Udupi ಮಲ್ಪೆಗೆ ಹೊರರಾಜ್ಯದ ಮೀನು ಆವಕ : ಕರಾವಳಿಯಲ್ಲಿ ಮೀನುಗಾರಿಕೆ ನಿಷೇಧ

ಹೊರರಾಜ್ಯದ ಮೀನಿಗೆ ಬೇಡಿಕೆ

Team Udayavani, Jun 24, 2024, 6:50 AM IST

Udupi ಮಲ್ಪೆಗೆ ಹೊರರಾಜ್ಯದ ಮೀನು ಆವಕ : ಕರಾವಳಿಯಲ್ಲಿ ಮೀನುಗಾರಿಕೆ ನಿಷೇಧ

ಮಲ್ಪೆ: ಮಳೆಗಾಲದಲ್ಲಿ ಯಾಂತ್ರೀಕೃತ ಮೀನುಗಾರಿಕೆ ನಿಷೇಧವಿದ್ದು, ಪ್ರಸ್ತುತ ನಾಡದೋಣಿ ಮೀನುಗಾರಿಕೆಗೆ ಮಾತ್ರ ಅವಕಾಶ. ಆದ್ದರಿಂದ ಕರಾವಳಿಯ ಬೇಡಿಕೆ ಈಡೇರಿಸಲು ಒಡಿಶಾ, ತಮಿಳುನಾಡು, ಆಂಧ್ರ ಪ್ರದೇಶದ ಮೀನುಗಳು ಬರುತ್ತಿದ್ದು, ಅದಕ್ಕೆ ಭಾರೀ ಬೇಡಿಕೆಯೂ ಇದೆ. ಪ್ರತಿನಿತ್ಯ ಸುಮಾರು 15 ವಾಹನಗಳ ಮೂಲಕ ಟನ್‌ಗಟ್ಟಲೆ ಮೀನು ಮಲ್ಪೆ ಮಾರುಕಟ್ಟೆಗೆ ಆವಕವಾಗುತ್ತಿದೆ.

ಗುಜರಾತ್‌, ಕರ್ನಾಟಕ, ಗೋವಾ, ಮಹಾರಾಷ್ಟ್ರ ಮತ್ತು ಕೇರಳ ರಾಜ್ಯಗಳಲ್ಲಿ ಒಂದೇ ಅವಧಿಯಲ್ಲಿ ಮೀನುಗಾರಿಕೆ ನಿಷೇಧವಿದೆ. ಆದರೆ ಈ ಸಮಯದಲ್ಲಿ ಒಡಿಶಾ, ಆಂಧ್ರ, ತಮಿಳುನಾಡು ವ್ಯಾಪ್ತಿಯಲ್ಲಿ ನಿಷೇಧವಿರುವುದಿಲ್ಲ. ಕರ್ನಾಟಕ ವ್ಯಾಪ್ತಿಯಲ್ಲಿ ಮೀನುಗಾರಿಕೆ ಆರಂಭದ ಸಮಯದಲ್ಲಿ ಅಲ್ಲಿ ನಿಷೇಧವಿರುತ್ತದೆ.

ಒಡಿಶಾದಿಂದ ಬೊಳಂಜೀರ್‌, ಬೂತಾಯಿ ಮತ್ತು ಸಣ್ಣ ಗಾತ್ರದ ಬಂಗುಡೆ, ಆಂಧ್ರಪ್ರದೇಶದಿಂದ ಬೂತಾಯಿ ಮತ್ತು ಸಣ್ಣ ಬಂಗುಡೆ, ತಮಿಳುನಾಡಿನಿಂದ ಅಲ್ಪ ಪ್ರಮಾಣ ದಲ್ಲಿ ಬೂತಾಯಿ ಮೀನನ್ನು ತರಿಸಲಾ ಗುತ್ತದೆ. ಪ್ರಸ್ತುತ ತೂಫಾನ್‌ ಅಗದೇ ಮೀನು ಸಿಗುವುದು ಕಡಿಮೆ. ಅಲ್ಪ ಪ್ರಮಾಣದಲ್ಲಿ ಸಿಗಡಿ ದೊರೆಯುತ್ತಿದೆ ಎಂದು ವ್ಯಾಪಾರಸ್ಥರು ತಿಳಿಸುತ್ತಾರೆ. ಮಳೆಗಾಲದಲ್ಲೂ ನಿತ್ಯ ಲಕ್ಷಾಂತರ ರೂ. ವ್ಯವಹಾರ ನಡೆಯುತ್ತದೆ.

