Ramlalla: ರಾಮಲಲ್ಲಾ ಮಂದಿರ ಪ್ರವೇಶ- ಇಂದು ಗರ್ಭಗುಡಿಯಲ್ಲಿ ಮೂರ್ತಿ ಪ್ರತಿಷ್ಠಾಪನೆ

ಜ. 22: ಪ್ರಧಾನಿ ಮೋದಿಯಿಂದಲೇ ಪ್ರಾಣಪ್ರತಿಷ್ಠೆ

Team Udayavani, Jan 18, 2024, 12:35 AM IST

RAM MANDIR 1

ಅಯೋಧ್ಯೆ: ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ರಾಮ ಮಂದಿರದಲ್ಲಿ ಬುಧವಾರ ಪ್ರಾಣ ಪ್ರತಿಷ್ಠೆಯ ಪೂರ್ವಭಾವಿಯಾಗಿ ಹಲವು ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಅದಕ್ಕೆ ಪೂರಕವಾಗಿ ಮೈಸೂರಿನ ಅರುಣ್‌ ಯೋಗಿರಾಜ್‌ ಕೆತ್ತನೆ ಮಾಡಿದ 51 ಅಡಿ ಎತ್ತರದ ಬಾಲರಾಮನ ಮೂರ್ತಿಯನ್ನು ಬಿಗಿಭದ್ರತೆಯಲ್ಲಿ ಟ್ರಕ್‌ ಮೂಲಕ ಮಂದಿರದ ಆವರಣಕ್ಕೆ ತರಲಾಗಿದೆ. ಗುರುವಾರ ಅದನ್ನು ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸಲಾಗುತ್ತದೆ.

ಇಂದು ಪ್ರತಿಷ್ಠಾಪನೆ
ಬಿಗಿ ಬಂದೋಬಸ್ತ್ ನಡುವೆ ಬಾಲರಾಮನ ವಿಗ್ರಹವನ್ನು ದೇಗುಲದ ಆವರಣಕ್ಕೆ ತರಲಾಗಿದೆ. ಈ ಸಂದರ್ಭದಲ್ಲಿ ಅಲ್ಲಿ ಸೇರಿದ್ದ ನೂರಾರು ಮಂದಿ ಭಕ್ತರು ಜೈಶ್ರೀರಾಮ್‌ ಎಂಬ ಘೋಷಣೆ ಕೂಗಿದರು. ಗುರುವಾರ ರಾಮಮಂದಿರದ ಗರ್ಭಗುಡಿಯಲ್ಲಿ ರಾಮಲಲ್ಲಾನ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗುತ್ತದೆ.

ಪ್ರಧಾನಿಯವರೇ ನಡೆಸಿಕೊಡಲಿದ್ದಾರೆ
ಪ್ರಧಾನಿ ಮೋದಿ ಅಯೋಧ್ಯೆಗೆ ಜ. 21ರಂದು ತಲುಪಲಿದ್ದಾರೆ. ಜ. 22ರಂದು ಮಂದಿರ ಪ್ರತಿಷ್ಠಾ ಪನೆಯ ಕಾರ್ಯಕ್ರಮವನ್ನು ಅವರೇ ಕುಟುಂಬದ ಯಜನಮಾನನ ಸ್ಥಾನದಲ್ಲಿ ಕುಳಿತು ನಡೆಸಿಕೊಡಲಿದ್ದಾರೆ ಎಂದು ಧಾರ್ಮಿಕ ವಿಧಿವಿಧಾನ ನಡೆಸಿಕೊಡುವ ತಂಡದ ಮುಖ್ಯ ಅರ್ಚಕ ಲಕ್ಷ್ಮೀಕಾಂತ ದೀಕ್ಷಿತ್‌ ಬುಧವಾರ ತಿಳಿಸಿದ್ದಾರೆ. ಸದ್ಯ ಧಾರ್ಮಿಕ ಕ್ರಿಯಾಭಾಗಗಳನ್ನು ಯಜಮಾನನ ಸ್ಥಾನದಲ್ಲಿ ಕುಳಿತು ನಡೆಸಿಕೊಡುತ್ತಿರುವ ಟ್ರಸ್ಟ್‌ ಸದಸ್ಯ ಅನಿಲ್‌ ಮಿಶ್ರಾ ಅವರೇ ಯಜಮಾನರಾಗಿ ಮುಂದುವರಿಯಲಿದ್ದಾರೆ. ಆದರೆ ಪ್ರಧಾನಿ ನರೇಂದ್ರ ಮೋದಿಯವರೇ ಪ್ರತಿಷ್ಠಾಪನಾ ಕಾರ್ಯಕ್ರಮಗಳನ್ನು ನಡೆಸಿಕೊಡಲಿದ್ದಾರೆ ಎಂದರು.

ಆವರಣ ಪ್ರವೇಶ
ಮೈಸೂರಿನ ಅರುಣ್‌ ಯೋಗಿರಾಜ್‌ ನಿರ್ಮಿಸಿದ ಮತ್ತೂಂದು ಸಣ್ಣ ಬಾಲರಾಮನ ವಿಗ್ರಹದ ಆವರಣ ಪ್ರವೇಶವನ್ನೂ ನಡೆಸಲಾಗಿದೆ.

