ಸಸಿನೆಟ್ಟು ಪೋಷಿಸಿದ ಮಕ್ಕಳಿಗೆ ಪ್ರೋತ್ಸಾಹ ಧನ

ರಾಜಾನುಕುಂಟೆ ಗ್ರಾಪಂನ ವಿಶಿಷ್ಟಯೋಜನೆ; ಕಲಿಕೆ ಜತೆಗೆ ಕೃಷಿ-ಪರಿಸರದ ಬಗ್ಗೆ ಆಸಕ್ತಿ ಮೂಡಿಸುವ ಉದ್ದೇಶ

Team Udayavani, Aug 29, 2021, 3:37 PM IST

ಸಸಿನೆಟ್ಟು ಪೋಷಿಸಿದ ಮಕ್ಕಳಿಗೆ ಪ್ರೋತ್ಸಾಹ ಧನ

ಬೆಂಗಳೂರು: ನಗರ ಜಿಲ್ಲಾಡಳಿತ ವ್ಯಾಪ್ತಿಯ ರಾಜಾನುಕುಂಟೆ ಗ್ರಾಮ ಪಂಚಾಯಿತಿ ಹೊಸ ಆಲೋಚನೆಗೆ ಮುನ್ನುಡಿ ಬರೆದಿದ್ದು, ಶಾಲಾ
ಹಂತದಲ್ಲೇ ಮಕ್ಕಳಿಗೆ ಕಲಿಕೆ ಜತೆಗೆ ಕೃಷಿ ಮತ್ತು ಪರಿಸರ ಸಂರಕ್ಷಣೆ ಬಗ್ಗೆ ಆಸ್ತಕಿ ಮೂಡಿಸಲು ಶಾಲಾ ಮಕ್ಕಳಿಗೆ ಪ್ರೋತ್ಸಾಹ ಧನ ನೀಡಿ ಸಸಿ ಪಡೆದು ನೆಡುವ ಯೋಜನೆ ರೂಪಿಸಿದೆ.

ಶಾಲಾ ಮಕ್ಕಳೇ ಪೋಷಿಸಿ ನೀರೆರೆದು ಬೆಳೆಸಿದ ವಿವಿಧ ಜಾತಿಯ ಹಣ್ಣಿನ ಸಸಿ ಪಡೆದು ಅವರಿಗೆ ಪ್ರೋತ್ಸಾಹ ಧನ ನೀಡಿ ಆ ಮೂಲಕ ಪರಿಸರ ಸಂರಕ್ಷಣೆಯಲ್ಲಿ ಶಾಲಾ ಮಕ್ಕಳ ಕೊಡುಗೆಯೂ ಇರುವ ವಿನೂತನ ಯೋಜನೆ ಅನುಷ್ಠಾನಗೊಳಿಸಿದೆ. ಯಲಹಂಕ ತಾಲೂಕು ವ್ಯಾಪ್ತಿಯ ರಾಜಾನುಕುಂಟೆ ಗ್ರಾಮ ಪಂಚಾಯ್ತಿ ಈಗಾಗಲೇ ಹಲವು ಉತ್ತಮ ಯೋಜನೆಗಳನ್ನು ರೂಪಿಸಿದ್ದು ಇದೀಗ ಶಾಲಾ ಮಕ್ಕಳು ಬೆಳೆಸಿದ ವಿವಿಧ ಜಾತಿಯ ಸಸಿಗಳನ್ನು ಪಡೆದು ನೆಡುವ ಯೋಜನೆ ಗ್ರಾಮಸ್ಥರ ಮಚ್ಚುಗೆಗೂ ಪಾತ್ರವಾಗಿದೆ.

