ಕರಾವಳಿಯಲ್ಲಿ ಸಂಭ್ರಮದ ಈಸ್ಟರ್‌ ಆಚರಣೆ


Team Udayavani, Apr 18, 2022, 6:15 AM IST

ಕರಾವಳಿಯಲ್ಲಿ ಸಂಭ್ರಮದ ಈಸ್ಟರ್‌ ಆಚರಣೆ

ಮಂಗಳೂರು/ಉಡುಪಿ : ಯೇಸುಕ್ರಿಸ್ತರ ಪುನರುತ್ಥಾನದ ಹಬ್ಬ ಈಸ್ಟರನ್ನು ಕ್ರೈಸ್ತರು ಎ. 17ರಂದು ಕರಾವಳಿಯಾದ್ಯಂತ ಚರ್ಚ್‌ಗಳಲ್ಲಿ ಶ್ರದ್ಧೆ ಮತ್ತು ಭಕ್ತಿಯಿಂದ ಆಚರಿಸಿದರು.

ಚರ್ಚ್‌ಗಳಲ್ಲಿ ಶನಿವಾರ ರಾತ್ರಿ ಮತ್ತು ರವಿವಾರ ಬೆಳಗ್ಗೆ ಈಸ್ಟರ್‌ ಹಬ್ಬದ ಬಲಿಪೂಜೆಗಳು ನಡೆದವು. ಮಂಗಳೂರು ಬಿಷಪ್‌ ರೆ|ಫಾ| ಡಾ| ಪೀಟರ್‌ ಪಾವ್ಲ್ ಸಲ್ದಾನ್ಹಾ ಅವರು ಬಂಟ್ವಾಳ ತಾಲೂಕಿನ ಶಂಭೂರು ಸೇಕ್ರೆಡ್‌ ಹಾರ್ಟ್‌ ಚರ್ಚ್‌ನಲ್ಲಿ ರವಿವಾರ ಈಸ್ಟರ್‌ ಹಬ್ಬದ ಸಂಭ್ರಮದ ಬಲಿ ಪೂಜೆಯನ್ನು ನಡೆಸಿದರು. ಶಂಭೂರು ಚರ್ಚ್‌ನ ಧರ್ಮಗುರು ಫಾ| ಸಂತೋಷ್‌ ಡಿ’ಸೋಜಾ ಜತೆಗಿದ್ದರು. ಚರ್ಚ್‌ ಉಪಾಧ್ಯಕ್ಷ ಇನಾಸ್‌ ವೇಗಸ್‌, ಕಾರ್ಯದರ್ಶಿ ವಿನಿತಾ ಕ್ರಾಸ್ತಾ ಉಪಸ್ಥಿತರಿದ್ದರು.

ಉಡುಪಿ ಬಿಷಪ್‌ ರೆ| ಫಾ|ಡಾ| ಜೆರಾಲ್ಡ್‌ ಐಸಾಕ್‌ ಲೋಬೋ ನೇತೃತ್ವದಲ್ಲಿ ಕಲ್ಯಾಣಪುರ ಮಿಲಾಗ್ರಿಸ್‌ ಕೆಥೆಡ್ರಲ್‌ ನಲ್ಲಿ ಶನಿವಾರ ರಾತ್ರಿ ವಿಶೇಷ ಪೂಜೆ ನಡೆಯಿತು.

ಆಯಾ ಚರ್ಚ್‌ಗಳಲ್ಲಿ ಸ್ಥಳೀಯ ಧರ್ಮಗುರುಗಳ ಮುಖಂಡತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಜರಗಿದವು.

ಹೊಸ ಅಗ್ನಿಯ ಆಶೀರ್ವಚನದೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಹೊಸ ಅಗ್ನಿಯಿಂದ ಈಸ್ಟರ್‌ ಮೊಂಬತ್ತಿಯನ್ನು ಧರ್ಮಾಧ್ಯಕ್ಷರು, ಗುರುಗಳು ಬೆಳಗಿಸಿದ ಬಳಿಕ ಭಾಗವಹಿಸಿದ್ದ ಸಮಸ್ತ ಕ್ರೈಸ್ತರು ಆ ಅಗ್ನಿಯ ಮೂಲಕ ಮೇಣದ ಬತ್ತಿಗಳನ್ನು ಉರಿಸಿ ಪ್ರಾರ್ಥನೆ ಸಲ್ಲಿಸಿದರು. ಬೈಬಲಿನ ಹಳೆಯ ಮತ್ತು ಹೊಸ ಒಡಂಬಡಿಕೆಯ ಆಯ್ದ ಭಾಗಗಳ ವಾಚನದ ಬಳಿಕ ಬಿಷಪರು, ಧರ್ಮಗುರುಗಳು ಪ್ರವಚನ ಮತ್ತು ಸಂದೇಶ ನೀಡಿದರು.

ಪವಿತ್ರ ಜಲದ ಆಶೀರ್ವಚನ ಹಾಗೂ ಕ್ರೈಸ್ತ ವಿಶ್ವಾಸದ ಸತ್ಯದ ಮರು ದೃಢೀಕರಣ ಈ ಸಂದರ್ಭದಲ್ಲಿ ನಡೆಯಿತು. ಕ್ರೈಸ್ತ ಸಂತರನ್ನು ಸ್ಮರಿಸಿ ಅವರ ಶುಭಾಶೀರ್ವಾದಗಳನ್ನು ಕೋರಲಾಯಿತು.

