ಸಿದ್ದರಾಮಯ್ಯ-ಈಶ್ವರಪ್ಪ ವಾಕ್ಸಮರ ತಾರಕಕ್ಕೆ


Team Udayavani, Jun 30, 2019, 3:09 AM IST

siddaramaiah00

ಬಾಗಲಕೋಟೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬಿಜೆಪಿ ಮುಖಂಡ ಕೆ.ಎಸ್‌.ಈಶ್ವರಪ್ಪ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಮಾತಿನ ಅಬ್ಬರದಲ್ಲಿ “ಶೂ, ಮೊಟ್ಟೆ’ ಎಂಟ್ರಿಯಾಗಿದ್ದು, ಪರಸ್ಪರರ ಮೇಲಿನ ಕೆಸರೆರಚಾಟ ಜೋರಾಗಿದೆ. ಶುಕ್ರವಾರ ಬಾಗಲಕೋಟೆಯಲ್ಲಿ ಮಾತನಾಡಿದ್ದ ಸಿದ್ದರಾಮಯ್ಯ, “ಉಚಿತ ಮೊಟ್ಟೆ, ಶಾಲಾ ಮಕ್ಕಳಿಗೆ ಶೂ ಕೊಟ್ಟರೂ ನಮಗೆ ಮತ ಹಾಕಲಿಲ್ಲ’ ಎಂದಿದ್ದರು.

ಇದಕ್ಕೆ ಶನಿವಾರ ಪ್ರತಿಕ್ರಿಯಿಸಿದ ಈಶ್ವರಪ್ಪ, “ನಾನು ಶೂ ಕೊಟ್ಟೆ, ಮೊಟ್ಟೆ ಕೊಟ್ಟೆ’ ಎನ್ನುವ ಸಿದ್ದರಾಮಯ್ಯ, ಅದನ್ನು ಸ್ವಂತ ಹಣದಲ್ಲೇನೂ ಕೊಟ್ಟಿಲ್ಲ. ಜನರ ತೆರಿಗೆ ಹಣದಲ್ಲಿ ನೀಡಿದ್ದಾರೆ. ಅದೇ ಮೊಟ್ಟೆ ಹಾಗೂ ಶೂಗಳಿಂದ ಲೋಕಸಭೆ ಚುನಾವಣೆಯಲ್ಲಿ ಜನ ಅವರನ್ನು ಹೊಡೆದಿದ್ದಾರೆ ಎಂದು ವ್ಯಂಗ್ಯವಾಡಿದರು. ಈ ಹೇಳಿಕೆಯಿಂದ ಕೆರಳಿದ ಸಿದ್ದರಾಮಯ್ಯ, ಬಾಗಲಕೋಟೆಯಲ್ಲಿ ನಡೆದ ಇಂದಿರಾ ಕ್ಯಾಂಟೀನ್‌ ಉದ್ಘಾಟನೆ ವೇಳೆ ಮಾತನಾಡಿ, “ಈಶ್ವರಪ್ಪ ಮನುಷ್ಯನೇ ಅಲ್ಲ. ಅವನೇ ಕೈಯಲ್ಲಿ ಶೂ ಹಿಡಿದುಕೊಂಡಿದ್ದಾನೋ ಗೊತ್ತಿಲ್ಲ.

ಅವನ ನಾಲಿಗೆಯಲ್ಲಿ ಸಂಸ್ಕೃತಿ ಇಲ್ಲ. ಅವನು ನಾಗರಿಕನೇ ಅಲ್ಲ. ಬಿಜೆಪಿ ಅವರಿಗೆ ಸಂಸ್ಕೃತಿ ಕಲಿಸಿದೆ ಅನ್ನುತ್ತಾರೆ. ಆದರೆ, ಈಶ್ವರಪ್ಪಗೆ ಸಂಸ್ಕೃತಿಯೇ ಇಲ್ಲ. ನಾನು ಮಕ್ಕಳಿಗೆ ಶೂ, ಮೊಟ್ಟೆ, ಬಟ್ಟೆ, ಅನ್ನಭಾಗ್ಯ ಎಲ್ಲವನ್ನೂ ತೆರಿಗೆ ಹಣದಲ್ಲೇ ಕೊಟ್ಟಿದ್ದೇನೆ. ಮೋದಿ ಕೂಡ ಕರ್ನಾಟಕದ ತೆರಿಗೆ ಹಣದಲ್ಲೇ ಅಕ್ಕಿ ಕೊಟ್ಟಿದ್ದಾರೆ. ನಾನು ಸಿಎಂ ಆಗಿದ್ದಾಯ್ತು. ಈಶ್ವರಪ್ಪಗೆ ಸಿಎಂ ಆಗುವ ಯೋಗ್ಯತೆ ಇಲ್ಲ. ಯಡಿಯೂರಪ್ಪ ಕೂಡ ಸಿಎಂ ಆಗಲ್ಲ’ ಎಂದು ಏಕವಚನದಲ್ಲಿ ತಿರುಗೇಟು ನೀಡಿದರು.

