ಸಹಾಯಕ ಪ್ರಾಧ್ಯಾಪಕ ಹುದ್ದೆ ನೇಮಕ ಅಕ್ರಮ: ಧಾರವಾಡ ಕುಲಸಚಿವ ನಾಗರಾಜ್‌ ಬಂಧನ


Team Udayavani, Apr 28, 2022, 6:50 AM IST

news

ಬೆಂಗಳೂರು: ರಾಜ್ಯ ಸರಕಾರಿ ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕ ಹುದ್ದೆ ನೇಮಕಾತಿಗೆ ನಡೆದ ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿ ಧಾರವಾಡ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವ ಡಾ| ಎಚ್‌. ನಾಗರಾಜ್‌ ಅವರನ್ನು ಮಲ್ಲೇಶ್ವರ ಪೊಲೀಸರು ಬಂಧಿಸಿದ್ದಾರೆ. ಮತ್ತೊಂದೆಡೆ ನಾಗರಾಜ್‌ ಸೋದರ ಸಂಬಂಧಿ ಕುಸುಮಾ ಹಾಗೂ ರಾಮಕೃಷ್ಣ, ಮಹಾಲಕ್ಷ್ಮೀ ಅವರನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಮೂವರ ಮೊಬೈಲ್‌ ಜಪ್ತಿಮಾಡಲಾಗಿದೆ.

ಈ ಮಧ್ಯೆ ಪೊಲೀಸ್‌ ಕಸ್ಟಡಿಯಲ್ಲಿರುವ ಸೌಮ್ಯಾ ಪ್ರಕರಣ ಕುರಿತು ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದು, ಕಳೆದ ಆರೇಳು ವರ್ಷಗಳಿಂದ ನಾಗರಾಜ್‌ ಪರಿಚಯವಿದೆ ಎಂದು ಹೇಳಿಕೊಂಡಿದ್ದಾರೆ.

ಆರೋಪಿತೆ ಸೌಮ್ಯಾ ಮೈಸೂರಿನ ಗಂಗೋತ್ರಿಯಲ್ಲಿ ನಾಗರಾಜ್‌ ಮಾರ್ಗದರ್ಶನದಲ್ಲಿ ಪೋಸ್ಟ್‌ ಡಾಕ್ಟರಲ್‌ ಫೆಲೋಶಿಪ್‌ ಸಂಶೋಧನಾ ವಿದ್ಯಾರ್ಥಿಯಾಗಿದ್ದರು..

ಸೌಮ್ಯಾ ಹೇಳಿಕೆ ಏನು?
“ಏಳು ವರ್ಷಗಳಿಂದ ಡಾ. ನಾಗರಾಜ್‌ ಪರಿಚಯವಿತ್ತು. 2021ರ ನವೆಂಬರ್‌ನಲ್ಲಿ 1242 ಸಹಾಯಕ ಉಪನ್ಯಾಸಕ ಹುದ್ದೆಗಳಿಗೆ ಆಹ್ವಾನಿಸಲಾಗಿತ್ತು. ಅದಕ್ಕೆ ಮೂರು ಬಾರಿ ಅರ್ಜಿ ಸಲ್ಲಿಸಿದ್ದೆ. ಮೊದಲನೇ ಬಾರಿ ಜನ್ಮ ದಿನಾಂಕ ತಪ್ಪಾಗಿತ್ತು. 2ನೇ ಬಾರಿ ಆದಾಯ ಪ್ರಮಾಣ ಪತ್ರದ ದಿನಾಂಕದಲ್ಲಿ ವ್ಯತ್ಯಾಸದಿಂದ ರಿಜೆಕ್ಟ್ ಆಗಿತ್ತು. 3ನೇ ಬಾರಿ ಎಲ್ಲವೂ ಸರಿ ಮಾಡಿಕೊಂಡು ಅರ್ಜಿ ಸಲ್ಲಿಸಿದ್ದೆ. ಅದೇ ವೇಳೆ ನಾಗರಾಜ್‌ ಪ್ರಶ್ನೆ ಪತ್ರಿಕೆ ಆಯ್ಕೆ ಸಮಿತಿ ಸದಸ್ಯರು ಎಂದು ಗೊತ್ತಾಗಿತ್ತು.

ನಾಗರಾಜ್‌ ಮನೆಯಲ್ಲಿದ್ದ ಅವರ ಸೋದರ ಸಂಬಂಧಿ ಕುಸುಮಾ ಆತ್ಮೀಯಳಾಗಿದ್ದಳು. ಮಾರ್ಚ್‌ನಲ್ಲಿ ನಾಗರಾಜ್‌ ಮನೆಗೆ ಹೋದಾಗ ಪ್ರಶ್ನೆ ಪತ್ರಿಕೆಗಳಿದ್ದ ಕವರ್‌ಗಳು ಇದ್ದವು. ಅದನ್ನು ಗಮನಿಸಿ ಫೋಟೋ ತೆಗೆದುಕೊಂಡು ಬಂದಿದ್ದೆ. ಪ್ರಶ್ನೆ ಪತ್ರಿಕೆಯ ಎಲ್ಲ ಫೋಟೋಗಳನ್ನು ಕುಸುಮಾ ಕಳುಹಿಸಿದ್ದಳು. ಅದನ್ನು ತನ್ನ ಸ್ನೇಹಿತೆ ಮಹಾಲಕ್ಷ್ಮೀಗೆ ಕಳುಹಿಸಿದ್ದೆ. ಆಕೆ ರಾಮಕಷ್ಣ ಅವರಿಗೆ ಕಳುಹಿಸಿದ್ದರು. ಬಳಿಕ ಎಲ್ಲೆಡೆ ಸೋರಿಕೆಯಾಗಿದೆ. ಈ ವಿಚಾರ ನಾಗರಾಜ್‌ಗೆ ಗೊತ್ತಿಲ್ಲ ಎಂದು ಹೇಳಿಕೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಸಹಾಯಕ ಪ್ರಾಧ್ಯಾಪಕ ಹುದ್ದೆ ಪ್ರಶ್ನೆ ಪತ್ರಿಕೆ ಒಬ್ಬ ವ್ಯಕ್ತಿಯಿಂದ ಚೈನ್‌ ಲಿಂಕ್‌ ರೀತಿಯಲ್ಲಿ ಮೂವರಿಗೆ ಹಂಚಿಕೆಯಾಗಿದೆ. ಹಾಗಾಗಿ ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ. ಪ್ರಶ್ನೆ ಪತ್ರಿಕೆ ಹೇಗೆ ಹೊರಬಂತು? ಅದನ್ನು ಯಾರು ಫೋಟೊ ತೆಗೆದು ಕಳುಹಿಸಿದ್ದರು? ಎಷ್ಟು ಜನರಿಗೆ ಇದು ತಲುಪಿದೆ? ಎಂಬ ಬಗ್ಗೆ ಮಲ್ಲೇಶ್ವರ ಎಸಿಪಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ.
-ಕಮಲ್‌ ಪಂತ್‌,  ನಗರ ಪೊಲೀಸ್‌ ಆಯುಕ್ತ

 

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.