ಶಾಲಾ ಮಕ್ಕಳನ್ನು ಕೇಂದ್ರೀಕರಿಸಿಯೇ ಈ ಅಪ ರೂಪದ ಯೋಜನೆ ಸಿದ್ಧಪಡಿಸಲಾಗಿದ್ದು ಈ ಕಾರ್ಯಕ್ಕಾಗಿ ಗ್ರಾಮ ಪಂಚಾಯಿತಿಯ ಸಂಚಿತ ಅನುದಾನ ಬಳಕೆ ಮಾಡಿಕೊಳ್ಳುತ್ತಿದೆ. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಳ್ಳುತ್ತಿದ್ದಾರೆ. ವಿದ್ಯಾರ್ಥಿಗಳ ಮತ್ತು ಶಿಕ್ಷಕರ ಪ್ರೋತ್ಸಾಹದಿಂದ ಈ ಕಾರ್ಯಕ್ರಮ ಯಶಸ್ವಿಯಾಗಿ ಜಾರಿಯಾಗಿದೆ.

ಇದನ್ನೂ ಓದಿ:ಉತ್ತರ ಕನ್ನಡಕ್ಕೆ ಪ್ರತ್ಯೇಕ ಹಾಲು ಒಕ್ಕೂಟ ಒದಗಿಸಲು ಸಿಎಂಗೆ ಒತ್ತಾಯ

ಈಗಾಗಲೇ ಮಾವು, ಹಲವು ಮತ್ತು ನೆರಳೆ ಸಸಿಗಳನ್ನು ಬೆಳೆಸುವಂತೆ ಮನವಿ ಮಾಡಲಾಗಿದೆ. ವಿವಿಧ ಶಾಲೆಗಳ ವಿದ್ಯಾರ್ಥಿಗಳು ಈಗಾಗಲೇ ನೀಡಿರುವ ಸಸಿಗಳನ್ನು ರಾಜಾನು ಕುಂಟೆ ಗ್ರಾಮ ಪಂಚಾಯ್ತಿ ಸೇರಿದ ನರ್ಸರಿಯಲ್ಲೇ ಇರಿಸಿ ಅವುಗಳನ್ನು ಪೋಷಿಸಲಾಗುತ್ತಿದೆ. ಗ್ರಾಮ ಪಂಚಾಯ್ತಿ ಗೋಮಾಳ ಜಾಗದಲ್ಲಿ ವಿದ್ಯಾರ್ಥಿಗಳು ನೀಡಿದ ಸಸಿಗಳನ್ನು ನೆಡಲಾಗುತ್ತದೆ ಎಂದು ರಾಜಾನುಕುಂಟೆ ಗ್ರಾಮ ಪಂಚಾಯ್ತಿ ಅಧ್ಯಕ್ಷಕೆ.ವೀರಣ್ಣ ಹೇಳಿದ್ದಾರೆ.

ಒಂದು ಸಸಿ ಬೆಳೆಸಿ ನೀಡಿದರೆ 5 ರೂ.: ರಾಜಾನು ಕುಂಟೆ ವ್ಯಾಪ್ತಿಯಲ್ಲಿ ಘನತಾಜ್ಯ ಘಟಕ ಇದೆ. ಆ ಘಟಕದಿಂದ ಸಂಗ್ರಹವಾಗುವ ಹಾಲಿನ ಪ್ಯಾಕೇಟ್‌ ಅನ್ನು ತಂದು ಅವುಗಳನ್ನು ಆಯಾ ಶಾಲಾ ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ. ಹಾಲಿನ ಪ್ಯಾಕೇಟ್‌ನಲ್ಲಿ ವಿದ್ಯಾರ್ಥಿಗಳು ಸಸಿ ಬೆಳೆಸಿ ಪೋಷಿಸಬೇಕು. ಒಬ್ಬ ವಿದ್ಯಾರ್ಥಿ ಎಷ್ಟು ಬೇಕಾದರೂ ಗಿಡ ಬೆಳೆಸಬಹುದಾಗಿದೆ ಎಂದು ರಾಜಾನಕುಂಟೆಯ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ರಾಜೇಶ್‌ ಹೇಳುತ್ತಾರೆ. ವಿದ್ಯಾರ್ಥಿಗಳಿಗೆ ಮುಂದೆ ಕೃಷಿಯತ್ತ ಮರಳಲಿ ಎಂಬ ಸದುದ್ದೇಶ ಕೂಡ ಇದರಲ್ಲಿ ಸೇರಿದೆ. ಒಂದು ಸಸಿಗೆ 5ರೂ.ಗಳ ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಈಗಾಗಲೇ 1500ಕ್ಕೂ ಅಧಿಕ ಸಸಿಗಳನ್ನು ವಿದ್ಯಾರ್ಥಿಗಳಿಂದ ಪಡೆಯಲಾಗಿದೆ ಎಂದು ತಿಳಿಸಿದ್ದಾರೆ.

