Pre-nursery schools: ರಾಜ್ಯದ 262 ಶಾಲೆಗಳಲ್ಲಿ ಪ್ರೀ ನರ್ಸರಿ ಶಾಲೆಗಳ ಸ್ಥಾಪನೆ
ಎಲ್ಕೆಜಿ ವಿಭಾಗ ತೆರೆಯಲು ಸರಕಾರ ಆದೇಶ ; ಅತಿಥಿ ಶಿಕ್ಷಕರಿಂದ ಪಾಠ
Team Udayavani, Aug 18, 2023, 11:30 PM IST
ಚಿಕ್ಕಬಳ್ಳಾಪುರ: ರಾಜ್ಯದ 262 ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ (ಎಲ್ಕೆಜಿ) ಶಾಲಾ ತರಗತಿಗಳನ್ನು ಪ್ರಾಯೋಗಿಕವಾಗಿ ನಡೆಸುವ ಮಹ ತ್ವದ ನಿರ್ಧಾರವನ್ನು ರಾಜ್ಯ ಸರಕಾರ ಕೈಗೊಂಡಿದೆ.
2023-24ನೇ ಸಾಲಿನ ಶೈಕ್ಷಣಿಕ ವರ್ಷದಲ್ಲೇ ಪೂರ್ವ ಪ್ರಾಥಮಿಕ ಶಾಲಾ ತರಗತಿಗಳನ್ನು ನಡೆಸಲು ಎಲ್ಲ ರೀತಿಯ ಅಗತ್ಯ ಸಿದ್ಧತೆಗಳನ್ನು ಕೈಗೊಂಡು ಆಗಸ್ಟ್ ತಿಂಗಳಿನಿಂದಲೇ ಆರಂಭಿಸುವಂತೆ ಸೂಚಿಸಿದೆ.
ವಿಶೇಷ ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಎಲ್ಕೆಜಿ ಒಂದು ವಿಭಾಗವನ್ನು ಮಾತ್ರ ಆರಂಭಿಸುವಂತೆ ಹಾಗೂ ಎಲ್ಕೆಜಿಗೆ 4ರಿಂದ 5 ವರ್ಷದೊಳಗಿನ ಮಕ್ಕಳನ್ನು ಮಾತ್ರ ದಾಖಲಿಸುವಂತೆ ಸರಕಾರ ಸೂಚಿಸಿದೆ. ಕನಿಷ್ಠ 20 ಮಕ್ಕಳನ್ನು ಮತ್ತು ಗರಿಷ್ಠ 30 ಮಕ್ಕಳನ್ನು ಮಾತ್ರ ದಾಖಲಿಸಿಕೊಳ್ಳಬೇಕೆಂದು ಸಮಗ್ರ ಶಿಕ್ಷಣ ಕರ್ನಾಟಕದ ಯೋಜನಾ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.
ಪ್ರತ್ಯೇಕ ಕೊಠಡಿ
ಪೂರ್ವ ಪ್ರಾಥಮಿಕ ಶಾಲೆಗಳನ್ನು ನಡೆಸಲು ಪ್ರಾಥಮಿಕ ಶಾಲೆಗಳಲ್ಲಿ ಒಂದು ಸುಸಜ್ಜಿತ ಕೊಠಡಿ ಸಿದ್ಧಪಡಿಸಿಕೊಳ್ಳಬೇಕು, ಅಗತ್ಯ ಸಾಧನ ಸಾಮಗ್ರಿಗಳನ್ನು ನಿಯಮಾನುಸಾರ ಖರೀದಿಸಬೇಕೆಂದು ಸೂಚಿಸಿರುವ ಸರಕಾರ, ಚಿತ್ರಕಲಾ ಶಿಕ್ಷಕರನ್ನು ಬಳಸಿಕೊಂಡು ಆಕರ್ಷಕವಾಗಿ ಚಿತ್ರಗಳನ್ನು ರಚಿಸುವ ಮೂಲಕ ಪೂರ್ವ ಪ್ರಾಥ ಮಿಕ ತರಗತಿ ನಡೆಸುವ ಕೊಠಡಿಗಳನ್ನು ಸಜ್ಜುಗೊಳಿಸುವಂತೆ ಸೂಚಿಸಿದೆ. ಅಲ್ಲದೆ, ಪೂರ್ವ ಪ್ರಾಥಮಿಕ ಶಾಲೆಗೆ ಅತಿಥಿ ಶಿಕ್ಷಕಿ ಅಥವಾ ಶಿಕ್ಷಕರೊಬ್ಬರನ್ನು ನೇಮಿಸಿಕೊಳ್ಳುವ ಹೊಣೆ ಯನ್ನು ಆಯಾ ಶಾಲೆಗಳ ಶಾಲಾ ಅಭಿವೃದ್ಧಿ ಸಮಿತಿಗೆ ವಹಿಸಲಾಗಿದೆ. ಅತಿಥಿ ಶಿಕ್ಷಕರಿಗೆ ಮಾಸಿಕ 7,500 ರೂ., ಹಾಗೂ ಆಯಾರನ್ನು ನೇಮಿಸಿ ಕೊಳ್ಳಲು 5 ಸಾವಿರ ರೂ. ಸಂಭಾವನೆ ನೀಡಲು ಸರಕಾರ ಸೂಚಿಸಿದೆ. ಪೂರ್ವ ಪ್ರಾಥಮಿಕ ಶಾಲೆಗಳು ಬೆಳಗ್ಗೆ 10ರಿಂದ ಮಧ್ಯಾಹ್ನ 3:30ರ ವರೆಗೆ ಕಾರ್ಯನಿರ್ವಹಿಸಬೇಕು, ಆಗಸ್ಟ್ ಅಂತ್ಯದೊಳಗೆ ಪೂರ್ವ ಪ್ರಾಥಮಿಕ ಶಾಲೆಗಳಿಗೆ ಸರಕಾರವೇ ಪಠ್ಯ ಪುಸ್ತಕ, ಬೋಧನಾ ಸಾಮಗ್ರಿ ಗಳನ್ನು ಪೂರೈಸಲಿದೆ. ನೇಮಕಗೊಳ್ಳುವ ಅತಿಥಿ ಶಿಕ್ಷಕರಿಗೆ ಡಯಟ್ ಮೂಲಕ ತರಬೇತಿ ನೀಡ ಲಿರುವ ಇಲಾಖೆ, ಅಂಗನವಾಡಿಗಳಲ್ಲಿ ನೀಡುವ ಹಾಲು, ಊಟ, ಉಪಾಹಾರ ನೀಡುವಂತೆಯೂ ಸೂಚಿಸಿದೆ.
ಕಾಗತಿ ನಾಗರಾಜಪ್ಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ
Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!
World Book of Records; ಪ್ರಜಾಪ್ರಭುತ್ವ ಮಾನವ ಸರಪಳಿಗೆ ವಿಶ್ವದಾಖಲೆ ಗರಿ
Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್ ಪ್ರಕರಣ: ಲೋಕಾಯುಕ್ತದಿಂದ ಬಿಎಸ್ವೈ ವಿಚಾರಣೆ
Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.