ಜಿಲ್ಲಾ ಮಟ್ಟದಲ್ಲಿ ಘಟಕ, ಕಾಲೇಜುಗಳಲ್ಲಿ ಕ್ಲಬ್‌ ಸ್ಥಾಪನೆ

ಮಾನವ ಕಳ್ಳಸಾಗಣೆ: ಗೃಹ ಇಲಾಖೆ ಗಂಭೀರ ಪರಿಗಣನೆ

Team Udayavani, Feb 3, 2022, 7:25 AM IST

ಜಿಲ್ಲಾ ಮಟ್ಟದಲ್ಲಿ ಘಟಕ, ಕಾಲೇಜುಗಳಲ್ಲಿ ಕ್ಲಬ್‌ ಸ್ಥಾಪನೆ

ಮಂಗಳೂರು: ಮಾನವ ಕಳ್ಳಸಾಗಣೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಗೃಹ ಇಲಾಖೆ ಪ್ರತೀ ಜಿಲ್ಲೆಯಲ್ಲೂ ಮಾನವ ಕಳ್ಳ ಸಾಗಣೆ ತಡೆ ಘಟಕ ಹಾಗೂ ಕಾಲೇಜುಗಳಲ್ಲಿ “ಮಾನವ ಕಳ್ಳಸಾಗಣೆ ತಡೆ ಕ್ಲಬ್‌’ ರಚಿಸಲು ನಿರ್ದೇಶಿಸಿದೆ.

ದೇಶದಲ್ಲಿ ಅಥವಾ ವಿದೇಶಗಳಲ್ಲಿ ಜೀತ ಪದ್ಧತಿ ರೀತಿಯ ವೃತ್ತಿಗಳು, ಲೈಂಗಿಕ ಚಟುವಟಿಕೆ, ಭಿಕ್ಷಾಟನೆ, ಅಂಗಾಂಗಗಳನ್ನು ತೆಗೆಯುವಿಕೆ, ಬಲವಂತದ ಮದುವೆ ಮೊದಲಾದ ದುಷ್ಕೃತ್ಯಗಳಿಗಾಗಿ ಮಹಿಳೆಯರು, ಮಕ್ಕಳು ಮತ್ತು ಗ್ರಾಮೀಣ ಭಾಗದ ಜನರನ್ನು ಕಳ್ಳಸಾಗಣೆ (human trafficking) ಮಾಡುತ್ತಿರುವ ಕೃತ್ಯಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಸರಕಾರ ಎಲ್ಲ ಜಿಲ್ಲೆಗಳಿಗೂ ವಿಶೇಷ ಸೂಚನೆ ನೀಡಿದೆ ಎಂದು ಮೂಲಗಳು ತಿಳಿಸಿವೆ.

ಮಾನವ ಕಳ್ಳಸಾಗಣೆ ಪ್ರಕರಣಗಳನ್ನು ಪರಿಣಾಮಕಾರಿಯಾಗಿ ತಡೆಯು ವುದಕ್ಕಾಗಿ ಕೇಂದ್ರ ಸರಕಾರ 2018ರಲ್ಲಿ ಲೋಕಸಭೆಯಲ್ಲಿ ಮಸೂದೆ ಮಂಡಿಸಿ ಅಂಗೀಕಾರ ಪಡೆದಿತ್ತು. ಪೂರಕ ಹೆಜ್ಜೆ ಎಂಬಂತೆ ಪ್ರತೀ ಜಿಲ್ಲೆಯಲ್ಲಿಯೂ ಘಟಕ ಹಾಗೂ ಕಾಲೇಜುಗಳಲ್ಲಿ ಕ್ಲಬ್‌ ರಚಿಸಲು ಸೂಚನೆ ನೀಡಲಾಗಿದೆ. ಪೊಲೀಸ್‌ ಇಲಾಖೆ ಸೇರಿದಂತೆ ಮಕ್ಕಳು, ಮಹಿಳೆಯರ ರಕ್ಷಣೆಗೆ ಸಂಬಂಧಿಸಿದ ಇಲಾಖೆಗಳನ್ನು ಎಚ್ಚರಿಸುವುದು, ಸಾರ್ವಜನಿಕರು, ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದು ಇದರ ಉದ್ದೇಶ.

