CM Siddaramaiah ಸುಳ್ಳು ಹೇಳುವ ಬಿಜೆಪಿ ನಂಬಬೇಡಿ

40 ವರ್ಷಗಳ ರಾಜಕೀಯ ಜೀವನದಲ್ಲಿ ನಾನೆಂದೂ ತಪ್ಪು ಮಾಡಿಲ್ಲ

Team Udayavani, Sep 14, 2024, 12:08 AM IST

CM Siddaramaiah ಸುಳ್ಳು ಹೇಳುವ ಬಿಜೆಪಿ ನಂಬಬೇಡಿ

ರಾಮನಗರ/ಮಾಗಡಿ: ರಾಜ್ಯದ ರೈತರು, ದಲಿತರು, ಮಹಿಳೆಯರು, ಹಿಂದುಳಿದವರು, ಅಲ್ಪಸಂಖ್ಯಾಕರ ಪರವಾಗಿ ನಾವು ಗ್ಯಾರಂಟಿ ಯೋಜನೆ ನೀಡಿದ್ದೇವೆ. 1.23 ಕೋಟಿ ಕುಟುಂಬಗಳಿಗೆ ಗ್ಯಾರಂಟಿ ನೆರವು ಸಿಗುತ್ತಿದೆ. ಹೀಗಿದ್ದೂ ಅದೇಕೆ ಮೋದಿಗೆ ಮತ ನೀಡಿದ್ದೀರಾ? ಏಕೆ ಅವರು ಸುಳ್ಳು ಹೇಳುತ್ತಾರೆ ಎಂದು ಮತ ಹಾಕಿದಿರಾ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

ಮಾಗಡಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಾನು ಬಡವರ ಪರವಾಗಿದ್ದೇನೆ ಎಂದು ನನ್ನ ಮೇಲೆ ಸುಳ್ಳು ಆರೋಪ ಮಾಡಿದರು. ಬಿಜೆಪಿಯವರ ಕಾಲದಲ್ಲಿ ಮಾಡಬಾರದ್ದನ್ನು ಮಾಡಿದರು. ಬಿಜೆಪಿಯವರು ಸುಳ್ಳು ಹೇಳುತ್ತಾರೆ ಎಂದು ಮತ ಹಾಕುತ್ತೀರಾ ಎಂದು ಪ್ರಶ್ನಿಸಿದರಲ್ಲದೆ, ದಯಮಾಡಿ ಸುಳ್ಳು ಹೇಳುವವರನ್ನು ನಂಬಬೇಡಿ. ನಿಮಗೆ ಕೈ ಮುಗಿಯುತ್ತೇನೆ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.

56 ಸಾವಿರ ಕೋಟಿ ರೂ.ಗ್ಯಾರಂಟಿ ಯೋಜನೆಯಿಂದ ಖರ್ಚುಮಾಡುತ್ತಿದ್ದೇವೆ. ಒಂದು ಕುಟುಂಬಕ್ಕೆ 4ರಿಂದ 5 ಸಾವಿರ ರೂ. ಸಿಗುತ್ತಿದೆ. ಇದನ್ನು ಯಾವ ಸರಕಾರ ಮಾಡಿತ್ತು? ನೀವು ನಮ್ಮ ಸರಕಾರದ ಪರ ಮಾತನಾಡುತ್ತಿಲ್ಲ, 1.23 ಕೋಟಿ ಕುಟುಂಬಗಳಿಗೆ ಗ್ಯಾರಂಟಿ ನೆರವು ಸಿಗುತ್ತಿದೆ. ಹೀಗಿದ್ದೂ ಅದೇಕೆ ಮೋದಿಗೆ ಮತ ನೀಡಿದ್ದೀರಾ ಎಂದು ಪ್ರಶ್ನಿಸಿದರು.

ನನ್ನ 40 ವರ್ಷದ ರಾಜಕೀಯ ಜೀವನದಲ್ಲಿ ನಾನು ಎಂದೂ ತಪ್ಪು ಮಾಡಿಲ್ಲ, ಈಗಲೂ ತಪ್ಪು ಮಾಡಲ್ಲ, ಮುಂದೆಯೂ ಮಾಡುವುದಿಲ್ಲ. ನನ್ನ ಜೀವನ ತೆರೆದ ಪುಸ್ತಕವಿದ್ದಂತೆ. ಯಾರು ಬೇಕಾದರೂ ತಿರುವಿ ಹಾಕಿ ನೋಡಬಹುದು ಎಂದು ಸಿದ್ದರಾಮಯ್ಯ ಹೇಳಿದರು.

ವಾಲ್ಮೀಕಿ ನಿಗಮದಲ್ಲಿ 89.56 ಲಕ್ಷ ದುರ್ಬಳಕೆಯಾಗಿತ್ತು. ಅದರಲ್ಲಿ 56 ಕೋಟಿ ವಸೂಲಿ ಮಾಡಿದ್ದೇವೆ. ಉಳಿದ ಹಣಕ್ಕೆ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಸೂಚಿಸಿದ್ದೇವೆ. ಪರಿಶಿಷ್ಟರಿಗೆ ನಿಗದಿಯಾಗಿರುವ ಪೂರ್ಣ ಅನುದಾನವನ್ನು ನಾವು ಕೊಟ್ಟೇ ಕೊಡುತ್ತೇವೆ. ನಮ್ಮ ಸರಕಾರ ಎಲ್ಲ ಜಾತಿಯ ಬಡವರ ಪರವಾಗಿ ಕೆಲಸ ಮಾಡುತ್ತದೆ ಎಂದು ಸ್ಪಷ್ಟಪಡಿಸಿದರು.

