ಡಿಕೆಶಿ ಪ್ರಕರಣ: ರಾಜ್ಯ ಸರಕಾರದ ಆದೇಶ ಪ್ರಶ್ನಿಸಲು ಮುಕ್ತ- ಕಪಿಲ್‌ ಸಿಬಲ್‌

  ದಿಲ್ಲಿ ಆ್ಯಕ್ಟ್ ಪ್ರಕಾರ ಸಿಬಿಐ ತನಿಖೆ ಮುಂದುವರಿಯುವಂತಿಲ್ಲ

Team Udayavani, Nov 30, 2023, 12:08 AM IST

kapil sibal

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ವಿರುದ್ಧ ಆದಾಯ ಮೀರಿದ ಆಸ್ತಿ ಗಳಿಕೆಗೆ ಸಂಬಂಧಿಸಿದ ಪ್ರಕರಣದ ತನಿಖೆ ನಡೆಸಲು ಸಿಬಿಐಗೆ ಸರಕಾರ ನೀಡಿದ್ದ ಅನುಮತಿ ಹಿಂಪಡೆಯಲಾಗಿದೆ. ಈ ಸಂಬಂಧ ದಿಲ್ಲಿ ಪೊಲೀಸ್‌ ಎಸ್ಟಾಬ್ಲಿಷ್ಮೆಂಟ್‌ ಕಾಯ್ದೆಯ ಸೆಕ್ಷನ್‌ 6 ಸ್ಪಷ್ಟಪಡಿಸಿದ್ದು, ಒಮ್ಮೆ ಅನುಮೋದನೆ ಹಿಂಪಡೆದರೆ ತನಿಖೆ ಮುಂದುವರಿಸಲು ಅವರಿಗೆ ಅವಕಾಶವಿಲ್ಲ ಎಂದು ಸುಪ್ರೀಂ ಕೋರ್ಟ್‌ ವಕೀಲ ಕಪಿಲ್‌ ಸಿಬಲ್‌ ಹೇಳಿದ್ದಾರೆ.

ಹೈಕೋರ್ಟ್‌ನಲ್ಲಿ ಡಿ.ಕೆ. ಶಿವಕುಮಾರ್‌ ಅವರ ವಿಚಾರವಾಗಿ ರಾಜ್ಯ ಸರಕಾರದ ಪರ ವಾದ ಮಂಡಿಸಿದ ಅವರು, ಅರ್ಜಿದಾರರು ಅರ್ಜಿ ವಾಪಸ್‌ ಪಡೆದುಕೊಳ್ಳಲು ಅಥವಾ ಪ್ರಕರಣದಲ್ಲಿ ಮುಂದುವರಿಯಲು ಸ್ವತಂತ್ರರು. ಅದು ಅವರಿಗೆ ಬಿಟ್ಟ ವಿಚಾರ. ಜತೆಗೆ ಯಾರಾದರೂ ಸರಕಾರದ ಆದೇಶ ಪ್ರಶ್ನಿಸಲು ಮುಕ್ತರಾಗಿದ್ದಾರೆ. ಅಂತಹ ಪ್ರಸಂಗ ಬಂದಾಗ ಸರಕಾರ ಅದನ್ನು ಕಾನೂನು ರೀತಿ ಎದುರಿಸಲಿದೆ ಎಂದು ಕಪಿಲ್‌ ಸಿಬಲ್‌ ಹೇಳಿದರು.

