ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಒತ್ತು: ಎಂ.ಕೃಷ್ಣಪ್ಪ
110 ಹಳ್ಳಿಗಳಿಗೆ ಕಾವೇರಿ ನೀರು ಪೂರೈಕೆ ಸೇರಿ ಸಮಗ್ರ ಅಭಿವೃದ್ಧಿ ; ಕ್ಷೇತ್ರದಲ್ಲಿ ಶೇ.90 ಬಿಜೆಪಿಗೆ ಒಲವು
Team Udayavani, May 1, 2023, 8:57 AM IST
ಬೆಂಗಳೂರು: ಕೋವಿಡ್ ಸಂಕಷ್ಟದ ವೇಳೆ ಅನ್ನ, ಆಹಾರ, ಔಷಧ ನೀಡಿ ಬಡಜನರ ಕಣ್ಣೀರು ಒರೆಸಿದ್ದೇನೆ. ರಸ್ತೆ ಅಗಲೀಕರಣ, ಕೆರೆಗಳ ಅಭಿವೃದ್ಧಿ , 110 ಹಳ್ಳಿಗಳಿಗೆ ಕಾವೇರಿ ನೀರು ಪೂರೈಕೆ ಸೇರಿದಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ದುಡಿದಿದ್ದೇನೆ. ಹೀಗಾಗಿ, ಈ ಬಾರಿ ಕ್ಷೇತ್ರದಲ್ಲಿ ಜನರು ಮತ್ತೆ ಕಮಲ ಅರಳಿಸಲಿದ್ದಾರೆ ಎಂಬ ಅಚಲವಾದ ನಂಬಿಕೆ ಇದೆ.
ಇದು ಬೆಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಎಂ.ಕೃಷ್ಣಪ್ಪ ಅವರ ಮಾತು.’ ಉದಯವಾಣಿ’ಗೆ ನೀಡಿರುವ ಸಂದರ್ಶನದಲ್ಲಿ ಈಗಾಗಲೇ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದು ಮತ್ತೂಮ್ಮೆ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸುತ್ತಾರೆ.
ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಹೇಗಿದೆ?
ಐದು ವರ್ಷಗಳಿಂದ ಕ್ಷೇತ್ರದಲ್ಲಿ ಚುನಾವಣೆ ರೀತಿಯಲ್ಲೆ ಕೆಲಸ ಮಾಡುತ್ತಿದ್ದೆ. ಹಾಗಾಗಿ ನನಗೆ ಚುನಾವಣೆ ರೀತಿ ಎನಿಸುವುದೇ ಇಲ್ಲ. ಆದರೆ, ಈಗ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಮಾಡಿರು ವುದನ್ನು ಈಗ ಜನರಿಗೆ ತಲುಪಿಸುವ ಕೆಲಸವನ್ನು ಮಾಡಿದ್ದೇನೆ. ಜತೆಯಲ್ಲಿ ಕ್ಷೇತ್ರ ವ್ಯಾಪ್ತಿಯಲ್ಲಿ ಕೆರೆ, ಪಾರ್ಕ್ ಮತ್ತು ಸಮುದಾಯ ಭವನಗಳನ್ನು ಅಭಿವೃದ್ಧಿ ಪಡಿಸಲಾಗಿದೆ. 110 ಹಳ್ಳಿಗಳಿಗೆ ಕಾವೇರಿ ನೀರು ಪೂರೈಕೆ ಮಾಡಲಾಗಿದ್ದು, ಎಲ್ಲೆಲ್ಲಿ ರುದ್ರಭೂಮಿಗೆ ಜಾಗ ಅವಶ್ಯಕತೆ ಇದೆಯೋ ಅಲ್ಲಲ್ಲಿ ಭೂ ಮಂಜೂರು ಮಾಡಲಾಗಿದೆ.
ಆರೋಗ್ಯ, ಶಿಕ್ಷಣ ವಿಚಾರದಲ್ಲಿ ನಿಮ್ಮ ಸಾಧನೆ?
ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಹೆಚ್ಚು ಕೆಲಸವಾಗಿದೆ. ಇಎಸ್ಐ ಆಸ್ಪತ್ರೆಗೆ ಜಾಗ ಮಂಜೂರು ಮಾಡಲಾಗಿದೆ. ಡಿಪ್ಲೋಮಾ ಮತ್ತು ಐಟಿಐ ಕಾಲೇಜುಗಳ ಸ್ಥಳ ಮಂಜೂರಾತಿ ದೊರೆತಿದೆ. ಕಾನ್ವೆಂಟ್ ಶಾಲೆಗೆ ಸರಿ ಸಮಾನ ರೀತಿ ಯಲ್ಲಿ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸುವ ಕೆಲಸ ಕ್ಷೇತ್ರದ ಹಲವು ಕಡೆಗಳಲ್ಲಿ ನಡೆದಿದೆ. ಚುಂಚನಘಟ್ಟ, ಆರ್ಬಿಐ ಲೇಔಟ್ನಲ್ಲಿ ಶಾಲೆಗಳ ನಿರ್ಮಾಣ ಮಾಡಲಾಗಿದೆ. ಜತೆಗೆ ಬೇಗೂರು ಶಾಲೆಯಲ್ಲಿ ಆಟದ ಮೈದಾನ ನಿರ್ಮಾಣ ಮಾಡಲಾಗಿದೆ. ಶಾಲೆಗಳನ್ನು ಹಂತ-ಹಂತವಾಗಿ ಮೇಲ್ದರ್ಜೆಗೆ ಏರಿಸುವ ಕೆಲಸ ನಡೆದಿದೆ.
ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲಾಗಿದೆಯಾ?
ಕ್ಷೇತ್ರದಲ್ಲಿ ರಸ್ತೆಗಳ ಅಗಲೀಕರಣಕ್ಕೆ ಹೆಚ್ಚು ಒತ್ತು ನೀಡಿದ್ದೇನೆ. ಮೀನಾಕ್ಷಿ ದೇವಸ್ಥಾನ ರಸ್ತೆಯಿಂದ ಹೊಸೂರು ರಸ್ತೆ ವರೆಗೆ ಉತ್ತಮ ರೀತಿಯ ಡಬಲ್ ರಸ್ತೆಗಳನ್ನ ನಿರ್ಮಾಣ ಮಾಡಲಾಗಿದೆ. ಬೇಗೂರು ಸೇರಿದಂತೆ ಹಲವು ಪ್ರದೇಶಗಳಲ್ಲಿ ರಸ್ತೆಗಳ ಅಗಲೀ ಕರಣ ಕೆಲಸ ನಡೆದಿದೆ. ಬಡಜನರಿಗೆ ವಸತಿ ನೀಡುವ ಕೆಲಸವೂ ಸಾಗಿದೆ. ಹೌಸ್ ಬೋರ್ಡ್ಗಳಿಂದ ಮನೆಗಳನ್ನು ನಿರ್ಮಾಣ ಮಾಡುವ ಕೆಲಸ ನಡೆದಿದೆ. ಕೆಲವು ಹಳ್ಳಿಗಳಲ್ಲಿ ಬಹು ಅಂತಸ್ಥಿನ ಮನೆ ನಿರ್ಮಾಣ (ಜಿ2) ಮಾಡುವ ಕೆಲಸ ನಡೆದಿದೆ.
ಕ್ಷೇತ್ರದಲ್ಲಿ ಜನರ ಸ್ಪಂದನೆ ಹೇಗಿದೆ?
ಉತ್ತಮವಾಗಿದೆ. ನಾನು ಮೂರು ಬಾರಿ ಶಾಸಕನಾಗಿ ಕ್ಷೇತ್ರದಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇನೆ. ಆ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಶೇ.90 ಬಿಜೆಪಿ ಪರ ಅಲೆ ಇದೆ.
ನಿಮ್ಮನ್ನು ಯಾಕೆ ಪುನರಾಯ್ಕೆ ಮಾಡಬೇಕು?
ಕ್ಷೇತ್ರದ ಸಮಗ್ರ ಅಭಿವೃದ್ಧಿ ಹಾಗೂ ಕ್ಷೇತ್ರದ ಜನತೆಗೆ ಸಮಸ್ಯೆಗಳಿಗೆ ಸದಾ ಸ್ಪಂದಿಸಿದ್ದೇನೆ. ಹೀಗಾಗಿ, ಮತ್ತೂಮ್ಮೆ ಅವಕಾಶ ಕೊಡಲು ಮನವಿ ಮಾಡುತ್ತಿದ್ದೇನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!
Bengaluru: ಮೆಜೆಸ್ಟಿಕ್ ಬಳಿ ಬಿಎಂಟಿಸಿ ಬಸ್ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು
Bengaluru: ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಮತ್ತೆ 9 ಮೊಬೈಲ್ ಫೋನ್ಗಳು ಪತ್ತೆ!
Leopard: ಎಲೆಕ್ಟ್ರಾನಿಕ್ ಸಿಟಿ ಎನ್ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ
Anekal: ಶಾಲಾ ಬಸ್ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
ತಿಮ್ಮಾಪುರ ಮಾತಿಗೆ ಯತ್ನಾಳ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ
Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ
Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ
Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ
Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.