ಗ್ರಾಪಂಗಳಲ್ಲಿ “ಜೀವವೈವಿಧ್ಯ ನಿರ್ವಹಣಾ ಸಮಿತಿ’ ರಚನೆ


Team Udayavani, Nov 4, 2019, 3:10 AM IST

karnataka-govt-logo

ಬೆಂಗಳೂರು: ಗ್ರಾಮೀಣ ಭಾಗದಲ್ಲಿನ ಜೀವವೈಧ್ಯತೆಯನ್ನು ಕಾಪಾಡಿ ಅದನ್ನು ಭವಿಷ್ಯದ ದೃಷ್ಟಿಯಿಂದ ಸಂರಕ್ಷಿಸಲು ಗಿಡ-ಮರ, ಜೀವ-ಜಂತು, ನೆಲ-ಜಲ, ಕಾಡು-ನಾಡು ಸೇರಿ ಸಕಲ ಜೀವರಾಶಿಗಳ ಸಂರಕ್ಷಣೆ ಮತ್ತು ನಿರ್ವಹಣೆಗೆ ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ “ಜೀವವೈವಿಧ್ಯ ನಿರ್ವಹಣಾ ಸಮಿತಿ’ಗಳು ಅಸ್ತಿತ್ವಕ್ಕೆ ಬರಲಿವೆ.

ಈಗಾಗಲೇ ರಾಜ್ಯದ 6,020ಕ್ಕೂ ಹೆಚ್ಚು ಗ್ರಾಪಂಗಳಲ್ಲಿ ಜೀವವೈವಿಧ್ಯ ನಿರ್ವಹಣಾ ಸಮಿತಿ ರಚನೆ ಕಾರ್ಯ ಪ್ರಗತಿಯಲ್ಲಿದೆ. ಶೀಘ್ರವೇ ರಚನೆ ಕಾರ್ಯ ಪೂರ್ಣಗೊಂಡು ಸಮಿತಿಗಳು ಅನುಷ್ಠಾನಕ್ಕೆ ಬರಲಿವೆ. ಈ ಸಮಿತಿಗಳಿಗೆ ಕಾಯಕಲ್ಪ ನೀಡಲು ಕರ್ನಾಟಕ ಜೀವ ವೈವಿಧ್ಯ ಮಂಡಳಿ ಕ್ರಿಯಾಯೋಜನೆ ರೂಪಿಸಿದ್ದರೆ, ಆ ಸಮಿತಿಗಳಿಗೆ ಹೆಚ್ಚಿನ ಕಾನೂನು ಬಲ ನೀಡಲು ಗ್ರಾಮೀಣಾ ಭಿವೃದ್ಧಿ ಇಲಾಖೆ ನಿರ್ಧರಿಸಿದೆ.

ಸಮಿತಿಗಳ ರಚನೆಗೆ ವೇಗ: ಜೈವಿಕ ವೈವಿಧ್ಯ ಅಧಿನಿಯಮ 2002ರ ಸೆಕ್ಷನ್‌ 41(1), ಜೈವಿಕ ವೈವಿಧ್ಯ ನಿಯಮ ಗಳು-2005ರ ನಿಯಮ 22 ಮತ್ತು ಕರ್ನಾಟಕ ಜೈವಿಕ ವೈವಿಧ್ಯ ನಿಯಮ ಗಳು-2005ರ ನಿಯಮ 21ರ ಪ್ರಕಾರ ಪಂಚಾಯಿತಿಗಳಲ್ಲಿ “ಜೀವವೈವಿಧ್ಯ ನಿರ್ವ ಹಣಾ ಸಮಿತಿ’ಗಳ ರಚನೆ ಕಡ್ಡಾಯ ವಾಗಿದೆ. ಆದರೆ, ಈ ಬಗ್ಗೆ ಅಷ್ಟೊಂದು ಗಮನ ಹರಿಸಲಾಗುತ್ತಿರಲಿಲ್ಲ. ಈ ಮಧ್ಯೆ, ಪಂಚಾಯಿತಿಗಳಲ್ಲಿ ಸಮಿತಿಗಳನ್ನು ಕಡ್ಡಾಯವಾಗಿ ರಚಿಸಬೇಕೆಂದು 2019ರ ಆ.9ರಂದು “ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ’ ಆದೇಶ ನೀಡಿದ ಬಳಿಕ ಸಮಿತಿಗಳ ರಚನೆಗೆ ವೇಗ ಸಿಕ್ಕಿದೆ.

