ಎರಡೂವರೆ ಸಾವಿರ ಬಲ್ಬ್ ಅಳವಡಿಕೆ ಪೂರ್ಣ

ಮಂಗಳೂರಿನ ರಸ್ತೆಗಳಿಗೆ ಎಲ್‌ಇಡಿ ಬೀದಿದೀಪ

Team Udayavani, Sep 26, 2021, 4:02 AM IST

ಎರಡೂವರೆ ಸಾವಿರ ಬಲ್ಬ್ ಅಳವಡಿಕೆ ಪೂರ್ಣ

ಮಹಾನಗರ: ನಗರದಲ್ಲಿ ಈಗಿರುವ ಬೀದಿ ದೀಪಗಳನ್ನು ಎಲ್‌ಇಡಿ ಬೀದಿ ದೀಪಗಳಾಗಿ ಪರಿವರ್ತಿಸುವ ಕಾಮಗಾರಿ ಈಗಾಗಲೇ ಆರಂಭಗೊಂಡಿದ್ದು, ಮೊದಲ ಹಂತದಲ್ಲಿ ಬೀಚ್‌ ಪ್ರದೇಶದಿಂದ ಅನುಷ್ಠಾನಕ್ಕೆ ತರಲು ನಿರ್ಧರಿಸಲಾಗಿದೆ.

ನಗರದಲ್ಲಿ ಈಗಾಗಲೇ 2,500ಕ್ಕೂ ಹೆಚ್ಚಿನ ಎಲ್‌ಇಡಿ ಬೀದಿದೀಪ ಅಳವಡಿಕೆ ಕೆಲಸ ಪೂರ್ಣಗೊಂಡಿದೆ. ಸದ್ಯ ತಣ್ಣೀರುಬಾವಿ ಸುತ್ತಮುತ್ತ ಎಲ್‌ಇಡಿ ಬೀದಿ ದೀಪ ಅಳವಡಿಕೆ ಕಾರ್ಯ ನಡೆಯುತ್ತಿದೆ. ಮಂಗಳೂರಿನ ಬೀಚ್‌ ಪ್ರದೇಶದಲ್ಲಿರುವ ಬೀದಿ ದೀಪಗಳು ನಿರ್ವಹಣೆ ಸರಿಯಿಲ್ಲ ಎಂಬ ದೂರುಗಳು ಬರುತ್ತಿದ್ದವು. ಸಮುದ್ರದ ಉಪ್ಪಿನಾಂಶದಿಂದಾಗಿ ಬೀದಿ ದೀಪಗಳಲ್ಲಿ ತುಕ್ಕು ಹಿಡಿದು ಆಗಾಗ್ಗೆ ಸಮಸ್ಯೆ ಉಂಟಾಗುತ್ತಿತ್ತು. ಈ ನಿಟ್ಟಿನಲ್ಲಿ ಬೀಚ್‌ ಪ್ರದೇಶದಲ್ಲಿ ಎಲ್‌ಇಡಿ ಅಳವಡಿಸುವ ಕೆಲಸಕ್ಕೆ ಮೊದಲು ಆದ್ಯತೆ ನೀಡಲಾಗಿದೆ. ಅದೇ ರೀತಿ ಇತರ ವಾರ್ಡ್‌ಗಳಲ್ಲಿಯೂ ಕಾಮಗಾರಿ ಸಾಗುತ್ತಿದೆ.

ಒಟ್ಟು 67,000 ಎಲ್‌ಇಡಿ ಬೀದಿ ದೀಪ ಅಳವಡಿಕೆ
ಸ್ಮಾರ್ಟ್‌ಸಿಟಿ ವತಿಯಿಂದ ಮಂಗಳೂರು ನಗರದಲ್ಲಿ ಎಲ್ಲ ವಾರ್ಡ್‌ ಗಳಲ್ಲಿ ಸೇರಿ ಒಟ್ಟು 67,000 ಎಲ್‌ಇಡಿ ಬೀದಿ ದೀಪಗಳನ್ನು ಅಳವಡಿಸಲು ನಿರ್ಧರಿಸಲಾಗಿದೆ. ಕಳೆದ ಮಾರ್ಚ್‌ನಿಂದ ಆರಂಭಗೊಂಡ ಕಂಬಗಳ ಸಮೀಕ್ಷೆ ಕಾರ್ಯ ಈಗಾಗಲೇ ಪೂರ್ಣಗೊಂಡಿದೆ. ಹೊಸದಾಗಿ ಅಳವಡಿಸಲಾಗುವ ಎಲ್‌ಇಡಿ ಬಲ್ಬ್ ಗಳನ್ನು ನಗರದ ರಸ್ತೆಗಳಿಗೆ ಅನುಗುಣವಾಗಿ ಬದಲಾವಣೆ ಮಾಡಲು ನಿರ್ಧರಿಸಲಾಗಿದೆ. ನಗರದ ಜನನಿಬಿಡ ರಸ್ತೆ, ಒಳರಸ್ತೆ, ಸದಾ ವಾಹನ ಸಂಚಾರದ ರಸ್ತೆ ಹೀಗೆ ವಿವಿಧ ಪ್ರಾಕಾರಗಳಲ್ಲಿ ವಿಂಗಡಿಸಲಾಗುತ್ತದೆ. ಅದಕ್ಕೆ ಅನುಗುಣವಾಗಿ ವೈಜ್ಞಾನಿಕ ರೀತಿಯಲ್ಲಿ ಸಾಮರ್ಥ್ಯಕ್ಕೆ ತಕ್ಕಂತೆ ಬಲ್ಬ್ ಗಳನ್ನು ಅಳವಡಿಸಲಾಗುತ್ತದೆ. ಈ ವರ್ಷಾಂತ್ಯಕ್ಕೆ ಎಲ್‌ಇಡಿ ಬೀದಿ ದೀಪ ಅಳವಡಿಕೆ ಪೂರ್ಣಗೊಳಿಸುವ ಇರಾದೆ ಯನ್ನು ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ. 7 ವರ್ಷಗಳ ಕಾಲ ಬೀದಿ ದೀಪಗಳ ನಿರ್ವಹಣೆಯ ಈಗಾಗಲೇ ಟೆಂಡರ್‌ ವಹಿಸಿಕೊಂಡಿರುವ ಸಂಸ್ಥೆಗಳ ಜವಾಬ್ದಾರಿಯಾಗಿರುತ್ತದೆ.

