Karnataka: ವಿದೇಶಿ ಬಂಡವಾಳ ಹೂಡಿಕೆ ಶೇ.46 ಇಳಿಕೆ
ರಾಜ್ಯ ಹಣಕಾಸಿನ ಮಧ್ಯವಾರ್ಷಿಕ ಪರಿಶೀಲನೆ ವರದಿಯಲ್ಲಿ ಉಲ್ಲೇಖ ವಿದೇಶಿ ನೇರ ಹೂಡಿಕೆ ಕುಸಿತ ರಾಜ್ಯದ
Team Udayavani, Dec 14, 2023, 11:31 PM IST
ಬೆಳಗಾವಿ: ಗ್ಯಾರಂಟಿ ಯೋಜನೆಗಳ ಅನುಷ್ಠಾನ ಅಬ್ಬರದಲ್ಲಿ ರಾಜ್ಯ ಸರಕಾರ ಮುಳುಗಿರುವಾಗಲೇ, ರಾಜ್ಯದಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆಯಲ್ಲಿ ಭಾರೀ ಇಳಿಕೆಯಾಗಿರುವ ಅಂಶ ಬೆಳಕಿಗೆ ಬಂದಿದೆ. ರಾಜ್ಯ ಹಣಕಾಸಿನ ಮಧ್ಯಮ ವರ್ಷದ ಪರಿಶೀಲನೆ ವರದಿಯಲ್ಲಿ ಈ ಅಂಶ ಉಲ್ಲೇಖವಾಗಿರುವುದು ಕಳವಳಕ್ಕೆ ಕಾರಣವಾಗಿದೆ.
ವಿಧಾನಸಭೆಯಲ್ಲಿ ಗುರುವಾರ ಮಂಡನೆಯಾದ ಈ ವರದಿಯಲ್ಲಿ ಗ್ಯಾರಂಟಿ ಯೋಜನೆಯಿಂದ ರಾಜ್ಯದ ಆರ್ಥಿಕ ಪರಿಸ್ಥಿತಿ ಸುಧಾರಣೆಗೊಂಡಿದೆ. ಫಲಾನುಭವಿ ಕುಟುಂಬಗಳಿಗೆ ಮಾಸಿಕ ಸರಾಸರಿ 5,000 ರೂ. ಸರಕಾರ ನೀಡುವುದರಿಂದ ಕೊಳ್ಳುವ ಸಾಮರ್ಥ್ಯ ವೃದ್ಧಿಸಿ ಅವರು ಆರ್ಥಿಕ ಚಟುವಟಿಕೆಯಲ್ಲಿ ಭಾಗಿಯಾಗಲು ಸಾಧ್ಯವಾಗುತ್ತದೆ. ಇದರಿಂದ ಜಿಡಿಪಿ ಬೆಳವಣಿಗೆಗೆ ಕಾರಣವಾಗುತ್ತದೆ ಎಂದು ಬೆನ್ನುತಟ್ಟಿಕೊಳ್ಳಲಾಗಿದೆಯಾದರೂ ನೇರ ಬಂಡವಾಳ ಹೂಡಿಕೆಯ ಇಳಿಕೆ ಎಚ್ಚರಿಕೆಯ ಗಂಟೆಯಾಗಿದೆ.
ಮುಂದುವರಿದ ದೇಶಗಳಲ್ಲಿ ಆರ್ಥಿಕ ಬೆಳವಣಿಗೆ ಕುಂಠಿತವಾಗಿರುವುದರಿಂದ ಎಫ್ಡಿಐ ಶೇ.46ರಷ್ಟು ಇಳಿಕೆಯಾಗಿದೆ ಎಂದು ವರದಿ ಹೇಳಿದೆ. 2022-23ರ ಮೊದಲಾರ್ಧದಲ್ಲಿ ಹೂಡಿಕೆಯಾಗಿದ್ದ 5.3 ಶತಕೋಟಿ ಡಾಲರ್ಗೆ ಪ್ರತಿಯಾಗಿ 2023-24ರ ಮೊದಲಾರ್ಧದಲ್ಲಿ 2.8 ಶತ ಕೋಟಿ ಡಾಲರ್ ಮಾತ್ರ ಹೂಡಿಕೆಯಾಗಿದೆ. ಕಳೆದ ಸಾಲಿಗೆ ಹೋಲಿಸಿದರೆ 2.8 ಶತ ಕೋಟಿ ಡಾಲರ್ ಇಳಿಕೆಯಾಗಿದೆ ಎಂದು ವರದಿಯಲ್ಲಿ ಕಳವಳ ವ್ಯಕ್ತಪಡಿಸಲಾಗಿದೆ.
