ಉಡುಪಿಗೂ ಒಳ ಚರಂಡಿ: ಮುಂದಿನ ಬಜೆಟ್‌ನಲ್ಲಿ ಯೋಜನೆಗೆ ಹಣ ಸಿಗಲಿ


Team Udayavani, Feb 27, 2022, 12:43 PM IST

ಉಡುಪಿಗೂ ಒಳ ಚರಂಡಿ: ಮುಂದಿನ ಬಜೆಟ್‌ನಲ್ಲಿ ಯೋಜನೆಗೆ ಹಣ ಸಿಗಲಿ

ಸ್ವತ್ಛತೆ, ಆರೋಗ್ಯ, ಶಿಕ್ಷಣದಲ್ಲಿ ಉಡುಪಿ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಮಾದರಿಯಾಗಿದೆ. ಮಲ ಹೊರುವ ಪದ್ಧತಿ ನಿಷೇಧಿಸುವ ಮೂಲಕ ದೇಶದಲ್ಲಿ ಹೊಸ ಕ್ರಾಂತಿಗೆ ನಾಂದಿ ಹಾಡಿದ್ದೂ ಇದೇ ನಗರ. ಈಗ ನಗರ ಮತ್ತಷ್ಟು ಬೆಳೆಯುತ್ತಿದೆ. ಅದಕ್ಕೆ ತಕ್ಕಂತೆ ಒಳಚರಂಡಿ ವ್ಯವಸ್ಥೆ ನಿಗದಿತ ಕಾಲಾವಧಿಯಲ್ಲಿ ಜಾರಿಗೊಳ್ಳಬೇಕು. ಆಗ ನಗರದ ಕೀರ್ತಿ ಇನ್ನಷ್ಟು ಹೆಚ್ಚುತ್ತದೆ. ಇಲ್ಲವಾದರೆ ನಗರದ ಆರೋಗ್ಯ ಹದಗೆಡಲಿದೆ.

ಉಡುಪಿ : ಸ್ವತಃ ಉಡುಪಿ ನಗರದಲ್ಲೂ ಸಮರ್ಪಕವಾದ ಒಳಚರಂಡಿ (ಯುಜಿಡಿ) ವ್ಯವಸ್ಥೆ ಇರದಿರುವುದು ಸುತ್ತಲಿನ ಪ್ರದೇಶ ಹಾಗೂ ಜಲಮೂಲ ಗಳಿಗೆ ಕಂಟಕವಾಗಿ ಪರಿಣಮಿಸುತ್ತಿದೆ.

ಪ್ರಸ್ತುತ ಯುಜಿಡಿ ಸಮರ್ಪಕವಾಗಿ ಲ್ಲದೆ ತತ್ತರಿಸಿರುವ ನಗರಕ್ಕೆ 330 ಕೋಟಿ ರೂ. ವೆಚ್ಚದ ಯೋಜನೆಯನ್ನು ನಗರಸಭೆ ಸರಕಾರಕ್ಕೆ ಸಲ್ಲಿಸಿದೆ. ಮುಂಬರುವ ಆಯವ್ಯಯದಲ್ಲಿ ಯೋಜನೆಗೆ ಅನುದಾನ ದೊರೆಯುವಂತೆ ಮಾಡುವ ಗುರುತರ ಹೊಣೆಗಾರಿಕೆ ಸ್ಥಳೀಯ ಶಾಸಕರು (ವಿಧಾನಸಭೆ ಮತ್ತು ವಿಧಾನ ಪರಿಷತ್‌ ಸದಸ್ಯರು), ಸಂಸದರ ಮೇಲಿದೆ.

ಬೆಳೆದ ನಗರ, ಹೆಚ್ಚಿದ ಒತ್ತಡ
ನಗರಸಭೆ ವ್ಯಾಪ್ತಿಯ ಶೇ. 17ರಷ್ಟು ಪ್ರದೇಶದಲ್ಲಿ ಕೆಲವು ದಶಕಗಳ ಹಿಂದೆ ನಿರ್ಮಿಸಿದ ಒಳ ಚರಂಡಿ ವ್ಯವಸ್ಥೆ ಇದ್ದರೂ, ಅದರ ಆರೋಗ್ಯ ಕೆಟ್ಟಿದೆ. ಆಗಿನ ಜನಸಂಖ್ಯೆಯನುಸಾರ ನಿರ್ಮಿಸಲಾಗಿದ್ದ ಒಳ ಚರಂಡಿಗಳು, ನಗರ ಬೆಳೆದಂತೆ ಒತ್ತಡ ಹೆಚ್ಚಾಗಿ ಪ್ರಯೋಜನಕ್ಕೆ ಬಾರದಾಗಿವೆ.

