ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಆರಾಧನಾ ರಂಗಪೂಜಾ, ಬಲಿ ಉತ್ಸವ ಸಂಪನ್ನ


Team Udayavani, Oct 27, 2023, 12:44 AM IST

doddana gudde

ಉಡುಪಿ: ದೊಡ್ಡಣಗುಡ್ಡೆ ಶ್ರೀ ಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿಯವರ ಮಾರ್ಗದರ್ಶನದಲ್ಲಿ ವೇ|ಮೂ| ಕೃಷ್ಣಮೂರ್ತಿ ತಂತ್ರಿಗಳ ನೇತೃತ್ವದಲ್ಲಿ ವಿಜಯದಶಮಿ ಪರ್ವಕಾಲದಲ್ಲಿ ಆರಾಧನಾ ರಂಗಪೂಜಾ ಸಹಿತ ಬಲಿ ಉತ್ಸವ ಮಂಗಳವಾರ ಸಂಪನ್ನಗೊಂಡಿತು.

ಶರನ್ನವರಾತ್ರಿ ಪರ್ವಕಾಲದಿಂದ ಆರಂಭಗೊಂಡ ಎಲ್ಲ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಮಂಗಳ ಹಾಡುವ ದೊಡ್ಡರಂಗಪೂಜಾ ಮಹೋತ್ಸವದಲ್ಲಿ ತಪ್ತತ್‌ ದೇವತೆಗಳನ್ನು ನೈವೇದ್ಯದಿಂದ ದೇವಿಯ ಧ್ಯಾನದಿಂದ ದೀಪಾರಾಧನೆ ಸಹಿತ ಸಂತೃಪ್ತಿಗೊಳಿಸಲಾಯಿತು.

ಪಳ್ಳಿ ಗುರುರಾಜ ಭಟ್‌ ಬಲಿ ಉತ್ಸವ ನೆರವೇರಿಸಿದರು. ಕ್ಷೇತ್ರದ ಸ್ವಾತಿ ಆಚಾರ್ಯರಿಂದ ವಿಶೇಷ ನೃತ್ಯ ಸುತ್ತು, ಪ್ರಣಮ್ಯಾ ರಾವ್‌ ಅವರಿಂದ ಯಕ್ಷ ನೃತ್ಯ, ಬೆಳ್ಮಣ್ಣು ವನದುರ್ಗಾ ಪಲ್ಲಕಿ ಬಳಗದವರಿಂದ ಪಲ್ಲಕಿ ಉತ್ಸವ, ಬೆಳ್ಕಳೆ ಮಹಾಲಿಂಗೇಶ್ವರ ಚೆಂಡೆ ಬಳಗದವರಿಂದ ಚೆಂಡೆ ಸುತ್ತು, ಗುಂಡಿಬೈಲಿನ ಕಾಲಭೈರವ ಭಜನ ಮಂಡಳಿಯಿಂದ ಭಜನೆ ಸುತ್ತು, ಮುದ್ರಾಡಿ ವಿಜಯ ಶೇರಿಗಾರ್‌ ಅವರಿಂದ ಸ್ಯಾಕ್ಸೋಪೋನ್‌ ಸುತ್ತು, ಮುರಳೀಧರ ಮುದ್ರಾಡಿಯವರಿಂದ ನಾದಸ್ವರ ವಾದನ ಹಾಗೂ ಪಂಚ ವಾದ್ಯಗಳು ನೃತ್ಯ ಸುತ್ತಿನ ಆಕರ್ಷಣೆಯಾಗಿತ್ತು.

