ಶಿಷ್ಟಾಚಾರ ಉಲ್ಲಂಘನೆ: ವಕ್ಫ್ ಮಳಿಗೆಯಲ್ಲಿದ್ದ ಮಾಜಿ ಸಚಿವ ಅನ್ಸಾರಿ ಹೆಸರು ತೆರವು
ಶಾಸಕ ಪರಣ್ಣ ಮುನವಳ್ಳಿ ದೂರು
Team Udayavani, Dec 30, 2021, 5:52 PM IST
ಗಂಗಾವತಿ: ನಗರದ ಬಿರೂನಿ ಮಸೀದಿ ವಕ್ಫ್ ವಾಣಿಜ್ಯ ಮಳಿಗೆಗಳ ಮೇಲೆ ಅಳವಡಿಸಿದ್ದ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಅವರ ಹೆಸರನ್ನು ವಕ್ಫ್ ಇಲಾಖೆಯ ಅಧಿಕಾರಿಗಳು ಗುರುವಾರ ತೆರವುಗೊಳಿಸಿದ್ದಾರೆ.
ವಾಣಿಜ್ಯ ಮಳಿಗೆಗಳ ಉದ್ಘಾಟನೆ ಸಂದರ್ಭದಲ್ಲಿ ಹಾಲಿ ಶಾಸಕರನ್ನು ಆಹ್ವಾನಿಸದೇ ನಿರ್ಲಕ್ಷ್ಯ ಮಾಡಲಾಗಿದೆ ಮತ್ತು ಮಾಜಿ ಸಚಿವರ ಹೆಸರನ್ನು ಮಳಿಗೆಯ ಮೇಲೆ ಹಾಕಲಾಗಿದ್ದು ಇದು ಶಿಷ್ಟಾಚಾರ ಉಲ್ಲಂಘನೆಯಾಗಿದೆ ಕೂಡಲೇ ಕ್ರಮ ಕೈಗೊಳ್ಳುವಂತೆ ಶಾಸಕ ಪರಣ್ಣ ಮುನವಳ್ಳಿ ರಾಜ್ಯ ಸರ್ಕಾರ ಮತ್ತು ವಕ್ಫ್ ಇಲಾಖೆಯ ಆಯುಕ್ತರಲ್ಲಿ ದೂರು ಸಲ್ಲಿಸಿದ್ದರು.
ಕೂಡಲೇ ಹೆಸರನ್ನು ತೆಗೆದುಹಾಕುವಂತೆ ವಕ್ಫ್ ಇಲಾಖೆ ಜಿಲ್ಲಾ ವಕ್ಫ್ ಇಲಾಖೆ ಅಧಿಕಾರಿಗೆ ಸೂಚನೆ ನೀಡಿದರು ನಂತರ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಹೆಸರನ್ನು ಮೇಲೆ ಬಟ್ಟೆಯಿಂದ ಮರೆ ಮಾಡಲಾಗಿತ್ತು .ಪುನಃ ಶಾಸಕ ಪರಣ್ಣ ಮನವಳ್ಳಿ ಇದನ್ನು ಸರ್ಕಾರದ ಗಮನಕ್ಕೆ ತಂದು ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಉದ್ಘಾಟನೆಯ ಹೆಸರನ್ನ ತೆರವುಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ .
ವಕ್ಫ್ ಹೆಸರಿನಲ್ಲಿರುವ ಈ ಜಾಗದಲ್ಲಿ ವಾಣಿಜ್ಯ ಮಳಿಗೆಗಳನ್ನು ನಿರ್ಮಿಸುವಾಗ ಗಾಂಧಿನಗರದ ಕೆಲ ನಿವಾಸಿಗಳು ಆಕ್ಷೇಪ ವ್ಯಕ್ತಪಡಿಸಿದರು ಆಗ ಮಳಿಗೆಗಳ ನಿರ್ಮಾಣ ಮಾಡದಂತೆ ಆಕ್ಷೇಪ ವ್ಯಕ್ತವಾಗಿತ್ತು .ಜಿಲ್ಲೆಯ ವಿವಿಧ ಭಾಗದಿಂದ ವಾಣಿಜ್ಯ ಮಳಿಗೆ ನಿರ್ಮಾಣದ ಜಾಗದಲ್ಲಿ ಪೊಲೀಸ್ ಅಧಿಕಾರಿಗಳನ್ನು ನಿಯೋಜನೆ ಮಾಡಲಾಗಿತ್ತು ಈ ಮಧ್ಯೆ ಮಾಜಿ ಎಂಎಲ್ಸಿ ಎಚ್ ಆರ್ ಶ್ರೀನಾಥ್ ಮಳಿಗೆ ನಿರ್ಮಾಣ ಕಾರ್ಯಕ್ಕೆ ಪೂಜೆ ನೆರವೇರಿಸಿ ಚಾಲನೆ ನೀಡಿದರು ಈ ಸಂದರ್ಭದಲ್ಲಿ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಸಹ ಸ್ಥಳಕ್ಕೆ ಭೇಟಿ ನೀಡಿ ಮಳಿಗೆಗಳ ನಿರ್ಮಾಣಕ್ಕೆ ಬೆಂಬಲ ಸೂಚಿಸಿದ್ದರು .ಮಳಿಗೆಗಳ ಉದ್ಘಾಟನೆ ಸಂದರ್ಭದಲ್ಲಿ ಜನಪ್ರತಿನಿಗಳನ್ನು ಆಹ್ವಾನ ಮಾಡದೆ ಮಾಜಿ ಸಚಿವರನ್ನು ಆಹ್ವಾನಿಸಿದ್ದು ಶಿಷ್ಟಾಚಾರ ಉಲ್ಲಂಘನೆಯಾಗಿದೆ ಎಂದು ಶಾಸಕ ಪರಣ್ಣ ಮನವಳ್ಳಿ ಸರ್ಕಾರದ ಗಮನಕ್ಕೆ ತಂದಿದ್ದರು .
