Manipal ಪ್ರಶಾಮಕ ಆರೈಕೆ ಕೇಂದ್ರಕ್ಕೆ ಶಿಲಾನ್ಯಾಸ
Team Udayavani, Sep 17, 2023, 12:03 AM IST
ಮಣಿಪಾಲ: ಮಾಹೆ ಟ್ರಸ್ಟ್ ಅಧ್ಯಕ್ಷರೂ ಆದ ಮಣಿಪಾಲ ಶಿಕ್ಷಣ ಮತ್ತು ವೈದ್ಯಕೀಯ ಸಮೂಹದ ಮುಖ್ಯಸ್ಥರಾದ ಡಾ| ರಂಜನ್ ಪೈ ಅವರು ಹಾವಂಜೆಯಲ್ಲಿ ಮಣಿಪಾಲ ಪ್ರಶಾಮಕ ಆರೈಕೆ ಕೇಂದ್ರದ ನಿರ್ಮಾಣಕ್ಕೆ ಶನಿವಾರ ಚಾಲನೆ ನೀಡಿದರು.
ಮಣಿಪಾಲ ಹಾಸ್ಪೈಸ್ ಮತ್ತು ರಿಸ್ಪ್ಟ್ ಸೆಂಟರ್ ರೋಗಿಗಳ ಆರೋ ಗ್ಯ ಸ್ಥಿತಿಗೆ ಅನುಗುಣವಾಗಿ ಉನ್ನತ ದರ್ಜೆಯ ಆರೈಕೆಯನ್ನು ಒದಗಿ ಸುವ ಗುರಿಯನ್ನುಹೊಂದಿದೆ. ಗುಣ ಪಡಿಸಲಾಗದ, ದೀರ್ಘ ಕಾಲದ ಕಾಯಿಲೆಗಳನ್ನು ಎದುರಿಸುತ್ತಿರುವ ವ್ಯಕ್ತಿಗಳು ಮತ್ತು ಕುಟುಂಬಗಳಿಗೆ ಅಸಾಧಾರಣ ಬೆಂಬಲ, ರೋಗಲಕ್ಷಣ ನಿರ್ವಹಣೆ, ಘನತೆ ಮತ್ತು ಸೌಕರ್ಯ ವನ್ನು ನೀಡುವುದು ಇದರ ಉದ್ದೇಶ.
ಈ ಕೇಂದ್ರವು 100 ಹಾಸಿಗೆಯ ಒಳರೋಗಿಗಳ ಸೌಲಭ್ಯ ಹೊಂದಿದೆ. ದೇಶದಲ್ಲಿ 2ನೇ ಅತೀ ದೊಡ್ಡ ಆಸ್ಪತ್ರೆ, ವಿಶ್ವವಿದ್ಯಾನಿಲಯ ಎರಡಕ್ಕೂ ಸಂ ಯೋಜಿತವಾದ ಮೊದಲ ಸೌಲಭ್ಯ ಇಲ್ಲಿರಲಿದೆ. ಒಂದೇ ಸ್ಥಳದಲ್ಲಿ ಪ್ರಶಾಮಕ ಆರೈಕೆ ಸೇವೆಗಳನ್ನು ನೀಡುತ್ತದೆ. ಕ್ಯಾನ್ಸರ್ ಮತ್ತು ಕ್ಯಾನ್ಸರ್ ಅಲ್ಲದ ಪರಿಸ್ಥಿತಿ ನಿರ್ವಹಣೆ, ಗುಣಪಡಿಸಲಾಗದ ಕಾಯಿಲೆಗಳ ವಿಭಾಗದಲ್ಲೂ ಸೇವೆ ಸಲ್ಲಿಸಲಿದೆ.
ಮಾಹೆ ಸಹ ಕುಲಾಧಿಪತಿ ಡಾ| ಎಚ್.ಎಸ್. ಬಲ್ಲಾಳ್, ಕುಲಪತಿ ಲೆ| ಜ| ಡಾ| ಎಂ.ಡಿ. ವೆಂಕಟೇಶ್, ಸಹ ಕುಲಪತಿ ಡಾ| ಶರತ್ ಕೆ. ರಾವ್, ಕುಲಸಚಿವ ಡಾ| ಗಿರಿಧರ್ ಕಿಣಿ, ಡಾ| ಎನ್.ಎನ್. ಶರ್ಮ, ಡಾ| ದಿಲೀಪ್ ನಾಯಕ್, ಹರಿನಾರಾಯಣ ಶರ್ಮ, ಮಣಿಪಾಲ್ ಫೌಂಡೇಶನ್ ಸಿಇಒ ಸಿ.ಜಿ. ಮುತ್ತಣ್ಣ, ಮಾಹೆ ಬೋಧನಾ ಆಸ್ಪತ್ರೆಗಳ ಮುಖ್ಯ ನಿರ್ವಹಣಾಧಿಕಾರಿ ಡಾ| ಆನಂದ್ ವೇಣುಗೋಪಾಲ್, ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ| ಅವಿನಾಶ್ ಶೆಟ್ಟಿ, ಕೆಎಂಸಿ ಮಂಗಳೂರು ಡೀನ್ ಡಾ| ಉಣ್ಣಿಕೃಷ್ಣನ್, ಕೆಎಂಸಿ ಮಣಿಪಾಲದ ಸಹ ಡೀನ್ ಹಾಗೂ ಉಪಶಾಮಕ ಔಷಧ ಮತ್ತು ಸಹಾಯಕ ಆರೈಕೆ ವಿಭಾಗದ ಮುಖ್ಯಸ್ಥ ಡಾ| ನವೀನ್ ಸಾಲಿನ್ಸ್ ಸಹಿತವಾಗಿ ಮಾಹೆ ವಿ.ವಿ.ಯ ಅಧಿಕಾರಿಗಳು, ಸಿಬಂದಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ
Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”
Bengaluru: 5ನೇ ಮಹಡಿಯಿಂದ ಜಿಗಿದು ಮಹಿಳಾ ಟೆಕಿ ಆತ್ಮಹತ್ಯೆ
Bengaluru: ರೇವ್ ಪಾರ್ಟಿ: ಸಿಸಿಬಿ ವಿರುದ್ಧವೇ ದೂರು
Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.