ವಸಂತ ಪೂಜೆಯಲ್ಲಿ ಅರವಿಂದ ಹೆಬ್ಟಾರ್‌, ಸಮನ್ವಿ, ಅರ್ಚನಾ ಸಂಗೀತ ಸೇವೆ ನೀಡಿದರು. ಋತ್ವಿಜರು ಅಷ್ಟಾವಧಾನ ನಡೆಸಿದರು. ಈಶಾನ್‌ ಕೌಂಡಿನ್ಯ ಅವರ ನೃತ್ಯಕ್ಕೆ ಚೆನ್ನೈಯ ವಿ| ಅಭಿಷೇಕ್‌ ಚಂದ್ರಶೇಖರ್‌ ಸಂಗೀತ ನೀಡಿದರು. ವಸಂತ ಪೂಜೆಯಲ್ಲಿ ದೇವಿಗೆ ಸಮರ್ಪಿಸಲಾದ ನೈವೇದ್ಯವನ್ನು ಭಕ್ತರಿಗೆ ವಿತರಿಸಲಾಯಿತು. ರಂಗಪೂಜೆಯ ಅನ್ನಮುದ್ರೆ ಸೇವನೆಯ ಫ‌ಲವನ್ನರಿತ ಭಕ್ತರು ಅನ್ನಮುದ್ರೆಗಾಗಿ ಕ್ಷೇತ್ರದಲ್ಲಿ ಕಾದು ಸ್ವೀಕರಿಸಿದರು ಎಂದು ಕ್ಷೇತ್ರದ ಉಸ್ತುವಾರಿ ಕುಸುಮಾ ನಾಗರಾಜ್‌ ತಿಳಿಸಿದ್ದಾರೆ.

ಮಹಾ ಸಂಪ್ರೋಕ್ಷಣೆ-ಮಂತ್ರಾಕ್ಷತೆ

ಉತ್ಸವ ಸಮಾಪ್ತಿಯ ಬಳಿಕ ನಡೆಸಲ್ಪಡುವ ಶುದ್ಧ ಪ್ರಕ್ರಿಯೆ ಹಾಗೂ ದೇವರನ್ನು ಯಥಾಸ್ಥಿತಿಗೆ ಕೊಂಡೊಯ್ಯುವುದೇ ಮಹಾಸಂಪ್ರೋಕ್ಷಣೆ. ಉತ್ಸವದ ಪರ್ವಕಾಲದಲ್ಲಿ ಜ್ಞಾತ ಅಜ್ಞಾತವಾಗಿ ನಡೆದ ಅಶುದ್ಧಿ ನಿವಾರಣೆಗೆ ನಡೆಸಲಾಗುತ್ತದೆ. ಗ್ರಾಮ ರಾಷ್ಟ್ರದ ಸುಭಿಕ್ಷೆಗಾಗಿ ನಡೆಸುವ ಪ್ರಕ್ರಿಯೆಯು ಮಹಾಮಂತ್ರಾಕ್ಷತೆಯಾಗಿದೆ. ಉತ್ಸವದಲ್ಲಿ ನಡೆಸಿದ ಎಲ್ಲ ಪೂಜಾಫ‌ಲಗಳು ಅಡಕವಾಗಿರುವ ಮಂತ್ರಾಕ್ಷತೆಯನ್ನು ಯಾರು ತಮ್ಮ ಶಿರಸ್ಸಿನಲ್ಲಿ ಧಾರಣೆ ಮಾಡುತ್ತಾರೋ ಅಂತಹವರು ದೇವರ ಪೂರ್ಣಾನುಗ್ರಹಕ್ಕೆ ಪಾತ್ರರಾಗುತ್ತಾರೆ. ಮಂತ್ರಾಕ್ಷತೆಯನ್ನು ಶಿಲೆಯ ಮೇಲೆ ಹಾಕಲ್ಪಟ್ಟರೆ ಶಿಲೆಯಲ್ಲಿ ದೇವರು ನೆಲೆಸುತ್ತಾನೆ. ಕ್ಷೇತ್ರದ ತಂತ್ರಿಗಳಿಂದ ಭಕ್ತರು ದೇವ ಮಂತ್ರಾಕ್ಷತೆಯನ್ನು ಹಾಕಿಸಿಕೊಂಡಾಗ ಶೂರರಾಗುತ್ತಾರೆ ಎಂದು ಹೇಳಲ್ಪಟ್ಟಿದೆ. ದೇವರ ಆಶೀರ್ವಾದ ರೂಪದ ಅನುಗ್ರಹ ಪ್ರಸಾದವೆಂದು ಮಂತ್ರಾಕ್ಷತೆ ಗುರುತಿಸಲ್ಪಟ್ಟಿದೆ ಎಂದು ಧರ್ಮದರ್ಶಿ ರಮಾನಂದ ಗುರೂಜಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Jharkhand: ಚಂಪೈ ಸೊರೇನ್‌ ರಾಜೀನಾಮೆ…ಹೇಮಂತ್‌ ಸೊರೇನ್ ಮತ್ತೆ ಜಾರ್ಖಂಡ್‌ ಸಿಎಂ?

