![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Aug 30, 2023, 12:39 AM IST
ಇಸ್ಲಾಮಾಬಾದ್: ಪಾಕಿಸ್ಥಾನದಲ್ಲಿರುವ ಭಾರತೀಯ ಹೈ ಕಮಿಷನ್ನ ಉಸ್ತುವಾರಿ (ಚಾರ್ಜ್ ಡಿ ಅಫೇರ್) ಆಗಿ ಗೀತಿಕಾ ಶ್ರೀವಾಸ್ತವ ನೇಮಕಗೊಂಡಿದ್ದಾರೆ. ಪಾಕ್ ಹೈ ಕಮಿಷನನ್ನು ಮುನ್ನಡೆಸ ಲಿರುವ ಮೊದಲ ಮಹಿಳೆ ಎಂಬ ಖ್ಯಾತಿಗೆ ಗೀತಿಕಾ ಪಾತ್ರರಾಗಿದ್ದಾರೆ.
ಪ್ರಸ್ತುತ ವಿದೇಶಾಂಗ ಸಚಿವಾಲಯದಲ್ಲಿ ಜಂಟಿ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿರುವ ಅವರು ಶೀಘ್ರವೇ ಹೊಸ ಹುದ್ದೆಯನ್ನು ಅಲಂಕರಿಸಲಿದ್ದಾರೆ. ಈ ಹಿಂದೆ ಹೈ ಕಮಿಷನ್ನ ಉಸ್ತುವಾರಿಯಾಗಿದ್ದ ಡಾ| ಎಂ. ಸುರೇಶ್ ಕುಮಾರ್ ಅವರು ಭಾರತಕ್ಕೆ ಹಿಂದಿರುಗಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಯಭಾರಿಗಳ ಹಾಗೂ ಹೈ ಕಮಿಷನರ್ಗಳ ಅನುಪಸ್ಥಿತಿಯಲ್ಲಿ ವಿದೇಶಗಳಲ್ಲಿರುವ ರಾಯಭಾರ ಕಚೇರಿಗಳನ್ನು ಮುನ್ನಡೆಸುವ ಗುರುತರ ಜವಾಬ್ದಾರಿ ಈ ಉಸ್ತುವಾರಿ ಹುದ್ದೆಗೆ ಇರಲಿದೆ. ಇಸ್ಲಾಮಾಬಾದ್ ಹೈಕಮಿಷನ್ನಲ್ಲಿ 2019ರಿಂದ ಹೈ ಕಮಿಷನರ್ ಹುದ್ದೆ ಖಾಲಿ ಇದ್ದು, ಉಸ್ತುವಾರಿಗಳೇ ಅದನ್ನು ಮುನ್ನಡೆಸುತ್ತಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.