ಎರಡು ಹಂತಗಳಲ್ಲಿ ಒಳಚರಂಡಿ ವ್ಯವಸ್ಥೆ ಮೇಲ್ದರ್ಜೆ ಗೇರಿದರೂ ವ್ಯವಸ್ಥಿತಗೊಳಿಸಲು ಸಾಧ್ಯವಾಗಲಿಲ್ಲ. ಹಾಗಾಗಿ ಸದಾ ಒಳಚರಂಡಿ ಸಮಸ್ಯೆ ನಾಗರಿಕರನ್ನು ಕಾಡತೊಡಗಿದೆ. ಅಲ್ಲಲ್ಲಿ ಪೈಪುಗಳು ಒಡೆಯುವುದು, ತ್ಯಾಜ್ಯದ ಹೆಚ್ಚಿನ ಒತ್ತಡ ಸಹಿಸಲಾಗದೆ ನೇರವಾಗಿ ಇಂದ್ರಾಣಿಗೆ ಬಿಡುವ ಇತ್ಯಾದಿ ಸಮಸ್ಯೆಗಳು ಉದ್ಭವಿಸುತ್ತಲೇ ಇದೆ.

ಹೊಸ ಪ್ರಸ್ತಾವನೆ
ಹೊಸ ಪ್ರಸ್ತಾವನೆಯಲ್ಲಿ ಯುಜಿಡಿ ವ್ಯವಸ್ಥೆಯನ್ನು 148 ಕಿ.ಮೀ. ವಿಸ್ತರಿಸಲಾಗಿದೆ. ಪ್ರತೀ 30 ಮೀಟರ್‌ಗೆ ಒಂದರಂತೆ 5,600 ಮ್ಯಾನ್‌ ಹೋಲ್‌, 5 ವೆಟ್‌ವೆಲ್‌ಗ‌ಳು ನಿರ್ಮಾಣವಾಗಲಿವೆ. ಈಗ ರಾಜ್ಯ ಸರಕಾರ ಒಳ ಚರಂಡಿ ಪ್ರಸ್ತಾವನೆಗೆ ಅನುಮೋದನೆ ಕೊಟ್ಟು ಅನುದಾನ ನೀಡಬೇಕಿದೆ.

ಇಂದ್ರಾಣಿ ನದಿ ದುಸ್ಥಿತಿ
ನಗರದ ಎಲ್ಲ ತ್ಯಾಜ್ಯವು ಇಂದ್ರಾಣಿ ನದಿಯ ಒಡಲು ಸೇರಿ ಕಲುಷಿತವಾಗಿದ್ದು, ಇಂದ್ರಾಣಿ ನದಿಯನ್ನು ಪುನಶ್ಚೇತನಗೊಳಿಸಬೇಕಿದೆ. ಇಂದ್ರಾಳಿಯಿಂದ ಕಲ್ಮಾಡಿವರೆಗೂ ನಗರದ ಒಳ ಚರಂಡಿಯ ತ್ಯಾಜ್ಯ ನೀರು ಮಳೆ ನೀರಿನ ಚರಂಡಿ ಮೂಲಕ ಇಂದ್ರಾಳಿಯನ್ನು ಸೇರುತ್ತಿದೆ. ಇಲ್ಲಿನ ನೀರು ಬಣ್ಣ ಸಂಪೂರ್ಣ ಕಪ್ಪು ಬಣ್ಣಕ್ಕೆ ತಿರುಗಿದ್ದು, ನಿಟ್ಟೂರು ಎಸ್‌ಟಿಪಿ ಘಟಕದಿಂದಲೂ ಕೊಳಚೆ ನೀರನ್ನು ಶುದ್ಧೀಕರಿಸದೆ ನದಿಗೆ ಬಿಡಲಾಗುತ್ತಿದೆ ಎಂಬ ಆರೋಪವಿದೆ.