ಸಿಬಿಐ ವಾದ

ಅರ್ಜಿ ಮತ್ತು ಮೇಲ್ಮನವಿ ಅರ್ಜಿ ಹಿಂಪಡೆಯುವುದಾಗಿ ಮೇಲ್ಮನವಿದಾರರ ಪರ ವಕೀಲರು ಹೇಳಿ¨ªಾರೆ. ಅರ್ಜಿ ಹಿಂಪಡೆಯುವುದಕ್ಕೆ ನಮ್ಮ ಆಕ್ಷೇಪವಿದೆ. ಆದರೆ, ಮೇಲ್ಮನವಿ ಹಿಂಪಡೆಯುವುದಕ್ಕೆ ಆಕ್ಷೇಪವಿಲ್ಲ. ಎಫ್ಐಆರ್‌ ಅನ್ನು ಸರಕಾರ ಹಿಂಪಡೆಯುವಂತಿಲ್ಲ. ನ್ಯಾಯಾಲಯ ಮಾತ್ರ ಸಿಆರ್‌ಪಿಸಿ ಸೆಕ್ಷನ್‌ 482 ಅಡಿ ಅದನ್ನು ರದ್ದು ಅಥವಾ ವಜಾ ಮಾಡಬಹುದು. ಅಲ್ಲದೆ, 2019ರ ಸೆಪ್ಟೆಂಬರ್‌ 25ರಂದು ಸಿಬಿಐಗೆ ನೀಡಿರುವ ಅನುಮೋದನೆಯ ಭಾಗವಾಗಿ ಎಫ್ಐಆರ್‌ ದಾಖಲಿಸಿ, ಪ್ರಕ್ರಿಯೆ ನಡೆಸಲಾಗುತ್ತಿದೆ. ಭಾಗಶಃ ತನಿಖೆ ನಡೆದಿದೆ. 1994ರಲ್ಲಿ ಸುಪ್ರೀಂ ಕೋರ್ಟ್‌ನಂತೆ ರಾಜ್ಯ ಸರಕಾರ ಅನುಮತಿ ವಾಪಸ್‌ ಪಡೆಯಬಾರದು. ಅದನ್ನು ಒಪ್ಪಲಾಗದು ಮತ್ತು ಅದು ಊರ್ಜಿತವಾಗುವುದಿಲ್ಲ. ಆದ್ದರಿಂದ ನ್ಯಾಯಾಲಯಕ್ಕೆ ಮೇಲ್ಮನವಿ ವಾಪಸ್‌ ಪಡೆದುಕೊಳ್ಳಲು ಅವಕಾಶ ನೀಡಬಾರದು. ಅಷ್ಟಕ್ಕೂ ಈ ಹಂತದಲ್ಲಿ ಕಾನೂನಿನಲ್ಲಿರುವ ಅವಕಾಶಗಳನ್ನು ಆಧರಿಸಿ ಸಿಬಿಐ ಮುಂದುವರಿಯಲಿ ಎಂದು ಸಿಬಿಐ ಪರ ವಿಶೇಷ ಸರಕಾರಿ ಅಭಿಯೋಜಕ ಪಿ. ಪ್ರಸನ್ನ ಕುಮಾರ್‌ ವಾದಿಸಿದರು.

ಯತ್ನಾಳ್‌ ಪರ ವಕೀಲರ ವಾದ

ಸರಕಾರ ತನ್ನ ನಿರ್ಧಾರವನ್ನು ಹಿಂಪಡೆದು ಅಗತ್ಯವಿದ್ದಲ್ಲಿ ಪ್ರಶ್ನಿಸಬಹುದು ಎಂದು ಹೇಳಿದರೆ, ಸಮಾಜಕ್ಕೆ ಯಾವ ಸಂದೇಶ ನೀಡಿದಂತೆ. ಇಡೀ ಸರಕಾರದ ಸಂಪುಟ ಮೇಲ್ಮನವಿದಾರರ (ಡಿ.ಕೆ. ಶಿವಕುಮಾರ್‌) ಬೆಂಬಲಕ್ಕೆ ನಿಂತಿದೆ. ಅಷ್ಟಕ್ಕೂ ಮೇಲ್ಮನವಿದಾರ ಸಾಮಾನ್ಯ ವ್ಯಕ್ತಿಯಲ್ಲ. ಖಾಸಗಿ ವ್ಯಕ್ತಿ ಈ ರೀತಿಯಲ್ಲಿ ಮಾಡಿದರೆ ಒಪ್ಪಬಹುದು, ಸರಕಾರವೇ ಈ ರೀತಿಯ ನಿರ್ಧಾರಕ್ಕೆ ಮುಂದಾದರೆ ಹೇಗೆ? ರಾಜ್ಯ ಸರಕಾರದ ಈ ನಿರ್ಧಾರ ಒಪ್ಪುವಂತದ್ದಲ್ಲ. ಸಂಪುಟ ಅವಸರದಲ್ಲಿ ತೀರ್ಮಾನ ಕೈಗೊಂಡಿದೆ. ಇದಕ್ಕೆ ನಮ್ಮ ಆಕ್ಷೇಪವಿದೆ. ಆದರೆ, ಮೇಲ್ಮನವಿಯಲ್ಲಿ ಪ್ರತಿವಾದಿಯಾಗಿ ಸೇರಲು ಮಧ್ಯಾಂತರ ಅರ್ಜಿದಾರರು ಬಯಸುವುದಿಲ್ಲ ಎಂದು ಯತ್ನಾಳ್‌ ಪರ ವಕೀಲ ವೆಂಕಟೇಶ್‌ ದಳವಾಯಿ ನ್ಯಾಯಪೀಠಕ್ಕೆ ತಿಳಿಸಿದರು.