ಸೋತರೂ ಸಿದ್ದರಾಮಯ್ಯಗೆ ಬುದ್ಧಿ ಬಂದಿಲ್ಲ – ಈಶ್ವರಪ್ಪ: ಶನಿವಾರ ಬಾಗಲಕೋಟೆಗೆ ಆಗಮಿಸಿದ ಈಶ್ವರಪ್ಪ ಸುದ್ದಿಗಾರರ ಜತೆ ಮಾತನಾಡಿ, ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದರು. ಕುಮಾರಸ್ವಾಮಿ, ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಭೇಟಿಯಾಗುವುದೇ ಅಪರೂಪ ಎಂದು ಹೇಳಿದ್ದಾರೆ. ಇವರಿಬ್ಬರೂ ಮೊದಲು ಒಂದೆಡೆ ಕುಳಿತು ಚರ್ಚೆ ಮಾಡುವುದು ಕಲಿಯಲಿ.

ಸ್ವತಃ ಸಿದ್ದರಾಮಯ್ಯ ಅವರು ಚಾಮುಂಡೇಶ್ವರಿಯಲ್ಲಿ 36 ಸಾವಿರ ಮತಗಳಿಂದ ಸೋತರು. ಪಾಪ, ಬಾದಾಮಿಯ ಜನ ಮುಗ್ಧರು. 1,600 ಮತಗಳಿಂದ ಗೆಲ್ಲಿಸಿದರು. ನಾವೇ ಅಧಿಕಾರಕ್ಕೆ ಬರೋದು ಎಂದು ಪ್ರಧಾನಿ ಮೋದಿ ಹಾಗೂ ಬಿಜೆಪಿಯನ್ನು ಬಾಯಿಗೆ ಬಂದಂತೆ ಬೈಯ್ಯುತ್ತಿದ್ದ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್‌ನವರಿಗೆ ಸೋತರೂ ಜ್ಞಾನ ಬಂದಿಲ್ಲ. ಹೀಗಾಗಿ, ಮತ್ತೆ ಲೋಕಸಭೆ ಚುನಾವಣೆಯಲ್ಲಿ ಒಂದು ಸ್ಥಾನಕ್ಕೆ ಬರುವಂತೆ ಜನ ಮಾಡಿದರು.

ವಿಧಾನಸಭೆ ಚುನಾವಣೆಯಲ್ಲಿ ಸೋತ ಬಳಿಕ ಜ್ಞಾನ ಬಂದಿದ್ದರೆ ಲೋಕಸಭೆ ಚುನಾವಣೆಯಲ್ಲಿ ಜನ ಮತ ಹಾಕುತ್ತಿದ್ದರೇನೋ?. ಆದರೆ, 38 ಸ್ಥಾನ ಬಂದಿರುವ ಜೆಡಿಎಸ್‌ನೊಂದಿಗೆ ಅಪವಿತ್ರ ಮೈತ್ರಿ ಮಾಡಿಕೊಂಡರು. ಇದು ರಾಜ್ಯದ ಜನರಿಗೆ ಇಷ್ಟವಾಗಲಿಲ್ಲ. ದಕ್ಷಿಣ ಭಾರತದಲ್ಲಿ ಬಿಜೆಪಿ ಬೆಳೆಯಲು ಬಿಡಲ್ಲ ಎಂದಿದ್ದ ಕಾಂಗ್ರೆಸ್‌-ಜೆಡಿಎಸ್‌ನವರಿಗೆ ಕೇವಲ ಒಂದೊಂದು ಸ್ಥಾನದಲ್ಲಿ ಜನ ನಿಲ್ಲಿಸಿದ್ದಾರೆ ಎಂದರು.

