Election Expenses: ಕೈನ “ದೇಶಕ್ಕಾಗಿ ದೇಣಿಗೆ” ನಾಳೆ ಶುರು
ದಿಲ್ಲಿಯಲ್ಲಿ ಎಐಸಿಸಿ ಅಧ್ಯಕ್ಷ ಖರ್ಗೆ ಉದ್ಘಾಟನೆ
Team Udayavani, Dec 16, 2023, 9:08 PM IST
ನವದೆಹಲಿ: ಮುಂದಿನ ಲೋಕಸಭೆ ಚುನಾವಣೆಯನ್ನು ದೃಷ್ಟಿಯಲ್ಲಿ ಇರಿಸಿಕೊಂಡು ಕಾಂಗ್ರೆಸ್ ಸಾರ್ವಜನಿಕರಿಂದ ದೇಣಿಗೆ ಸಂಗ್ರಹಿಸುವ, “ಕ್ರೌಡ್ ಫಂಡಿಂಗ್’ ಕಾರ್ಯಕ್ರಮ ಆರಂಭಿಸಲು ಮುಂದಾಗಿದೆ. “ದೇಶಕ್ಕಾಗಿ ದೇಣಿಗೆ ನೀಡಿ’ ಧ್ಯೇಯ ವಾಕ್ಯದ ಅನ್ವಯ ಅದನ್ನು ಕೈಗೊಳ್ಳಲಾಗುತ್ತಿದೆ.
ಎಐಸಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವವರು ಸೋಮವಾರ (ಡಿ.18)ರಂದು ಈ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಅಜಯ್ ಮಕೇನ್ ಮತ್ತು ಕೆ.ಸಿ.ವೇಣುಗೋಪಾಲ್ ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಮಹಾತ್ಮ ಗಾಂಧೀಜಿಯವರು 1920-21ನೇ ಸಾಲಿನಲ್ಲಿ ಕೈಗೊಂಡಿದ್ದ “ತಿಲಕ್ ಸ್ವರಾಜ್ ಫಂಡ್’ ಅಭಿಯಾನದಿಂದ ಸ್ಫೂರ್ತಿ ಪಡೆದು ದೇಶಕ್ಕಾಗಿ ದೇಣಿಗೆ ಕಾರ್ಯಕ್ರಮ ನಡೆಸಲಾಗುತ್ತದೆ ಎಂದರು. ಇದರ ಜತೆಗೆ ಕಾಂಗ್ರೆಸ್ ಸ್ಥಾಪನೆಯಾಗಿ 138 ವರ್ಷಗಳು ಪೂರ್ತಿಗೊಂಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಂದ 138 ರೂ., 1,380 ರೂ., 13,800 ರೂ. ನೀಡುವ ಉದ್ದೇಶ ಹೊಂದಿದೆ ಎಂದು ಮಕೇನ್, ವೇಣುಗೋಪಾಲ್ ಹೇಳಿದ್ದಾರೆ.
ಪ್ರದೇಶ ಕಾಂಗ್ರಸ್ ಸಮಿತಿ ಪದಾಧಿಕಾರಿಗಳು, ಚುನಾಯಿತ ಸದಸ್ಯರು, ಜಿಲ್ಲಾ ಮುಖಂಡರು 1,380 ರೂ. ದೇಣಿಗೆ ನೀಡಬೇಕು ಎಂದು ಮಕೇನ್ ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case: ಹೈಕೋರ್ಟ್ ನಲ್ಲಿ ದರ್ಶನ್ ಜಾಮೀನು ಅರ್ಜಿ ಮುಂದೂಡಿಕೆ
BBK11: 11 ವರ್ಷದ ಬಿಗ್ಬಾಸ್ ಜರ್ನಿಯಲ್ಲಿ ಕಿಚ್ಚ ಗೈರಾಗಿದ್ದು ಎಷ್ಟು ಬಾರಿ, ಯಾಕೆ?
ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ
Railways’ ವಾರ್ಷಿಕ ಆದಾಯ ಎಷ್ಟು ಗೊತ್ತಾ?2023-24ನೇ ಸಾಲಿನ ಪ್ರಯಾಣಿಕರ ಸಂಖ್ಯೆ 648 ಕೋಟಿ!
Kaup ಕೊಳಚೆ ಮುಕ್ತಿಗೆ ಸರ್ವರ ಸಹಕಾರ
MUST WATCH
ಹೊಸ ಸೇರ್ಪಡೆ
Renukaswamy Case: ಹೈಕೋರ್ಟ್ ನಲ್ಲಿ ದರ್ಶನ್ ಜಾಮೀನು ಅರ್ಜಿ ಮುಂದೂಡಿಕೆ
BBK11: 11 ವರ್ಷದ ಬಿಗ್ಬಾಸ್ ಜರ್ನಿಯಲ್ಲಿ ಕಿಚ್ಚ ಗೈರಾಗಿದ್ದು ಎಷ್ಟು ಬಾರಿ, ಯಾಕೆ?
ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ
Railways’ ವಾರ್ಷಿಕ ಆದಾಯ ಎಷ್ಟು ಗೊತ್ತಾ?2023-24ನೇ ಸಾಲಿನ ಪ್ರಯಾಣಿಕರ ಸಂಖ್ಯೆ 648 ಕೋಟಿ!
Kaup ಕೊಳಚೆ ಮುಕ್ತಿಗೆ ಸರ್ವರ ಸಹಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.