Passport ಪ್ರಕ್ರಿಯೆಗೆ ಡಿಜಿಲಾಕರ್‌ : ಸರಕಾರದಿಂದ ಮಹತ್ವದ ಬದಲಾವಣೆ ಜಾರಿ


Team Udayavani, Aug 21, 2023, 7:35 AM IST

1-qwewqe

ಭಾರತ ಡಿಜಿಟಲ್‌ ಇಂಡಿಯಾ ಪರಿಕಲ್ಪನೆಯಡಿಯಲ್ಲಿ ಪ್ರತೀ ಸೇವೆಯಲ್ಲೂ ಡಿಜಿಟಲ್‌
ಸ್ಪರ್ಶವನ್ನು ನೀಡಲು ಮುಂದಾಗಿದೆ. ಈ ನಿಟ್ಟಿನಲ್ಲಿ ಹೊಸಹೊಸ ನಿಯಮಗಳನ್ನು, ಯೋಜನೆಗಳನ್ನು ಜಾರಿಗೆ ತಂದಿದೆ. ಡಿಜಿಟಲ್‌ ಕರೆನ್ಸಿಯಿಂದ ಹಿಡಿದು, ಯುಪಿಐ ಪೇಮೆಂಟ್‌ವರೆಗೂ ಬಂದಿದ್ದೇವೆ. ಇದೀಗ ಪಾಸ್‌ಪೋರ್ಟ್‌ ವ್ಯವಸ್ಥೆಯಲ್ಲಿ ಭಾರತ ಸರಕಾರ ಹೊಸ ಬದಲಾವಣೆಯನ್ನು ತಂದಿದೆ. ಏನಿದು ಹೊಸ ನಿಯಮ ? ಇದು ಹೇಗೆ ಕಾರ್ಯ ನಿರ್ವಹಿಸಲಿದೆ ? ಎಂಬುದರ ಮಾಹಿತಿ ಇಲ್ಲಿದೆ.

ಏನು ಬದಲಾವಣೆ ?
ಅಂತಾರಾಷ್ಟ್ರೀಯ ಪ್ರಯಾಣದ ಸಂದರ್ಭ ಹೊಸ ಪಾಸ್‌ಪೋರ್ಟ್‌ಗಾಗಿ ಅರ್ಜಿ ಸಲ್ಲಿಸುವವರು ಇನ್ನು ಮುಂದೆ ತಮ್ಮ ಮಾಹಿತಿಗಳನ್ನು ಸರಕಾರದ ಡಿಜಿಲಾಕರ್‌ ವ್ಯವಸ್ಥೆಯ ಅಡಿಯಲ್ಲಿ ಸಲ್ಲಿಸಬಹುದಾಗಿದೆ. ಆ.5ರಿಂದ ಈ ವ್ಯವಸ್ಥೆ ಜಾರಿಯಲ್ಲಿದೆ. ಡಿಜಿಲಾಕರ್‌ನಲ್ಲಿ ಮಾಹಿತಿಗಳನ್ನು ಅಪ್‌ಲೋಡ್‌ ಮಾಡಿದ ಅನಂತರ ಪಾಸ್‌ಪೋರ್ಟ್‌ಗೆ ಅರ್ಜಿ ಯನ್ನು ಸಹ ಆನ್‌ಲೈನ್‌ ಮೂಲಕವೇ ಸಲ್ಲಿಸಬಹುದಾಗಿದೆ. ಡಿಜಿಲಾಕರ್‌ ಖಾತೆಯಲ್ಲಿ ಪಾಸ್‌ ಪೋರ್ಟ್‌ಗೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು scan ಮಾಡಿ ಸಂಗ್ರಹಿಸಿ ಇಡಬೇಕು. ಅನಂತರ ಆನ್‌ಲೈನ್‌ ಮೂಲಕ www.passportindia.gov.in ನಲ್ಲಿ ಅರ್ಜಿ ಸಲ್ಲಿಸಬಹುದು.