ಮಣ್ಣಿನ ಮಕ್ಕಳು ಏನು ಮಾಡಿದ್ದಾರೆ?
ಹಾಲು ಉತ್ಪಾದಕರಿಗೆ 2 ರೂ. ಇದ್ದ  ಪ್ರೋತ್ಸಾಹ ಧನವನ್ನು 5 ರೂ.ಗೆ ಹೆಚ್ಚಿಸಿದ್ದು ನಾನು. ಹಾಲು ಒಕ್ಕೂಟಗಳು ನಷ್ಟದಲ್ಲಿದ್ದಾಗ, ರೈತರಿಗೆ ನೆರವಾಗಲಿ ಎಂಬ ಉದ್ದೇಶದಿಂದ ಕ್ಷೀರ ಭಾಗ್ಯವನ್ನು ಜಾರಿಗೆ ತಂದೆ. ಬಡ ಮಕ್ಕಳಿಗೆ ಹಾಗೂ ರೈತರಿಗೆ ನೆರವಾದೆ. ರೈತರ ಮಕ್ಕಳು ಎಂದು ಹೇಳಿಕೊಳ್ಳುವವರು ಈ ಕೆಲಸ ಮಾಡಿದ್ದಾರಾ? ಇವರ್ಯಾವ ಮಣ್ಣಿನ ಮಕ್ಕಳು? ಏನೂ ಮಾಡದೆ ನಾವು ರೈತರ ಮಕ್ಕಳು, ಮಣ್ಣಿನ ಮಕ್ಕಳು ಎಂದು ಹೇಳಿಕೊಳ್ಳಲು ಯಾವ ನೈತಿಕತೆ ಇದೆ ಎಂದು ಎಚ್‌.ಡಿ. ಕುಮಾರಸ್ವಾಮಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದರು.

ಟಾಪ್ ನ್ಯೂಸ್

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

Upendra Birthday: ಉಪೇಂದ್ರ ಬರ್ತ್‌ಡೇಗೆ ʼಯುಐʼನಿಂದ ಬಂತು ಹೊಸ ಪೋಸ್ಟರ್

Upendra Birthday: ಉಪೇಂದ್ರ ಬರ್ತ್‌ಡೇಗೆ ʼಯುಐʼನಿಂದ ಬಂತು ಹೊಸ ಪೋಸ್ಟರ್

aatishi

Anti-national;ಅಫ್ಜಲ್ ಗುರು ವಿಚಾರದಲ್ಲಿ ಆತಿಷಿ ವಿರುದ್ಧ ಬಿಜೆಪಿ ಟೀಕಾ ಪ್ರಹಾರ

1

Vishnuvardhan Birthday: ವಿಷ್ಣುವರ್ಧನ್‌ ಜನ್ಮದಿನ ಆಚರಿಸಲು ಫ್ಯಾನ್ಸ್‌  ರೆಡಿ

1-pti

Army;ಕಮರಿಗೆ ಬಿದ್ದ ವಾಹನ: ಪ್ಯಾರಾಟ್ರೂಪರ್ ಮೃ*ತ್ಯು,5 ಕಮಾಂಡೋಗಳಿಗೆ ಗಾಯ

1-bantwala-1

Bantwala: ಮಸೀದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು

1-bus

Haveri; ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

1-bus

Haveri; ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

1-belgavi

Belagavi; ಗಣಪತಿ ಮೂರ್ತಿ ವಿಸರ್ಜನೆ ವೇಳೆ ಮೂವರಿಗೆ ಚಾಕು ಇರಿತ!!

BJP ಶಾಸಕ ಮುನಿರತ್ನ ಪರಪ್ಪನ ಜೈಲಿಗೆ: ಇಂದು ಜಾಮೀನು ಭವಿಷ್ಯ

BJP ಶಾಸಕ ಮುನಿರತ್ನ ಪರಪ್ಪನ ಜೈಲಿಗೆ: ಇಂದು ಜಾಮೀನು ಭವಿಷ್ಯ

HD ದೇವೇಗೌಡರ ಬದಲು ಎಚ್‌ಡಿಕೆ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ?

HD ದೇವೇಗೌಡರ ಬದಲು ಎಚ್‌ಡಿಕೆ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ?

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

1-dde

Edneer ಶ್ರೀ ಚಾತುರ್ಮಾಸ್ಯ; ಪದಯಾನ ತಂಡದ ಭರತನಾಟ್ಯ

6

Anekal: ಶಾಲಾ ಬಸ್‌ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ

Road rage case: ರೋಡ್‌ ರೇಜ್‌ ಕೇಸ್‌ ಬಗ್ಗೆ ದೂರು ನೀಡಿ; ಕಮಿಷನರ್‌

Road rage case: ರೋಡ್‌ ರೇಜ್‌ ಕೇಸ್‌ ಬಗ್ಗೆ ದೂರು ನೀಡಿ; ಕಮಿಷನರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.