ಪಂಚಾಯಿತಿಗಳಲ್ಲಿ ರಚನೆಯಾಗುವ ಜೀವವೈವಿಧ್ಯ ನಿರ್ವಹಣಾ ಸಮಿತಿಗಳ ಮೇಲ್ವಿಚಾರಣೆಯನ್ನು “ಕರ್ನಾಟಕ ಜೀವ ವೈವಿಧ್ಯ ಮಂಡಳಿ’ ನಡೆಸುತ್ತದೆ. ಅದರ ಮಾಹಿತಿಯಿಂತೆ ರಾಜ್ಯದ 6,024 ಗ್ರಾಪಂ ಗಳ ಪೈಕಿ ಈವರೆಗೆ 5 ಸಾವಿರಕ್ಕೂ ಹೆಚ್ಚು ಕಡೆ ಸಮಿತಿಗಳ ರಚನೆಯಾಗಿದೆ. ಉಳಿದ ಕಡೆ ಆದಷ್ಟು ಬೇಗ ಸಮಿತಿ ರಚನೆ ಕಾರ್ಯ ಪೂರ್ಣಗೊಳ್ಳಲಿದೆ. ಈ ಸಮಿತಿ ಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯಾ ರಂಭ ಮಾಡಲು ಆರಂಭಿಸಿದರೆ, ಗ್ರಾಮೀಣ ಭಾಗದ ಜೀವವೈವಿಧ್ಯತೆಯ ರಕ್ಷಣೆ ಮತ್ತು ನಿರ್ವಹಣೆಗೆ ಖಚಿತ ಚೌಕಟ್ಟು ಸಿಗಲಿದೆ.

ಏನಿದು ಜೀವವೈವಿಧ್ಯ ನಿರ್ವಹಣಾ ಸಮಿತಿ?: ಜೈವಿಕ ವೈವಿಧ್ಯ ಅಧಿನಿಯ ಮಗಳ ಪ್ರಕಾರ ಪ್ರತಿ ಪಂಚಾಯಿತಿಗಳಲ್ಲಿ ಕಡ್ಡಾಯವಾಗಿ ಜೀವವೈವಿಧ್ಯ ನಿರ್ವಹಣಾ ಸಮಿತಿ ರಚಿಸಬೇಕು. ಈ ಸಮಿತಿ ತನ್ನ ಅಧಿಕಾರ ವ್ಯಾಪ್ತಿಯ ಪ್ರದೇಶದಲ್ಲಿ “ಜೀವವೈವಿಧ್ಯ ಸಂರಕ್ಷಣೆ, ಜೈವಿಕ ಸಂಪ ನ್ಮೂಲಗಳ ಸುಸ್ಥಿತ ಬಳಕೆ, ಜೀವವೈವಿಧ್ಯ ದಾಖಲಾತಿ ತಯಾರಿಸುವುದು, ಜೀವಿಗಳ ಆವಾಸ ಸ್ಥಾನಗಳ ಗುರುತಿಸುವಿಕೆ ಮತ್ತು ಅವುಗಳ ಸಂರಕ್ಷಣೆ, ಸ್ಥಳೀಯ ವನ್ಯ ತಳಿ, ನಾಟಿ ತಳಿ, ಕೃಷಿ ತಳಿಗಳ ಸಂರಕ್ಷಣೆ, ಸ್ಥಳೀಯ ಸಾಕು ಪ್ರಾಣಿಗಳ ಸಂರಕ್ಷಣೆ, ಸೂಕ್ಷ್ಮಾಣುಜೀವಿಗಳ ಹಾಗೂ ಜೈವಿಕ ಸಂಪನ್ಮೂಲಗಳ ಸಂಬಂಧಿತ ಜ್ಞಾನ ಮತ್ತು ಮಾಹಿತಿಗಳನ್ನು ದಾಖಲು ಮಾಡುವ ಹೊಣೆಗಾರಿಕೆ ಹೊಂದಿದೆ.

ಸ್ವಾಯತ್ತ ಸಂಸ್ಥೆಗಳು: ರಾಷ್ಟ್ರೀಯ ಹಸಿರು ನ್ಯಾಯಾಧಿಕರಣದ ತೀರ್ಪು ಹಾಗೂ ಅರಣ್ಯ ಇಲಾಖೆಯ ಮಾರ್ಗಸೂಚಿಗಳಂತೆ ಕರ್ನಾಟಕ ಜೀವವೈವಿಧ್ಯ ಮಂಡಳಿಯ ಮೇಲ್ವಿಚಾರಣೆಯಲ್ಲಿ ಗ್ರಾಪಂಗಳಲ್ಲಿ “ಜೀವವೈವಿಧ್ಯ ನಿರ್ವಹಣಾ ಸಮಿತಿ’ಗಳನ್ನು ರಚಿಸಲಾಗುತ್ತಿದೆ. ಜೈವಿಕ ವೈವಿಧ್ಯ ಕಾಯ್ದೆ-2002ರ ಪ್ರಕಾರ ಈ ಸಮಿತಿಗಳು ಸ್ವಾಯತ್ತ ಸಂಸ್ಥೆಗಳಾಗಿರುತ್ತವೆ. ಆದರೆ, ಈ ಸಮಿತಿಗಳನ್ನು ಪಂಚಾಯತ್‌ರಾಜ್‌ ಕಾಯ್ದೆಯ ಸೆಕ್ಷನ್‌ 61 (ಎ)ರಡಿ ತಂದು ಪಂಚಾಯಿತಿ ಉಪ ಸಮಿತಿ ಸ್ಥಾನಮಾನ ಕೊಡುವ ಮೂಲಕ ಹೆಚ್ಚಿನ ಕಾನೂನು ಬಲ ನೀಡಲು ಗ್ರಾಮೀಣಾಭಿವೃದ್ಧಿ ಇಲಾಖೆ ನಿರ್ಧರಿಸಿದೆ.