ಇದನ್ನೂ ಓದಿ:ದಲಿತ ಬಾಲಕ ದೇವಸ್ಥಾನ ಪ್ರವೇಶ ಪ್ರಕರಣ |ಅಸ್ಪೃಶ್ಯತೆ ಮುಕ್ತ ಗ್ರಾಮಕ್ಕಾಗಿ ಜನತೆ ಪ್ರತಿಜ್ಞೆ 

ಸ್ಮಾರ್ಟ್‌ ಮೀಟರ್‌ ಅಳವಡಿಕೆ
ಮಂಗಳೂರಿನ ಎಲ್‌ಇಡಿ ಬೀದಿ ದೀಪಗಳುಳ್ಳ ವಿದ್ಯುತ್‌ ಕಂಬಗಳಿಗೆ ಮುಂದಿನ ದಿನಗಳಲ್ಲಿ ಸ್ಮಾರ್ಟ್‌ ಮೀಟರ್‌ ಅಳವಡಿಸಲು ಚಿಂತನೆ ನಡೆಯುತ್ತಿದೆ. ಈ ರೀತಿ ಸ್ಮಾರ್ಟ್‌ ಮೀಟರ್‌ ಅಳವಡಿಸಿದರೆ ಎಲ್‌ಇಡಿ ಬಲ್ಬ್ಗಳ ಮೇಲ್ವಿಚಾರಣೆ ನಡೆಸಲು ಸುಲಭವಾಗುತ್ತದೆ. ಮೀಟರ್‌ ರೀಡಿಂಗ್‌, ಯಾವ ಪ್ರದೇಶದಲ್ಲಿ ಲೈಟ್‌ ಉರಿಯುತ್ತಿಲ್ಲ, ಯಾವ ಕಂಬದಲ್ಲಿ ಬಲ್ಬ್ ಸರಿಯಿಲ್ಲ ಎಂಬಿತ್ಯಾದಿ ಮಾಹಿತಿಯನ್ನು ಜಿಪಿಎಸ್‌ ಆಧಾರಿತವಾಗಿ ಮೊಬೈಲ್‌ನಲ್ಲಿಯೇ ಪಡೆಯಲು ಸಾಧ್ಯವಾಗುತ್ತದೆ. ಸ್ಮಾರ್ಟ್‌ ಮೀಟರ್‌ ಅಳವಡಿಸುವ ಕುರಿತು ಸ್ಮಾರ್ಟ್‌ಸಿಟಿ, ಸ್ಥಳೀಯಾಡಳಿತದಿಂದ ಮೆಸ್ಕಾಂನ ಅನುಮತಿ ಪಡೆಯುವ ಕೆಲಸ ನಡೆಯುತ್ತಿದೆ.

ಮತ್ತಷ್ಟು ವೇಗ
ನಗರದಲ್ಲಿ ಈಗಾಗಲೇ ಅಳವಡಿಸಿದ ಬೀದಿ ದೀಪಗಳನ್ನು ಎಲ್‌ಇಡಿ ಬೀದಿದೀಪಗಳಾಗಿ ಬದಲಾಯಿಸುವ ಕೆಲಸ ಸ್ಮಾರ್ಟ್‌ಸಿಟಿ ವತಿಯಿಂದ ನಡೆಯುತ್ತಿದೆ. ಈಗಾಗಲೇ ನಗರದಲ್ಲಿ 2,500 ಎಲ್‌ಇಡಿ ಬೀದಿ ದೀಪಗಳನ್ನು ಅಳವಡಿಸಲಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟ ವೇಗ ನೀಡಲಾಗುತ್ತದೆ. ಎಲ್‌ಇಡಿ ಬೀದಿ ದೀಪ ಅಳವಡಿಕೆಯಿಂದ ವಿದ್ಯುತ್‌ ದರದ ಹೊರೆ ಕಡಿಮೆಯಾಗಲಿದೆ.
-ಪ್ರೇಮಾನಂದ ಶೆಟ್ಟಿ, ಮನಪಾ ಮೇಯರ್‌

 

ಟಾಪ್ ನ್ಯೂಸ್

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.