![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 22, 2021, 7:56 PM IST
ಬೆಂಗಳೂರು: ಕೊರೊನಾ ಎರಡನೆ ಅಲೆಯ ನಿಯಂತ್ರಣದಲ್ಲಿ ಮುಂಚೂಣಿ ಯೋಧರಾಗಿ ಕಾರ್ಯ ನಿರ್ವಹಿಸುತ್ತಿರುವ ವೈದ್ಯರು, ವೈದ್ಯಕೀಯ ಸಿಬ್ಬಂದಿ, ಪೊಲೀಸರು ಹಾಗೂ ಮಾಧ್ಯಮದವರಿಗೆ ನಗರದ ತರಳಬಾಳು ಕೇಂದ್ರ ಆಹಾರ ಒದಗಿಸುವ ಸೇವೆ ಮಾಡುತ್ತಿದೆ.
ಜನತೆಗೆ ಆಸರೆಯಾಗುವ ಮಾನವೀಯತೆಯ ಮಹಾಸಂಸ್ಥಾನ ಎಂದೇ ಸುಪ್ರಸಿದ್ಧಿಯಾಗಿರುವ ದಯೆ, ಕೃಪೆ, ಕರುಣೆಯ ತ್ರಿವೇಣಿ ಸಂಗಮದ ಧರ್ಮ ದಾಸೋಹಿ ಸರ್ವತ್ರ ಪೂಜನೀಯ ಸಿರಿಗೆರೆಯ ಶ್ರೀ ತರಳಬಾಳು ಜಗದ್ಗುರು ಬೃಹನ್ಮಠದ ಪೀಠಾಧಿಪತಿಗಳಾದ ಶ್ರೀ ತರಳಬಾಳು ಜಗದ್ಗುರು ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರು ಕೊರೂನಾ ನಿರ್ಮೂಲನಾ ಕಾರ್ಯದಲ್ಲಿ ತೊಡಗಿದ್ದಾರೆ.
ಶ್ರೀ ಮದುಜ್ಜಯಿನಿ ಸದ್ಧರ್ಮ ಸಿಂಹಾಸನ ಶ್ರೀತರಳಬಾಳು ಜಗದ್ಗುರು ಬೃಹನ್ಮಠ, ಸಿರಿಗೆರೆಯ ಅಂಗಸಂಸ್ಥೆಯಾದ ಬೆಂಗಳೂರಿನ ತರಳಬಾಳುಕೇಂದ್ರದ ಕಾರ್ಯಕಾರಿ ಸಮಿತಿಯ ವತಿಯಿಂದ ಶ್ರೀ ಜಗದ್ಗುರುಗಳವರ ಆಶೀರ್ವಾದ ಮಾರ್ಗದರ್ಶನದಂತೆ ಬೆಂಗಳೂರು ನಗರದ. ವಿಕ್ಟೋರಿಯಾ ಸರ್ಕಾರಿ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೋರೋನಾ ವಾರಿಯರ್ಸ್ ಗಳು, ಪರಿಚಾರಕರು ಹಾಗು ಕೋವಿಡ್ ಸೋಂಕಿತರ ಸಂಬಂಧಿಗಳಿಗೆ ಅವಶ್ಯಕವಾಗಿರುವ ಆಹಾರದ ಪೂರೈಕೆಯನ್ನು ಉಚಿತವಾಗಿ ಸಮರ್ಪಣೆ ಮಾಡಲಾಗುತ್ತಿದೆ ಎಂದು ತರಳಬಾಳು ಕೇಂದ್ರದ ಕಾರ್ಯದರ್ಶಿ ಬಾತಿ ವಿಶ್ವನಾಥ ಹೇಳಿದ್ದಾರೆ.
ಮುಂಚೂಣಿ ಯೋಧರಾಗಿ ಕಾರ್ಯ ನಿರ್ವಹಿಸುತ್ತಿರುವ ಪೊಲಿಸರು ಹಾಗೂ ಪತ್ರಕರ್ತರಿಗೂ ಕೇಂದ್ರದ ವತಿಯಿಂದ ಶನಿವಾರ ಉಚಿತ ಆಹಾರ ವಿತರಣೆ ಮಾಡಲಾಯಿತು. ಈ ಕಾರ್ಯಕ್ರಮವನ್ನು ಇತರೆ ಸರ್ಕಾರಿ ಆಸ್ಪತ್ರೆಗಳಿಗೆ ವಿಸ್ತರಿಸಲು ಯೋಚಿಸಲಾಗುತ್ತಿದೆ ಎಂದು ಹೇಳಿದ್ದಾರೆ.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.