ರಾಮ ಶಿಲೆ ತೆಗೆದ ಹೊಲ ಈಗ ಪುಣ್ಯ ಕ್ಷೇತ್ರ- ನಮ್ಮಲ್ಲಿನ ಕಲ್ಲು ಆಯ್ಕೆಯಾದದ್ದು ಪುಣ್ಯ: ರಾಮದಾಸ್‌
ಎಚ್‌.ಡಿ. ಕೋಟೆ: ಅಯೋಧ್ಯೆಯ ರಾಮ ಮಂದಿರದಲ್ಲಿ ಪ್ರತಿಷ್ಠಾಪಿಸಲು ರಚಿಸಲಾಗಿರುವ ರಾಮ ಲಲ್ಲಾನ ಮೂರ್ತಿ ಕೆತ್ತನೆ ಮಾಡಲು ಪಡೆಯಲಾಗಿದ್ದ ಶಿಲೆ ಇರುವ ಸ್ಥಳಕ್ಕೆ ಪವಿತ್ರ ಕ್ಷೇತ್ರದ ಯೋಗ ಬಂದಿದೆ. ಮೈಸೂರು ಜಿಲ್ಲೆಯ ಎಚ್‌.ಡಿ. ಕೋಟೆಯ ಹಾರೋಹಳ್ಳಿ ಗ್ರಾಮದ ರಾಮದಾಸ್‌ ಅವರ ಜಮೀನಿಗೆ ಈಗ ಸುತ್ತಮುತ್ತಲಿನ ಗ್ರಾಮಗಳ ಜನರು ತಂಡೋಪ ತಂಡವಾಗಿ ಭೇಟಿ ನೀಡಿ ಶಿಲೆ ಇದ್ದ ಜಾಗಕ್ಕೆ ನಮಸ್ಕಾರ ಮಾಡಿ ಭಕ್ತಿ ಭಾವ ಮೆರೆಯುತ್ತಿದ್ದಾರೆ!

ಅದಕ್ಕೆ ಪೂರಕವಾಗಿ ಮೈಸೂರು ಅರಮನೆಯ ರಾಜಪುರೋಹಿತ ಪ್ರಹ್ಲಾದ್‌ರಾವ್‌ ಮತ್ತು ತಂಡ ಆಗಮಿಸಿ ಮಂಗಳವಾರ ಸಂಜೆ 5.40ರ ಗೋಧೂಳಿ ಲಗ್ನದಲ್ಲಿ ವಿಶೇಷ ಪೂಜೆ ಸಲ್ಲಿಸಿತು. ಅದರ ನೇತೃತ್ವವನ್ನು ಗಣಿ ಗುತ್ತಿಗೆದಾರ ಗುಜ್ಜೆಗೌಡನಪುರ ಶ್ರೀನಿವಾಸ್‌ ವಹಿಸಿದ್ದರು. ಕಾರ್ಯಕ್ರಮದ ಬಗ್ಗೆ ಮಾಹಿತಿ ಪಡೆದುಕೊಂಡ ಗುಜ್ಜೆಗೌಡನಪುರ, ಹಾರೋಹಳ್ಳಿ ಗ್ರಾಮ ಸಹಿತ ಸುತ್ತಮುತ್ತಲ ಗ್ರಾಮಗಳ ನೂರಾರು ರಾಮ ಭಕ್ತರು ಪಾಲ್ಗೊಂಡಿದ್ದರು.

ಹೋಮ, ರಾಮ ಭಜನೆ ಸೇರಿ ಸುಮಾರು 1 ತಾಸಿಗೂ ಹೆಚ್ಚು ಕಾಲ ಪೂಜೆ ನೆರವೇರಿಸಲಾಯಿತು. ಈ ವೇಳೆ ಶ್ರೀರಾಮಭಕ್ತರು ಜೈ ಶ್ರೀರಾಮ್‌ ಜಯ ಘೋಷಣೆ ಕೂಗಿ ಸಂಭ್ರಮಿಸಿದರು.

ಪೂರ್ವ ಜನ್ಮದ ಪುಣ್ಯ
ಜನರು ಆಗಮಿಸುತ್ತಿರುವುದು ಮತ್ತು ರಾಮ ಲಲ್ಲಾ ಮೂರ್ತಿಗೆ ಜಮೀನಿನ ಶಿಲೆಯೇ ಆಯ್ಕೆ ಯಾಗಿರುವ ಬಗ್ಗೆ ಜಮೀನಿನ ಮಾಲಕ ರಾಮ ದಾಸ್‌ ಮಾತನಾಡಿ ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ಬಾಲ ರಾಮನ ಮೂರ್ತಿ ನಮ್ಮ ಜಮೀನಿನಲ್ಲಿ ದೊರೆತ ಶಿಲೆಯಿಂದ ಕೆತ್ತನೆಯಾಗಿರುವುದು ನಮ್ಮ ಪೂರ್ವ ಜನ್ಮದ ಪುಣ್ಯ’ ಎಂದರು.

ಟಾಪ್ ನ್ಯೂಸ್

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mumbai Coast: ಗೇಟ್‌ವೇ ಆಫ್‌ ಇಂಡಿಯಾ ಬಳಿ ದೋಣಿ ದುರಂತ: 13 ಮಂದಿ ದುರ್ಮರಣ!

Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್‌ ಭೇಟಿ: 21ರಿಂದ ಮೋದಿ ಪ್ರವಾಸ

Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್‌ ಭೇಟಿ: 21ರಿಂದ ಮೋದಿ ಪ್ರವಾಸ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.