Puttur: ಎಚ್ಚರ,ರಸ್ತೆಗೆ ಉರುಳಲು ಸಿದ್ಧವಾಗಿವೆ ಹತ್ತಾರು ಮರಗಳು

ವಾಹನ ಸವಾರರ ಜೀವದ ಜತೆ ಚೆಲ್ಲಾಟ; ಬೆಳ್ಳಾರೆ- ಸವಣೂರು ಕಾಡುಹಾದಿ ದಾಟಲು ಎಂಟೆದೆ ಬೇಕು

Team Udayavani, Aug 3, 2024, 12:02 PM IST

puttur

ಪುತ್ತೂರು: ಯಾತ್ರಾ ಸ್ಥಳ ಧರ್ಮಸ್ಥಳಕ್ಕೆ ಸಂಪರ್ಕ ಕಲ್ಪಿಸುವ ಬೆಳ್ಳಾರೆ-ಪುದ್ದೊಟ್ಟು-ಸವಣೂರು ರಸ್ತೆಯ ಬದಿಗಳಲ್ಲಿ ಬೃಹತ್‌ ಗಾತ್ರದ ಮರಗಳು ಬುಡ ಸಹಿತ ಇಲಾಖೆಯು ಮುಂದಾಗಿಲ್ಲ ದಿನಂಪ್ರತಿ ನೂರಾರು ವಾಹನಗಳು ಈ ರಸ್ತೆಯಲ್ಲಿ ಸಂಚರಿಸುತ್ತಿದ್ದು ಏಕಾಏಕಿ ಮರಗಳು ಉರುಳುತ್ತಿದ್ದು ಪ್ರಾಣ ಭೀತಿಯಿಂದಲೇ ವಾಹನಗಳನ್ನು ಚಲಾಯಿಸುವ ಸ್ಥಿತಿ ಇಲ್ಲಿನದ್ದಾಗಿದೆ.
ಬೆಳ್ಳಾರೆಯಿಂದ ಪೆರುವಾಜೆ ಮುಂದಕ್ಕೆ ಕಾಪುಕಾಡಿನ ಮಧ್ಯೆ ಈ ರಸ್ತೆ ಹಾದು ಹೋಗಿದೆ. ಇಲ್ಲಿ ರಸ್ತೆ ದಾಟಲು ಎಂಟೆದೆ ಬೇಕು ಅನ್ನುವ ಸ್ಥಿತಿ ಇದೆ. ಕಾಪು ಕಾಡಿನ ಎರಡು ಬದಿಗಳಲ್ಲಿ ಹತ್ತಾರು ಮರಗಳು ರಸ್ತೆಗೆ ಬುಡ ಸಹಿತ ವಾಲಿ ನಿಂತಿದೆ. ಅಲ್ಲಲ್ಲಿ ಕಾಡಿನ ಬದಿಗಳಲ್ಲಿ ಭೂ ಕುಸಿತ ಉಂಟಾಗಿದ್ದು ಒಸರು ನೀರು ತುಂಬಿ ಯಾವ ಕ್ಷಣದಲ್ಲಾದರೂ ಇಲ್ಲಿ ಮರ ಬೀಳುವ ಅಪಾಯ ಇದೆ.

