Dubai: ಫಾರ್ಚೂನ್‌ ಗ್ರೂಪ್‌ ಆಫ್‌ ಹೋಟೆಲ್ಸ್ ಗೆ ವಂಚನೆ: ಆರೋಪಿ 3 ದಿನ ಪೊಲೀಸ್‌ ಕಸ್ಟಡಿಗೆ


Team Udayavani, Oct 14, 2024, 6:44 AM IST

Dubai: ಫಾರ್ಚೂನ್‌ ಗ್ರೂಪ್‌ ಆಫ್‌ ಹೋಟೆಲ್ಸ್ ಗೆ ವಂಚನೆ: ಆರೋಪಿ 3 ದಿನ ಪೊಲೀಸ್‌ ಕಸ್ಟಡಿಗೆ

ಉಡುಪಿ: ಅನಿವಾಸಿ ಭಾರತೀಯ, ತಾಲೂಕಿನ ವಕ್ವಾಡಿ ಮೂಲದ ಉದ್ಯಮಿ ಪ್ರವೀಣ್‌ ಕುಮಾರ್‌ ಶೆಟ್ಟಿ ಮಾಲಕತ್ವದ ದುಬಾೖಯ ಹೊಟೇಲೊಂದಕ್ಕೆ ಅಕೌಂಟೆಂಟ್‌ ಆಗಿ ಸೇರಿ 2.5 ಕೋ.ರೂ. ಗೂ ಅಧಿಕ ಹಣ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಉಡುಪಿ ಸೆನ್‌ ಠಾಣೆ ಪೊಲೀಸರು ಮೈಸೂರು ಜಿಲ್ಲೆಯ ನಂಜನಗೂಡು ಬಳಿ ಬಂಧಿಸಿದ್ದಾರೆ.

ಬಾರ್ಕೂರು ಮೂಲದ ನಾಗೇಶ್‌ ಪೂಜಾರಿ (31) ಬಂಧಿತ ಆರೋಪಿ.

ಈತನನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ಈತನನ್ನು ಅ.16 ರವರೆಗೆ ಪೊಲೀಸ್‌ ಕಸ್ಟಡಿಗೆ ನೀಡಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಜೆ.ಎಂ.ಎಫ್‌.ಸಿ ನ್ಯಾಯಾಲಯದಲ್ಲಿ ಆರೋಪಿ ಪಡೆದಿದ್ದ ಜಾಮೀನನ್ನು ಜಿಲ್ಲಾ ಸೆಶನ್ಸ್‌ ನ್ಯಾಯಾಲಯ ಹಾಗೂ ರಾಜ್ಯ ಉಚ್ಚ ನ್ಯಾಯಾಲಯ ರದ್ದುಪಡಿಸಿತ್ತು. ಈ ಹಿನ್ನೆಲೆ ಯಲ್ಲಿ ತಲೆಮರೆಸಿ ಕೊಂಡಿದ್ದ ಆತನನ್ನು ಪೊಲೀಸರು ಬಂಧಿಸಿದ್ದಾರೆ.

ಘಟನೆ ಹಿನ್ನೆಲೆ
ದುಬೈನ ಫಾರ್ಚೂನ್‌ ಗ್ರೂಪ್‌ ಆಫ್‌ ಹೊಟೇಲ್ಸ ಸಂಬಂಧಿತ ಹೊಟೇಲೊಂದರಲ್ಲಿ ಉದ್ಯೋಗಕ್ಕೆ ಸೇರಿದ್ದ ನಾಗೇಶ್‌ ಪೂಜಾರಿ 2.5ಕೋ.ರೂ.ಗೂ ಅಧಿಕ ಹಣ ವಂಚಿಸಿದ ಆರೋಪಕ್ಕೆ ಗುರಿಯಾಗಿದ್ದ. ಹೊಟೇಲ್‌ ಮ್ಯಾನೇಜರ್‌ ಸುನೀಲ್‌ ಕುಮಾರ್‌ ನೀಡಿದ ದೂರಿನಂತೆ ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಪ್ರಕರಣವು ಉಡುಪಿ ಸೆನ್‌ ಠಾಣೆಗೆ ವರ್ಗಾವಣೆಗೊಂಡಿತ್ತು.

ಈ ಸಂಬಂಧ ಆರೋಪಿ ಹೈಕೋರ್ಟ್‌ ನಲ್ಲಿ ತನಿಖೆ ಸ್ಥಗಿತಗೊಳಿ ಸಲು ಕೋರಿ ಅರ್ಜಿ ಸಲ್ಲಿಸಿದ್ದ. ಅದರೆ ಕೋರ್ಟ್‌ ಅರ್ಜಿಯನ್ನು ಹಿಂದಿನ ವರ್ಷ ವಜಾಗೊಳಿಸಿತ್ತು. ಬಳಿಕ ಆರೋಪಿ ಕುಂದಾಪುರದಲ್ಲಿರುವ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ ಅರ್ಜಿಯೂ ತಿರಸ್ಕೃತವಾಗಿತ್ತು. ಬಳಿಕ ಉಳಿದ ನ್ಯಾಯಾಲಯದ ಆದೇಶಗಳನ್ನು ಮರೆಮಾಚಿ ಬ್ರಹ್ಮಾವರದ ಜೆ.ಎಂ.ಎಫ್‌.ಸಿ ನ್ಯಾಯಾ ಲಯದಲ್ಲಿ ಶರಣಾಗಿ ಜಾಮೀನು ಪಡೆದಿದ್ದ. ಈ ಆದೇಶವನ್ನು ಸರಕಾರ ಜಿಲ್ಲಾ ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದು, ನ್ಯಾಯಾಲಯವು ಜಾಮೀನು ರದ್ದುಗೊಳಿಸಿ ಆದೇಶಿಸಿತ್ತು. ಬಳಿಕ ಆರೋಪಿ ತಲೆಮರೆಸಿಕೊಂಡಿದ್ದ ಆರೋಪಕ್ಕೆ ಗುರಿಯಾಗಿದ್ದ.

