Fraud; ಸರಕಾರದ ಯೋಜನೆ ಹೆಸರಲ್ಲಿ ವಂಚನೆ ಹೆಚ್ಚಳ, ನಕಲಿ ಗ್ರಾಹಕಸೇವಾ ಕೇಂದ್ರಗಳು

ಆನ್‌ಲೈನ್‌ ವಂಚನೆಗೆ ಹೊಸ-ಹೊಸ ದಾರಿ!

Team Udayavani, Apr 3, 2024, 7:25 AM IST

Fraud; ಸರಕಾರದ ಯೋಜನೆ ಹೆಸರಲ್ಲಿ ವಂಚನೆ ಹೆಚ್ಚಳ, ನಕಲಿ ಗ್ರಾಹಕಸೇವಾ ಕೇಂದ್ರಗಳು

ಕೋಟ: ಆನ್‌ಲೈನ್‌ ವಂಚನೆ ಜಾಲಕ್ಕೆ ಬಲಿಯಾಗುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ವಂಚಕರು ಕೂಡ ಜನರನ್ನು ತಮ್ಮ ಖೆಡ್ಡಾಕ್ಕೆ ಬೀಳಿಸಲು ಹೊಸ-ಹೊಸ ದಾರಿಗಳನ್ನು ಕಂಡುಕೊಳ್ಳುತ್ತಿದ್ದಾರೆ. ಸರಕಾರದ ಯೋಜನೆ ಹೆಸರಲ್ಲಿ ಮೋಸ ಹೋಗುವವರ ಸಂಖ್ಯೆ ಹೆಚ್ಚುತ್ತಿದ್ದು, ಗೂಗಲ್‌ನಲ್ಲೂ ನಕಲಿ ಗ್ರಾಹಕಸೇವಾ ಕೇಂದ್ರಗಳ ಮೂಲಕ ವಂಚಿಸಲಾಗುತ್ತಿದೆ.

ಕೋಟ ಪೊಲೀಸ್‌ ಠಾಣೆ ವ್ಯಾಪ್ತಿಯ ಬಿದ್ಕಲ್‌ಕಟ್ಟೆಯ ಹರ್ಷವರ್ಧನ ಅವರಿಗೆ ಇತ್ತೀಚೆಗೆ ಫೇಸುºಕ್‌ನಿಂದ ಪಿಎಂ ಜನಧನ್‌ ಯೋಜನೆ ಹೆಸರಲ್ಲಿ ನಂಬರ್‌ ಪ್ಲೇಟ್‌ ಉದ್ಯೋಗ ಮಾಡಲು ಪಿಎಂವೈಜಿ ಯೋಜನೆಯಡಿ ಸಬ್ಸಿಡಿ ಲೋನ್‌ ಮಾಡಿಕೊಡುವುದಾಗಿ ಸಂದೇಶ ಬಂದಿತ್ತು. ಅದರಂತೆ ಸಂಪರ್ಕಿಸಿದಾಗ ಗುರುತಿನ ದಾಖಲೆಗಳನ್ನು ಪಡೆದು ಸಾಲ ಮಂಜೂರಾತಿ ಪ್ರಕ್ರಿಯೆಗಳಿಗೆ ಎಂದು 98,551 ರೂ.ಗಳನ್ನು ಆನ್‌ಲೈನ್‌ ಮೂಲಕ ವಂಚಕರು ಪಡೆದಿದ್ದಾರೆ.

ಇನ್ನೊಂದು ಪ್ರಕರಣದಲ್ಲಿ ಕೊಲ್ಲೂರು ಸಮೀಪದ ಶ್ರೀಕಾಂತ್‌ ಅವರನ್ನು ಪ್ರಧಾನಮಂತ್ರಿ ಜನಧನ್‌ ಯೋಜನೆಯಡಿ ಸಾಲ ಕೊಡಿಸುವುದಾಗಿ ಆನ್‌ಲೈನ್‌ ಮೂಲಕ ಸಂಪರ್ಕಿಸಿದ್ದು, ದಾಖಲೆ ಪತ್ರಗಳನ್ನು ಪಡೆದು 1 ಲಕ್ಷ ರೂ.ಗೂ ಅಧಿಕ ಪಡೆಯಲಾಗಿದೆ.

ಮಂಗಳೂರಿನ ಶ್ರೀಧರ್‌ ಅವರಿಗೆ ಕರೆ ಮಾಡಿ ಸ್ವಂತ ಉದ್ಯೋಗಕ್ಕೆ ಸಬ್ಸಿಡಿ ಸಾಲ ನೀಡುವುದಾಗಿ ದಾಖಲೆ ಪಡೆದು ಸಾಲ ಮಂಜೂರಾಗಿರುವಂತೆ ನಕಲಿ ಪತ್ರ ಕಳುಹಿಸಿ ಮುಂಗಡವಾಗಿ 1 ಲಕ್ಷ ರೂ. ಪಡೆಯಲಾಗಿದೆ. ಈ ರೀತಿಯ ಹಲವು ಪ್ರಕರಣಗಳು ದಾಖಲಾಗುತ್ತಿವೆ.

