Food Expert: ಆಹಾರ ತಜ್ಞ ಕೆ.ಸಿ.ರಘು ನಿಧನ
Team Udayavani, Oct 15, 2023, 9:58 PM IST
ಬೆಂಗಳೂರು: ಆಹಾರ ವಿಚಾರದಲ್ಲಿ ಅಪಾರ ಜ್ಞಾನ ಹೊಂದಿದ್ದ ಕೆ.ಸಿ.ರಘು (60) ಅವರು ರವಿವಾರ ಬೆಳಗ್ಗೆ ನಿಧನ ಹೊಂದಿದರು. ಅವರು ಆಹಾರ ಆರೋಗ್ಯದ ಬಗ್ಗೆ ನೂರಾರು ಲೇಖನಗಳನ್ನು ಬರೆದಿದ್ದರಲ್ಲದೆ, ವಿಚಾರ ಸಂಕಿರಣಗಳಲ್ಲಿ ಪಾಲ್ಗೊಂಡು ಮಾಹಿತಿ ಹಂಚಿಕೊಳ್ಳುತ್ತಿದ್ದರು.
ರಘು ಹಲವು ವರ್ಷಗಳ ಕಾಲ “ಫುಡ್ ಆ್ಯಂಡ್ ನ್ಯೂಟ್ರಿಷಿಯನ್ ವರ್ಲ್ಡ್’ ಪತ್ರಿಕೆಯ ಸಂಪಾದಕರಾಗಿದ್ದರು. ಅವರು ಸ್ಥಾಪಿಸಿದ್ದ ಪ್ರಿಸ್ಟೀನ್ ಅರ್ಗ್ಯಾನಿಕ್ಸ್ ಎಂಬ ಸಂಸ್ಥೆಯಲ್ಲಿ ನವಜಾತ ಶಿಶುಗಳಲ್ಲಿ ಕಂಡು ಬರುವ ಮಾರಕ ಕಾಯಿಲೆಗಳಿಗೆ ಪೌಷ್ಟಿಕಾಂಶದ ಪರಿಹಾರವನ್ನು ನೀಡುತ್ತಿದ್ದರು. ಅವರು ತುತ್ತು ತತ್ವ, ಆಹಾರ ರಾಜಕೀಯ, ರಸತತ್ವ ಮುಂತಾದ ಕೃತಿಗಳನ್ನು ಪ್ರಕಟಿಸಿದ್ದಾರೆ.
ರಘು ಅವರ ಇಚ್ಛೆಯಂತೆ ಅವರ ದೇಹವನ್ನು ಎಂ.ಎಸ್.ರಾಮಯ್ಯ ಕಾಲೇಜಿಗೆ ದಾನ ಮಾಡಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಅವರು ಶ್ವಾಸಕೋಶದ ಕ್ಯಾನ್ಸರ್ನಿಂದ ಬಳಲುತ್ತಿದ್ದರು. ರಘು ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಹಿತ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.