ದರ ಹೆಚ್ಚಳ
ಪ್ರತಿಯೊಂದು ತಳಿಯ ಮೀನಿಗೂ ಕಳೆದ ಎರಡು ತಿಂಗಳನ್ನು ಹೋಲಿಸಿ ದರೆ ದರ ವಿಪರೀತ ಹೆಚ್ಚಳವಾಗಿದೆ. ಸಣ್ಣ ಗಾತ್ರದ ಬಂಗುಡೆ 25 ಕೆಜಿಯ (1ಕೆ.ಜಿ. ತೂಕದಲ್ಲಿ 16 -18 ಮೀನು) ಒಂದು ಬಾಕ್ಸ್‌ಗೆ 4,000 ರೂಪಾಯಿಗೆ ಮಾರಾಟವಾಗುತ್ತದೆ. ಬೂತಾಯಿ 5,500-6,000 ರೂ ಇದ್ದು, 1 ಕೆ.ಜಿ.ಯಲ್ಲಿಲ್ಲಿ 20 -22 ಮೀನುಗಳು ಇರುತ್ತವೆ. ತಾಜಾ ಬೊಳಂಜೀರ್‌ ಇದ್ದರೆ ಕೆ.ಜಿ.ಗೆ 150-160 ರೂ.ಗೆ ಮಾರಾಟವಾಗುತ್ತಿದೆ.

ಪ್ರತಿ ವರ್ಷ ಮಳೆಗಾಲದಲ್ಲಿ ಹೊರರಾಜ್ಯದ ಮೀನನ್ನು ತಂದು ಮಾರಾಟ ಮಾಡಲಾಗುತ್ತದೆ. ಈಗ ಆಂಧ್ರಪ್ರದೇಶ ,ಒಡಿಶಾ, ತಮಿಳುನಾಡಿನಿಂದ ಮೀನುಗಳು ಬರುತ್ತಿದೆ. ಈ ಬಾರಿ ಮೀನು ಕಡಿಮೆಯಾಗಿ ದರ ಹೆಚ್ಚಿದೆ. ಇಲ್ಲಿನ ನಾಡದೋಣಿಗೆ ಮೀನುಗಳು ದೊರೆತಾಗ ಹೊರರಾಜ್ಯದ ಮೀನುಗಳಿಗೆ ಬೇಡಿಕೆ ಇಳಿಮುಖವಾಗುತ್ತದೆ.
-ದಿನೇಶ್‌ ಜಿ. ಸುವರ್ಣ, ಮೀನು ವ್ಯಾಪಾರಸ್ಥರು, ಮಲ್ಪೆ

ಮಲ್ಪೆ ಫಿಶ್‌ಟ್ರೇಡ್‌ ಸೆಂಟರಿನಲ್ಲಿ ವಹಿವಾಟು
ಈ ಹಿಂದಿನ ವರ್ಷದವರೆಗೆ ಮಳೆಗಾಲದಲ್ಲಿ ಬಂದರಿನ ಒಳಗೆಯೇ ಹೊರರಾಜ್ಯದ ಮೀನುಗಾರಿಕೆ ಚಟುವಟಿಕೆಗಳು ನಡೆಯುತ್ತಿದ್ದವು. ಈ ಬಾರಿ ಬಂದರಿನ ಹೊರಗೆ ಮೀನುಗಾರಿಕೆ ಇಲಾಖೆಗೆ ಸೇರಿದ ಜಾಗದಲ್ಲಿ ಮಲ್ಪೆ ಫಿಶ್‌ಟ್ರೇಡ್‌ ಸೆಂಟರ್‌ ತೆರೆಯಲಾಗಿದ್ದು, ಹೊರರಾಜ್ಯದ ಮೀನುಗಳನ್ನು ಇಲ್ಲೇ ರಖಂ ಆಗಿ ವಿಲೇವಾರಿ ಮಾಡಲಾಗುತ್ತದೆ.
-ವಿನಯ ಕರ್ಕೇರ, ಕಾರ್ಯದರ್ಶಿ, ಮೀನು ವ್ಯಾಪಾರಸ್ಥರ ಸಂಘ, ಮಲ್ಪೆ

