Thirthahalli ಅಸಾದಿ ಕೈ ಹಿಡಿದ ಅದೃಷ್ಟ; ಎರಡನೇ ಭಾರಿ ಅಧ್ಯಕ್ಷರಾಗಿ ಆಯ್ಕೆ!
Team Udayavani, Aug 27, 2024, 9:35 PM IST
ತೀರ್ಥಹಳ್ಳಿ : ಪಟ್ಟಣ ಪಂಚಾಯಿತಿ ನೂತನ ಅಧ್ಯಕ್ಷರಾಗಿ ರಹಮತುಲ್ಲಾ ಅಸಾದಿ ಆಯ್ಕೆ ಆಗಿದ್ದಾರೆ. ಕುತೂಹಲ ಮೂಡಿಸಿದ್ದ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಯಲ್ಲಿ ಅದೃಷ್ಟ ಅಸಾದಿ ಕೈ ಹಿಡಿದಿದೆ.
ಈ ಹಿಂದೆ ಬಿಜೆಪಿ ಪಕ್ಷದಿಂದ ಅಧ್ಯಕ್ಷರಾಗಿದ್ದ ಅಸಾದಿ ಕಳೆದ 20 ವರ್ಷಗಳಿಂದ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಗೆಲುವು ಸಾಧಿಸುತ್ತ ಬಂದಿದ್ದಾರೆ. ಈಗ ಕಾಂಗ್ರೆಸ್ ಪಕ್ಷದಿಂದ ಅಧ್ಯಕ್ಷರಾಗಿ ಆಯ್ಕೆ ಆಗಿರುವುದರಿಂದ ಪಟ್ಟಣ ಅಭಿವೃದ್ಧಿಯತ್ತ ಸಾಗುವ ನಿರೀಕ್ಷೆ ಪಟ್ಟಣದ ಸಾರ್ವಜನಿಕರಲ್ಲಿ ಮಾತು ಕೇಳಿ ಬರುತ್ತಿದೆ.
ಅಧ್ಯಕ್ಷರು ಉಪಾಧ್ಯಕ್ಷರು ಬದಲಾವಣೆ
ಈ ಹಿಂದಿನ ಅವಧಿಯಲ್ಲಿ ಅಧ್ಯಕ್ಷರಾಗಿದ್ದ ಗೀತಾ ರಮೇಶ್ ಈ ಅವಧಿಯಲ್ಲಿ ಉಪಾಧ್ಯಕ್ಷರಾದರೆ ಉಪಾಧ್ಯಕ್ಷರಾಗಿದ್ದ ರಹಮತುಲ್ಲಾ ಅಸಾದಿ ಅಧ್ಯಕ್ಷರಾಗಿ ಬದಲಾವಣೆ ಆಗಿದ್ದಾರೆ.
ನಾಮಪತ್ರ ಸಲ್ಲಿಸಿದ್ದವರು ಯಾರು?
ಬಿಜೆಪಿಯಿಂದ ಅಧ್ಯಕ್ಷ ಸ್ಥಾನಕ್ಕೆ ಸೊಪ್ಪುಗುಡ್ಡೆ ರಾಘವೇಂದ್ರ ಉಪಾಧ್ಯಕ್ಷ ಸ್ಥಾನಕ್ಕೆ ಜ್ಯೋತಿ ಗಣೇಶ್ ಕಾಂಗ್ರೆಸ್ ಪಕ್ಷದಿಂದ ಅಧ್ಯಕ್ಷ ಸ್ಥಾನಕ್ಕೆ ರಹಮತುಲ್ಲಾ ಅಸಾದಿ ಉಪಾಧ್ಯಕ್ಷ ಸ್ಥಾನಕ್ಕೆ ಗೀತಾ ರಮೇಶ್ ನಾಮಪತ್ರ ಸಲ್ಲಿಸಿದ್ದರು.ಅಧ್ಯಕ್ಷ -ಉಪಾಧ್ಯಕ್ಷರ ಚುನಾವಣೆಯಲ್ಲಿ ಬಹುಮತ ಇದ್ದ ಕಾಂಗ್ರೆಸ್ ಒಂಬತ್ತು ಮಾತುಗಳಿಂದ ಜಯಭೇರಿ ಭಾರಿ ಸಿದ್ದುಅದೃಷ್ಟ ಅಸಾದಿ ಕೈ ಹಿಡಿದಿದೆ.