ಡಿಕೆಶಿ ಪರ ವಕೀಲರ ವಾದ

ಸಿಬಿಐ ತನಿಖೆಗೆ ನೀಡಲಾಗಿದ್ದ ಅನುಮತಿಯನ್ನು ರಾಜ್ಯ ಸರಕಾರವು ನ. 28ರಂದು ವಾಪಸ್‌ ಪಡೆದು ಆದೇಶ ಹೊರಡಿಸಿದೆ. ಯಾವ ಅನುಮತಿಯನ್ನು ಪ್ರಶ್ನಿಸಿ ಮೊದಲು ಏಕಸದಸ್ಯ ನ್ಯಾಯಪೀಠದಲ್ಲಿ ಅರ್ಜಿ ಸಲ್ಲಿಸಲಾಗಿತ್ತೋ, ಆ ಅರ್ಜಿಯ ಮೇಲೆ ಏಕಸದಸ್ಯ ನ್ಯಾಯಪೀಠದ ಆದೇಶದಿಂದ ಉದ್ಭವಿಸಿದ ಸನ್ನಿವೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗಿತ್ತೋ ಈಗ ಇವೆರಡೂ ವಿಚಾರಣ ಮಾನ್ಯತೆ ಕಳೆದುಕೊಂಡಂತಾಗಿದೆ. ಹೀಗಿದ್ದಾಗ ಪ್ರಕರಣ ಮುಂದುವರಿಸುವುದು ನಿರರ್ಥಕ. ಆದ್ದರಿಂದ ಅರ್ಜಿ ಹಾಗೂ ಮೇಲ್ಮನವಿ ವಾಪಸ್‌ ಪಡೆದುಕೊಳ್ಳಲು ಅನುಮತಿಸಬೇಕು ಎಂದು ಅಭಿಷೇಕ್‌ ಮನು ಸಿಂಘ್ವಿ ಹಾಗೂ ಉದಯ ಹೊಳ್ಳ ಮನವಿ ಮಾಡಿದರು.

ನ್ಯಾಯಪೀಠ ಹೇಳಿದ್ದು

ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಸರಕಾರದ ನಡೆಯನ್ನು ಪ್ರತಿವಾದಿಗಳು ಕಟುವಾಗಿ ಖಂಡಿಸಿದ್ದಾರೆ ಹಾಗೂ ಸರಕಾರದ ಈ ಕ್ರಮ ಒಪ್ಪುವಂತಹದ್ದಲ್ಲ ಎಂದು ಪ್ರತಿಪಾದಿಸಿದ್ದಾರೆ. ಆದರೆ, ಸರಕಾರದ ನಿರ್ಧಾರವನ್ನು ಯಾರೂ ಪ್ರಶ್ನಿಸದಿರುವಾಗ ಪ್ರತಿವಾದಿಗಳ ವಾದವನ್ನು ಅಂಗೀಕರಿಸಲು ನಮಗೆ ಮಾರ್ಗವಿಲ್ಲ ಎಂದು ಅಭಿಪ್ರಾಯಪಟ್ಟು, ಅರ್ಜಿ ಹಾಗೂ ಮೇಲ್ಮನವಿ ವಾಪಸ್‌ ಪಡೆದುಕೊಳ್ಳುವ ಡಿ.ಕೆ. ಶಿವಕುಮಾರ್‌ ಪರ ವಕೀಲರ ಮನವಿಯನ್ನು ಪುರಸ್ಕರಿಸಿ ಪ್ರಕರಣವನ್ನು ಇತ್ಯರ್ಥಪಡಿಸಿತು. ಇದೇ ವೇಳೆ ಸಿಬಿಐ ದಾಖಲಿಸಿದ ಎಫ್ಐಆರ್‌ ಬಗ್ಗೆ, ಈವರೆಗೆ ನಡೆದ ತನಿಖೆ ಬಗ್ಗೆ ಏನ್ನನ್ನೂ ಹೇಳುವುದಿಲ್ಲ; ಒಂದಕ್ಷರದ ವಿಶ್ಲೇಷಣೆಯನ್ನೂ ಮಾಡುವುದಿಲ್ಲ ಎಂದು ನ್ಯಾಯಪೀಠ ಸ್ಪಷ್ಟಪಡಿಸಿತು.