ರಸ್ತೆಗೆ ನುಗ್ಗುವ ನೀರು
ಮಾಪ್ಲಮಜಲು ಬಳಿ ಪ್ರತೀ ಮಳೆಗಾಲದಲ್ಲಿಯು ಭಾರೀ ಮಳೆಯ ಸಂದರ್ಭ ಗೌರಿ ಹೊಳೆಯ ನೀರು ರಸ್ತೆಗೆ ನುಗ್ಗಿ ಕೆಲವು ತಾಸು ಸಂಚಾರ ಸ್ಥಗಿತವಾಗುತ್ತದೆ. ಈ ಸಮಸ್ಯೆಗೆ ಪರಿಹಾರವೇ ಸಿಕ್ಕಿಲ್ಲ. ಸವಣೂರಿನಿಂದ ಕಾಪು ತನಕ ಪುತ್ತೂರು ಲೋಕೋಪಯೋಗಿ ಇಲಾಖೆ, ಕಾಪುಕಾಡಿನಿಂದ ಬೆಳ್ಳಾರೆ ತನಕ ಸುಳ್ಯ ಉಪವಿಭಾಗಕ್ಕೆ ಸೇರಿರುವ ರಸ್ತೆ ಇದಾಗಿದ್ದು ಮಾಪ್ಲಮಜಲು ಸ್ಥಳ ಸುಳ್ಯ ಉಪ ವಿಭಾಗದ ವ್ಯಾಪ್ತಿಯಲ್ಲಿದೆ. ಈ ಹಿಂದೆ 3.5 ಕೋ. ರೂ.ವೆಚ್ಚದಲ್ಲಿ ರಸ್ತೆ ವಿಸ್ತರಣೆ, ಅಭಿವೃದ್ಧಿ ಕೆಲಸ ನಡೆದಿತ್ತು. ಆ ವೇಳೆ ರಸ್ತೆಯನ್ನು ಎತ್ತರಿಸಿ, ಹೊಳೆ ಬದಿಗೆ ತಡೆಗೋಡೆ ನಿರ್ಮಿಸುವಂತೆ ಜನರು ಬೇಡಿಕೆ ಇಟ್ಟಿದ್ದರೂ ಇಲಾಖೆ ಅದಕ್ಕೆ ಸ್ಪಂದನೆ ನೀಡಿರಲಿಲ್ಲ. ತಗ್ಗು ರಸ್ತೆಗೆ ಡಾಮರು ಹಾಕಲಾಗಿತ್ತು. ಇದರ ಪರಿಣಾಮ ಹೊಳೆ ಭಾಗದಲ್ಲಿ ಕುಸಿತ ಕಂಡಿದ್ದು ರಸ್ತೆಯ ಒಂದು ಬದಿ ಬಿರುಕು ಬಿಟ್ಟಿದೆ.

ಪ್ರಮುಖ ಸಂಪರ್ಕ ರಸ್ತೆ
ಶಾಂತಿಮೊಗರು ಬಳಿ ಕುಮಾರಧಾರಾ ನದಿಗೆ ಸೇತುವೆ ನಿರ್ಮಾಣಗೊಂಡ ಬಳಿಕ
ಯಾತ್ರಾರ್ಥಿಗಳಿಗೆ ಕಡಿಮೆ ದೂರ, ಅವಧಿಯಲ್ಲಿ ಬೆಳ್ಳಾರೆ -ಪೆರುವಾಜೆ -ಸವಣೂರು ಸಂಪರ್ಕ ರಸ್ತೆ ಮೂಲಕ ಧರ್ಮಸ್ಥಳಕ್ಕೆ ತೆರಳಲು ಅನುಕೂಲಕರವೆನಿಸಿದೆ. ಮೈಸೂರು, ಮಡಿಕೇರಿ, ಕಾಸರಗೋಡು, ಸುಳ್ಯ ಸೇರಿದಂತೆ
ತಾಲೂಕು, ಹೊರ ಜಿಲ್ಲೆಯ ಜನರು ಧರ್ಮಸ್ಥಳಕ್ಕೆ ಕ್ಷೇತ್ರಕ್ಕೆ ತೆರಳಲುಈ ರಸ್ತೆಯನ್ನು ಬಳಸುತ್ತಾರೆ.

ಪೆರುವಾಜೆ, ಸವಣೂರು, ಬೆಳಂದೂರಿನಲ್ಲಿ ಪ್ರಥಮ ದರ್ಜೆ ಕಾಲೇಜು, ಕಡಬ ತಾಲೂಕು ಕೇಂದ್ರ, ಆಲಂಕಾರು, ನೆಲ್ಯಾಡಿ ಮೊದಲಾದೆಡೆ ತೆರಳಲು ಈ ರಸ್ತೆಯನ್ನೇ ಅವಲಂಬಿಸಿದ್ದಾರೆ.

