CM ಜತೆ ಚರ್ಚಿಸಿ ಸೈಕಲ್‌ ವಿತರಣೆಗೆ ಕ್ರಮ: ಮಧು


Team Udayavani, Dec 7, 2023, 11:40 PM IST

MADHU BANGARAPPA

ಬೆಳಗಾವಿ: ಸರಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್‌ ವಿತರಣೆ ಕಾರ್ಯಕ್ರಮವನ್ನು ಮತ್ತೆ ಆರಂಭಿಸುವ ಬಗ್ಗೆ ಮುಖ್ಯಮಂತ್ರಿಯೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಗುರುವಾರ ಸದಸ್ಯ ಪ್ರದೀಪ್‌ ಈಶ್ವರ್‌ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಈ ಹಿಂದೆ 2019-20ನೇ ಸಾಲಿನಲ್ಲಿ ಉಚಿತ ಸೈಕಲ್‌ ವಿತರಣೆ ಮಾಡಲಾಗಿದೆ. ಪ್ರಸ್ತುತ ಸಾಲಿನಲ್ಲಿ ಸರಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಸೈಕಲ್‌ ವಿತರಿಸಲಾಗುತ್ತಿಲ್ಲ. ಸೈಕಲ್‌ ನೀಡುವಂತೆ ವಿದ್ಯಾರ್ಥಿಗಳು ಬೇಡಿಕೆ ಇಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಯೊಂದಿಗೆ ಚರ್ಚಿಸಲಾಗುವುದು ಎಂದರು.

ಸರಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಕೇಂದ್ರ ಪ್ರಾಯೋಜಿತ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆ ಅಡಿ ತಮ್ಮ ವ್ಯಾಪ್ತಿ ಮೀರಿದ ಶಾಲೆಗಳಿಗೆ ಕ್ರಮಿಸಲು ಪ್ರತಿ ವಿದ್ಯಾರ್ಥಿಗೆ ಮಾಸಿಕ 600 ರೂ.ನಂತೆ 6 ತಿಂಗಳಿಂದ ಸಾರಿಗೆ ಭತ್ತೆ ನೀಡಲಾಗುತ್ತಿದೆ. ಅಲ್ಲದೆ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ಕೂಡ ವಿತರಿಸಲಾಗುತ್ತಿದೆ ಎಂದರು.

ರಾಜ್ಯದಲ್ಲಿ 1ರಿಂದ 10ನೇ ತರಗತಿಯಲ್ಲಿ ಕಲಿಯುತ್ತಿರುವ ಸರಕಾರಿ ಶಾಲಾ ಮಕ್ಕಳಿಗೆ ವಿದ್ಯಾವಿಕಾಸ ಯೋಜನೆ ಅಡಿ ಒಂದು ಜತೆ ಶೂ ಮತ್ತು ಎರಡು ಜತೆ ಸಾಕ್ಸ್‌ ಉಚಿತವಾಗಿ ನೀಡಲಾಗುತ್ತಿದೆ ಎಂದೂ ಸಚಿವರು ಹೇಳಿದರು.

9,604 ಶಾಲಾ ಕೊಠಡಿಗಳ ನಿರ್ಮಾಣ
ಮೂರು ವರ್ಷಗಳಿಗೆ 7,098 ಶಾಲೆಗಳಿಗೆ 9,604 ಕೊಠಡಿಗಳ ನಿರ್ಮಾಣ ಹಾಗೂ ಇತರ ಕಾಮಗಾರಿಗಳಿಗೆ ಒಟ್ಟು 1,297 ಕೋಟಿ ರೂ. ನಿಗದಿಯಾಗಿದ್ದು, 8,940 ಕೋಟಿ ರೂ. ಖರ್ಚಾಗಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು. ಸದಸ್ಯ ಯು.ಬಿ. ಬಣಕಾರ್‌ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕೊಠಡಿಗಳ ನಿರ್ಮಾಣಕ್ಕೆ ಕೊರತೆ ಅನುದಾನವನ್ನು 2023-24ನೇ ಸಾಲಿನಲ್ಲಿ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ. ಬಜೆಟ್‌ನಲ್ಲಿ ಒದಗಿಸಲಾದ ಅನುದಾನ ಲಭ್ಯತೆ ಆಧರಿಸಿ ಅಗತ್ಯಕ್ಕೆ ಅನುಗುಣವಾಗಿ ಹಂತಹಂತವಾಗಿ ರಾಜ್ಯಾದ್ಯಂತ ಶಾಲೆಗಳಲ್ಲಿ ಕೊಠಡಿ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಮಲೆನಾಡು ಭಾಗದ ಎಲ್ಲ ಸರಕಾರಿ ನೌಕರರಿಗೆ 6ನೇ ರಾಜ್ಯ ವೇತನ ಆಯೋಗದ ಶಿಫಾರಸಿನಂತೆ ಗಿರಿತಾಣ ಭತ್ತೆ ರದ್ದುಪಡಿಸಿ ಆದೇಶಿಸಿರುವುದರಿಂದ ಚಿಕ್ಕಮಗಳೂರು ಜಿಲ್ಲೆಯ ಗುಡ್ಡಗಾಡು ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರಿಗೆ ಸದ್ಯಕ್ಕೆ ಗಿರಿಭತ್ತೆ ನೀಡುವ ಪ್ರಶ್ನೆ ಉದ್ಭವಿಸುವುದಿಲ್ಲ.
-ಮಧು ಬಂಗಾರಪ್ಪ, ಶಿಕ್ಷಣ ಸಚಿವ

ಟಾಪ್ ನ್ಯೂಸ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.