Indo-Canada: ಗಡುವಿಗೆ ಮೊದಲೇ ಅಧಿಕಾರಿಗಳ ತೆರವು- ಕೆನಡಾ ಸರ್ಕಾರದ ತುರ್ತು ನಿರ್ಧಾರ

ಸಿಂಗಾಪುರ, ಕೌಲಾಲಂಪುರಕ್ಕೆ ಸ್ಥಳಾಂತರ- ಸರ್ರೆಯಲ್ಲಿ ಮತ್ತೆ ಪೋಸ್ಟರ್‌ ಹಾವಳಿ

Team Udayavani, Oct 6, 2023, 9:56 PM IST

india canada

ಟೊರೊಂಟೋ/ನವದೆಹಲಿ: ಕೇಂದ್ರ ಸರ್ಕಾರದ ಪಟ್ಟಿಗೆ ಕೆನಡಾ ಬಾಗಿದೆ. ನವದೆಹಲಿಯಲ್ಲಿ ಇರುವ ಹೈಕಮಿಷನ್‌ನಿಂದ ಹೆಚ್ಚುವರಿಯಾಗಿ ಇರುವ ರಾಜತಾಂತ್ರಿಕ ಅಧಿಕಾರಿಗಳನ್ನು ತಗ್ಗಿಸಲು ಕೆನಡಾ ಮುಂದಾಗಿದೆ. ಉಗ್ರ ಹರ್‌ದೀಪ್‌ ಸಿಂಗ್‌ ನಿಜ್ಜರ್‌ ಸಾವಿನ ವಿವಾದದ ಬೆನ್ನಲ್ಲಿಯೇ ಉಂಟಾಗಿರುವ ರಾಜತಾಂತ್ರಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಈ ಕ್ರಮಕ್ಕೆ ಜಸ್ಟಿನ್‌ ಟ್ರೂಡ್ನೂ ಸರ್ಕಾರ ಕ್ರಮಕ್ಕೆ ಮುಂದಾಗಿದೆ. ಹೆಚ್ಚುವರಿಯಾಗಿ ಇರುವ ಅಧಿಕಾರಿಗಳನ್ನು ಕೌಲಾಂಪುರ ಅಥವಾ ಸಿಂಗಾಪುರಕ್ಕೆ ಸ್ಥಳಾಂತರಗೊಳಿಸಲು ಚಿಂತನೆ ನಡೆಸಿದೆ. ಕೇಂದ್ರ ಸರ್ಕಾರ ವಿಧಿಸಿರುವ ಅ.10ರ ಗಡುವಿನ ಒಳಗಾಗಿ ಈ ಕ್ರಮ ಕೈಗೊಂಡಿರುವುದು ಮಹತ್ವದ ಬೆಳವಣಿಗೆಯೇ ಆಗಿದೆ.

ಹೀಗಾಗಿ, ನವದೆಹಲಿಯಲ್ಲಿರುವ ಕೆನಡಾ ಹೈಕಮಿಷನ್‌ನಲ್ಲಿ 41 ರಾಜತಾಂತ್ರಿಕ ಅಧಿಕಾರಿ, ಸಿಬ್ಬಂದಿಗಳನ್ನು ಹೊರತುಪಡಿಸಿ ಉಳಿದವರನ್ನು ವಾಪಸ್‌ ಕರೆಯಿಸಿಕೊಳ್ಳಬೇಕು ಎಂದು ಕೇಂದ್ರ ಸರ್ಕಾರ ಗಡುವು ನೀಡಿತ್ತು.

ಉಗ್ರನ ಸಾವಿಗೆ ಭಾರತ ಸರ್ಕಾರವೇ ಕಾರಣವೆಂದು ಕೆನಡಾ ಪ್ರಧಾನಿ ಆರೋಪಿಸಿದ ಬಳಿಕ 2 ದೇಶಗಳ ನಡುವೆ ರಾಜತಾಂತ್ರಿಕ ಸಮರ ಶುರುವಾಗಿತ್ತು. ಕೆನಡಾದ ಆಂತರಿಕ ವ್ಯವಹಾರಗಳಲ್ಲಿ ಭಾರತ ಹಸ್ತಕ್ಷೇಪ ನಡೆಸುತ್ತಿದೆ ಎಂದು ಟ್ರೂಡ್ನೂ ಹಲವು ಸಂದರ್ಭಗಳಲ್ಲಿ ಆರೋಪಿಸಿದ್ದರು. ಅವೆಲ್ಲವನ್ನೂ ಕೇಂದ್ರ ಸರ್ಕಾರ ಸಗಟಾಗಿ ತಿರಸ್ಕರಿಸಿದೆ.