ಟಾಪ್ ನ್ಯೂಸ್

Shivaraj-Thangadagi

Government: ಗಟ್ಟಿತನ ಇದ್ದುದರಿಂದಲೇ ಜಾತಿಗಣತಿ ವರದಿ ಸ್ವೀಕಾರ- ತಂಗಡಗಿ

Dr.Sudhakar

Lokasabha: ಚಿಕ್ಕಬಳ್ಳಾಪುರದಲ್ಲಿ ರಾಷ್ಟ್ರೀಯ ಪುಷ್ಪ ಮಂಡಳಿ; ಡಾ.ಕೆ.ಸುಧಾಕರ್‌ ಪ್ರಸ್ತಾಪ

Bhovi Community ಜು. 20ಕ್ಕೆ ದೀಕ್ಷಾ ರಜತ ಮಹೋತ್ಸವ: ಲಿಂಬಾವಳಿ

Bhovi Community ಜು. 20ಕ್ಕೆ ದೀಕ್ಷಾ ರಜತ ಮಹೋತ್ಸವ: ಲಿಂಬಾವಳಿ

Congress ಸ್ಥಾನಮಾನ ಬೇಕಿದ್ರೆ ವರಿಷ್ಠರ ಬಳಿ ಕೇಳಬೇಕು: ರಾಜಣ್ಣಗೆ ಕೃಷ್ಣ ಬೈರೇಗೌಡ ತಿರುಗೇಟು

Congress ಸ್ಥಾನಮಾನ ಬೇಕಿದ್ರೆ ವರಿಷ್ಠರ ಬಳಿ ಕೇಳಬೇಕು: ರಾಜಣ್ಣಗೆ ಕೃಷ್ಣ ಬೈರೇಗೌಡ ತಿರುಗೇಟು

DK Shivakumar ಚೇರ್‌ ಖಾಲಿ ಇರುವುದಕ್ಕೆ ನಾನು ಬಂದು ಕೂತಿದ್ದೇನೆ

DK Shivakumar ಚೇರ್‌ ಖಾಲಿ ಇರುವುದಕ್ಕೆ ನಾನು ಬಂದು ಕೂತಿದ್ದೇನೆ

HD Revanna ಒಂದು ತಿಂಗಳಿಂದ ದೇವೇಗೌಡರು ನೋವಿನಲ್ಲೇ ಇದ್ದಾರೆ

HD Revanna ಒಂದು ತಿಂಗಳಿಂದ ದೇವೇಗೌಡರು ನೋವಿನಲ್ಲೇ ಇದ್ದಾರೆ

B. Y. Vijayendra ಹಿಂದೂಗಳ ತೇಜೋವಧೆ ಮಾಡಿರುವ ರಾಹುಲ್‌ ಕ್ಷಮೆ ಕೇಳಲಿ

B. Y. Vijayendra ಹಿಂದೂಗಳ ತೇಜೋವಧೆ ಮಾಡಿರುವ ರಾಹುಲ್‌ ಕ್ಷಮೆ ಕೇಳಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಪತ್ರಿಕಾ ದಿನಾಚರಣೆ: ಸಮ್ಮಾನ, ಪ್ರತಿಭಾ ಪುರಸ್ಕಾರ

Udupi ಪತ್ರಿಕಾ ದಿನಾಚರಣೆ: ಸಮ್ಮಾನ, ಪ್ರತಿಭಾ ಪುರಸ್ಕಾರ

Udupi ವಾಯ್ಸ ಆಫ್ ಹೀಲಿಂಗ್ಸ್‌: ಸಾಧಕರಿಗೆ ಸಮ್ಮಾನ

Udupi ವಾಯ್ಸ ಆಫ್ ಹೀಲಿಂಗ್ಸ್‌: ಸಾಧಕರಿಗೆ ಸಮ್ಮಾನ

Manipal ಬ್ಯಾಂಕ್‌ ಖಾತೆಯಿಂದ ಲಕ್ಷಾಂತರ ರೂ. ವರ್ಗಾವಣೆ

Manipal ಬ್ಯಾಂಕ್‌ ಖಾತೆಯಿಂದ ಲಕ್ಷಾಂತರ ರೂ. ವರ್ಗಾವಣೆ

Nandikur ಪರಿಸರ ಮಾಲಿನ್ಯ?ಪರಿಸರ ಅಧಿಕಾರಿಗಳಿಂದ ಪರಿಶೀಲನೆ: ನೀರಿನ ಸ್ಯಾಂಪಲ್‌ ಸಂಗ್ರಹ

Nandikur ಪರಿಸರ ಮಾಲಿನ್ಯ?ಪರಿಸರ ಅಧಿಕಾರಿಗಳಿಂದ ಪರಿಶೀಲನೆ: ನೀರಿನ ಸ್ಯಾಂಪಲ್‌ ಸಂಗ್ರಹ

Karkala: ಉಳುಮೆ ಮಾಡುತಿದ್ದ ಕಾರ್ಮಿಕ ಸಾವು

Karkala: ಉಳುಮೆ ಮಾಡುತಿದ್ದ ಕಾರ್ಮಿಕ ಸಾವು

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

Davanagere; ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಐವರಿಗೆ ಗಂಭೀರ ಗಾಯ

Davanagere; ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಐವರಿಗೆ ಗಂಭೀರ ಗಾಯ

Shivaraj-Thangadagi

Government: ಗಟ್ಟಿತನ ಇದ್ದುದರಿಂದಲೇ ಜಾತಿಗಣತಿ ವರದಿ ಸ್ವೀಕಾರ- ತಂಗಡಗಿ

Will not believe EVMs says akhilesh yadav

ಉ.ಪ್ರ.ದ 80 ಕ್ಷೇತ್ರ ಗೆದ್ದರೂ EVM ನಂಬಲ್ಲ: ಅಖೀಲೇಶ್‌

Dr.Sudhakar

Lokasabha: ಚಿಕ್ಕಬಳ್ಳಾಪುರದಲ್ಲಿ ರಾಷ್ಟ್ರೀಯ ಪುಷ್ಪ ಮಂಡಳಿ; ಡಾ.ಕೆ.ಸುಧಾಕರ್‌ ಪ್ರಸ್ತಾಪ

Question paper ready 2 hours before NEET-PG exam start?

NEET-PG ಪರೀಕ್ಷೆ ಆರಂಭಕ್ಕಿಂತ 2 ಗಂಟೆ ಮುಂಚೆ ಪ್ರಶ್ನೆಪತ್ರಿಕೆ ಸಿದ್ಧ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.