ಡಾ| ಜಗದೀಶ್‌ ಗುಡಾರು ಅವರಿಗೆ “2023ರ ಜೀವಮಾನ ಪ್ರಶಸ್ತಿ” ಪ್ರದಾನ


Team Udayavani, Jan 5, 2024, 1:00 AM IST

jee

ಮಂಗಳೂರು: ನಾಲ್ಕು ದಶಕಗಳಿಂದ ಪೋಲಿಯೋ ಬಾಧಿತ ರೋಗಿಗಳ ಚಿಕಿತ್ಸೆಯಲ್ಲಿ ತೊಡಗಿಸಿಕೊಂಡಿರುವ ಡಾ| ಜಗದೀಶ್‌ ಗುಡಾರು ಅವರ ಸೇವಾ ಮನೋಭಾವನೆಯನ್ನು ಪರಿಗಣಿಸಿ ಆಂಧ್ರಪ್ರದೇಶದ ರಾಷ್ಟ್ರೀಯ ಸೇವಾ ತಿರುಪತಿ ಸಮಿತಿ ವತಿಯಿಂದ 2023ರ ಜೀವಮಾನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಕೃಷಿಕ ಕುಟುಂಬದಲ್ಲಿ ಜನಿಸಿದ ಡಾ| ಗುಡಾರು ಸದ್ಯ ಆಂಧ್ರಪ್ರದೇಶದ ಗುಂಟೂರಿನಲ್ಲಿರುವ ಆಸ್ಟರ್‌ ರಮೇಶ್‌ ಆಸ್ಪತ್ರೆಗಳ ಶೈಕ್ಷಣಿಕ ನಿರ್ದೇಶಕರಾಗಿದ್ದಾರೆ. ಎಂಬಿಬಿಎಸ್‌ ಶಿಕ್ಷಣ ಮುಗಿಸಿದ ಜಗದೀಶ್‌ ಅವರು ಕೆಎಂಸಿ, ಮಣಿಪಾಲದಲ್ಲಿ ಎಂ.ಎಸ್‌. ಆರ್ಥೋ ಪದವಿ, ಯುಎಸ್‌ಎಐಎಂನಿಂದ ಎಂ.ಎಸ್‌., ಎಂಸಿಎಚ್‌ ಪದವಿ ಪಡೆದು ಟ್ರಾಮಾ ಲೆವೆಲ್‌ ನಿರ್ವಹಣೆಯಲ್ಲಿ ಕೀಲು ಮರುಜೋಡಣೆಯಲ್ಲಿ ಸಾಗರೋತ್ತರ ಫೆಲೋಶಿಪ್‌ ಪಡೆದುಕೊಂಡಿದ್ದಾರೆ.

1981ರಲ್ಲಿ ತಿರುಪತಿಯ ಬಿಐಆರ್‌ಆರ್‌ಡಿ ಟ್ರಸ್ಟ್‌ ಆಸ್ಪತ್ರೆಯಲ್ಲಿ ಆರ್ಥೋಪೆಡಿಕ್ಸ್‌ ವಿಭಾಗದ ನಿರ್ದೇಶಕರಾಗಿ ಕರ್ತವ್ಯ ಆರಂಭಿಸಿದರು. ಬಳಿಕ ಸಾವಿರಾರು ಮಂದಿಗೆ ಉಚಿತ ಮೂಳೆಚಿಕಿತ್ಸೆ ನೀಡಿದರು. ರಮೇಶ್‌ ಗ್ರೂಪ್‌ ಆಫ್‌ ಹಾಸ್ಪಿಟಲ್ಸ್‌ನಲ್ಲಿ ಅಕಾಡೆಮಿಕ್‌ ಡೀನ್‌ ಹಾಗೂ ಭ‌ಗವಾನ್‌ ಶ್ರೀ ವೆಂಕಯ್ಯ ಸ್ವಾಮಿ ಆಶ್ರಮ ವೈದ್ಯಶಾಲಾದಲ್ಲಿ ಸಲಹೆಗಾರರಾಗಿ ಕಾರ್ಯನಿರ್ವಹಿಸುತ್ತಾರೆ.
ಡಾ| ಜಗದೀಶ್‌ 1,83,000ಕ್ಕೂ ಅಧಿಕ ರೋಗಿಗಳಿಗೆ ಯಶಸ್ವಿ ಶಸ್ತ್ರ ಚಿಕಿತ್ಸೆ ನೀಡುವ ಮೂಲಕ ಯಶಸ್ವಿ ವೈದ್ಯರಾಗಿ ಗುರುತಿಸಿಕೊಂಡಿದ್ದಾರೆ. ಅವರ ಸೇವೆಯನ್ನು ಗುರುತಿಸಿ ಹಲವಾರು ಪ್ರಶಸ್ತಿ ಸಂದಿವೆ. ಮೂಳೆ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿರುವ ಕರೇಡು ಮತ್ತು ವೆಂಕಟಗಿರಿ ಗ್ರಾಮಗಳ ಮೀನುಗಾರರು, ನೇಕಾರರು ಸೇರಿದಂತೆ ಸಾರ್ವಜನಿಕರಿಗೆ ಅವರು ನಿರಂತರವಾಗಿ ಉಚಿತ ಮೂಳೆ ಚಿಕಿತ್ಸೆಯ ಸೇವೆಗಳನ್ನು ನೀಡುತ್ತಿದ್ದಾರೆ.