Jharkhand: ಚಂಪೈ ಸೊರೇನ್‌ ರಾಜೀನಾಮೆ…ಹೇಮಂತ್‌ ಸೊರೇನ್ ಮತ್ತೆ ಜಾರ್ಖಂಡ್‌ ಸಿಎಂ?

ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಕಾನ್ಸ್‌ ಸ್ಟೇಬಲ್‌ ಬೆಂಗಳೂರಿಗೆ ವರ್ಗಾವಣೆ?

ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಕಾನ್ಸ್‌ ಸ್ಟೇಬಲ್‌ ಬೆಂಗಳೂರಿಗೆ ವರ್ಗಾವಣೆ?

Salaar 2: ಪ್ರಶಾಂತ್‌ ನೀಲ್‌ – ಪ್ರಭಾಸ್‌ ʼಸಲಾರ್-2‌ʼ ಸೆಟ್ಟೇರಲು ಡೇಟ್‌ ಫಿಕ್ಸ್

Salaar 2: ಪ್ರಶಾಂತ್‌ ನೀಲ್‌ – ಪ್ರಭಾಸ್‌ ʼಸಲಾರ್-2‌ʼ ಸೆಟ್ಟೇರಲು ಡೇಟ್‌ ಫಿಕ್ಸ್

3-chikkamagaluru

ಮಹಿಳೆಯರೊಂದಿಗೆ ಅಸಭ್ಯ ವರ್ತನೆ; ವ್ಯಕ್ತಿಯನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು

Bridges collapse: ಬಿಹಾರದಲ್ಲಿ ಮತ್ತೊಂದು ಸೇತುವೆ ಕುಸಿತ… 15 ದಿನದಲ್ಲಿ 7ನೇ ಪ್ರಕರಣ

Bridges Collapse: ಬಿಹಾರದಲ್ಲಿ ಮತ್ತೊಂದು ಸೇತುವೆ ಕುಸಿತ… 15 ದಿನದಲ್ಲಿ 7ನೇ ಪ್ರಕರಣ

Bollywood: 8 ವರ್ಷದ ಬಳಿಕ ಬಾಲಿವುಡ್‌ಗೆ ಪಾಕ್‌ ನಟ‌ ಫವಾದ್‌ ಖಾನ್ ಕಂಬ್ಯಾಕ್

Bollywood: 8 ವರ್ಷದ ಬಳಿಕ ಬಾಲಿವುಡ್‌ಗೆ ಪಾಕ್‌ ನಟ‌ ಫವಾದ್‌ ಖಾನ್ ಕಂಬ್ಯಾಕ್

ICC T20I Rankings: ವಿಶ್ವಕಪ್‌ನಲ್ಲಿ ಶ್ರೇಷ್ಠ ಸಾಧನೆ; ನಂ.1 ಆಲ್ ರೌಂಡರ್ ಆದ ಪಾಂಡ್ಯ

ICC T20I Rankings: ವಿಶ್ವಕಪ್‌ನಲ್ಲಿ ಶ್ರೇಷ್ಠ ಸಾಧನೆ; ನಂ.1 ಆಲ್ ರೌಂಡರ್ ಆದ ಪಾಂಡ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರ್ಕಳ: ಪಿಎಂ ಆವಾಸ್‌ ಮನೆಗಳಿಗೆ ಬೇಡಿಕೆಯೇ ಇಲ್ಲ-250ರಲ್ಲಿ 90 ಮನೆಗಳಿಗಷ್ಟೇ ಅರ್ಜಿ!

