ಅಕ್ರಮ ಬಡಾವಣೆ ವಿರುದ್ಧ ಸಮರ

ಅಕ್ರಮ ಬಡಾವಣೆಯಲ್ಲಿ ತೊಡಗಿಸಿಕೊಂಡವರ ವಿರುದ್ಧ ಜಿಲ್ಲಾಡಳಿತ ಕ್ರಮ ; ಎಫ್ಐಆರ್‌ ದಾಖಲು

Team Udayavani, Aug 11, 2021, 3:46 PM IST

ಅಕ್ರಮ ಬಡಾವಣೆ ವಿರುದ್ಧ ಸಮರ

ಸಾಂದರ್ಭಿಕ ಚಿತ್ರ.

ಬೆಂಗಳೂರು: ಆಗ್ಗಾಗೆ ತಲೆ ಎತ್ತುವ ಅಕ್ರಮ ಬಡಾವಣೆಗಳ ಸಂಬಂಧ ಸಾರ್ವಜನಿಕರು ವಂಚನೆಗೆ ಒಳಗಾಗುತ್ತಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಬೆಂಗಳೂರು ನಗರ ಜಿಲ್ಲಾಡಳಿತ ಇದೀಗ ಭೂ ಪರಿವರ್ತನೆಯಾಗದೇ ಕೃಷಿ ಜಮೀನಲ್ಲಿ ಅನಧಿಕೃತವಾಗಿ ನಿರ್ಮಾಣವಾಗಿರುವ ಬಡಾವಣೆಗಳ ವಿವರವನ್ನು ಕಲೆಹಾಕುವಲ್ಲಿ ನಿರತವಾಗಿದೆ. ಜತೆಗೆ ಅಕ್ರಮ ಬಡಾವಣೆಯಲ್ಲಿ ತೊಡಗಿಸಿಕೊಂಡವರ ವಿರುದ್ಧ ಎಫ್ಐಆರ್‌ ಅನ್ನುಕೂಡ ದಾಖಲು ಮಾಡಿದೆ. ಜಿಲ್ಲಾಡಳಿತದ ಹಲವು ಕ್ರಮಗಳ ಮಧ್ಯೆಯೂ ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಸುಮಾರು 6077 ಅಕ್ರಮ ಬಡಾವಣೆಗಳು ತಲೆ ಎತ್ತಿವೆ.

ಯಲಹಂಕ, ಅನೇಕಲ್‌, ಬೆಂಗಳೂರು ನಗರ, ಬೆಂಗಳೂರು ದಕ್ಷಿಣ, ಬೆಂಗಳೂರು ಪೂರ್ವ ವ್ಯಾಪ್ತಿಯಲ್ಲಿ ಸುಮಾರು 7425 ಎಕರೆ 38.03 ಗುಂಟೆ
ಪ್ರದೇಶಲ್ಲಿ ಅಕ್ರಮಬ ಡಾವಣೆಗಳು ನಿರ್ಮಾಣವಾಗಿವೆ.ಹೀಗಾಗಿ ನಗರ ಜಿಲ್ಲಾಡಳಿತ ಈಗಾಗಲೇ ಸುಮಾರು 3404 ಮಂದಿಗೆ ನೋಟಿಸ್‌ ಜಾರಿ ಮಾಡಿದೆ. ಹಾಗೆಯೇ ಸುಮಾರು 530 ಮಂದಿಯ ವಿರುದ್ಧ ಪ್ರಕರಣವನ್ನು ದಾಖಲಿಸಿ ಕೊಂಡಿದೆ ಎಂದು ನಗರ ಜಿಲ್ಲಾ ಪಂಚಾಯ್ತಿಯ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಅನಧಿಕೃತ ಬಡಾವಣೆ ಸಂಬಂಧ ಜಿಲ್ಲಾಡಳಿತ ಮತ್ತಷ್ಟು ಕ್ರಮಗಳನ್ನು ಕೈಗೊಂಡಿದೆ. ಜತೆಗೆ ಭೂ ಪರಿವರ್ತನೆಯಾಗದೇ ಕೃಷಿ ಜಮೀನಿನಲ್ಲಿ ಅನಧಿಕೃತವಾಗಿ ನಿರ್ಮಾಣವಾಗಿರುವ ಅಕ್ರಮ ಬಡಾವಣೆಗಳ ವಿವರಗಳನ್ನುಕಲೆಹಾಕಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಎಲ್ಲೆಲ್ಲಿ ತೆರವುಗೊಳಿಸಲಾಗಿದೆ?: ಬೆಂಗಳೂರು ಉತ್ತರ ತಾಲೂಕಿನಲ್ಲಿ ಸುಮಾರು 335 ಅಕ್ರಮ ಬಡಾವಣೆ ಪ್ರಕರಣಗಳು ಪತ್ತೆಯಾಗಿವೆ. ಆ ಭಾಗದಲ್ಲಿ 310 ಮಂದಿಗೆ ಈ ಸಂಬಂಧ ನೋಟಿಸ್‌ ಜಾರಿ ಮಾಡಲಾಗಿದೆ. ಜತೆಗೆ 31 ಎಫ್ಐಆರ್‌ಗಳನ್ನು ದಾಖಲು ಮಾಡಲಾಗಿದ್ದು 5 ಪ್ರಕರಣಗಳಲ್ಲಿ 49 ಎಕರೆ 17 ಗುಂಟೆ ಪ್ರದೇಶವನ್ನು ತೆರವು ಗೊಳಿಸಲಾಗಿದೆ.

