Mangaluru: ಕೊನೆ ನಿವೇಶನ ವಿನ್ಯಾಸಕ್ಕೆ ವಿಘ್ನ

ಡೆಡ್‌ ಎಂಡ್‌ನ‌ಲ್ಲಿ ನಿವೇಶನವಿದ್ದರೆ, ಕಾಲುದಾರಿ ಅಗಲ ಇಲ್ಲದಿದ್ದರೆ ಅರ್ಜಿ ತಿರಸ್ಕೃತ!

Team Udayavani, Aug 15, 2024, 12:32 PM IST

Mangaluru: ಕೊನೆ ನಿವೇಶನ ವಿನ್ಯಾಸಕ್ಕೆ ವಿಘ್ನ

ಮಹಾನಗರ: ನಗರದ ಹಲವೆಡೆ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಏಕ ನಿವೇಶನ ವಿನ್ಯಾಸ ಅನುಮೋದನೆಗೆ ಕಳೆದ ಕೆಲವು ತಿಂಗಳುಗಳಿಂದ ಅಡ್ಡಿಯಾಗುತ್ತಿದೆ.

ಸಾಮಾನ್ಯವಾಗಿ ರಸ್ತೆಯೊಂದರ ಕೊನೆಯಲ್ಲಿ ನಿವೇಶನವಿದ್ದಾಗ ಅದಕ್ಕೆ ಅಗಲ ರಸ್ತೆ ಇಲ್ಲದೆ ಕನಿಷ್ಠ ಅಗಲದ ಕಾಲು ದಾರಿ ಇರುವ ಅನೇಕ ಪ್ರಕರಣಗಳು ನಗರದಲ್ಲಿವೆ. ಅಂತಹ ನಿವೇಶನಗಳನ್ನು ಯಾರಾದರೂ ಖರೀದಿಸಿ ಮನೆ ನಿರ್ಮಿಸಲು ಮುಂದಾಗುವಾಗ ಅದಕ್ಕೆ ಏಕ ನಿವೇಶನ ವಿನ್ಯಾಸ ಅನುಮೋದನೆ ಬೇಕಾಗುತ್ತದೆ.

ಹಿಂದೆ ಇಂತಹ ಸಂದರ್ಭಗಳಲ್ಲಿ ಮುಡಾ ಅಧಿಕಾರಿಗಳು ಅನುಮೋದನೆ ಕೊಡುತ್ತಿದ್ದರು. ಆದರೆ ಈಗಿನ ಆಯುಕ್ತರು ಇದಕ್ಕೆ ತಡೆಯೊಡ್ಡಿದ್ದಾರೆ, ಇದರಿಂದ ಮನೆಗೆಂದು ಸೈಟ್‌ ಖರೀದಿಸಿದವರು ನಿವೇಶನ ಅಭಿವೃದ್ಧಿ ಮಾಡಲಾಗದೆ ಕಂಗಾಲಾಗಿದ್ದಾರೆ. ಅವರು ಏಕನಿವೇಶನ ವಿನ್ಯಾಸ ಅನುಮೋದನೆ ಪಡೆಯದೆ ಬ್ಯಾಂಕ್‌ ಸಾಲ ಮಾಡುವಂತಿಲ್ಲ, ಮನೆ ನಿರ್ಮಾಣದ ಪರವಾನಿಗೆಯನ್ನೂ ಪಡೆಯಲಾಗದು.

ಮನೆಗೆಂದು ಜಾಗ ಖರೀದಿಸಿದವರು, ಕುಟುಂಬದ ಪಾಲಿನಲ್ಲಿ ನಿವೇಶನ ಪಡೆದವರು, ಇಂತಹ ಇಕ್ಕಟ್ಟಿನ ಜಾಗದಲ್ಲಿದ್ದರೆ ಅವರೆಲ್ಲರೂ ಈ ಕಿರಿಕಿರಿ ಅನುಭವಿಸುತ್ತಿದ್ದಾರೆ.

