udupi ಶಿಕ್ಷಕರನ್ನು ಅವಮಾನಿಸಿದರೆ ಸಹಿಸಲು ಸಾಧ್ಯವಿಲ್ಲ: ಯಶ್‌ಪಾಲ್‌ ಸುವರ್ಣ

Udupi ಶಿಕ್ಷಕರನ್ನು ಅವಮಾನಿಸಿದರೆ ಸಹಿಸಲು ಸಾಧ್ಯವಿಲ್ಲ: ಯಶ್‌ಪಾಲ್‌ ಸುವರ್ಣ

1-ak

AAP; ಹಣಕಾಸು ಅಕ್ರಮ: ಆಪ್‌ ಶಾಸಕ ಖಾನ್‌ಗೆ ನ್ಯಾಯಾಂಗ ಬಂಧನ

Kasaragod: ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆ

Kasaragod: ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.