Yettinahole: ನೀರೆತ್ತುವ ಕಾರ್ಯಕ್ಕೆ ಡಿಕೆಶಿ ಚಾಲನೆ
Team Udayavani, Aug 29, 2024, 12:18 AM IST
ಹಾಸನ/ಸಕಲೇಶಪುರ: ಎತ್ತಿನಹೊಳೆಯಲ್ಲಿ ನೀರು ಕಡಿಮೆಯಾಗುವ ಮೊದಲೇ 2 ವಾರದೊಳಗೆ ಮುಖ್ಯಮಂತ್ರಿಗಳಿಂದ ಯೋಜನೆ ಉದ್ಘಾಟಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.
ಸಕಲೇಶಪುರ ತಾಲೂಕು ಕುಂಬರಡಿ ಬಳಿ ಎತ್ತಿನಹೊಳೆಯ ವಿಯರ್ -1 (1ನೇ ಚೆಕ್ ಡ್ಯಾಂ)ರಿಂದ ಪ್ರಾಯೋಗಿಕವಾಗಿ ನೀರೆತ್ತುವ ಕಾರ್ಯಕ್ಕೆ ಬುಧವಾರ ಚಾಲನೆ ನೀಡಿದ ಬಳಿಕ ಹರಿಯುತ್ತಿದ್ದ ನೀರಿಗೆ ಬಾಗಿನ ಅರ್ಪಿಸಿ ಅವರು ಮಾತನಾಡಿದರು.
ಎತ್ತಿನಹೊಳೆ ನಮ್ಮ ಸರಕಾರದ ಮಹತ್ವಾಕಾಂಕ್ಷೆ ಯೋಜನೆ. ಒಟ್ಟು 8 ವಿಯರ್ಗಳ ಪೈಕಿ ಈಗಾಗಲೇ 5 ವಿಯರ್ಗಳಿಂದ ಒಟ್ಟು 1500 ಕ್ಯೂಸೆಕ್ ನೀರೆತ್ತಲಾಗುತ್ತಿದೆ. ಈಗಾಗಲೇ ಸಿಎಂ ಜತೆ ಮಾತನಾಡಿದ್ದೇನೆ. ಶುಭ ದಿನ, ಮುಹೂರ್ತ ನೋಡಿ ದಿನಾಂಕ ನಿಗದಿಪಡಿಸಿ ಮುಖ್ಯಮಂತ್ರಿ, ಸಚಿವರನ್ನು ಆಹ್ವಾನಿಸಿ ಯೋಜನೆ ಉದ್ಘಾಟಿಸಲಾಗುವುದು ಎಂದರು.
ಅವೈಜ್ಞಾನಿಕ ಕಾಮಗಾರಿಯಿಂದ ಭೂ ಕುಸಿತವಾಗುತ್ತಿದೆ. ಒಂದು ರೂ. ಪರಿಹಾರ ನೀಡಿಲ್ಲ ಎಂದು ಸ್ಥಳೀಯ ಶಾಸಕ ಸಿಮೆಂಟ್ ಮಂಜು ಆರೋಪದ ಬಗ್ಗೆ, ಎಲ್ಲೆಲ್ಲಿ ಹಾನಿ ಆಗಿದೆಯೋ ಅದನ್ನು ಪರಿಶೀಲಿಸಿ, ದುರಸ್ತಿಪಡಿಸಲಾಗುವುದು ಎಂದು ಪ್ರತಿಕ್ರಿಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.