ಯಾಕಾಗಿ ನಿಯಮ ?
ಪಾಸ್‌ಪೋರ್ಟ್‌ ಕೇಂದ್ರಗಳು ಹಾಗೂ ಪೋಸ್ಟ್‌ ಆಫೀಸ್‌ ಪಾಸ್‌ಪೋರ್ಟ್‌ ಸೇವಾ ಕೇಂದ್ರದಲ್ಲಿ ಅರ್ಜಿ ದಾಖಲಾತಿಯ ಭೌತಿಕ ದಾಖಲೆಗಳನ್ನು ಪರಿಶೀಲನೆ ಮಾಡಲಾಗುತ್ತಿತ್ತು. ಆದರೆ ಈ ಪ್ರಕ್ರಿಯೆ ನಿಧಾನಗತಿಯಲ್ಲಿ ಸಾಗುತ್ತಿದ್ದರಿಂದ, ವ್ಯವಸ್ಥೆಯನ್ನು ಸರಳೀಕರಣಗೊಳಿಸುವಂತೆ ಜನಸಾಮಾನ್ಯರು ವಿದೇಶಾಂಗ ಸಚಿವಾಲಯಕ್ಕೆ ಮನವಿ ನೀಡಿದ್ದರು. ಹಾಗಾಗಿ ಈ ಹೊಸ ವಿಧಾನವನ್ನು ಜಾರಿಗೊಳಿಸಲಾಗಿದೆ.

ಸಮಯ ಉಳಿಕೆ, ಗುಣಮಟ್ಟ ಏರಿಕೆ
ಒಮ್ಮೆ ಡಿಜಿಲಾಕರ್‌ನಲ್ಲಿ ಮಾಹಿತಿಗಳನ್ನು ಸಲ್ಲಿಸಿದ ಅನಂತರ ಅರ್ಜಿದಾರರು ಮಾಹಿತಿಯ ಮುದ್ರಿತ ಪ್ರತಿಗಳನ್ನು ಸಲ್ಲಿಸಬೇಕಾದ ಅಗತ್ಯವಿರುವುದಿಲ್ಲ. ಹಾಗಾಗಿ ಅರ್ಜಿದಾರರಿಗೆ ಮಾಹಿತಿಯ ಪ್ರತಿಗಳನ್ನು ಹಿಡಿದು ಅಲೆಯುವ ಹೊರೆ ತಗ್ಗಲಿದೆ. ಜತೆಗೆ ಎಲ್ಲವೂ ಆನ್‌ಲೈನ್‌ ಮೂಲಕವೇ ಆಗುವುದರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆಯ ಒಟ್ಟಾರೆ ಸಮಯವನ್ನು ಇದು ಕಡಿತಗೊಳಿಸಲಿದ್ದು, ಗುಣಮಟ್ಟವೂ ಏರಿಕೆಯಾಗಲಿದೆ.

ಏನಿದು ಡಿಜಿಲಾಕರ್‌ ?
ಭಾರತ ಸರಕಾರದ ಎಲೆಕ್ಟ್ರಾನಿಕ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವಾಲಯ ಜಾರಿಗೆ ತಂದಿರುವ ಡಿಜಿಟಲ್‌ ಸೇವೆ. ಈ ಡಿಜಿಲಾಕರ್‌ನಲ್ಲಿ ಸರಕಾರದಿಂದ ನೀಡುವ ಅಗತ್ಯ ದಾಖಲೆಗಳನ್ನು ಸುರಕ್ಷಿತವಾಗಿ ಶೇಖರಿಸಬಹುದಾಗಿದೆ. ಅಲ್ಲದೇ ಯಾವ ಸಮಯದಲ್ಲಿ ಬೇಕಾದರೂ ದಾಖಲೆಗಳನ್ನು ಸುಲಭವಾಗಿ ಪಡೆಯಬಹುದು.