ಮತ್ತೆ ಕೊಲೆ ಬೆದರಿಕೆ ಪೋಸ್ಟರ್‌
ಈ ಎಲ್ಲಾ ರಾದ್ಧಾಂತಗಳ ನಡುವೆ “ಕೆನಡಾದಲ್ಲಿರುವ ರಾಜತಾಂತ್ರಿಕರನ್ನು ಹತ್ಯೆ ಮಾಡಿ’ ಎಂಬ ಪೋಸ್ಟರ್‌ಗಳು ಆ ದೇಶದ ಬ್ರಿಟಿಷ್‌ ಕೊಲಂಬಿಯಾ ಪ್ರಾಂತ್ಯದ ಸರ್ರೆ ನಗರದಲ್ಲಿ ಕಂಡುಬಂದಿದೆ. ಖಲಿಸ್ತಾನಿ ಉಗ್ರರು ಅದಕ್ಕೆ ಕಾರಣರಾಗಿದ್ದಾರೆ ಎಂದು ಆರೋಪಿಸಲಾಗಿದೆ. ಸರ್ರೆಯ ಗುರುದ್ವಾರದಲ್ಲಿ ಈ ಪೋಸ್ಟರ್‌ಗಳನ್ನು ಅಂಟಿಸಲಾಗಿದೆ. ಈ ಪ್ರಾರ್ಥನಾ ಕೇಂದ್ರ ಖಲಿಸ್ತಾನ ಟೈಗರ್‌ ಫೋರ್ಸ್‌ ಸಂಘಟನೆಯ ವಶದಲ್ಲಿ ಇತ್ತು. ಆದರೆ, ಅದರ ವಿರುದ್ಧ ಜಸ್ಟಿನ್‌ ಟ್ರೂಡ್ನೂ ಸರ್ಕಾರ ಯಾವುದೇ ಕ್ರಮಗಳನ್ನು ಕೈಗೊಳ್ಳದೆ ಮೌನವಾಗಿಯೇ ಉಳಿದಿದೆ.

ಗ್ಯಾಂಗ್‌ಸ್ಟರ್‌ ಬಿಡುಗಡೆಯಾಗದಿದ್ದರೆ ಪ್ರಧಾನಿ ಮೋದಿ ಹತ್ಯೆ
ಸದ್ಯ ಜೈಲಿನಲ್ಲಿರುವ ಗ್ಯಾಂಗ್‌ಸ್ಟರ್‌ ಲಾರೆನ್ಸ್‌ ಬಿಷ್ಣೋಯಿಯನ್ನು ಬಿಡುಗಡೆ ಮಾಡಬೇಕು. ಇಲ್ಲದಿದ್ದರೆ ಅಹ್ಮದಾಬಾದ್‌ನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂ ಅನ್ನು ಸ್ಫೋಟಗೊಳಿಸುತ್ತೇವೆ ಎಂಬ ಬೆದರಿಕೆ ಹಾಕಲಾಗಿದೆ. ಜತೆಗೆ ಪ್ರಧಾನಿಯವರನ್ನು ಬಾಂಬ್‌ ದಾಳಿಯಲ್ಲಿ ಕೊಲ್ಲಲಾಗುತ್ತದೆ. 500 ಕೋಟಿ ರೂ. ಮೊತ್ತ ಪಾವತಿ ಮಾಡಬೇಕು ಎಂದು ಮುಂಬೈ ಪೊಲೀಸರಿಗೆ ಇ-ಮೈಲ್‌ ಮೂಲಕ ಬೆದರಿಕೆ ಹಾಕಲಾಗಿದೆ. ಈ ಬಗ್ಗೆ ಎನ್‌ಐಎ ಮುಂಬೈ ಪೊಲೀಸರಿಗೆ ಸುಳಿವು ನೀಡಿತ್ತು. ಈ ಹಿನ್ನೆಲೆಯಲ್ಲಿ ಗುಜರಾತ್‌ ಪೊಲೀಸರಿಗೆ ಕೂಡ ಮುಂಬೈ ಪೊಲೀಸರು ಮಾಹಿತಿ ರವಾನಿಸಿದ್ದಾರೆ.

 

ಟಾಪ್ ನ್ಯೂಸ್

3

Kollywood: ಮಾಜಿ ಆಳಿಯನ ಜತೆ ರಜಿನಿ ನಟನೆ? ಒಂದೇ ಚಿತ್ರದಲ್ಲಿ ಧನುಷ್ – ರಜಿನಿಕಾಂತ್?