ಗ್ರಾಪಂನಿಂದ ಉತ್ತಮ ಕಾರ್ಯ
ಮಾವು, ಹಲಸು, ನೆರಳೆ ಹಣ್ಣಿನ ಗಿಡಗಳಕೆಳಗೆ ಅನೇಕ ಸಸಿಗಳು ಬಿದ್ದು ಬೆಳೆಯುತ್ತವೆ. ಅವುಗಳನ್ನು ತಂದು ವಿದ್ಯಾರ್ಥಿಗಳು ಪೋಷಣೆ ಮಾಡುತ್ತಾರೆ. ಆ ಗಿಡ ನನ್ನದು ಮುಂದೊಂದು ದಿನ ಹಣ್ಣುಗಳನ್ನು ಈ ಗ್ರಾಮದ ಜನರಿಗೆ ನೀಡಲಿದೆ ಎಂಬ ಭಾವನೆ ವಿದ್ಯಾರ್ಥಿಗಳಲ್ಲಿ ಮೂಡಲಿದೆ ಎಂದು ಶ್ರೀರಾಮನ ಹಳ್ಳಿಯ ಸಾಯಿಶಂಕರ ವಿದ್ಯಾ ಶಾಲೆಯ ದೈಹಿಕ ಶಿಕ್ಷಕ ಉಮೇಶ್‌ಕುಮಾರ್‌ ಹೇಳುತ್ತಾರೆ. ಮಕ್ಕಳು ಉತ್ಸಾಹದಿಂದ ಸಸಿ ಬೆಳೆಸುವ ಪ್ರಕ್ರಿಯೆಯಲ್ಲಿ ಭಾಗವಹಿಸುತ್ತಾರೆ. ಈಗಾಗಲೇ ಗ್ರಾಮ ಪಂಚಾಯ್ತಿಗೆ ವಿವಿಧ ಜಾತಿಯ ನೂರಾರು ಹಣ್ಣಿನ ಗಿಡಗಳನ್ನು ಮಕ್ಕಳು
ನೀಡಿದ್ದಾರೆ. ಕೃಷಿ ಮತ್ತು ಪರಿಸರ ಸಂರಕ್ಷಣೆ ದೃಷ್ಟಿಯಿಂದಲೂ ಗ್ರಾಮ ಪಂಚಾಯ್ತಿ ಉತ್ತಮ ಕಾರ್ಯಕ್ರಮ ರೂಪಿಸಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸುತ್ತಾರೆ.

ಕಲಿಕೆ ಹಂತದಲ್ಲೇ ಮಕ್ಕಳಿಗೆ ಕೃಷಿ ಮತ್ತು ಪರಿಸರದ ಬಗ್ಗೆ ಜಾಗೃತಿಮೂಡಲಿ ಎಂಬುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ. ಶಾಲಾ ಮಕ್ಕಳುಕೂಡ ಆಸಕ್ತಿಯಿಂದ ಸಸಿ ಬೆಳೆಸಿ ಗ್ರಾಮ ಪಂಚಾಯ್ತಿಗಳಿಗೆ ನೀಡುತ್ತಿರುವುದು ಸಂತಸದ ವಿಚಾರವಾಗಿದೆ.
-ರಾಜೇಶ್‌, ಪಿಡಿಒ ರಾಜಾನುಕುಂಟೆ

-ದೇವೇಶ ಸೂರಗುಪ್ಪ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.