ಟಾಪ್ ನ್ಯೂಸ್

01

BBK11: ಇಡೀ ಬಿಗ್ ಬಾಸ್ ಮನೆಗೆ ಆತಂಕ ತಂದ ಆ ಒಂದು ಕರೆ… ಮಾಡಿದ್ಯಾರು…?

PM-Intren

Practical Training: ಉದ್ಯೋಗಕ್ಕೆ ಹೊಸ ದಾರಿ: ಪ್ರಧಾನಮಂತ್ರಿ ಇಂಟರ್ನ್ಶಿಪ್‌ ಯೋಜನೆ!

kollur12

Holiday Trip: ಹಬ್ಬ, ವಾರಾಂತ್ಯ ರಜೆ: ಪ್ರವಾಸಿ ತಾಣಗಳಲ್ಲಿ ದಟ್ಟಣೆ

Special Train: ಮಂಗಳೂರು ಜಂಕ್ಷನ್‌- ಕೊಚ್ಚುವೇಲಿ ವಿಶೇಷ ಎಕ್ಸ್‌ಪ್ರೆಸ್‌ ರೈಲು

Special Train: ಮಂಗಳೂರು ಜಂಕ್ಷನ್‌- ಕೊಚ್ಚುವೇಲಿ ವಿಶೇಷ ಎಕ್ಸ್‌ಪ್ರೆಸ್‌ ರೈಲು

CM-siddu

Tax Injustice: 5 ವರ್ಷದ ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ 60 ಸಾವಿರ ಕೋಟಿ ಅನ್ಯಾಯ: ಸಿಎಂ

Rahul

Congress Government: ಒಳ ಮೀಸಲಿಗಾಗಿ ಎಡಗೈ ಬಣ ರಾಹುಲ್‌ ಗಾಂಧಿಗೆ ಮೊರೆ

1-kkkk

Kumbhamela; ನಕಲಿ ಬಾಬಾಗಳ ಹಾವಳಿ: ಪ್ರಯಾಗ್‌ರಾಜ್‌ನಲ್ಲಿ ಸಾಧುಗಳಿಗೆ ಐಡಿ ಕಾರ್ಡ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಲ್ಪೆ ಬಂದರಿನಲ್ಲಿ ಭದ್ರತೆಯ ಕೊರತೆ

Udupi: ಮಲ್ಪೆ ಬಂದರಿನಲ್ಲಿ ಭದ್ರತೆಯ ಕೊರತೆ

wages

Udupi: ಬಾಂಗ್ಲಾ ಅಕ್ರಮ ವಲಸೆ ಫಾಲೋ ಅಪ್: ನೆಪಕ್ಕಷ್ಟೇ ಬಿಹಾರ, ಒಡಿಶಾ, ಅಸ್ಸಾಂ…

\172.17.1.5ImageDirUdayavaniDaily13-10-24Daily_NewsBangla.tif

Udupi: ಬಾಂಗ್ಲಾದಿಂದ ಭಾರತಕ್ಕೆ ವಲಸೆಯ ಉದ್ದೇಶ?

Udupi: ರಾಜ್ಯದಲ್ಲಿ ಲಕ್ಷಕ್ಕೂ ಹೆಚ್ಚು ಬಾಂಗ್ಲಾ ಅಕ್ರಮ ವಲಸಿಗರು?

Udupi: ರಾಜ್ಯದಲ್ಲಿ ಲಕ್ಷಕ್ಕೂ ಹೆಚ್ಚು ಬಾಂಗ್ಲಾ ಅಕ್ರಮ ವಲಸಿಗರು?

Udupi: ಅಪರಿಚಿತರಿಗೆ ಮನೆ ಬಾಡಿಗೆ ಕೊಡುವಾಗ ಇರಲಿ ಎಚ್ಚರ

Udupi: ಅಪರಿಚಿತರಿಗೆ ಮನೆ ಬಾಡಿಗೆ ಕೊಡುವಾಗ ಇರಲಿ ಎಚ್ಚರ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

01

BBK11: ಇಡೀ ಬಿಗ್ ಬಾಸ್ ಮನೆಗೆ ಆತಂಕ ತಂದ ಆ ಒಂದು ಕರೆ… ಮಾಡಿದ್ಯಾರು…?

PM-Intren

Practical Training: ಉದ್ಯೋಗಕ್ಕೆ ಹೊಸ ದಾರಿ: ಪ್ರಧಾನಮಂತ್ರಿ ಇಂಟರ್ನ್ಶಿಪ್‌ ಯೋಜನೆ!

kollur12

Holiday Trip: ಹಬ್ಬ, ವಾರಾಂತ್ಯ ರಜೆ: ಪ್ರವಾಸಿ ತಾಣಗಳಲ್ಲಿ ದಟ್ಟಣೆ

Special Train: ಮಂಗಳೂರು ಜಂಕ್ಷನ್‌- ಕೊಚ್ಚುವೇಲಿ ವಿಶೇಷ ಎಕ್ಸ್‌ಪ್ರೆಸ್‌ ರೈಲು

Special Train: ಮಂಗಳೂರು ಜಂಕ್ಷನ್‌- ಕೊಚ್ಚುವೇಲಿ ವಿಶೇಷ ಎಕ್ಸ್‌ಪ್ರೆಸ್‌ ರೈಲು

CM-siddu

Tax Injustice: 5 ವರ್ಷದ ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ 60 ಸಾವಿರ ಕೋಟಿ ಅನ್ಯಾಯ: ಸಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.