ಸಂಭ್ರಮದ ಬಲಿ ಪೂಜೆಯ ಬಳಿಕ ಭಾಗವಹಿಸಿದ ಕ್ರೆಸ್ತ ಬಾಂಧವರು ಈಸ್ಟರ್‌ ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು. ರವಿವಾರ ಕ್ರೈಸ್ತ ಬಾಂಧವರು ತಂತಮ್ಮ ಮನೆಗಳಲ್ಲಿ ಈಸ್ಟರ್‌ ಹಬ್ಬದ ಊಟವನ್ನು ಸವಿದರು.

ಈಸ್ಟರ್‌ ಹಬ್ಬ ಸಂಭ್ರಮದಿಂದ ಆಚರಣೆ
ಕಾಸರಗೋಡು: ಜಿಲ್ಲೆಯಲ್ಲಿ ಈಸ್ಟರ್‌ ಹಬ್ಬವನ್ನು ಕ್ರೈಸ್ತ ಬಾಂಧವರು ಸಂಭ್ರಮದಿಂದ ಆಚರಿಸಿದರು. ಜಿಲ್ಲೆಯ ಕ್ರೈಸ್ತ ದೇವಾಲಯಗಳಲ್ಲಿ ಶನಿವಾರ ರಾತ್ರಿ ಮತ್ತು ರವಿವಾರ ಬೆಳಗ್ಗೆ ಬಲಿ ಪೂಜೆ ನೆರವೇರಿತು. ಕಯ್ನಾರು ಕ್ರಿಸ್ತ ರಾಜ ದೇವಾಲಯದಲ್ಲಿ ನಡೆದ ಬಲಿ ಪೂಜೆಯಲ್ಲಿ ಪ್ರಧಾನ ಧರ್ಮಗುರುಗಳಾಗಿ ತಲಪಾಡಿ ಫ್ರೆಂಡ್‌ಶಿಫ್‌ ಹೌಸ್‌ನ ನಿರ್ದೇಶಕ ಫಾ| ಅರುಣ್‌ ಲೋಬೊ ವಿಧಿ ವಿಧಾನ ನೆರವೇರಿಸಿದರು. ಕಯ್ನಾರು ಕ್ರಿಸ್ತರಾಜ ದೇವಾಲಯದ ಧರ್ಮಗುರು ಹ್ಯಾರಿ ಡಿ’ಸೋಜಾ ಉಪಸ್ಥಿತರಿದ್ದರು.

ಕ್ರೈಸ್ತ ಸಂತರನ್ನು ಸ್ಮರಿಸಿ ಅವರ ಶುಭಾಶೀರ್ವಾದ ಕೋರಲಾಯಿತು. ಸಂಭ್ರಮದ ಬಲಿ ಪೂಜೆ ಬಳಿಕ ಭಾಗವಹಿಸಿದ ಕ್ರೈಸ್ತ ಬಾಂಧವರು ಈಸ್ಟರ್‌ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.

ಕ್ರೈಸ್ತ ಸಭೆಯು ವಿಭೂತಿ ಬುಧವಾರದಿಂದ ಮೊದಲ್ಗೊಂಡು ಈಸ್ಟರ್‌ ಹಬ್ಬದ ವರೆಗಿನ 40 ದಿನಗಳ ತನಕ ವ್ರತಾಚರಣೆಗೆ ಕರೆ ನೀಡುತ್ತದೆ. ಈ ಅವಧಿಯ ಕೊನೆಯ 7 ದಿನಗಳನ್ನು ಪವಿತ್ರ ಸಪ್ತಾಹವನ್ನಾಗಿ ಆಚರಿಸಲಾಗುತ್ತದೆ. ಗರಿಗಳ ರವಿವಾರದೊಂದಿಗೆ ಪ್ರಾರಂಭಗೊಳ್ಳುವ ಈ ಸಪ್ತಾಹ ಈಸ್ಟರ್‌ ರವಿವಾರ ಮುಕ್ತಾಯಗೊಳ್ಳುತ್ತದೆ. ಈ ಸಪ್ತಾಹದ ಗುರುವಾರ ಯೇಸುಕ್ರಿಸ್ತರ ಕೊನೆಯ ಭೋಜನದ ದಿನ, ಶುಕ್ರವಾರ ಯೇಸು ಕ್ರಿಸ್ತರು ಶಿಲುಬೆಯಲ್ಲಿ ಮರಣಿಸಿದ ದಿನ, ಶನಿವಾರ ಈಸ್ಟರ್‌ ಹಬ್ಬದ ಜಾಗರಣೆ ಹಾಗೂ ರವಿವಾರ ಈಸ್ಟರ್‌ ಅಥವಾ ಯೇಸು ಕ್ರಿಸ್ತರು ಮರಣವನ್ನು ಜಯಿಸಿ ಪುನರುತ್ಥಾನಗೊಂಡ ಹಬ್ಬವನ್ನು ಆಚರಿಸಲಾಗುತ್ತದೆ.

ಟಾಪ್ ನ್ಯೂಸ್

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.