Thirthahalli: ಅರಣ್ಯ ಒತ್ತುವರಿ ತೆರವು ವಿಚಾರ: ತೀರ್ಥಹಳ್ಳಿಯಲ್ಲಿ ಬೃಹತ್ ಪ್ರತಿಭಟನೆ!
Team Udayavani, Aug 14, 2024, 6:01 PM IST
ತೀರ್ಥಹಳ್ಳಿ: ಈಗಾಗಲೇ ಅರಣ್ಯ ಒತ್ತುವರಿ ತೆರವು ಬಗ್ಗೆ ನಾವೆಲ್ಲರೂ ಸಭೆ ನಡೆಸಿದ್ದೇವೆ. ಅದೊಂದು ಅವೈಜ್ಞಾನಿಕ ಒತ್ತುವರಿ ತೆರವು ಪ್ರಕ್ರಿಯೆ ಆಗಿದೆ. ಈ ಕಾರಣಕ್ಕೆ ಆಗಸ್ಟ್ 19 ಕ್ಕೆ ಬೃಹತ್ ಪ್ರತಿಭಟನೆ ನಡೆಸಲಿದ್ದೇವೆ ಎಂದು ರೈತ ಸಂಘದ ಮುಖಂಡರಾದ ಕಂಬಳಿಗೆರೆ ರಾಜೇಂದ್ರ ತಿಳಿಸಿದರು.
ಬುಧವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಅವೈಜ್ಞಾನಿಕ ಒತ್ತುವರಿ ತೆರವು ಖಂಡಿಸಿ 19 ರಂದು ಪಕ್ಷಾತೀತವಾಗಿ ಪ್ರತಿಭಟನೆ ನಡೆಯಲಿದೆ. ಈ ಪ್ರತಿಭಟನೆಗೆ ರೈತ ಸಂಘ, ಸಮಾನ ಮನಸ್ಕರು, ಕರ್ನಾಟಕ ರಕ್ಷಣಾ ವೇದಿಕೆ, ದಲಿತ ಸಂಘರ್ಷ ಸಮಿತಿ ಸೇರಿ ಹಲವು ಸಂಘಟನೆಗಳು ಭಾಗಿಯಾಗಲಿವೆ ಎಂದರು.
ತೀರ್ಥಹಳ್ಳಿಯ ವಿಚಾರಗಳನ್ನು ರಾಜ್ಯದ ಪ್ರತಿಯೊಬ್ಬರು ಗಮನವಿಟ್ಟು ನೋಡುತ್ತಾರೆ. ಹಾಗಾಗಿ ಈ ಪ್ರತಿಭಟನೆ ಮಹತ್ವದ್ದಾಗಿದೆ. ಇಲ್ಲಿ ಯಾರು ಬೇರೆ ಕಡೆಯಿಂದ ಬಂದು ವಲಸೆ ಸಾಗುವಳಿ ಮಾಡಿದವರಲ್ಲ, ಇಲ್ಲಿ ಇದ್ದಂತಹವರೇ ಸಾಗುವಳಿ ಮಾಡಿ ಬೆಳೆ ಬೆಳೆದವರು. ಅಂತವರ ಭೂಮಿಯನ್ನು ತೆರವು ಮಾಡುವುದು ಸರಿಯಲ್ಲ. ಅರಣ್ಯ ಇಲಾಖೆಯವರೇ ಒತ್ತುವರಿ ಮಾಡುತ್ತಾರೆ.
ಇಲ್ಲಿನ ಜನರಿಗೆ ರಸ್ತೆ, ಮನೆ, ಕುಡಿಯಲು ನೀರಿನ ವ್ಯವಸ್ಥೆ, ಅದಕ್ಕೂ ಮೀರಿ ಮತದಾನದ ಹಕ್ಕು ಕೊಡುತ್ತಾರೆ. ಇದೆಲ್ಲಾ ಆದ ಮೇಲೆ ಕಟ್ಟಿಕೊಂಡ ಮನೆ ಒತ್ತುವರಿ ಜಾಗ ಎಂದು ಹೇಳುತ್ತಾರೆ. ಇದರಲ್ಲಿ ನ್ಯಾಯ ಎಲ್ಲಿದೆ? ಎಂದು ಪ್ರಶ್ನೆ ಮಾಡಿದರು.
ಕಾಡನ್ನು ಕಡಿದು ಎಂ.ಪಿ.ಎಂ ಕಾರ್ಖಾನೆ ಮಾಡಿದ್ದಾರೆ. ಅಂತಹ ಎಷ್ಟೋ ಕಾಡುಗಳನ್ನು ಕಡಿದಿದ್ದಾರೆ. ಮೊದಲು ಅಂತಹ ಜಾಗದಲ್ಲಿ ಕಾಡನ್ನು ಬೆಳಸಿ. ಅದನ್ನು ಬಿಟ್ಟು ಒತ್ತುವರಿ ಜಾಗವನ್ನು ಒತ್ತಾಯ ಪೂರ್ವಕವಾಗಿ ತೆರವು ಮಾಡುವುದು ಸರಿಯಲ್ಲ. ಲೇಔಟ್ ಹಾಗೂ ನೂರಾರು ಎಕರೆ ಒತ್ತುವರಿ ಮಾಡಿದವರನ್ನು ಕೇಳುವುದಿಲ್ಲ. ಆದರೆ ರೈತರ ಸಮಸ್ಯೆಯನ್ನು ಸರ್ಕಾರ ಸರಿಪಡಿಸುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಕೋಡ್ಲು ವೆಂಕಟೇಶ್, ಹೋರಬೈಲು ರಾಮಕೃಷ್ಣ, ನೆಂಪೆ ದೇವರಾಜ್, ಶಿವಾನಂದ ಕರ್ಕಿ, ನಿಶ್ಚಲ್ ಜಾದೂಗಾರ್, ಅಭಿಲಾಷ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B. Y. Vijayendra: ಹಿರಿಯರನ್ನು ಕಡೆಗಣಿಸಿಲ್ಲ, ಬಿಎಸ್ವೈ ಮಗನೆಂಬ ಅಹಂಕಾರ ಇಲ್ಲ
B. Y. Vijayendra ಭ್ರಷ್ಟ ಮುಕ್ತ ಭಾರತ ನಿರ್ಮಿಸಲು ಪ್ರಧಾನಿ ಮೋದಿ ಪಣ
Sagara: ʼಅಡಿಕೆಗೆ ಬಣ್ಣ ಹಾಕಿ, ಕಲಬೆರಕೆಗೊಳಿಸಿ ಮಾರುಕಟ್ಟೆಗೆ ಬಿಡುವವರ ಮೇಲೆ ಕ್ರಮವಹಿಸಿʼ
Shivamogga : ಬೀಡಿಗಾಗಿ ಖೈದಿಗಳಿಂದ ಕಲ್ಲು ತೂರಾಟ, ಸಿಬ್ಬಂದಿಗೆ ಜೀವ ಬೆದರಿಕೆ
Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.