Forest: ಅರಣ್ಯವಾಸಿಗಳನ್ನು ಒಕ್ಕಲೆಬ್ಬಿಸಿ ತೊಂದರೆ ಕೊಡಲ್ಲ : ಖಂಡ್ರೆ
Team Udayavani, Dec 6, 2023, 11:41 PM IST
ಬೆಳಗಾವಿ: ರಾಜ್ಯದ ಮಲೆನಾಡು ಮತ್ತು ಕರಾವಳಿ ಸೇರಿದಂತೆ ಅನೇಕ ಕಡೆಗಳಲ್ಲಿ ಹಲವಾರು ವರ್ಷಗಳಿಂದ ವಾಸವಿರುವ ಅರಣ್ಯವಾಸಿಗಳಿಗೆ ಸರಕಾರ ಯಾವುದೇ ತೊಂದರೆ ಕೊಡುವುದಿಲ್ಲ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಭರವಸೆ ನೀಡಿದರು.
ಬುಧವಾರ ವಿಧಾನ ಪರಿಷತ್ತಿನಲ್ಲಿ ಬಿಜೆಪಿಯ ಪ್ರತಾಪ್ ಸಿಂಹ ನಾಯಕ್ ಅವರು ನಿಯಮ 330ರಡಿ ಪ್ರಸ್ತಾವಿಸಿದ ವಿಷಯಕ್ಕೆ ಉತ್ತರಿಸಿದ ಸಚಿವ ಖಂಡ್ರೆ, ರಾಜ್ಯದಲ್ಲಿ ಒಟ್ಟು ಎರಡು ಲಕ್ಷ ಎಕರೆ ಅರಣ್ಯ ಭೂಮಿ ಅತಿಕ್ರಮಣವಾಗಿದೆ. ಅದರಲ್ಲೂ ಬೆಂಗಳೂರಿನಲ್ಲಿಯೇ 2 ಸಾವಿರ ಭೂಮಿ ಭೂಗಳ್ಳರ ಪಾಲಾಗಿದೆ. ಕಾಡು ಪ್ರಾಣಿಗಳು ನಾಡಿಗೆ ಬರುತ್ತಿವೆ. ಕಳೆದ ವರ್ಷ 51 ಜನರು ಈ ವರ್ಷ 43 ಜನರು ಕಾಡು ಪ್ರಾಣಿಗಳ ದಾಳಿಯಿಂದ ಮೃತಪಟ್ಟಿದ್ದಾರೆ. ಪರಿಸರವನ್ನು ಉಳಿಸಿಕೊಳ್ಳುವ ದೊಡ್ಡ ಹೊಣೆಗಾರಿಕೆ ನಮ್ಮ ಮೇಲಿದೆ. ಅದಕ್ಕಾಗಿ ಅರಣ್ಯ ಭೂಮಿ ಸಂರಕ್ಷಣೆ ಸರ್ಕಾರಕ್ಕೆ ಅನಿವಾರ್ಯವಾಗಿದೆ ಎಂದರು.
ಆದರೆ ಯಾವುದೇ ಕಾರಣಕ್ಕೂ ಬಹಳ ವರ್ಷಗಳಿಂದ ಅದರಲ್ಲೂ 1978ರ ಪೂರ್ವದಿಂದಲೂ ಅರಣ್ಯ ಪ್ರದೇಶದಲ್ಲಿ ವಾಸವಾಗಿರುವ, ಕೃಷಿ ಮಾಡಿಕೊಂಡಿರುವ ಜನರನ್ನು ಸರಕಾರ ಒಕ್ಕಲೆಬ್ಬಿಸುವ ಪ್ರಶ್ನೆಯೇ ಇಲ್ಲ. ಇಲ್ಲಿ ಬಡವರು, ಬುಡಕಟ್ಟು ಜನಾಂಗದವರು ಮತ್ತು ಅರಣ್ಯವಾಸಿಗಳಿಗೆ ಸರ್ಕಾರ ರಕ್ಷಣೆ ಕೊಡುತ್ತದೆ. ಇದರಲ್ಲಿ ಯಾವುದೇ ಸಂಶಯ ಬೇಡ ಎಂದರು.
ಜಂಟಿ ಸಮೀಕ್ಷೆ ಆಗ್ರಹ: ರಾಜ್ಯದ ಮಲೆನಾಡು-ಕರಾವಳಿ ಸೇರಿದಂತೆ ಅನೇಕ ಕಡೆಗಳಲ್ಲಿ ಮೇಲಿಂದ ಮೇಲೆ ಸಂಘರ್ಷಕ್ಕೆ ಕಾರಣವಾಗುತ್ತಿರುವ ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆ ಗಡಿಗಳನ್ನು ಜಂಟಿ ಸಮೀಕ್ಷೆ ಮಾಡಲಾಗುವುದು ಎಂದು ಖಂಡ್ರೆ ಹೇಳಿದರು.