ಜೋಡೆತ್ತುಗಳ ದರ್ಬಾರ್!
ಕಾಂಗ್ರೆಸ್ ಪಕ್ಷದ ಮುಖಂಡರಾದ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹಾಗೂ ಆರ್ ಎಂ ಮಂಜುನಾಥ್ ಗೌಡರು ಪಟ್ಟಣ ಪಂಚಾಯಿತಿ ಸದಸ್ಯರಿಗೆ ವಿಪ್ ಜಾರಿ ಮಾಡಿ ಚಿಕ್ಕಮಗಳೂರು ಜಿಲ್ಲೆಯ ಜಯಪುರ ಸಮೀಪದ ರೆಸಾರ್ಟ್ ಒಂದರಲ್ಲಿ ಎಲ್ಲರನ್ನು ಗೌಪ್ಯವಾಗಿ ಇಟ್ಟುಕೊಂಡು ಚುನಾವಣೆ ಗೆಲ್ಲುವ ಸಲುವಾಗಿ ರೆಸಾರ್ಟ್ ರಾಜಕೀಯಕ್ಕೆ ಹೋಗಿದ್ದರು. ಒಟ್ಟಿನಲ್ಲಿ ಭಾರಿ ಕುತೂಹಲ ಮೂಡಿಸಿದ್ದ ಪಟ್ಟಣ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಯಲ್ಲಿ ಮತ್ತೊಮ್ಮೆ ಜೋಡೆತ್ತುಗಳ ಕೈ ಹಿಡಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Court Order: ಲೈಂಗಿಕ ದೌರ್ಜನ್ಯ ಸಾಬೀತು; 70 ವರ್ಷದ ವೃದ್ಧನಿಗೆ 20 ವರ್ಷ ಜೈಲು ಶಿಕ್ಷೆ!
Sagara: ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ವಿದೇಶಿ ಪ್ರವಾಸಿಗರಿಂದ ಭರ್ಜರಿ ಸ್ಟೆಪ್
Udupi ಶಾಸಕರ ವಿರುದ್ಧ ಕೇಸ್ ದಾಖಲಿಸಿದ್ದು ಖಂಡನೀಯ: ಡಾ| ಸರ್ಜಿ
Hosanagar: ಅಡಗೋಡಿ ಶ್ರೀಮೂಕಾರ್ತೇಶ್ವರ ದೇಗುಲದ ಶಿವಲಿಂಗ 14-15ನೇ ಶತಮಾನದ್ದು!
Hosanagar; ಮಾಣಿ ಜಲಾಶಯ:ವಾರಾಹಿ,ಹಾಲಾಡಿ ನದಿಪಾತ್ರದ ವಾಸಿಗಳಿಗೆ ಅಂತಿಮ ಮುನ್ನೆಚ್ಚರಿಕೆ
MUST WATCH
ಹೊಸ ಸೇರ್ಪಡೆ
Udupi: ಕರ್ತವ್ಯಲೋಪ: 80 ಪೊಲೀಸ್ ಸಿಬಂದಿ ಅಮಾನತು; ಎಸ್ಪಿ ಕಟ್ಟುನಿಟ್ಟಿನ ಕ್ರಮ
Mangaluru: ಶ್ರೀಮತಿ ಶೆಟ್ಟಿ ಕೊ* ಪ್ರಕರಣ: ಮೂವರ ಅಪರಾಧ ಸಾಬೀತು
Nagamangala Case ಬಂಧನದ ಭೀತಿ: ಊರು ಬಿಟ್ಟ ಯುವಕರು
Officers Meeting: ವಸತಿ ಯೋಜನೆ ಫಲಾನುಭವಿಗಳಿಗೆ ಶೀಘ್ರ ಅನುದಾನ: ಸಂಸದ ಕೋಟ ಸೂಚನೆ
Daily Horoscope: ಭವಿಷ್ಯದ ಕುರಿತು ವಿನಾಕಾರಣ ಚಿಂತೆ ಬಿಡಿ,ಉದ್ಯಮದಲ್ಲಿ ಪ್ರಗತಿ ತೃಪ್ತಿಕರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.