ಯಾಂತ್ರೀಕೃತ ಮೀನುಗಾರಿಕೆಗೆ ಅವಕಾಶ ನೀಡಿ: ಸಂಘ ಆಗ್ರಹ
Team Udayavani, May 2, 2020, 9:06 AM IST
ಸಾಂದರ್ಭಿಕ ಚಿತ್ರ
ಮಲ್ಪೆ: ಕೋವಿಡ್ ಹಿನ್ನೆಲೆಯಲ್ಲಿ ಇರುವ ಸಾಮಾಜಿಕ ಅಂತರ ಸಹಿತ ಎಲ್ಲ ನಿಯಮಗಳನ್ನು ಪಾಲಿಸಲು ನಾವು ಬದ್ಧರಿದ್ದು, ಯಾಂತ್ರೀಕೃತ ಮೀನುಗಾರಿಕೆಗೂ ಅನುಮತಿ ನೀಡಬೇಕು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಅವರನ್ನು ಭೇಟಿಯಾಗಿ ಮನವಿ ಮಾಡಿರುವುದಾಗಿ ಮಲ್ಪೆ ಮೀನುಗಾರ ಸಂಘದ ಅಧ್ಯಕ್ಷ ಕೃಷ್ಣ ಎಸ್. ಸುವರ್ಣ ತಿಳಿಸಿದ್ದಾರೆ. ಸರಕಾರದ ಸೂಚನೆಯನ್ನು ಆಧರಿಸಿಯೇ ಬೋಟುಗಳು ನೀರಿಗಿಳಿಯಲಿವೆ. ಕಡಲಿನಿಂದ ಮರಳಿದ ಬಳಿಕ ಮೀನನ್ನು ಇಳಿಸುವಾಗ ಸಾಮಾಜಿಕ ಅಂತರ ಕಾಯ್ದುಕೊಳ್ಳಲಾಗುವುದು. ಬಂದರಿನೊಳಗೆ ಸಾರ್ವಜನಿಕವಾಗಿ ಮೀನು ಹರಾಜು ಮತ್ತು ಚಿಲ್ಲರೆ ಮಾರಾಟ ಮಾಡದಂತೆ ನೋಡಿಕೊಳ್ಳುವುದು, ಹೊರರಾಜ್ಯದ ಮೀನಿನ ಲಾರಿಗಳಿಗೆ ಬಂದರು ಪ್ರವೇಶಕ್ಕೆ ನಿರ್ಬಂಧ, ಮೀನುಗಾರಿಕೆ ಚಟುವಟಿಕೆ ನಿಯಮ ಬದ್ಧವಾಗಿ ನಡೆಯುವಂತೆ ನಿಗಾ ಇಡುವ ಜವಾಬ್ದಾರಿಯನ್ನು ಮೀನುಗಾರ ಸಂಘವೇ ವಹಿಸಿಕೊಳ್ಳಲಿದೆ ಎಂದು ಅವರು ಹೇಳಿದ್ದಾರೆ.