 ನಾನೇನೂ ತಪ್ಪು ಮಾಡಿಲ್ಲ, ದೇವರಿದ್ದಾನೆ: ಡಿಕೆಶಿ

ಬೆಂಗಳೂರು: ನಾನೇನೂ ತಪ್ಪು ಮಾಡಿಲ್ಲ. ಎಲ್ಲ ಬೆಳವಣಿಗೆಗಳನ್ನು ಜನರು ನೋಡಿ¨ªಾರೆ. ನಾನು ಕೇವಲ ಪಕ್ಷದ ಕೆಲಸ ಮಾತ್ರ ಮಾಡಿದ್ದೇನೆ. ಪಕ್ಷದ ಕೆಲಸ ಮಾಡಿದ ಕಾರಣ ಸಾಕಷ್ಟು ತೊಂದರೆ ಅನುಭವಿಸಿದ್ದೇನೆ. ಮುಂದಕ್ಕೂ ತೊಂದರೆ ಕೊಟ್ಟರೆ ಕಾಪಾಡಲು ಆ ಭಗವಂತನಿ¨ªಾನೆ. ನಾಡಿನ ಜನರಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ. ಬೆಂಗಳೂರು ಟೆಕ್‌ಸಮ್ಮಿಟ್‌ನಲ್ಲಿ ಭಾಗವಹಿಸಿದ್ದ ಅವರು ಹೈಕೋರ್ಟ್‌ನಲ್ಲಿ ಪ್ರಕರಣದ ಬೆಳವಣಿಗೆಗಳ ಬಗ್ಗೆ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ನನಗೆ ತೊಂದರೆ ಕೊಟ್ಟ ಕಾರಣಕ್ಕೆ ಈ ರಾಜ್ಯದಲ್ಲಿ ಏನಾಯಿತು ಎಂದು ತಿಳಿದಿದೆ. ನನ್ನ ಪರವಾಗಿ ನಿಂತವರು ಹಾಗೂ ಪ್ರಾರ್ಥನೆ ಮಾಡಿದ ಜನರಿಗೆ ಕೋಟಿ ನಮಸ್ಕಾರ ಎಂದರು.

ಟಾಪ್ ನ್ಯೂಸ್

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

16-flipkart

Flipkart Big Billion Day ಸೆ. 27 ರಿಂದ ಆರಂಭ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

ಸಂಸದ ಜಗದೀಶ್ ಶೆಟ್ಟರ್

Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ‌: ಶೆಟ್ಟರ್

15-ankola

Ankola: ಶಿರೂರು ಗುಡ್ಡ ಕುಸಿತ ಪ್ರಕರಣ; ಗೋವಾದಿಂದ ಯಂತ್ರ; ಇಂದಿನಿಂದ ಶೋಧ ಕಾರ್ಯ

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Chinese Zoo: ಪಾಂಡಾ ಎಂದು ನಾಯಿಗೆ ಬಣ್ಣ ಬಳಿದು ಪ್ರವಾಸಿಗರಿಗೆ ಮೋಸ…

China: ಪಾಂಡಾ ಎಂದು ನಾಯಿಗೆ ಬಣ್ಣ ಬಳಿದು ಪ್ರವಾಸಿಗರಿಗೆ ಮೋಸ: ಬೌ.. ಬೌ.. ಎಂದಾಗಲೇ ಗೊತ್ತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

ಸಂಸದ ಜಗದೀಶ್ ಶೆಟ್ಟರ್

Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ‌: ಶೆಟ್ಟರ್

Tirupati Case; Hurtful work for Hindus by converted Jagan: KS Eshwarappa

Tirupati Case; ಮತಾಂತರಗೊಂಡ ಜಗನ್‌ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ

CM Siddaramaiah slams BJP about Ganeshotsav riot

Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

16-flipkart

Flipkart Big Billion Day ಸೆ. 27 ರಿಂದ ಆರಂಭ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

ಸಂಸದ ಜಗದೀಶ್ ಶೆಟ್ಟರ್

Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ‌: ಶೆಟ್ಟರ್

15-ankola

Ankola: ಶಿರೂರು ಗುಡ್ಡ ಕುಸಿತ ಪ್ರಕರಣ; ಗೋವಾದಿಂದ ಯಂತ್ರ; ಇಂದಿನಿಂದ ಶೋಧ ಕಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.