ಇದನ್ನೂ ಓದಿ:ಆನಂದ‌ ಸಿಂಗ್ ಭೇಟಿ ವಿಚಾರದಲ್ಲಿ ಮಾಹಿತಿ ಬಿಟ್ಟು ಕೊಡದ ಸ್ಪೀಕರ್

ಹಾಗೆಯೇ ಬೆಂಗಳೂರು ದಕ್ಷಿಣದಲ್ಲಿ 778 ಪ್ರಕರಣಗಳು ಕಂಡುಬಂದಿದ್ದು 106 ಮಂದಿ ವಿರುದ್ಧ ಎಫ್ಐಆರ್‌ ದಾಖಲು ಮಾಡಲಾಗಿದೆ. 15 ಪ್ರಕರಣಗಳಲ್ಲಿ 38 ಎಕರೆ ಪ್ರದೇಶವನ್ನು ತೆರವುಗೊಳಿಸಲಾಗಿದೆ. ಬೆಂಗಳೂರು ಪೂರ್ವದಲ್ಲಿ 1105 ಅನಧಿಕೃವಾಗಿ ನಿರ್ಮಾಣವಾಗಿರುವ ಅಕ್ರಮ
ಬಡಾವಣೆಗಳು ಕಂಡು ಬಂದಿದ್ದು ಇದರಲ್ಲಿ 3 ಪ್ರಕರಣಗಳಲ್ಲಿ ನೋಟಿಸ್‌ ಜಾರಿ ಮಾಡಲಾಗಿದೆ. ಆದರೆ ಯಾವುದೇ ಪ್ರದೇಶವನ್ನು ಜಿಲ್ಲಾಡಳಿತ ವಶಕ್ಕೆ ಪಡೆದಿಲ್ಲ.

ಯಲಹಂಕ ಭಾಗದಲ್ಲಿ 3285 ಪ್ರಕರಣಗಳು ಕಂಡುಬಂದಿದೆ. ಈ ಭಾಗದಲ್ಲಿ ಸುಮಾರು 3343 ಎಕರೆ ಪ್ರದೇಶದಲ್ಲಿ ಬಡಾವಣೆ ನಿರ್ಮಾಣ ಮಾಡಲಾಗಿದೆ. 353 ಮಂದಿಯ ವಿರುದ್ಧ ಎಫ್ಐಆರ್‌ ದಾಖಲಾಗಿದ್ದು 10 ಪ್ರಕರಣಗಳಲ್ಲಿ 12.08 ಗುಂಟೆ ಪ್ರದೇಶವನ್ನು ವಶಕ್ಕೆ ಪಡೆಯಲಾಗಿದೆ.
ಆನೇಕಲ್‌ ಪ್ರದೇಶದಲ್ಲಿ 547 ಒಟ್ಟು ಪ್ರಕರಣಗಳನ್ನು ಕಂಡುಬಂದಿದ್ದು 92 ಎಕರೆ ವಿಸ್ತೀರ್ಣ ಪ್ರದೇಶವನ್ನು ತೆರೆವುಗೊಳಿಸಲಾಗಿದೆ.

ಖರೀದಿಗೂಮುನ್ನ
ಎಚ್ಚರಿಕೆ ವಹಿಸಿ
ಅಕ್ರಮ ಬಡಾವಣೆಗಳಿಂದ ಸರ್ಕಾರದ ಬೊಕ್ಕಸಕ್ಕೂಯಾವುದೇ ಆದಾಯವಿಲ್ಲ. ಜತೆಗೆ ಸಾರ್ವಜನಿಕರುಕೂಡ ವಂಚನೆಗೆ ಒಳಗಾಗಲಿದ್ದಾರೆ. ಆ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಜಿಲ್ಲಾಡಳಿತ ಅಕ್ರಮ ಬಡಾವಣೆಗಳ ವಿರುದ್ಧಕ್ರಮಕ್ಕೆ ಮುಂದಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ಹೇಳಿದ್ದಾರೆ.

ಸಾರ್ವಜನಿಕರು ನಿವೇಶನ ಖರೀದಿ ವೇಳೆ ಬಡಾವಣೆ ನಿರ್ಮಾಣಕ್ಕೆ ಸಂಬಂಧಪಟ್ಟ ಪ್ರಾಧಿಕಾರಗಳಿಂದ ಅನುಮೋದನೆ ಪಡೆಯಲಾಗಿದೆಯೇ ಅಥವಾ ಇಲ್ಲವೆ ಎಂಬುವುದರ ಬಗ್ಗೆಕೂಲಂಕಷವಾಗಿ ಪರಿಶೀಲಿಸಿದ ನಂತರಖರೀದಿ ಪ್ರಕ್ರಿಯೆಯಲ್ಲಿ ತೊಡಗುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಅಕ್ರಮ ಬಡವಾಣೆಗಳಿಗೆ ಕಡಿವಾಣ ಹಾಕುವ ಸಂಬಂಧ ಜಿಲ್ಲಾಡಳಿತ ಕ್ರಮಕೈಗೊಂಡಿದೆ. ತಾಲೂಕುವಾರು ಮತ್ತು ಹೋಬಳಿವಾರು ಅಕ್ರಮ ಬಡಾವಣೆಗಳ ಬಗ್ಗೆ ವೆಬ್‌ಸೈಟ್‌ನಲ್ಲಿ ಮಾಹಿತಿ ನೀಡಲಾಗಿದೆ.
-ಜೆ. ಮಂಜುನಾಥ್‌,
ಬೆಂಗಳೂರು ನಗರ ಜಿಲ್ಲಾಧಿಕಾರಿ

-ದೇವೇಶ ಸೂರಗುಪ್ಪ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.