ಡಿಜಿಲಾಕರ್‌ ಬಳಕೆ ಹೇಗೆ ?
ಡಿಜಿಲಾಕರ್‌ ಖಾತೆಯನ್ನು ತೆರೆಯಲು https://digitallocker.gov.in/ ಭೇಟಿ ನೀಡಿ ನಮ್ಮ ಆಧಾರ ಸಂಖ್ಯೆಗೆ ಲಿಂಕ್‌ ಆಗಿರುವ ಮೊಬೈಲ್‌ ನಂಬರ್‌ ಮೂಲಕ ರಿಜಿಸ್ಟ್‌ರ್‌ ಮಾಡಿಕೊಳ್ಳಬೇಕು. ಲಿಂಕ್‌ ಆಗಿರುವ ಮೊಬೈಲ್‌ ನಂಬರ್‌ಗೆ ಬರುವ ಒಟಿಪಿ (ಒನ್‌ ಟೈಮ್‌ ಪಾಸ್‌ವರ್ಡ್‌) ಅನ್ನು ಡಿಜಿಲಾಕರ್‌ ಖಾತೆಯನ್ನು ತೆರೆಯುವಾಗ ನಮೂದಿಸಿ ಲಾಗ್‌ಇನ್‌ ಆಗಬೇಕು.

ಏನೆಲ್ಲ ಸಂಗ್ರಹಿಸಬಹುದು ?
ಆಧಾರ್‌ ಕಾರ್ಡ್‌, ಪಾನ್‌ ಕಾರ್ಡ್‌, ಪಾಸ್‌ಪೋರ್ಟ್‌, ವೋಟರ್‌ ಐಡಿ, ರೇಶನ್‌ ಕಾರ್ಡ್‌, ಆರ್‌ಸಿ, ಡಿಎಲ್‌, ಜನನ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಬ್ಯಾಂಕ್‌ ಪಾಸ್‌ಬುಕ್‌, ಆದಾಯ ತೆರಿಗೆ ಮೌಲ್ಯಮಾಪನ ಆದೇಶ, ಬಾಡಿಗೆ ಒಪ್ಪಂದ, ಅಂಕಪಟ್ಟಿ, ಇತರ ದಾಖಲಾತಿಯನ್ನು ಮೊದಲು ಸ್ಕ್ಯಾನ್‌ ಮಾಡಿ ಡಿಜಿಲಾಕರ್‌ ಖಾತೆಯಲ್ಲಿ ಸಂಗ್ರಹ ಮಾಡಬಹುದು.

 ರಾಧಿಕಾ, ಕುಂದಾಪುರ

ಟಾಪ್ ನ್ಯೂಸ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

9-yoga

Sattvic Diet: ಪರೀಕ್ಷಾ ಒತ್ತಡ ನಿವಾರಣೆ ಯೋಗ, ಸಾತ್ವಿಕ ಆಹಾರದ ಸರಳ ಸೂತ್ರಗಳು

8-bagappa

Bagappa Harijan: ಭೀಮಾ ತೀರದಲ್ಲಿ ಮತ್ತೆ ರಕ್ತದ ಹನಿ

Valentine’s Day: ನೀನು ಪ್ರೀತಿಸಿದ್ದೆ.. ಪ್ರೀತಿಸುತ್ತಿರುವೆ!

Valentine’s Day: ನೀನು ಪ್ರೀತಿಸಿದ್ದೆ.. ಪ್ರೀತಿಸುತ್ತಿರುವೆ!

Pamban Bridge:: ದೇಶದ ಮೊದಲ ವರ್ಟಿಕಲ್‌ ಲಿಫ್ಟ್ ರೈಲ್ವೇ ಸೇತುವೆ: ಶತಮಾನದ ಇತಿಹಾಸ!

Pamban Bridge:: ದೇಶದ ಮೊದಲ ವರ್ಟಿಕಲ್‌ ಲಿಫ್ಟ್ ರೈಲ್ವೇ ಸೇತುವೆ: ಶತಮಾನದ ಇತಿಹಾಸ!

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.