![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Oct 23, 2019, 8:04 PM IST
ಬೆಳಗಾವಿ: ಪ್ರವಾಹ ಸಂಕಷ್ಟದಿಂದ ಇಡೀ ಉತ್ತರ ಕರ್ನಾಟಕವೇ ನಲುಗಿರುವ ಈ ಸಂದರ್ಭದಲ್ಲಿ ಸಂತ್ರಸ್ತರಿಗೆ ಅಭಯ ನೀಡುವ ನಿಟ್ಟಿನಲ್ಲಿ ಕಿತ್ತೂರು ಉತ್ಸವದ ಮುಖ್ಯ ವೇದಿಕೆಯಲ್ಲಿ ಸಾಂಕೇತಿಕವಾಗಿ ಮನೆ ನಿರ್ಮಾಣ ಮಾಡುವ ಮೂಲಕ ಉದ್ಘಾಟಿಸಿದ್ದು ವಿಶೇಷವಾಗಿತ್ತು.
ಐತಿಹಾಸಿಕ ಕಿತ್ತೂರು ಉತ್ಸವಕ್ಕೆ ಡಿಸಿಎಂ ಲಕ್ಷ್ಮಣ ಸವದಿ ಅವರು ವಿಭಿನ್ನವಾಗಿ ಚಾಲನೆ ನೀಡಿದರು. ಮನೆ ಕಳೆದುಕೊಂಡು ನಿರಾಶ್ರಿತರರಾಗಿರುವ ಸಂತ್ರಸ್ತರು ಧೃತಿಗೆಡಬಾರದು, ರಾಜ್ಯ ಸರ್ಕಾರ ತಮ್ಮ ಬೆನ್ನಿಗೆ ನಿಂತು ಕೆಲಸ ಮಾಡಲಿದೆ ಎಂದು ಉತ್ಸವದ ಮೂಲಕ ಭರವಸೆ ನೀಡಿದರು. ವೇದಿಕೆ ಮೇಲೆಯೇ ರಟ್ಟಿನ ಕಾಗದದ ಈ ಮನೆ ನಿರ್ಮಿಸಿ ಸರ್ಕಾರ ಸಂತ್ರಸ್ತರ ಬೆನ್ನಿಗೆ ಇದೆ ಎಂದು ತೋರಿಸಿ ಕೊಟ್ಟರು.
ಸಚಿವರಾದ ಜಗದೀಶ ಶೆಟ್ಟರ, ಸಿ.ಟಿ. ರವಿ, ಶಶಿಕಲಾ ಜೊಲ್ಲೆ ಭಾಗವಹಿಸಿದ್ದರು. ಜತೆಗೆ ವಿಧಾನ ಪರಿಷತ್ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ, ಬಿಜೆಪಿಯ ಸಂಸದರಾದ ಅನಂತಕುಮಾರ ಹೆಗಡೆ, ಅಣ್ಣಾಸಾಹೇಬ ಜೊಲ್ಲೆ, ಶಾಸಕರಾದ ಮಹಾಂತೇಶ ದೊಡಗೌಡರ, ಮಹಾಂತೇಶ ಕೌಜಲಗಿ, ಮಹಾದೇವಪ್ಪ ಯಾದವಾಡ ಇದ್ದರು.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.