ಕಾರ್ಕಳ: ಪಿಎಂ ಆವಾಸ್‌ ಮನೆಗಳಿಗೆ ಬೇಡಿಕೆಯೇ ಇಲ್ಲ-250ರಲ್ಲಿ 90 ಮನೆಗಳಿಗಷ್ಟೇ ಅರ್ಜಿ!

Agriculture-Tracator

Agriculture: ಭತ್ತದ ಕೃಷಿಗೆ ಯಂತ್ರವೂ ಸಿಗುತ್ತಿಲ್ಲ, ಕಾರ್ಮಿಕರೂ ಬರುತ್ತಿಲ್ಲ

4-manipal

Manipal: ಅನಾಮಧೇಯ ಆ್ಯಪ್‌ ಡೌನ್‌ಲೋಡ್‌ ಮಾಡಿ ವಂಚನೆಗೊಳಗಾದ ಮಹಿಳೆ!

Court-Symbol

Udupi Pocso Court: ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ; ಆರೋಪದಿಂದ ತಂದೆ ದೋಷಮುಕ್ತ

Train ಶಿವಮೊಗ್ಗ-ಶೃಂಗೇರಿ-ಮಂಗಳೂರು ಹೊಸ ರೈಲು ಮಾರ್ಗ ಮಂಜೂರಾತಿಗೆ ಮನವಿ

Train ಶಿವಮೊಗ್ಗ-ಶೃಂಗೇರಿ-ಮಂಗಳೂರು ಹೊಸ ರೈಲು ಮಾರ್ಗ ಮಂಜೂರಾತಿಗೆ ಮನವಿ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Jharkhand: ಚಂಪೈ ಸೊರೇನ್‌ ರಾಜೀನಾಮೆ…ಹೇಮಂತ್‌ ಸೊರೇನ್ ಮತ್ತೆ ಜಾರ್ಖಂಡ್‌ ಸಿಎಂ?

Jharkhand: ಚಂಪೈ ಸೊರೇನ್‌ ರಾಜೀನಾಮೆ…ಹೇಮಂತ್‌ ಸೊರೇನ್ ಮತ್ತೆ ಜಾರ್ಖಂಡ್‌ ಸಿಎಂ?

ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಕಾನ್ಸ್‌ ಸ್ಟೇಬಲ್‌ ಬೆಂಗಳೂರಿಗೆ ವರ್ಗಾವಣೆ?

ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಕಾನ್ಸ್‌ ಸ್ಟೇಬಲ್‌ ಬೆಂಗಳೂರಿಗೆ ವರ್ಗಾವಣೆ?

5-tavaragera

Tavaragera: ಕಾರು ಅಡ್ಡಗಟ್ಟಿ ಹಾಡಹಗಲೇ 5 ಲಕ್ಷ ರೂ. ದರೋಡೆ !

4-panaji

ಯುವಪೀಳಿಗೆ ಪತ್ರಿಕೆ ಓದುವ ಆಸಕ್ತಿ ಬೆಳೆಸುವ ರೀತಿ ಬರವಣಿಗೆ ಪತ್ರಕರ್ತರಲ್ಲಿರಬೇಕು : ಸಾವಂತ್

Salaar 2: ಪ್ರಶಾಂತ್‌ ನೀಲ್‌ – ಪ್ರಭಾಸ್‌ ʼಸಲಾರ್-2‌ʼ ಸೆಟ್ಟೇರಲು ಡೇಟ್‌ ಫಿಕ್ಸ್

Salaar 2: ಪ್ರಶಾಂತ್‌ ನೀಲ್‌ – ಪ್ರಭಾಸ್‌ ʼಸಲಾರ್-2‌ʼ ಸೆಟ್ಟೇರಲು ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.