ಇದೀಗ ವಾಣಿಜ್ಯ ಮಳಿಗೆಗಳ ಮೇಲೆ ಉದ್ಘಾಟಕರು ಇಕ್ಬಾಲ್ ಅನ್ಸಾರಿ ಎಂಬ ನಾಮಫ ಲಕ ಅಳವಡಿಸಿದ್ದು ಇದರಿಂದ ಶಿಷ್ಟಾಚಾರ ಉಲ್ಲಂಘನೆ ಯಾಗಿದೆ, ಕೂಡಲೇ ತೆರವುಗೊಳಿಸುವಂತೆ ರಾಜ್ಯ ಸರ್ಕಾರದಿಂದ ಜಿಲ್ಲಾ ವಕ್ಫ್ ಅಧಿಕಾರಿ ಗಳಿಗೆ ಸೂಚನೆ ರವಾನೆಯಾಗಿತ್ತು .ಗುರುವಾರ ಸ್ವತಃ ವಕ್ಫ್ ಇಲಾಖೆಯ ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಉದ್ಘಾಟಕರು ಇಕ್ಬಾಲ್ ಅನ್ಸಾರಿ ಎಂಬ ಹೆಸರನ್ನು ತೆರವುಗೊಳಿಸಿದ್ದಾರೆ.
ಮಳಿಗೆ ಉದ್ಘಾಟನೆಯ ಸಂದರ್ಭದಲ್ಲಿ ಶಿಷ್ಟಾಚಾರ ಉಲ್ಲಂಘಿಸಿದ ರ ಕುರಿತು ರಾಜ್ಯ ಸರ್ಕಾರಕ್ಕೆ ಶಾಸಕ ಪರಣ್ಣ ಮನವಳ್ಳಿ ದೂರು ನೀಡಿದಾಗ ನಗರಸಭೆಯ ಸದಸ್ಯ ಹಾಗೂ ಅನ್ಸಾರಿ ಆಪ್ತ ಶ್ಯಾಮೀದ್ ಮನಿಯಾರ್ ಅಧ್ಯಕ್ಷರಾಗಿರುವ ಇಲ್ಲಿಯ ಮಸೀದಿಯ ಆಡಳಿತ ಮಂಡಳಿಯನ್ನು ಅಮಾನತ್ತಿನಲ್ಲಿಟ್ಟು ರಾಜ್ಯ ಸರಕಾರದ ವಕ್ಫ್ ಇಲಾಖೆ ಆದೇಶ ಹೊರಡಿಸಿತ್ತು .ಈ ಮಧ್ಯೆ ಧಾರವಾಡ ಹೈಕೋರ್ಟ್ ನಲ್ಲಿ ಅಮಾನತು ಆದೇಶವನ್ನು ಶಾಮೀದ್ ಮನಿಯಾರ್ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿ ಅಮಾನತು ಆದೇಶಕ್ಕೆ ತಡೆ ತಂದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್ ಅಸಮಾಧಾನ
ಕರ್ನಾಟಕಕ್ಕೆ ಬೇಕಿದೆ ಕೇರಳ ಮಾದರಿ ಶಿಕ್ಷಣ: ಶಾಸಕ ಹಿಟ್ನಾಳ
ಗಂಗಾವತಿ: ನಗರಸಭೆಯ ಸಾಮಾನ್ಯ ಸಭೆಯಲ್ಲಿ ನಿಯಮಮೀರಿ ಮಹಿಳಾ ಸದಸ್ಯರ ಪತಿರಾಯರು,ಸಂಬಂಧಿಗಳು ಭಾಗಿ
Koppal; ಪ್ರಚೋದನಕಾರಿ ಹೇಳಿಕೆ ಕೊಟ್ಟರೆ ಸಹಿಸಲ್ಲ: ಸಚಿವ ಶಿವರಾಜ ತಂಗಡಗಿ
ಕೊಪ್ಪಳ: ಅದಾಲತ್ನಲ್ಲಿ ಒಂದಾದ 14 ಜೋಡಿ ಇತ್ಯರ್ಥವಾದ 35,721 ಪ್ರಕರಣಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್ ಪ್ರಕರಣ: ಲೋಕಾಯುಕ್ತದಿಂದ ಬಿಎಸ್ವೈ ವಿಚಾರಣೆ
Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ
Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್ ಸೀಮಿತ: ಆರ್. ಅಶೋಕ್
Udupi: ಜಿಲ್ಲೆಯಲ್ಲಿ ಕಾಲರಾ 8 ಪ್ರಕರಣ ಸಕ್ರಿಯ
Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.