ದೋಣಿಗಳು ಅಪಾಯದಲ್ಲಿ
ಲಾಕ್ಡೌನ್ ಹಿನ್ನೆಲೆಯಲ್ಲಿ ಮಾ. 24ರಿಂದ ಇಲ್ಲಿನ ದೋಣಿಗಳಲ್ಲದೆ ಗಂಗೊಳ್ಳಿ, ಹಂಗಾರಕಟ್ಟೆ ಕೋಡಿ, ಭಟ್ಕಳ, ಹೊರರಾಜ್ಯದ ಕೆಲವು ಬೋಟುಗಳು ಮಲ್ಪೆಯಲ್ಲಿ ತಂಗಿವೆ. ಬಂದರಿನಲ್ಲಿ ಜಾಗದ ಸಮಸ್ಯೆಯಿಂದಾಗಿ ಹಲವು ದೋಣಿಗಳು ಹೊಳೆಯಲ್ಲಿಯೇ ನಿಂತಿದ್ದು, ಮಳೆಗಾಲ ಆರಂಭಗೊಂಡರೆ ಹೊಳೆಯ ನೀರಿನ ರಭಸಕ್ಕೆ ನಿಯಂತ್ರಣ ತಪ್ಪಿ ಸಮುದ್ರ ಸೇರುವ ಸಾಧ್ಯತೆ ಇದೆ. ಒಂದು ಸಲ ಮೀನುಗಾರಿಕೆಗೆ ಅವಕಾಶ ಕೊಟ್ಟಲ್ಲಿ ಬೋಟುಗಳು ತೆರವುಗೊಂಡು ತಮ್ಮ ತಮ್ಮ ಬಂದರು ಸೇರಿಕೊಳ್ಳಲು ಅನುಕೂಲವಾಗುತ್ತದೆ ಎನ್ನುತ್ತಾರೆ ಮೀನುಗಾರ ಸಂಘದ ಉಪಾಧ್ಯಕ್ಷ ರಮೇಶ್ ಕೋಟ್ಯಾನ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಕಾರು ಢಿಕ್ಕಿಯಾಗಿ ಬೈಕ್ ಸವಾರ ವಿದ್ಯಾರ್ಥಿ ಮೃತ್ಯು
Geethanjali Silks: ಅ.9ರಂದು ಪುರುಷರ ಬಟ್ಟೆಗಳ ವಿಶಾಲ ವಿಭಾಗ ಗ್ರಾಹಕರಿಂದಲೇ ಉದ್ಘಾಟನೆ
Ocean Pearl: ಅ.9: ಉಡುಪಿಯ ದಿ ಓಷಿಯನ್ ಪರ್ಲ್ ಟೈಮ್ಸ್ ಸ್ಕ್ವೇರ್ ಹೊಟೇಲ್ ಉದ್ಘಾಟನೆ
Udupi: ʼಯಕ್ಷಗಾನ ಕಲಾವಿದನಾಗಿ ಪ್ರತಿಹಂತದಲ್ಲಿ ಕಲಿವ ಮನಸ್ಥಿತಿಯಲ್ಲಿ ಕಾರ್ಯನಿರ್ವಹಿಸಿದೆʼ
Bramavara: ಪೊಲೀಸರಿಗೆ ತಿಳಿಸದೆ ಅಂತ್ಯಕ್ರಿಯೆ; ದೂರು ದಾಖಲು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Kaladgi: ಜೆಸಿಬಿ ಚಾಲಕನ ನಿರ್ಲಕ್ಷ ಕಾಮಗಾರಿ; ಪೈಪಲೈನ್ ಒಡೆದು ಸಾಕಷ್ಟು ಪ್ರಮಾಣದ ನೀರು ಪೋಲು
Vijayapura: ಸಿಎಂ ಕುರ್ಚಿಯಲ್ಲಿ ಟಗರು ಕುಂತವ್ರೆ, ಅಲ್ಲಾಡಿಸಲು ಅಷ್ಟು ಸುಲಭನಾ..? ಜಮೀರ್
Jammu Kashmir Result: ಜಮ್ಮು-ಕಾಶ್ಮೀರದ ನೂತನ ಸಿಎಂ ಹೆಸರು ಘೋಷಿಸಿದ ಫಾರೂಕ್ ಅಬ್ದುಲ್ಲಾ
Huli Karthik: ಜಾತಿ ನಿಂದನೆ ಆರೋಪ; ಹಾಸ್ಯ ನಟ ಹುಲಿ ಕಾರ್ತಿಕ್ ಸೇರಿ ನಾಲ್ವರ ವಿರುದ್ಧ FIR
Mangaluru: ಕಳ್ಳರ ನಿದ್ದೆಗೆಡಿಸಿದ ಮಹಿಳಾ ಸಾರಥ್ಯದ ಟೀಮ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.