ಕಾಂಗ್ರೆಸ್‌ಗೆ ಬಿಜೆಪಿಯಿಂದ ಬೇಲಿ: ಮುಂದಿನ ಎಲ್ಲ ಚುನಾವಣೆಯಲ್ಲೂ ಕಾಂಗ್ರೆಸ್‌ಗೆ ಬಿಜೆಪಿಯಿಂದ ಬೇಲಿ ಹಾಕುತ್ತೇವೆ. ದಕ್ಷಿಣ ಭಾರತವನ್ನು ಕಾಂಗ್ರೆಸ್‌ ಮುಕ್ತ ಮಾಡಲು ನಾವು ತಯಾರಿದ್ದೇವೆ. ಕಾಂಗ್ರೆಸ್‌ ಎಲ್ಲೆ ಸ್ಪರ್ಧಿಸಿದರೂ, ಬಿಜೆಪಿಯಿಂದ ಬೇಲಿ ಹಾಕಿ ಸೋಲಿಸುತ್ತೇವೆ. ಸಿದ್ದರಾಮಯ್ಯ ಅವರ ಸೊಕ್ಕಿನ ಮಾತುಗಳಿಗೆ ಜನ ಬಿಜೆಪಿಗೆ ಮತ ಕೊಟ್ಟಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯನ್ನು ಇಡೀ ವಿಶ್ವವೇ ಕೊಂಡಾಡುತ್ತಿರುವಾಗ ಸಿದ್ದರಾಮಯ್ಯ ಬಾಯಿಗೆ ಬಂದಂತೆ ಬೈಯುತ್ತಾರೆ. ಇಂತಹ ಸೊಕ್ಕಿನ ಮಾತುಗಳಿಗೆ ಜನ ಮುಂದೆಯೂ ಉತ್ತರ ಕೊಡುತ್ತಾರೆ ಎಂದರು.

ಸಿದ್ದು ನಿದ್ದೆ ಬಿಟ್ಟು ಬೇರೇನೂ ಮಾಡಲಿಲ್ಲ: ನಮ್ಮ ದೇಶದಲ್ಲಿ ಬ್ರಿಟಿಷ್‌ ಸಂತತಿ ಇನ್ನೂ ಇದೆ. ಸಿದ್ದರಾಮಯ್ಯ ಸಿಎಂ ಆಗಲು ಬ್ರಿಟಿಷರಿಗೆ ಬೆಂಬಲ ಕೊಟ್ಟಿದ್ದ ಸಂತತಿಯವರ ಸೆರಗು ಹಿಡಿದು ಓಡಾಡುತ್ತಿದ್ದಾರೆ. ಸಿದ್ದರಾಮಯ್ಯ ಬಿಜೆಪಿಯನ್ನು ಬ್ರಿಟಿಷ್‌ ಈಸ್ಟ್‌ ಇಂಡಿಯಾ ಕಂಪನಿಗೆ ಹೋಲಿಸಿದ್ದಾರೆ. ಆದರೆ, ಬ್ರಿಟಿಷರಿಗೆ ಬೆಂಬಲ ಕೊಟ್ಟ ಸಂತತಿ ಯಾರದ್ದು ಎಂಬುದು ಜನತೆಗೆ ಗೊತ್ತಿದೆ. ಕೆಲಸ ಮಾಡುವವರಿಗೆ ಮತ ಕೊಡಿ, ನಿದ್ದೆ ಮಾಡುವವರಿಗೆ ಮತ ಕೊಡಬೇಡಿ ಎಂದ ಸಿದ್ದರಾಮಯ್ಯಗೆ ಐದು ವರ್ಷ ನಿದ್ದೆ ಮಾಡಿದ್ದರಿಂದಲೇ ಜನ ಮನೆಗೆ ಕಳುಹಿಸಿದ್ದಾರೆ ಎಂದರು.