“ಜನತಾ ಜೀವವೈವಿಧ್ಯ ದಾಖಲಾತಿ’ ತಯಾರಿಕೆ: ಜೈವಿಕ ವೈವಿಧ್ಯ ಅಧಿನಿಯಮ-2002ರ ಪ್ರಕಾರ ಪ್ರತಿ ಜೀವವೈವಿಧ್ಯ ನಿರ್ವಹಣಾ ಸಮಿತಿಯು ತನ್ನ ಅಧಿಕಾರ ವ್ಯಾಪ್ತಿಯ ಪ್ರದೇಶದಲ್ಲಿ “ಜನತಾ ಜೀವವೈವಿಧ್ಯ ದಾಖಲಾತಿ (ಪಿಬಿಆರ್‌) ತಯಾರಿಸಬೇಕು. ಈ ದಾಖಲಾತಿಯು ಆಯಾ ಗ್ರಾ.ಪಂನ ಜೀವವೈವಿಧ್ಯತೆಯ ಮಾಹಿತಿ ಹಾಗೂ ಅಂಕಿ-ಅಂಶಗಳನ್ನು ಒಳಗೊಂಡಿರುತ್ತದೆ.

ಮುಖ್ಯವಾಗಿ ಆ ಪಂಚಾಯಿತಿಯ ವ್ಯಾಪ್ತಿಗೆ ಬರುವ ಅರಣ್ಯ ಭೂಮಿ, ಕೃಷಿ ಜಮೀನು, ಸಂರಕ್ಷಿತ ಅರಣ್ಯ ಪ್ರದೇಶ, ಅರಣ್ಯ ಸಂಪತ್ತು, ಗಿಡ-ಮರ, ಹುಳು-ಜಂತು, ಪ್ರಾಣಿ-ಪಕ್ಷಿ ಇವುಗಳ ವಿವಿಧ ಪ್ರಬೇಧ ಮತ್ತು ತಳಿಗಳ ಮಾಹಿತಿ, ಔಷಧೀಯ ಗಿಡಮೂಲಿಕೆಗಳ ವಿವರ, ಪಾರಂಪರಿಕ ತಾಣ, ಗುಡಿ-ಗುಂಡಾರಗಳ ಇತಿಹಾಸದ ಜತೆಗೆ ಪ್ರಸಕ್ತ ಅಂಕಿ-ಅಂಶಗಳನ್ನು ಈ ದಾಖಲಾತಿ ಒಳಗೊಂಡಿರುತ್ತದೆ. ಇದು ಸಂಬಂಧಪಟ್ಟ ಗ್ರಾಪಂನ ಜೀವವೈವಿಧ್ಯತೆಯ ಆರ್‌ಟಿಸಿ ದಾಖಲೆ ಇದ್ದಂತೆ ಎಂದು ಅಧಿಕಾರಿಗಳು ಹೇಳುತ್ತಾರೆ.

ರಾಷ್ಟ್ರೀಯ ಹಸಿರು ನ್ಯಾಯಾಧಿಕರಣದ ತೀರ್ಪಿನಂತೆ ಪಂಚಾಯಿತಿಗಳಲ್ಲಿ ಜೀವವೈವಿಧ್ಯ ನಿರ್ವಹಣಾ ಸಮಿತಿಗಳನ್ನು ರಚಿಸಲಾಗುತ್ತಿದೆ. ಈಗಾಗಲೇ ಬಹುತೇಕ ಪಂಚಾಯಿತಿಗಳಲ್ಲಿ ಸಮಿತಿ ರಚನೆಯಾಗಿದೆ. ಜತೆಗೆ ಜನತಾ ಜೀವವೈವಿಧ್ಯ ದಾಖಲಾತಿ’ ತಯಾರಿಸುವ ಪ್ರಕ್ರಿಯೆ ನಡೆದಿದೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಪ್ರಗತಿ ಉತ್ತಮವಾಗಿದೆ.
-ಕೆ.ಆರ್‌. ಪ್ರಸನ್ನ, ತಾಂತ್ರಿಕ ಕಾರ್ಯನಿರ್ವಾಹಕ (ಸಸ್ಯಶಾಸ್ತ್ರ) ಕರ್ನಾಟಕ ಜೀವವೈವಿಧ್ಯ ಮಂಡಳಿ

* ರಫೀಕ್‌ ಅಹ್ಮದ್‌

ಟಾಪ್ ನ್ಯೂಸ್

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

1-a-ct

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.