ನಕಲಿ ಕಸ್ಟಮರ್‌ ಕೇರ್‌
ನಮ್ಮ ಖಾತೆಯಿಂದ ತಪ್ಪಾಗಿ ಹಣ ಪಾವತಿಯಾದಾಗ ಅಥವಾ ಎಲೆಕ್ಟ್ರಾನಿಕ್‌ ವಸ್ತುಗಳ ಬಳಕೆಯಲ್ಲಿ ಸಮಸ್ಯೆಯಾದರೆ ಕಸ್ಟಮರ್‌ ಕೇರ್‌ ಮೊರೆ ಹೋಗುವುದು ಸಾಮಾನ್ಯ. ಆದರೆ ಆನ್‌ಲೈನ್‌ ವಂಚನೆ ಜಾಲಗಳು ಗೂಗಲ್‌ನಲ್ಲಿ ನಕಲಿ ಕಸ್ಟಮರ್‌ ಕೇರ್‌ ಸಂಪರ್ಕವನ್ನು ನಮೂದಿಸಿವೆ. ಆ ಸಂಖ್ಯೆಗೆ ಕರೆ ಮಾಡಿದರೆ ಸಹಾಯ ಮಾಡುವುದಾಗಿ ನಂಬಿಸಿ ಖಾತೆಯಲ್ಲಿನ ಹಣವನ್ನು ದೋಚುತ್ತಾರೆ. ಹಿರಿಯಡ್ಕದ ಕುಮಾರ್‌ ಗೂಗಲ್‌ ಪೇಯಲ್ಲಿ ಕೈತಪ್ಪಿ ಬೇರೊಬ್ಬರ ಖಾತೆಗೆ ಹಣ ಪಾವತಿಸಿದ್ದು ಅದನ್ನು ವಾಪಸು ಪಡೆಯಲೋಸುಗ ಗೂಗಲ್‌ನಲ್ಲಿ ಕಸ್ಟಮರ್‌ ಕೇರ್‌ ಸಂಪರ್ಕ ಸಂಖ್ಯೆಯನ್ನು ಹುಡುಕಿ ಕರೆ ಮಾಡಿದಾಗ 5 ಅಂಕಿಗಳ ಒಟಿಪಿ ಕಳುಹಿಸಿ ದಾಖಲಿಸುವಂತೆ ತಿಳಿಸಿದರು. ಪಾಸ್‌ವರ್ಡ್‌ ದಾಖಲಿಸುತ್ತಿದ್ದಂತೆ ಖಾತೆಯಿಂದ 75,040 ರೂ. ಮಾಯವಾಗಿತ್ತು. ಮಂಗಳೂರಿನ ರಿತೀಶ್‌ ಇದೇ ರೀತಿ ಲಕ್ಷಾಂತರ ರೂ. ಕಳೆದುಕೊಂಡಿದ್ದರು. ಕುಂದಾಪುರದ ಪ್ರದೀಪ್‌ ಗೂಗಲ್‌ ಪೇ ಮುಖಾಂತರ 25,700 ರೂ.ಗಳನ್ನು ತಪ್ಪಾಗಿ ಪಾವತಿಸಿದ್ದು, ಗೂಗಲ್‌ನಲ್ಲಿ ಸಿಕ್ಕಿದ ಕಸ್ಟಮರ್‌ ಕೇರ್‌ಗೆ ಕರೆ ಮಾಡಿದಾಗ 24 ಗಂಟೆಯೊಳಗೆ ಹಣವನ್ನು ಮರಳಿ ಕೊಡಿಸುವುದಾಗಿ ಒಟಿಪಿ ಪಡೆದು 76,195 ರೂ. ವಂಚಿಸಲಾಗಿದೆ. ಹೀಗಾಗಿ ಗೂಗಲ್‌ನಿಂದ ಕಸ್ಟಮರ್‌ ಕೇರ್‌ ಸಂಖ್ಯೆಯನ್ನು ಪಡೆದು ಸಂಪರ್ಕಿಸುವ ಮೊದಲು ಸಾಕಷ್ಟು ಯೋಚಿಸಬೇಕಿದೆ.