3-ptr

Puttur: ವಿಹಿಂಪ ಜಿಲ್ಲಾ ಕಾರ್ಯಾಲಯದ ಭೂಮಿ‌‌ ಪೂಜೆ; ಅರುಣ್ ಪುತ್ತಿಲ ಆಗಮನಕ್ಕೆ ವಿರೋಧ

2

Actor Yash: ‘ರಾಮಾಯಣʼಕ್ಕೆ ನಾನೇ ʼರಾವಣʼ.. ಬಿಗ್‌ ಬಜೆಟ್‌ ಚಿತ್ರದ ಬಗ್ಗೆ ಯಶ್‌ ಮಾತು

1-a-ewww

C. P. Yogeshwara; ಎಲ್ಲ ಮರೆತು ಬೇಷರತ್ತಾಗಿ ‘ಕೈ’ ಹಿಡಿದಿದ್ದಾರೆ: ಡಿ.ಕೆ.ಶಿವಕುಮಾರ್

Americaದ ಮೇಲೆ ರಷ್ಯಾ,ಇರಾನ್‌, ಚೀನಾ ಪ್ರತೀಕಾರ?ಅಮೆರಿಕದ ನಿದ್ದೆಗೆಡಿಸಿದ ಗುಪ್ತಚರ ಮಾಹಿತಿ!

Americaದ ಮೇಲೆ ರಷ್ಯಾ,ಇರಾನ್‌, ಚೀನಾ ಪ್ರತೀಕಾರ?ಅಮೆರಿಕದ ನಿದ್ದೆಗೆಡಿಸಿದ ಗುಪ್ತಚರ ಮಾಹಿತಿ!

1-aaaaa

Jharkhand polls; ಜೆಎಂಎಂ 35 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

1—a-deee

Maharashtra polls; ಗುವಾಹಟಿಯ ಕಾಮಾಖ್ಯ ದೇವಿ ದರ್ಶನ ಪಡೆದ ಸಿಎಂ ಶಿಂಧೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaaa

Jharkhand polls; ಜೆಎಂಎಂ 35 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

1-panaji

Panaji: ಗೋವಾದಲ್ಲಿ ತುಳುಕೂಟ ಸ್ಥಾಪನೆಯಾಗಿರುವುದು ಹೆಮ್ಮೆಯ ಸಂಗತಿ: ವಿ. ಸುನೀಲ್ ಕುಮಾರ್

1—a-deee

Maharashtra polls; ಗುವಾಹಟಿಯ ಕಾಮಾಖ್ಯ ದೇವಿ ದರ್ಶನ ಪಡೆದ ಸಿಎಂ ಶಿಂಧೆ

Shindhe

Eknath Shinde; ಶಿವಸೇನೆ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಬಹುತೇಕರಿಗೆ ಮಣೆ

Efforts to restore trust with China: Army chief Dwivedi

Army chief: ಚೀನ ಜತೆ ವಿಶ್ವಾಸ ಪುನಸ್ಥಾಪನೆಗೆ ಪ್ರಯತ್ನ: ಸೇನಾ ಮುಖ್ಯಸ್ಥ ದ್ವಿವೇದಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

3

Kollywood: ಮಾಜಿ ಆಳಿಯನ ಜತೆ ರಜಿನಿ ನಟನೆ? ಒಂದೇ ಚಿತ್ರದಲ್ಲಿ ಧನುಷ್ – ರಜಿನಿಕಾಂತ್?

3-ptr

Puttur: ವಿಹಿಂಪ ಜಿಲ್ಲಾ ಕಾರ್ಯಾಲಯದ ಭೂಮಿ‌‌ ಪೂಜೆ; ಅರುಣ್ ಪುತ್ತಿಲ ಆಗಮನಕ್ಕೆ ವಿರೋಧ

2

Actor Yash: ‘ರಾಮಾಯಣʼಕ್ಕೆ ನಾನೇ ʼರಾವಣʼ.. ಬಿಗ್‌ ಬಜೆಟ್‌ ಚಿತ್ರದ ಬಗ್ಗೆ ಯಶ್‌ ಮಾತು

1-a-ewww

C. P. Yogeshwara; ಎಲ್ಲ ಮರೆತು ಬೇಷರತ್ತಾಗಿ ‘ಕೈ’ ಹಿಡಿದಿದ್ದಾರೆ: ಡಿ.ಕೆ.ಶಿವಕುಮಾರ್

Americaದ ಮೇಲೆ ರಷ್ಯಾ,ಇರಾನ್‌, ಚೀನಾ ಪ್ರತೀಕಾರ?ಅಮೆರಿಕದ ನಿದ್ದೆಗೆಡಿಸಿದ ಗುಪ್ತಚರ ಮಾಹಿತಿ!

Americaದ ಮೇಲೆ ರಷ್ಯಾ,ಇರಾನ್‌, ಚೀನಾ ಪ್ರತೀಕಾರ?ಅಮೆರಿಕದ ನಿದ್ದೆಗೆಡಿಸಿದ ಗುಪ್ತಚರ ಮಾಹಿತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.