ಕಡ್ಡಾಯ ನಿಯಮವಿಲ್ಲ

ಪ್ರಸ್ತುತ ಅರ್ಜಿದಾರರಿಗೆ 1 ಮೀಟರ್‌ ಅಗಲದ ಕಾಲುದಾರಿ ಇರುವಲ್ಲಿ ಏಕ ನಿವೇಶನ ವಿನ್ಯಾಸ ಅನುಮೋದನೆ ಕೊಡಲಾಗದು ಎನ್ನುವ ಹಿಂಬರಹ ನೀಡಿ ಕಳುಹಿಸಲಾಗುತ್ತಿದೆ.

ಲಭ್ಯ ಮಾಹಿತಿ ಪ್ರಕಾರ ಮುಡಾದಲ್ಲಿ ಎಲ್ಲೂ ಈ ರೀತಿಯ ನಿಯಮವಿಲ್ಲ, ಕನಿಷ್ಠ 3 ಮೀಟರ್‌ ರಸ್ತೆ ಇರಬೇಕು ಎನ್ನುವ ಅಂಶವನ್ನೇ ಹಿಡಿದುಕೊಂಡು ಅಧಿಕಾರಿಗಳು ಅರ್ಜಿಗಳನ್ನು ತಿರಸ್ಕರಿಸುತ್ತಿದ್ದಾರೆ.

ಹಿಂದೆ ಇಂತಹ ಸನ್ನಿವೇಶಗಳಲ್ಲಿ ಎಲ್ಲೂ ಅರ್ಜಿ ತಿರಸ್ಕರಿಸುತ್ತಿರಲಿಲ್ಲ. ರಾಜ್ಯದ ಇತರ ಕಡೆಗಳಿಂತ ಮಂಗಳೂರಿನ ಭೂವ್ಯವಸ್ಥೆ ಭಿನ್ನ, ಇಲ್ಲಿಗೆ ಬೆಂಗಳೂರಿನ ಮಾದರಿ ನಿಯಮಗಳನ್ನು ಅನ್ವಯಿಸುವುದಕ್ಕಾಗದು, ಈಗ ಕೆಲವು ತಿಂಗಳಿಂದ ಮಂಗಳೂರಿನಲ್ಲಿ ಬದಲಾಗಿರುವ ವ್ಯವಸ್ಥೆ ನಾಗರಿಕರಿಗೆ ಸಮಸ್ಯೆಯಾಗಿದೆ ಎಂದು ನಾಗರಿಕ ಹಿತರಕ್ಷಣ ವೇದಿಕೆಯ ಸಂಚಾಲಕ ಹನುಮಂತ ಕಾಮತ್‌ ಹೇಳುತ್ತಾರೆ.

ಆಯುಕ್ತರು ಎಲ್ಲಿ ಕಾನೂನು ಬಿಗಿಗೊಳಿಸಬೇಕೋ ಅದನ್ನು ಮಾಡಲಿ, ಅದಕ್ಕೆ ಆಕ್ಷೇಪವಿಲ್ಲ, ಬದಲು ಈ ರೀತಿ ಯಾವುದೇ ನಿಯಮದಲ್ಲಿ ಇಲ್ಲದಿರುವ ಅಂಶವನ್ನು ಹೇರಿದರೆ ಜನರಿಗೆ ವಿನಾಕಾರಣ ಸಂಕಷ್ಟ ಎನ್ನುತ್ತಾರೆ.

ಅರ್ಜಿಗಳನ್ನು ತಿರಸ್ಕರಿಸುವಂತಿಲ್ಲ

ರಸ್ತೆ ಅಗಲವಿಲ್ಲ ಎಂದು ಮುಡಾದವರು ಏಕನಿವೇಶನ ವಿನ್ಯಾಸ ಅನುಮೋದನೆ ಅರ್ಜಿಗಳನ್ನು ತಿರಸ್ಕರಿಸುವಂತಿಲ್ಲ, ಮಂಗಳೂರಿನ ಭೂಲಕ್ಷಣಗಳೇ ಬೇರೆ ಇವೆ, ಇದನ್ನು ಹಿರಿಯ ಅಧಿಕಾರಿಗಳ ಗಮನಕ್ಕೆ ತರಲಾಗುವುದು. -ವೇದವ್ಯಾಸ ಕಾಮತ್‌, ಶಾಸಕರು

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.