ರೈತರ ವಿರುದ್ಧ ಮೊಕದ್ದಮೆ ದಾಖಲಿಸದಿರಿ


Team Udayavani, Nov 13, 2019, 3:07 AM IST

raitara

ಬೆಂಗಳೂರು: ರೈತರು, ನೆರೆ ಸಂತ್ರಸ್ತರಿಗೆ ನೆರವಾಗುವ ಸಂಬಂಧ ನೀಡಿರುವ ಸಲಹೆ, ಸೂಚನೆ ಬಗ್ಗೆ ಪರಿಗಣಿಸಲಾಗುವುದು ಹಾಗೂ ಚೆಕ್‌ ಬೌನ್ಸ್‌ ಪ್ರಕರಣಗಳಲ್ಲಿ ರೈತರ ವಿರುದ್ಧ ಮೊಕದ್ದಮೆ ದಾಖಲಿಸದಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ರೈತರ ಮುಖಂಡರಿಗೆ ಭರವಸೆ ನೀಡಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಕೋಡಿಹಳ್ಳಿ ಚಂದ್ರಶೇಖರ್‌ ನೇತೃತ್ವದ ರೈತ ಮುಖಂಡರೊಂದಿಗೆ ಸಭೆ ನಡೆಸಿದ ಯಡಿಯೂರಪ್ಪ, ರೈತ ಮುಖಂಡರ ಸಲಹೆ, ಸೂಚನೆಯನ್ನು ಪರಿಗಣಿಸಲಾಗುವುದು. ಸರ್ಕಾರದ ಇತಿಮಿತಿಯಲ್ಲಿ ಎಷ್ಟು ಸಾಧ್ಯವೋ ಅಷ್ಟನ್ನು ಸಾಧ್ಯವಾದಷ್ಟು ಬೇಗ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಇದಕ್ಕೂ ಮೊದಲು ರೈತ ಮುಖಂಡರ ನಿಯೋಗ ಪ್ರಮುಖ ಬೇಡಿಕೆಗಳನ್ನು ಪ್ರಸ್ತಾಪಿಸಿ, ನೆರೆಯಿಂದ ಮನೆ ಕಳೆದುಕೊಂಡವರಿಗೆ 10 ಲಕ್ಷ ರೂ.ಗಿಂತ ಕಡಿಮೆಯಿಲ್ಲದಂತೆ ಗುಣಮಟ್ಟದ ಮನೆ ನಿರ್ಮಿಸಬೇಕು. ನೆರೆಯಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡಬೇಕು. ನೆರೆಯಿಂದಾದ ಬೆಳೆ ನಷ್ಟಕ್ಕೆ ಡಾ.ಸ್ವಾಮಿನಾಥನ್‌ ವರದಿಯನ್ವಯ ನಷ್ಟ ಭರಿಸಬೇಕು. ಪ್ರವಾಹದಿಂದ ಪ್ರತಿ ಬಾರಿ ಮುಳುಗಡೆಯಾಗುವ ಹಳ್ಳಿಗಳನ್ನು ಸ್ಥಳಾಂತರಿಸಬೇಕು ಎಂದು ನಿಯೋಗ ಮನವಿ ಮಾಡಿತು.

ನೆರೆಯಿಂದ ಸಂಪೂರ್ಣ ಹಾಳಾಗಿರುವ ಭೂಮಿಗೆ ಪರ್ಯಾಯ ಭೂಮಿ ನೀಡಬೇಕು. ಬರ, ನೆರೆಯಿಂದ ತತ್ತರಿಸಿರುವ ಹೊತ್ತಿನಲ್ಲಿ ಹಣಕಾಸು ಸಂಸ್ಥೆಗಳ ಕಿರು ಸಾಲ ವಸೂಲಾತಿಗೆ ಕಡಿವಾಣ ಹಾಕಬೇಕು. ಬರಪೀಡಿತ ಪ್ರದೇಶದ ರೈತರ ಜಮೀನುಗಳಿಗೆ ಎಕರೆಗೆ 25,000 ರೂ. ನೀಡಬೇಕು. ಎಲ್ಲ ರಾಷ್ಟ್ರೀಕೃತ ಬ್ಯಾಂಕ್‌ಗಳ ಸಾಲ ಮನ್ನಾ ಮಾಡಬೇಕು. ನೀರಾವರಿ ಯೋಜನೆಗಳಿಗೆ ಬಜೆಟ್‌ನಲ್ಲಿ ಒಂದು ಲಕ್ಷ ಕೋಟಿ ರೂ. ಅನುದಾನ ಕಾಯ್ದಿರಿಸಬೇಕು ಎಂದು ಆಗ್ರಹಿಸಿತು.

ಕೆಪಿಸಿಎಲ್‌ ವಿಧಾನ ಅಳವಡಿಕೆಗೆ ಕೆಪಿಟಿಸಿಎಲ್‌ ಒಪ್ಪಿಗೆ
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮದ ನಿರ್ದೇಶಕರ ಮಂಡಳಿ ಸಭೆಯಲ್ಲಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ನೇಮಕಾತಿಗೆ ಕರ್ನಾಟಕ ವಿದ್ಯುತ್‌ ನಿಗಮ (ಕೆಪಿಸಿಎಲ್‌) ಅನುಸರಿಸುವ ವಿದ್ಯಾರ್ಹತೆ ಹಾಗೂ ಇತರೆ ಮಾನದಂಡ ಅನುಸರಿಸುವ ಕುರಿತು ಒಪ್ಪಿಗೆ ನೀಡಲಾಗಿದೆ. ರೇಸ್‌ಕೋರ್ಸ್‌ ರಸ್ತೆಯ ಕೆಪಿಸಿಎಲ್‌ನ ಶಕ್ತಿ ಭವನದಲ್ಲಿ ನಡೆದ ಕೆಪಿಟಿಸಿಎಲ್‌ ನಿರ್ದೇಶಕರ ಮಂಡಳಿ ಸಭೆಯಲ್ಲಿ ಹಲವು ಪ್ರಮುಖ ವಿಚಾರಗಳ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಯಿತು.

ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ನೇಮಕಕ್ಕೆ ಸಂಬಂಧಪಟ್ಟಂತೆ ಕೆಪಿಸಿಎಲ್‌ ವಿಧಿಸುವ ವಿದ್ಯಾರ್ಹತೆ, ಪ್ರಮಾಣ ಇತರೆ ಮಾನದಂಡಗಳನ್ನು ಕೆಪಿಟಿಸಿಎಲ್‌ನಲ್ಲಿ ಅಳವಡಿಸಿಕೊಳ್ಳಲು ಸಭೆಯಲ್ಲಿ ಅನುಮೋದನೆ ನೀಡಲಾಯಿತು. ಅದರಂತೆ ಇನ್ನು ಮುಂದೆ ಕೆಪಿಟಿಸಿಎಲ್‌ನಲ್ಲಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ನೇಮಕದಲ್ಲಿ ಕೆಪಿಸಿಎಲ್‌ನಲ್ಲಿ ಅನುಸರಿಸುತ್ತಿರುವ ಮಾನದಂಡಗಳು ಜಾರಿಗೆ ಬರಲಿವೆ ಎಂದು ಮೂಲಗಳು ಹೇಳಿವೆ.

ಟಾಪ್ ನ್ಯೂಸ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.