ಅನಧಿಕೃತ ಏಜೆನ್ಸಿಗಳ ವಿರುದ್ಧ ಕ್ರಮ: ಮಾನವ ಕಳ್ಳಸಾಗಣೆಗೆ ಒಳಗಾಗುವವರಲ್ಲಿ ಮಕ್ಕಳು, ಮಹಿಳೆಯರೇ ಹೆಚ್ಚು. ಇಂತಹ ಪ್ರಕರಣಗಳನ್ನು ಪೊಲೀಸ್‌ ಇಲಾಖೆ ಗಂಭೀರವಾಗಿ ಪರಿಗಣಿಸುತ್ತಿದೆ. ಕರಾವಳಿಲ್ಲಿ ಇತ್ತೀಚಿನ ವರ್ಷಗಳಲ್ಲಿ ಮಾನವ ಕಳ್ಳಸಾಗಣೆ ಪ್ರಕರಣಗಳು ಕಡಿಮೆ. ವಿದೇಶಗಳಲ್ಲಿ ಉತ್ತಮ ಉದ್ಯೋಗದ ಆಮಿಷ ತೋರಿಸಿ ಅಲ್ಲಿ ಶೋಷಣೆ ಮಾಡುವ ಘಟನೆಗಳ ಬಗ್ಗೆಯೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಸೂಕ್ತ ಕ್ರಮ ಕೈಗೊಂಡಿದ್ದೇವೆ. ಅನಧಿಕೃತ ಏಜೆನ್ಸಿಗಳ ವಿರುದ್ಧವೂ ಕ್ರಮ ಕೈಗೊಳ್ಳಲಾಗುತ್ತಿದೆ. ಮಂಗಳೂರಿನ ಮೂಲಕ ಕೆನಡಾಕ್ಕೆ ಅಕ್ರಮವಾಗಿ ತೆರಳಲು ಬಂದಿದ್ದ ಶ್ರೀಲಂಕಾದ 32 ಮಂದಿಯನ್ನು ವಶಕ್ಕೆ ಪಡೆದು ಈ ಮಾನವ ಕಳ್ಳಸಾಗಣೆ ಜಾಲದ ಹಿಂದೆ ಇದ್ದವರ ವಿರುದ್ಧ ಕ್ರಮ ಕೈಗೊಂಡಿದ್ದೇವೆ. ನಾಪತ್ತೆಯಾಗಿರುವ ಎಲ್ಲ ಮಕ್ಕಳನ್ನು ಪತ್ತೆ ಮಾಡಿದ್ದೇವೆ. ಸಿಐಡಿ ಕೂಡ ವಿಶೇಷ ನಿಗಾ ವಹಿಸುತ್ತದೆ ಎಂದು ಮಂಗಳೂರು ಡಿಸಿಪಿ ಹರಿರಾಂ ಶಂಕರ್‌ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಕ್ಲಬ್‌ ಆರಂಭ
ಮಾನವ ಕಳ್ಳಸಾಗಣೆ ಜಾಲಕ್ಕೆ ಹೆಚ್ಚಾಗಿ ಬಡವರು, ಅವಿದ್ಯಾವಂತರು, ಗ್ರಾಮೀಣ ಭಾಗದವರು ಗುರಿಯಾಗುತ್ತಾರೆ. ವಿದ್ಯಾವಂತರಾಗಿದ್ದರೂ ವಂಚನೆ ಅಥವಾ ಬಲಾತ್ಕಾರದಿಂದ ಇದಕ್ಕೆ ಬಲಿಯಾಗುತ್ತಾರೆ. ಈ ಬಗ್ಗೆ ವಿದ್ಯಾರ್ಥಿ ಸಮುದಾಯವನ್ನು ಬಳಸಿಕೊಂಡು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಕ್ಲಬ್‌ ಆರಂಭಿಸಲಾಗಿದೆ ಎಂದು ಮಂಗಳೂರು ರೋಶನಿ ನಿಲಯ ಸ್ಕೂಲ್‌ ಆಫ್ ಸೋಶಿಯಲ್‌ ವರ್ಕ್‌ನ ಸ್ನಾತಕೋತ್ತರ ಪದವಿಯ ಅಪರಾಧ ಶಾಸ್ತ್ರ ಮತ್ತು ವಿಧಿವಿಜ್ಞಾನ ವಿಭಾಗದ ಮುಖ್ಯಸ್ಥೆ ಹಾಗೂ ಸಹಾಯಕ ಪ್ರಾಧ್ಯಾಪಕಿಯಾಗಿರುವ ಡಾ| ಸರಿತಾ ತಿಳಿಸಿದ್ದಾರೆ.

“ಸ್ಟಾ ಟಿಸ್ಟಾ’ ಸಂಶೋಧನ ವಿಭಾಗದ ಪ್ರಕಾರ 2020ರಲ್ಲಿ ಭಾರತದಲ್ಲಿ 900 ಪ್ರಕರಣಗಳು ಬೆಳಕಿಗೆ ಬಂದಿದ್ದು ಇದರಲ್ಲಿ 3,000 ಮಂದಿಯನ್ನು ರಕ್ಷಿಸಲಾಗಿದೆ. 2020ರಲ್ಲಿ ಮಹಾರಾಷ್ಟ್ರದಲ್ಲಿ 154, ತೆಲಂಗಾಣದಲ್ಲಿ 104 ಹಾಗೂ ಕರ್ನಾಟಕದಲ್ಲಿ 13 ಮಾನವ ಕಳ್ಳಸಾಗಣೆ ಪ್ರಕರಣಗಳು ಬೆಳಕಿಗೆ ಬಂದಿವೆ.

– ಸಂತೋಷ್‌ ಬೊಳ್ಳೆಟ್ಟು

ಟಾಪ್ ನ್ಯೂಸ್

NS2

Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

3-bng

Bengaluru: ನಗರದಲ್ಲಿ 3 ವರ್ಷದಲ್ಲಿ 9700 ಮರಗಳ ಹನನ

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

7-bng

Bengaluru: ರಾಮಯ್ಯ ಆಸ್ಪತ್ರೆಯಲ್ಲಿ ಅಗ್ನಿ ಆಕಸ್ಮಿಕ: ಸಿಬ್ಬಂದಿಗೆ ಗಾಯ

6-bng

Bengaluru: ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 23 ಲಕ್ಷ ರೂ. ವಂಚನೆ!

NS2

Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ

Karki kananda movie

Karki Movie: ಹಳ್ಳಿ ಹುಡುಗನ ಹೋರಾಟದ ಹಾದಿ

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.