ತೆರವಿಗೆ ಸೂಚನೆ ಅಪಾಯಕಾರಿ ಮರಗಳನ್ನು ತೆರವು ಮಾಡಲು ಅರಣ್ಯ ಇಲಾಖೆಗೆ ಸೂಚಿಸುತ್ತೇನೆ. ವಾಹನ ಸವಾರರು ಸಹಿತ ಜನರಿಗೆ ಯಾವುದೇ ತೊಂದರೆ ಆಗದಂತೆ ಎಚ್ಚರ ವಹಿಸುವಂತೆಲೋಕೋಪಯೋಗಿ, ಅರಣ್ಯ ಇಲಾಖೆಗೆ ತತ್‌ ಕ್ಷಣ ನಿರ್ದೇಶನ ನೀಡುತ್ತೇನೆ.

– ಜುಬಿನ್‌ ಮೊಹಾಪಾತ್ರ, ಸಹಾಯಕ ಆಯುಕ್ತ, ಪುತ್ತೂರು ಉಪವಿಭಾಗ

ಉಸ್ತುವಾರಿ ಸಚಿವರಿಗೆ ತಿಳಿಸಲಾಗುವುದು
ರಸ್ತೆಗೆ ನೀರು ನುಗ್ಗುವ ಗೌರಿ ಹೊಳೆ ಭಾಗದಲ್ಲಿ ತಡೆಗೋಡೆ ನಿರ್ಮಿಸಲು ಗ್ರಾ.ಪಂ.ನಿಂದ ಮನವಿ ಮಾಡಿದ್ದರೂ ಲೋಕೋಪಯೋಗಿ ಇಲಾಖೆ ಸ್ಪಂದನೆ ನೀಡಿಲ್ಲ. ಮರಗಳು ರಸ್ತೆ ಬೀಳಲು ಅಣಿಯಾಗಿದ್ದು ಇದರ ತೆರವಿಗೆ ಅರಣ್ಯ ಇಲಾಖೆ ಮುಂದಾಗುತ್ತಿಲ್ಲ. ಸಮಸ್ಯೆಯ ಗಂಭೀರತೆಯನ್ನು ಉಸ್ತುವಾರಿ ಸಚಿವರ ಗಮನಕ್ಕೆ ತರಲಾಗುವುದು.

-ಜಗನ್ನಾಥ ಪೂಜಾರಿ ಮುಕ್ಕೂರು, ಅಧ್ಯಕ್ಷ, ಪೆರುವಾಜೆ ಗ್ರಾ.ಪಂ.

– ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

10

Puttur: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

Ninthikallu-ಬೆಳ್ಳಾರೆ-ಸುಳ್ಯ ರಸ್ತೆಯಲ್ಲಿ ಹೊಂಡ-ಗುಂಡಿಗಳದ್ದೇ ಸಾಮ್ರಾಜ್ಯ

Ninthikallu-ಬೆಳ್ಳಾರೆ-ಸುಳ್ಯ ರಸ್ತೆಯಲ್ಲಿ ಹೊಂಡ-ಗುಂಡಿಗಳದ್ದೇ ಸಾಮ್ರಾಜ್ಯ

High Court ನಿರ್ದೇಶನ: ಕೊಂಬಾರಿನ ರಸ್ತೆ, ಬಿರ್ಮೆರೆಗುಂಡಿ ಸೇತುವೆಗೆ 1.31 ಕೋಟಿ ರೂ.

High Court ನಿರ್ದೇಶನ: ಕೊಂಬಾರಿನ ರಸ್ತೆ, ಬಿರ್ಮೆರೆಗುಂಡಿ ಸೇತುವೆಗೆ 1.31 ಕೋಟಿ ರೂ.

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.