ಕರೇಡು ಗ್ರಾಮದಲ್ಲಿ 3,700ಕ್ಕಿಂತ ಹೆಚ್ಚು ವೆಂಕಟಗಿರಿಯಲ್ಲಿ 3,500 ಜನರು ಅವರ ವೈದ್ಯಕೀಯ ಚಿಕಿತ್ಸೆಯಿಂದ ಪ್ರಯೋಜನ ಪಡೆದಿದ್ದಾರೆ.

ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಪೋಲಿಯೋ ಸರ್ಜಿಕಲ್‌ ಮತ್ತು ಸ್ಕ್ರೀನಿಂಗ್‌ ಶಿಬಿರ ಏರ್ಪಡಿಸುವ ಗುರಿ ಹೊಂದಿರುವ ಅವರು 1996ರಿಂದ ಆಂಧ್ರಪ್ರದೇಶ, ತಮಿಳುನಾಡು, ಮಧ್ಯಪ್ರದೇಶ, ಪಶ್ಚಿಮ ಬಂಗಾಲ, ಉತ್ತರಪ್ರದೇಶ, ಹರಿಯಾಣ, ರಾಜಸ್ಥಾನ ಮುಂತಾದ ಕಡೆಗಳಲ್ಲಿ 1,56,711 ಪೋಲಿಯೊ ಪೀಡಿತರನ್ನು ತಪಾಸಣೆ ಮಾಡಿ 44,235 ರೋಗಿಗಳಿಗೆ ಉಚಿತ ಪೊಲಿಯೋ ಶಸ್ತ್ರಚಿಕಿತ್ಸೆಗಳನ್ನು ಯಶಸ್ವಿಯಾಗಿ ನಡೆಸಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ

ed raid on mysore muda office

Mysore: ಮುಡಾ ಕಚೇರಿಗೆ ಇ.ಡಿ ದಾಳಿ; ಕಡತಗಳ ಪರಿಶೀಲನೆ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Mangaluru: ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿನಿಂದ ಸಂಚಾರ: ಅಪಘಾತಕ್ಕೆ ಆಹ್ವಾನ

8(3)

Mangaluru: ಗುಂಡಿ ಬಿದ್ದ ರಸ್ತೆಗಳಿಗೆ ಜಲ್ಲಿಕಲ್ಲೇ ಆಧಾರ; ಅಪಾಯದಲ್ಲಿ ಸವಾರರು

5

Jokatte: ಸಂಪೂರ್ಣ ಹದೆಗೆಟ್ಟ ಕೂಳೂರು, ಕೈಗಾರಿಕೆ ವಲಯದ-ಜೋಕಟ್ಟೆ ರಸ್ತೆ

4

Mangaluru: ಸೇತುವೆ ಮೇಲೆ ಸಂಚಾರ ನಿರ್ಬಂಧದಿಂದ ಕಂಗೆಟ್ಟ ನಾಗರಿಕರು

3(1)

Mangaluru: ಪ್ಲಾಸ್ಟಿಕ್‌ ಬ್ರಹ್ಮರಾಕ್ಷಸನ ತಡೆವ ಮಂತ್ರದಂಡ ಬೇಕಿದೆ !

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Belagavi: UT Khader, Basavaraja Horatti visited Suvrana vidhasoudha

Belagavi: ಸುವರ್ಣ ವಿಧಾನಸೌಧಕ್ಕೆ‌ ಯು.ಟಿ.ಖಾದರ್‌, ಬಸವರಾಜ ಹೊರಟ್ಟಿ ಭೇಟಿ

16-bng

Bengaluru: ರಾಜಧಾನಿಯ ಬೀದಿ ನಾಯಿಗಳಿಗೆ ಅಕ್ಕರೆಯ ತುತ್ತು

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

15-

Bengaluru: ಎಎಸ್‌ಐ ಶಿವಶಂಕರಾಚಾರಿ ಹೃದಯಾಘಾತದಿಂದ ಸಾವು

9

Mangaluru: ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿನಿಂದ ಸಂಚಾರ: ಅಪಘಾತಕ್ಕೆ ಆಹ್ವಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.