ಇದನ್ನೂ ಓದಿ : ಉಕ್ರೇನ್: ಛತ್ತೀಸ್‌ಗಢದ ವಿದ್ಯಾರ್ಥಿಗಳ ವಾಪಸಾತಿಯ ವೆಚ್ಚ ಭರಿಸುವ ಸರಕಾರ

ಎಲ್ಲೆಲ್ಲಿ ತುರ್ತು ಕಾಮಗಾರಿ ನಡೆಯುತ್ತಿದೆ?
ನಗರದಲ್ಲಿ ಕೆಲವೆಡೆ ತುರ್ತಾಗಿ ಒಳಚರಂಡಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ನಿಟ್ಟೂರು-ಬನ್ನಂಜೆ ಸಂಪರ್ಕಿಸುವ ಗರಡಿ ರಸ್ತೆಯಲ್ಲಿ ಉಕ್ಕಿ ಹರಿಯುತ್ತಿದ್ದ ಒಳಚರಂಡಿ ಮ್ಯಾನ್‌ಹೋಲ್‌ ಅನ್ನು ಕೊನೆಗೂ ಸರಿಪಡಿಸಲಾಗಿದೆ. ಒಳಚರಂಡಿಯಿಂದ ಕೊಳಚೆ ನೀರು ಸೋರಿಕೆಯಾಗಿ ಸುತ್ತಲಿನ ಪರಿಸರದಲ್ಲಿ ಕೊಳಚೆ ನೀರಿನ ಕೆರೆ ಸೃಷ್ಟಿಯಾಗಿತ್ತು. ನಿಟ್ಟೂರು, ಬನ್ನಂಜೆ ಮಾರ್ಗವಾಗಿ ಸಾಕಷ್ಟು ಮಂದಿ ನಿತ್ಯ ಪ್ರಯಾಣಿಸುತ್ತಿದ್ದು, ಕಿರಿಕಿರಿ ಅನುಭವಿಸುತ್ತಿದ್ದರು. ನಿಟ್ಟೂರು- ಮೂಡ ನಿಡಂಬೂರು ಬಬ್ಬುಸ್ವಾಮಿ ಗರೋಡಿವರೆಗೆ ರೂಪಿಸಿದ್ದ ವ್ಯವಸ್ಥಿತ ಒಳ ಚರಂಡಿ ಯೋಜನೆ ಗುತ್ತಿಗೆದಾರರ ವಿಳಂಬ ಧೋರಣೆಯಿಂದ ಜಾರಿಯಾಗಿರಲಿಲ್ಲ. ಈಗ 56 ಲಕ್ಷ ರೂ. ವೆಚ್ಚದಲ್ಲಿ ಕಾಮಗಾರಿ ನಡೆಯುತ್ತಿದೆ. ಅಲ್ಲದೆ ಕಲ್ಸಂಕ, ಅಂಕದಕಟ್ಟೆ, ಗುಂಡಿಬೈಲು ಅಂಬಾಗಿಲು ಮೂಲಕ ಎಸ್‌ಟಿಪಿ ತಲುಪುವ ಯುಜಿಡಿ ಮುಖ್ಯ ಪೈಪ್‌ಲೈನ್‌ ಕಾಮಗಾರಿಯೂ ಪ್ರಗತಿಯಲ್ಲಿದೆ. ಈ ಸಮಸ್ಯೆಗಳ ಬಗ್ಗೆ “ಉದಯವಾಣಿ’ ವಿಸ್ತೃತ ವರದಿಗಳನ್ನು ಪ್ರಕಟಿಸಿತ್ತು. ಇದಕ್ಕೆ ಸ್ಪಂದಿಸಿದ ಜನಪ್ರತಿನಿಧಿಗಳು ವಿಶೇಷ ಅನುದಾನದ ಮೂಲಕ ಯುಜಿಡಿ ಯೋಜನೆ ಅನುಷ್ಠಾನಕ್ಕೆ ಪ್ರಯತ್ನಿಸಿದ್ದಾರೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.