ಸ್ಟಾರ್ಟ್ ಅಪ್ ಹಾಗೂ ಐಟಿ ಕ್ಷೇತ್ರದ ವಿದೇಶಿ ಹೂಡಿಕೆ ಕುಸಿತ ಇದಕ್ಕೆ ಪ್ರಮುಖ ಕಾರಣ. 2022-23ರ ಮೊದಲ ತ್ರೈಮಾಸಿಕದಲ್ಲಿ 6.6 ಶತ ಕೋಟಿ ಡಾಲರ್ನಿಂದ 2023-24ರ ಮೊದಲ ತ್ರೈ ಮಾಸಿಕದಲ್ಲಿ 1.9 ಶತ ಕೋಟಿ ಡಾಲರ್ನಷ್ಟು ಸ್ಟಾರ್ಟ್ ಅಪ್ ಹೂಡಿಕೆ ದೇಶದಲ್ಲಿ ಕಡಿಮೆಯಾಗಿದೆ. ಅಂದರೆ ಕಳೆದ ವರ್ಷಕ್ಕಿಂತ ಶೇ.70ರಷ್ಟು ಇಳಿಕೆಯಾಗಿದೆ. ಇದರ ಪರಿಣಾಮ ದೇಶದ ಸ್ಟಾರ್ಟ್ ಅಪ್ ರಾಜಧಾನಿ ಎಂದು ಹೆಸರಾದ ಬೆಂಗಳೂರಿನ ಮೇಲೂ ಆಗಿದೆ.
ಬೆಂಗಳೂರಿನ ಸ್ಟಾರ್ಟ್ ಅಪ್ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ 2022-23ರ ಮೊದಲ ತ್ರೈಮಾಸಿಕದಲ್ಲಿ 3.4 ಶತಕೋಟಿ ಡಾಲರ್ನಷ್ಟಿದ್ದ ವಿದೇಶಿ ಬಂಡವಾಳ ಹೂಡಿಕೆ 2023-24ರ ಮೊದಲ ತ್ರೈಮಾಸಿಕದಲ್ಲಿ 0.6 ಶತಕೋಟಿ ಡಾಲರ್ಗೆ, ಅಂದರೆ ಶೇ.80ರಷ್ಟು ಇಳಿಕೆಯಾಗಿದೆ. ಕಂಪ್ಯೂಟರ್ ತಂತ್ರಾಂಶ ಮಾರುಕಟ್ಟೆ ಮತ್ತು ಸೇವಾ ವಲಯದಲ್ಲಿ 4 ಶತಕೋಟಿ ಡಾಲರ್ ಇಳಿಕೆಯಾಗಿದೆ. ವಿದೇಶಿ ನೇರ ಹೂಡಿಕೆಯ ಕುಸಿತ ರಾಜ್ಯದ ಮೇಲೆ ಹೆಚ್ಚು ಪರಿಣಾಮ ಬೀರಲಿದೆ ಎಂದು ವರದಿಯಲ್ಲಿ ಆತಂಕ ವ್ಯಕ್ತಪಡಿಸಲಾಗಿದೆ.
1.17 ಕೋಟಿ ಮಹಿಳೆಯರಿಗೆ ಗೃಹಲಕ್ಷ್ಮಿ
ರಾಜ್ಯದಲ್ಲಿ 1.17 ಕೋಟಿ ಮಹಿಳೆಯರು ಗೃಹ ಲಕ್ಷ್ಮಿಯೋಜನೆ ಫಲಾನುಭವಿಗಳಾಗಿದ್ದು, ಗ್ಯಾರಂಟಿ ಯೋಜನೆಗಳಿಗಾಗಿ 36,607 ಕೋಟಿ ರೂ. ನಿಗದಿ ಮಾಡಲಾಗಿದೆ. ಗೃಹ ಲಕ್ಷ್ಮಿಯೋಜನೆಗಾಗಿ ಬಜೆಟ್ನಲ್ಲಿ 17,500 ಕೋಟಿ ರೂ. ಮೀಸಲಿಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್ ಗೆ ಹೊಡೆದ ಯುವಕ!
ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್ ಅಸಮಾಧಾನ
Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು
Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್ ಗಾಂಧಿ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ
Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್ ಗೆ ಹೊಡೆದ ಯುವಕ!
ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್ ಅಸಮಾಧಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.