ಕಳಂಜ ಪ್ರಕರಣ ಯಥಾಸ್ಥಿತಿ: ಖಂಡ್ರೆ
ಅರಣ್ಯ ಮತ್ತು ಕಂದಾಯ ಇಲಾಖೆ ವ್ಯಾಪ್ತಿಯಲ್ಲಿನ ಭೂ ಸಮೀಕ್ಷೆ ಸಂಬಂಧ ಶಾಸಕರು ಮತ್ತು ಅರಣ್ಯ ಇಲಾಖೆ ಅಧಿಕಾರಿಗಳ ಮಧ್ಯೆ ತೀವ್ರ ಸಂಘರ್ಷ ಏರ್ಪಟ್ಟು ಸುದ್ದಿಯಾಗಿದ್ದ ಬೆಳ್ತಂಗಡಿ ತಾಲೂಕಿನ ಕಳಂಜ ಗ್ರಾಮದಲ್ಲಿ ಅ. 6ರಂದು ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಯಥಾಸ್ಥಿತಿ ಕಾಯ್ದುಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದಾಗಿ ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು.
ಬುಧವಾರ ವಿಧಾನ ಪರಿಷತ್ತಿನಲ್ಲಿ ಬಿಜೆಪಿಯ ಪ್ರತಾಪ್ ಸಿಂಹ ನಾಯಕ್ ಅವರು ನಿಯಮ 330ರ ಅಡಿಯಲ್ಲಿ ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರಿಸಿದ ಸಚಿವ ಖಂಡ್ರೆ, ಅರಣ್ಯ ಇಲಾಖೆ ಭೂಮಿ ಉಳಿಸಿಕೊಳ್ಳುವುದು ಇಂದಿನ ತುರ್ತು ಅಗತ್ಯವಾಗಿದೆ. ಅಲ್ಲಿ ಮನೆ ಕಟ್ಟುವ ಕುಟುಂಬದ ಕ್ರಮವನ್ನು ಅರಣ್ಯ ಇಲಾಖೆ ಅಧಿಕಾರಿಗಳು ತಡೆಯಲು ಹೋದಾಗ ಶಾಸಕರು ಮತ್ತು ಅರಣ್ಯ ಇಲಾಖೆ ಅಧಿಕಾರಿಗಳ ಮಧ್ಯೆ ಈ ಘರ್ಷಣೆ ನಡೆದಿದೆ. ಇದು ದುರದೃಷ್ಟಕರ ಎಂದು ವಿಷಾದಿಸಿದರು.
ವಿಷಯದ ಪರವಾಗಿ ಮಾತನಾಡಿದ ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ, ಸಾರ್ವಜನಿಕ ಜೀವನದಲ್ಲಿ ಕೆಲಸ ಮಾಡುವ ಜನಪ್ರತಿನಿಧಿಗಳನ್ನು ಅಧಿಕಾರಿಗಳು ಈ ರೀತಿ ನಡೆಸಿಕೊಂಡರೆ ಕೆಲಸ ಮಾಡುವುದು ಹೇಗೆ ? ಎಂದು ಪ್ರಶ್ನಿಸಿದರು. ಇದಕ್ಕೆ ಧ್ವನಿ ಗೂಡಿಸಿದ ಭಾರತಿ ಶೆಟ್ಟಿ, ಕಳಂಜ ಪ್ರಕರಣದಲ್ಲಿ ದರ್ಪ ತೋರಿದ ಅಧಿಕಾರಿಗಳನ್ನು ಅಮಾನತ್ತು ಮಾಡಬೇಕು ಎಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು
Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ
Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ
Lokayukta ಪತ್ರ ಸೋರಿಕೆ ಹೇಗಾಯ್ತು: ರಾಜ್ಯಪಾಲರ ಪ್ರಶ್ನೆ
Court ಕಲಾಪ ನೇರಪ್ರಸಾರ ಚಿತ್ರೀಕರಣಕ್ಕೆ ನಿರ್ಬಂಧ; ಪೂರ್ವಾನುಮತಿ ಅಗತ್ಯ: ಹೈಕೋರ್ಟ್ ಸೂಚನೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು
Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ
Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್ ಇಸ್ರೇಲ್ ದಾಳಿಯಲ್ಲಿ ಸಾವು
Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.