Udupi ಉಸ್ತುವಾರಿ ಸಚಿವರ ವಿರುದ್ಧ ಕಾಂಗ್ರೆಸ್ ಪಾಳಯದಲ್ಲಿ ಅಸಮಾಧಾನ?
ಗೋಬ್ಯಾಕ್ ಅಭಿಯಾನ ಆರಂಭ
Team Udayavani, Jun 5, 2024, 11:41 PM IST
ಉಡುಪಿ: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನಿರೀಕ್ಷೆಗೂ ಮೀರಿದ ಸೋಲು ಕಂಡ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಾಳ ಯದಲ್ಲಿ ಒಂದೆಡೆ ನೀರವ ಮೌನ, ಇನ್ನೊಂದೆಡೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಸಣ್ಣ ಅಸ ಮಾಧಾನ ಕೇಳಿಬರ ತೊಡಗಿದೆ.
ಲೋಕಸಭೆ ಚುನಾವಣೆ ಟಿಕೆಟ್ ಘೋಷಣೆಗೂ ಮೊದಲು ಜಿಲ್ಲೆಗೆ ಆಗ ಮಿಸಿದ್ದ ಸಚಿವೆ ಚುನಾವಣೆ ಪ್ರಕ್ರಿಯೆ ಮುಗಿಯುವವರೆಗೂ ಬರಲಿಲ್ಲ.
ಉಡುಪಿ-ಚಿಕ್ಕಮಗಳೂರು ಲೋಕಸಭೆ ಚುನಾವಣೆಗೆ ಪ್ರಬಲ ಅಭ್ಯರ್ಥಿಯನ್ನು ಪಕ್ಷ ಘೋಷಿಸಿ ದ್ದರೂ ಜಿಲ್ಲಾ ಉಸ್ತುವಾರಿ ಸಚಿವೆ ಒಮ್ಮೆಯೂ ಪ್ರಚಾರಕ್ಕೆ ಬರಲಿಲ್ಲ. ತಮ್ಮ ಪುತ್ರ ಬೆಳಗಾವಿಯಲ್ಲಿ ಅಭ್ಯರ್ಥಿಯಾಗಿ ಕಣಕ್ಕಿಳಿದ ಹಿನ್ನೆಲೆಯಲ್ಲಿ ಅಲ್ಲಿಯೇ ಪ್ರಚಾರ ಪ್ರಕ್ರಿಯೆ ನಡೆಸಿಕೊಂಡಿದ್ದರು.
ಜಿಲ್ಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ಒಮ್ಮೆಯೂ ಪ್ರಚಾರ ನಡೆ ಸಿಲ್ಲ. ಅಷ್ಟು ಮಾತ್ರವ ಲ್ಲದೇ ಚುನಾ ವಣೆ ಮುಗಿದ ಬಳಿಕವೂ ವಿಧಾನ ಪರಿಷತ್ ಚುನಾವಣೆಗೂ ಪ್ರಚಾರಕ್ಕೆ ಬರಲಿಲ್ಲ, ಒಟ್ಟಾರೆಯಾಗಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಇಡೀ ಜಿಲ್ಲೆ ಯನ್ನು ಚುನಾವಣೆ ಸಂದರ್ಭದಲ್ಲಿ ಸಂಪೂರ್ಣ ನಿರ್ಲಕ್ಷಿಸಿದ್ದಾರೆ ಎಂಬ ಆರೋಪ ಕಾಂಗ್ರೆಸ್ ವಲಯದ್ದು.
ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರಾದ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಉಸ್ತುವಾರಿ ಕೆ.ಜೆ. ಜಾರ್ಜ್ ಕೆಲವು ಬಾರಿ ಉಡುಪಿಗೆ ಭೇಟಿ ನೀಡಿ ಪಕ್ಷದ ಪ್ರಮುಖರ ಸಭೆ ನಡೆಸಿದ್ದರು. ಹಾಗೆಯೇ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಕೂಡ ಉಡುಪಿಗೆ ಭೇಟಿ ನೀಡಿ ಅಭ್ಯರ್ಥಿಯ ಪರ ಪ್ರಚಾರ ನಡೆಸಿದ್ದರು. ಆದರೆ ಜಿಲ್ಲಾ ಉಸ್ತುವಾರಿ ಸಚಿವೆಯಾಗಿ ಲಕ್ಷ್ಮೀ ಹೆಬ್ಬಾಳ್ಕರ್ ಒಮ್ಮೆಯೂ ಚುನಾವಣೆ ಪ್ರಚಾರಕ್ಕೆ ಬಾರದೇ ಇರುವುದು ಈ ಅಸಮಾಧಾನಕ್ಕೆ ಕಾರಣ.
ಗೋ ಬ್ಯಾಕ್ ಅಭಿಯಾನ
ಈಗ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಉಡುಪಿಯ ಕಾಂಗ್ರೆಸ್ ಕಾರ್ಯಕರ್ತರು ಸಿಡಿದೆದ್ದಿದ್ದಾರೆ. ಅವರ ವಿರುದ್ಧ ಸಾಮಾಜಿಕ ಜಾಲತಾ ಣದಲ್ಲಿ “ಗೋ ಬ್ಯಾಕ್’ ಅಭಿಯಾನ ನಡೆಸುತ್ತಿದ್ದು, ಸಮಸ್ಯೆ ಆದಾಗ ನೀವು ಬರುವುದೇ ಇಲ್ಲ ಎಂದು ಕಿಡಿಕಾರಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರನ್ನು ಬದಲಿಸುವಂತೆ ಕಾರ್ಯಕರ್ತರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ
SAFF U-17 Championship: ಭಾರತ-ಬಾಂಗ್ಲಾ ಫೈನಲ್
Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್
ICC Women’s T20 World Cup: ವನಿತಾ ಟಿ20 ವಿಶ್ವಕಪ್; ಅಂಪಾಯರ್ಸ್ ಆಯ್ಕೆ
T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್ ಯಾದವ್ ನಾಯಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.