ಮಾಜಿ ಸಚಿವ ಕಾಗೋಡು ತಿಮ್ಮಪ್ಪರಿಗೆ ಕೋವಿಡ್ : ಬೇರೆಯವರಿಂದ ಮಾಹಿತಿ!

ಮಾಜಿ ಆರೋಗ್ಯ ಸಚಿವರಿಗೆ ಈ ಸ್ಥಿತಿ ಆದರೆ ಜನಸಾಮಾನ್ಯರ ಪಾಡೇನು ?

Team Udayavani, Jan 20, 2022, 7:23 PM IST

1-swwqrwq

ಸಾಗರ: ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರಿಗೆ ಕೋವಿಡ್ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಅವರ ಸಂಪರ್ಕದಲ್ಲಿದ್ದವರು ಕೋವಿಡ್ ಪರೀಕ್ಷೆಗೆ ಒಳಪಡುವಂತೆ ಕಾಗೋಡು ಪುತ್ರಿ ಹಾಗೂ ಕೆಪಿಸಿಸಿ ಕಾರ್ಯದರ್ಶಿ ಡಾ. ರಾಜನಂದಿನಿ ಮನವಿ ಮಾಡಿದ್ದಾರೆ.

ಗುರುವಾರ ತುರ್ತಾಗಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಗೋಡು ತಿಮ್ಮಪ್ಪ ಅವರಿಗೆ ಕೋವಿಡ್ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಅವರನ್ನು ನೋಡಲು, ಆರೋಗ್ಯ ವಿಚಾರಿಸಲು ಕಾರ್ಯಕರ್ತರು, ಅಭಿಮಾನಿಗಳು ಮನೆಗೆ ಬರಬಾರದು ಎಂದು ಅವರು ತಿಳಿಸಿದರು.

ಈಚೆಗೆ ಕಾಗೋಡು ತಿಮ್ಮಪ್ಪ ಅವರು ಮೀಸಲು ಅರಣ್ಯಕ್ಕೆ ಸಂಬಂಧಪಟ್ಟಂತೆ ಉಪವಿಭಾಗಾಧಿಕಾರಿಗಳ ಕಚೇರಿ, ಅರಣ್ಯ ಇಲಾಖೆ ಎದುರು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಜೊತೆಗೆ ಚಿಕ್ಕನೆಲ್ಲೂರು, ಚಕ್ಕೋಡಿ ಗ್ರಾಮದಲ್ಲಿ ನಡೆದ ಮೀಸಲು ಅರಣ್ಯ ಸಮಾಲೋಚನಾ ಸಭೆಯಲ್ಲಿ ಸಹ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಅನೇಕ ಜನರು ಅವರ ಸಂಪರ್ಕದಲ್ಲಿದ್ದರು. ಸಂಪರ್ಕದಲ್ಲಿದ್ದವರಿಗೆ ಕೋವಿಡ್ ಸಂಬಂಧಿ ಯಾವುದಾದರೂ ಲಕ್ಷಣ ಇದ್ದಲ್ಲಿ ತಕ್ಷಣ ವೈದ್ಯರ ಬಳಿ ತಪಾಸಣೆ ಮಾಡಿಸಿಕೊಳ್ಳುವಂತೆ ಹೇಳಿದರು.

ಬೇರೆಯವರಿಂದ ಮಾಹಿತಿ

ಕಾಗೋಡು ಮಂಗಳವಾರ ಉಪವಿಭಾಗೀಯ ಆಸ್ಪತ್ರೆಯಲ್ಲಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದರು. ಪರೀಕ್ಷಾ ವರದಿಯು ಗುರುವಾರ ಬಂದಿದೆ. ಆದರೆ ಕಾಗೋಡು ತಿಮ್ಮಪ್ಪ ಅವರಿಗೆ ಪಾಸಿಟಿವ್ ಬಂದಿರುವುದನ್ನು ಆರೋಗ್ಯ ಇಲಾಖೆ ತಿಳಿಸಿಲ್ಲ. ಎಪಿಎಂಸಿ ಸದಸ್ಯ ಕೆ.ಹೊಳೆಯಪ್ಪ ಅವರು ಆಸ್ಪತ್ರೆಗೆ ಹೋದಾಗ ವಿಷಯ ಗೊತ್ತಾಗಿ ನಮಗೆ ತಿಳಿಸಿದ್ದಾರೆ. ಮಾಜಿ ಆರೋಗ್ಯ ಸಚಿವರಿಗೆ ಈ ಸ್ಥಿತಿ ಆದರೆ ಜನಸಾಮಾನ್ಯರ ಪಾಡೇನು ಎಂದು ಪ್ರಶ್ನಿಸಿದ ಅವರು, ಪಾಸಿಟಿವ್ ಬಂದಾಗ ಆರೋಗ್ಯ ಇಲಾಖೆ ಸಂಬಂಧಪಟ್ಟವರಿಗೆ ತಿಳಿಸಿ, ಎಚ್ಚರಿಸುವ ಕೆಲಸ ಮಾಡಬೇಕು ಎಂದರು.

ಹಿಂದಿನ ಎರಡೂ ಅಲೆಯಲ್ಲೂ ಕಾಗೋಡು ತಿಮ್ಮಪ್ಪ ಅವರಿಗೆ ಕೋವಿಡ್ ಲಕ್ಷಣ ಕಂಡು ಬಂದಿತ್ತು. ಆದರೆ ಗಂಭೀರ ಸ್ವರೂಪದ್ದಾಗಿರಲಿಲ್ಲ. ತಕ್ಷಣ ಅವರಿಗೆ ಚಿಕಿತ್ಸೆ ಕೊಡಿಸಲಾಗಿತ್ತು. ಈ ಸಾರಿ ಸಹ ಅಂತಹ ಗಂಭೀರವಾದ ಸಮಸ್ಯೆಯಿಲ್ಲ. ಮಾಮೂಲಿ ಜ್ವರ, ಕಫ ಇದ್ದು, ಮನೆಯಲ್ಲೆ ಕ್ವಾರಂಟೈನ್ ಆಗಿದ್ದು, ಶೀಘ್ರ ಗುಣಮುಖರಾಗುತ್ತಾರೆ ಎಂದು ಹೇಳಿದರು.

ಸುದ್ದಿ ಗೋಷ್ಠಿಯಲ್ಲಿ ಕಾಂಗ್ರೆಸ್ ಪ್ರಮುಖರಾದ ಮಧುಮಾಲತಿ, ಎನ್.ಲಲಿತಮ್ಮ, ವೆಂಕಟೇಶ್ ಮೆಳವರಿಗೆ, ಸಚಿನ್ ಹಾಜರಿದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-Thirthahalli

Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!

9-shivamogga

Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು

6-thirthahalli

Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ

ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.