1930 ದೂರು ನೀಡಿ
ಆನ್‌ಲೈನ್‌ ವಂಚನೆ ಪ್ರಕರಣ ಈ ಹಿಂದೆ ಸೆನ್‌ ಠಾಣೆಯಲ್ಲಿ ದಾಖಲಾಗುತ್ತಿದ್ದು ಈಗ ಸ್ಥಳೀಯ ಠಾಣೆಯಲ್ಲೇ ದೂರು ಪಡೆಯಲಾಗುತ್ತಿದೆ. ವಂಚನೆಗೊಳಗಾದ ಕೆಲವೇ ನಿಮಿಷಗಳಲ್ಲಿ 1930 ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡಿದಲ್ಲಿ ವಂಚಕರ ಕೈಸೇರಿದ ಹಣವನ್ನು ಖಾತೆಯಿಂದ ವರ್ಗಾಯಿಸದಂತೆ ತಡೆಹಿಡಿಯುವ ವ್ಯವಸ್ಥೆ ಇದೆ.

ಹೆಚ್ಚಿನ ಜನರು ಸರಕಾರದ ಯೋಜನೆಗಾಗಿ ಗೂಗಲ್‌, ಯೂಟ್ಯೂಬ್‌ ಮುಂತಾದ ಆ್ಯಪ್‌ಗ್ಳ ಮೊರೆ ಹೋಗುತ್ತಾರೆ. ಈ ರೀತಿ ಶೋಧ ನಡೆಸಿದಾಗ ವಂಚನೆಗೆ ಸಿಲುಕುವ ಸಾಧ್ಯತೆ ಹೆಚ್ಚು. ಪ್ರಮುಖ ಬ್ಯಾಂಕ್‌ಗಳು ಸೇರಿದಂತೆ, ಕಂಪೆನಿಗಳ ತಪ್ಪು ಗ್ರಾಹಕ ಸಂಪರ್ಕವನ್ನು ವಂಚಕರು ನಮೂದಿಸಿದ್ದು, ಕರೆ ಮಾಡಿದಾಗ ಮೋಸ ಮಾಡಲಾಗುತ್ತಿದೆ. ಯಾವುದೇ ಯೋಜನೆ ಬಗ್ಗೆ ಮಾಹಿತಿ ಬೇಕಾದರೆ ಸಂಬಂಧಪಟ್ಟ ಇಲಾಖೆಯಿಂದಲೇ ಪಡೆಯಿರಿ.
– ರಾಮಚಂದ್ರ ನಾಯಕ್‌, ಪೊಲೀಸ್‌ ನಿರೀಕ್ಷಕರು, ಉಡುಪಿ ಸೆನ್‌ ಠಾಣೆ

-ರಾಜೇಶ್‌ ಗಾಣಿಗ ಅಚ್ಲಾಡಿ

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ganesha Chaturthi: ಆರೂರು: 35ನೇ ಸಾರ್ವಜನಿಕ ಶ್ರೀ ಗಣೇಶೋತ್ಸವ… ವಿವಿಧ ಕಾರ್ಯಕ್ರಮ

ಆರೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ: ಸೆ.9ರಂದು ಪ್ರಥಮ ವರ್ಷದ ಲೋಬಾನ ಸೇವೆ ಹುಲಿವೇಷ ಕುಣಿತ

16-kumbashi

Ganesh Chaturthi; ಆನೆಗುಡ್ಡೆ: ಸಂಭ್ರಮದ ಶ್ರೀ ವಿನಾಯಕ ಚತುರ್ಥಿ; ಹರಿದು ಬಂದ ಭಕ್ತ ಸಮೂಹ

ವಿದೂಷಕರ ವೇಷ ಧರಿಸಿ ಸಂಗ್ರಹಿಸಿದ 14.33 ಲ.ರೂ. ಅನಾಥಾಶ್ರಮಕ್ಕೆ !

Kaup ವಿದೂಷಕರ ವೇಷ ಧರಿಸಿ ಸಂಗ್ರಹಿಸಿದ 14.33 ಲ.ರೂ. ಅನಾಥಾಶ್ರಮಕ್ಕೆ !

Ganesh Chaturthi ; ಕರಾವಳಿಯ ಮನೆಮನೆಗಳಲ್ಲಿ ಇಂದು ಗಣೇಶೋತ್ಸವ ಸಂಭ್ರಮ

Ganesh Chaturthi ; ಕರಾವಳಿಯ ಮನೆಮನೆಗಳಲ್ಲಿ ಇಂದು ಗಣೇಶೋತ್ಸವ ಸಂಭ್ರಮ

Udupi ಗೀತಾರ್ಥ ಚಿಂತನೆ-29 ಭಗವದವತಾರದ ಉದ್ದೇಶವೇನು?

Udupi ಗೀತಾರ್ಥ ಚಿಂತನೆ-29; ಭಗವದವತಾರದ ಉದ್ದೇಶವೇನು?

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.