ಐದು ವರ್ಷ ಸಿಎಂ ಆಗಿದ್ದ ಸಿದ್ದರಾಮಯ್ಯ ನಿದ್ದೆ ಬಿಟ್ಟು ಬೇರೇನೂ ಮಾಡಲಿಲ್ಲ. ಕೆಲಸ ಮಾಡುವವರಿಗೆ ಮತ ಕೊಡಿ, ನಿದ್ದೆ ಮಾಡುವವರಿಗೆ ಮತ ಕೊಡಬೇಡಿ ಎಂದು ಅವರು ಹೇಳಿರುವುದು ಸತ್ಯವಾಗಿದೆ. ಕಾಂಗ್ರೆಸ್‌ನವರು ನಿದ್ದೆ ಮಾಡುವವರು. ಮೋದಿ ಕೆಲಸ ಮಾಡುವವರು. ಹೀಗಾಗಿಯೇ ಅವರನ್ನು ಜನ ಮನೆಗೆ ಕಳುಹಿಸಿದ್ದಾರೆ ಎಂದರು.

ತೊಡೆ ತಟ್ಟಿ ಚುನಾವಣೆ ಮಾಡ್ತೇವೆ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ರಾಜಕೀಯ ಪಕ್ಷಗಳು ಚುನಾವಣೆಗೆ ಸದಾ ಸಿದ್ಧರಿರಬೇಕೆಂಬ ಸಿದ್ದರಾಮಯ್ಯ ಹೇಳಿಕೆ ಸ್ವೀಕರಿಸುತ್ತೇವೆ. ಚುನಾವಣೆ ಬಂದರೆ ಎದುರಿಸುವ ಹುಲಿಯಂತಹ ನಾಯಕರು ನಮ್ಮಲ್ಲಿದ್ದಾರೆ. ತೊಡೆ ತಟ್ಟಿ ಚುನಾವಣೆ ಎದುರಿಸುತ್ತೇವೆ. ಚುನಾವಣೆ ಮುಗಿದ ಬಳಿಕ ಪಕ್ಷ ಸಂಘಟನೆ ಮಾಡುತ್ತೇವೆ. ಮುಂದೆ ಯಾವುದೇ ಚುನಾವಣೆ ನಡೆದರೂ ಸಿದ್ದರಾಮಯ್ಯನವರ ನಿದ್ದೆ ಮಾಡುವವರು, ಕೆಲಸ ಮಾಡುವವರು ಹೇಳಿಕೆಯೇ ನಮಗೆ ಪ್ರಚಾರದ ಅಸ್ತ್ರವಾಗಲಿದೆ ಎಂದರು.

4 ರೂ.ಕೊಟ್ಟು ನಾಲ್ಕಾರು ಮಾತು: ಉಚಿತ ಅಕ್ಕಿ ಕೊಟ್ಟಿದ್ದಾಗಿ ಸಿದ್ದರಾಮಯ್ಯ ರಾಜ್ಯದ ಜನರಿಗೆ ಸುಳ್ಳು ಹೇಳುತ್ತಿದ್ದಾರೆ. ಒಂದು ಕೆಜಿ ಅಕ್ಕಿಗೆ ಒಟ್ಟು 32 ರೂ.ಇದೆ. ಅದರಲ್ಲಿ 28 ರೂ.ಕೇಂದ್ರ ಸರ್ಕಾರ ಕೊಡುತ್ತದೆ. ನಾಲ್ಕು ರೂ.ಮಾತ್ರ ರಾಜ್ಯ ಸರ್ಕಾರ ಕೊಡುತ್ತದೆ. ನಾಲ್ಕು ರೂ.ಕೊಟ್ಟು, ಅವರು ನಾಲ್ಕಾರು ಮಾತುಗಳನ್ನು ಆಡುತ್ತಿದ್ದಾರೆ. “ಉಚಿತ ಅಕ್ಕಿ’ ಎಂದು ಜನರಿಗೆ ಮೋಸ ಮಾಡುತ್ತಿದ್ದಾರೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ನಾಲ್ಕು ಸ್ಥಾನವೂ ಬರದಂತೆ ಜನ ಮಾಡುತ್ತಾರೆ ಎಂದು ಈಶ್ವರಪ್ಪ ಟೀಕಿಸಿದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.