![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Sep 11, 2024, 7:00 AM IST
ಬೆಂಗಳೂರು: ಫೈರ್ ಸಂಸ್ಥೆ ಮುಖ್ಯಮಂತ್ರಿಗಳಿಗೆ ನೀಡಿದ ಮನವಿಯಲ್ಲಿ ಎಲ್ಲ ಕಲಾವಿದರು ಸಹಿ ಹಾಕಿಲ್ಲ. ನಮಗೂ ಫೈರ್ ಸಂಸ್ಥೆಗೂ ಸಂಬಂಧವಿಲ್ಲ ಎಂದು ನಿರ್ಮಾಪಕ ಸಾ.ರಾ.ಗೋವಿಂದು ಹೇಳಿದ್ದಾರೆ.
ಚಿತ್ರರಂಗದಲ್ಲಿ ಮಹಿಳೆಯರ ಸುರಕ್ಷತೆ ಕುರಿತು ಚರ್ಚೆಯಾಗುತ್ತಿರುವ ಹಿನ್ನೆಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕನ್ನಡ ಚಿತ್ರರಂಗದಲ್ಲಿ ಮಹಿಳೆಯರ ಮೇಲೆ ಶೋಷಣೆ ನಡೆದ ಘಟನೆಗಳು ಇಲ್ಲ. ಒಂದು ವೇಳೆ ಇದ್ದರೆ, ಅವರು ನೇರವಾಗಿ ಚಲನಚಿತ್ರ ವಾಣಿಜ್ಯ ಮಂಡಳಿಗೆ ಬಂದು ತಮ್ಮ ಸಮಸ್ಯೆ ಹೇಳಿಕೊಳ್ಳಬಹುದು.
ಇಂಥ ನೂರಾರು ಸಮಸ್ಯೆಗಳ ನ್ನು ಬಗೆಹರಿಸಿದ್ದೇವೆ. ಈಗಾಗಲೇ ಮಹಿಳಾ ಆಯೋಗದ ಅಧ್ಯಕ್ಷರು, ವಾಣಿಜ್ಯ ಮಂಡಳಿ ಅಧ್ಯಕ್ಷರಿಗೆ ಸಂಪರ್ಕ ಮಾಡಿದ್ದು, ಸೆ. 16ರಂದು ಸಭೆ ಕರೆದಿದ್ದಾರೆ. ಅಲ್ಲಿ ನಾವು ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ. ಕೆಲವರು ಸುಮ್ಮನೆ ಹೇಳಿಕೆ ಕೊಟ್ಟಿದ್ದಾರೆ.
ಮನವಿಯಲ್ಲಿ ಎಲ್ಲರೂ ಸಹಿ ಹಾಕಿಲ್ಲ. ಚಿತ್ರರಂಗದ ಸಮಸ್ಯೆಗಳಿಗೆ ವಾಣಿಜ್ಯ ಮಂಡಳಿ ಇದೆ. ಇದನ್ನು ಬಿಟ್ಟು ಹೋಗಿ ಪ್ರತ್ಯೇಕ ಸಂಘ ಕಟ್ಟಿಕೊಳ್ಳುವುದಿಲ್ಲ. ಹಾಗಾಗಿ ಫೈರ್ಗೂ ನಮಗೂ ಸಂಬಂಧವಿಲ್ಲ ಎಂದು ಹೇಳಿದ್ದಾರೆ.
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್ ಲೀಡರ್ʼ ಅಸ್ತ್ರ
You seem to have an Ad Blocker on.
To continue reading, please turn it off or whitelist Udayavani.