ಭವಿಷ್ಯಕ್ಕೆ ನೆರವಾಗುವ ಶಿಕ್ಷಣ ನೀತಿ ರಚನೆ

ಶೈಕ್ಷಣಿಕ ಸಮಾವೇಶದಲ್ಲಿ ಮೂವರು ಸಚಿವರಿಂದ ಭರವಸೆ

Team Udayavani, Jul 28, 2023, 11:22 PM IST

text books

ಬೆಂಗಳೂರು: ಮಕ್ಕಳ ಶೈಕ್ಷಣಿಕ ಭವಿಷ್ಯದ ಹಿತದೃಷ್ಟಿಯಿಂದ ಎನ್‌ಇಪಿ-2020 ಅನ್ನು ತಿರಸ್ಕರಿಸಿ ನೂತನ ಶಿಕ್ಷಣ ನೀತಿ ರೂಪಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಗಾಂಧಿ ಭವನದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ “ಕರ್ನಾಟಕಕ್ಕೆ ಜನಪರ ಶಿಕ್ಷಣ ನೀತಿ ರೂಪಿಸಲು ಶೈಕ್ಷಣಿಕ ಸಮಾವೇಶ”ದಲ್ಲಿ ಮಾತ ನಾಡಿದ ಅವರು, ನಾವು ಮಕ್ಕಳ ಭವಿಷ್ಯದ ಪರವಾಗಿದ್ದೇವೆ.

ಅದಕ್ಕಾಗಿ ಎನ್‌ಇಪಿ-2020 ತಿರಸ್ಕರಿಸಿ ನಮ್ಮದೇ ಆದ ನೀತಿ ಜಾರಿಗೊಳಿಸುತ್ತೇವೆ. ಕುವೆಂಪು ಅವರ ಸರ್ವ ಜನಾಂಗದ ಶಾಂತಿಯ ತೋಟ ವಿಚಾರಕ್ಕೆ ನಾವು ಬದ್ಧರಾಗಿದ್ದೇವೆ ಎಂದು ಹೇಳಿದರು. ಪಠ್ಯಪುಸ್ತಕ ಪರಿಷ್ಕರಣೆಗೆ ನಿರ್ಧ ರಿಸಿದ್ದೆವು. ಕಾಲಾವಕಾಶವಿಲ್ಲದ ಕಾರಣ ಸಮಗ್ರ ಬದಲಾವಣೆ ಸಾಧ್ಯವಾಗಲಿಲ್ಲ. ಕೆಲವು ಅಗತ್ಯ ಬದಲಾವಣೆ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಪಠ್ಯ ಪರಿಷ್ಕರಣೆ ಬಗ್ಗೆ ಮುಖ್ಯಮಂತ್ರಿ ಜತೆಗೆ ಚರ್ಚಿಸಲಾಗುವುದು. ರಾಜ್ಯದ ಮತ್ತು ಎಲ್ಲ ಶಿಕ್ಷಣ ತಜ್ಞರ ಅಭಿಪ್ರಾಯ ಪಡೆದು ಮುಂದುವರಿಯುತ್ತೇವೆ ಎಂದರು.

ಸಮಸ್ಯೆ ನಿವಾರಣೆಯತ್ತ ಗಮನ ಹರಿಸಬೇಕು: ಸುಧಾಕರ್‌
ಉನ್ನತ ಶಿಕ್ಷಣ ಸಚಿವ ಡಾ| ಎಂ.ಸಿ.ಸುಧಾಕರ್‌ ಮಾತನಾಡಿ, ಸಾಕಷ್ಟು ತಯಾರಿ ಮಾಡಿಕೊಂಡು ಹೊಸ ಶಿಕ್ಷಣ ನೀತಿ ಮಾಡುತ್ತೇವೆ. ಸಾಕಷ್ಟು ಬದಲಾವಣೆಯನ್ನು ನಾವು ಶಿಕ್ಷಣ ರಂಗದಲ್ಲಿ ತರಬೇಕಿದೆ ಮತ್ತು ತರುತ್ತೇವೆ. ಎನ್‌ಇಪಿ- 2020ನ್ನು ಅವರು ಹೇರಿದ್ದಾರೆ. ನಾವು ಅವರಂತೆ ಗಡಿಬಿಡಿಯಲ್ಲಿ ಮಾಡುವುದಿಲ್ಲ. ಇತಿಹಾಸವನ್ನು ಪುನಃ ಬರೆಯಲಾಗುವುದಿಲ್ಲ. ಆದರೆ ಅದಕ್ಕೂ ಹಿಂದಿನ ಸರಕಾರ ಕೈ ಹಾಕಿತ್ತು. ಅದನ್ನು ತಿರುಚಲು ಬಿಡೆವು ಎಂದರು.

ಹೊಸ ಶಿಕ್ಷಣ ನೀತಿಗೆ ಸಲಹೆ ನೀಡಿ ಸಮಾಜ ಕಲ್ಯಾಣ ಸಚಿವ ಎಚ್‌.ಸಿ. ಮಹದೇವಪ್ಪ ಮಾತನಾಡಿ, ರಾಷ್ಟ್ರೀಯ ಶಿಕ್ಷಣ ನೀತಿಯು ಮನುವಾದಿಗಳ ಮತ್ತು ಅಧುನಿಕ ಚಿಂತನೆಗಳ ವಿರೋಧಿಗಳ ನೀತಿಯಾಗಿದೆ. ಎಲ್ಲ ರನ್ನೂ ಒಳಗೊಂಡ, ಬಹುತ್ವವನ್ನು ರಕ್ಷಿಸುವ, ಶಿಕ್ಷಣ ನೀತಿಗಳನ್ನು ಜಾರಿಗೊಳಿಸಬೇಕಿದೆ. ಅಂತಹ ಶ್ರೇಷ್ಠ ಶಿಕ್ಷಣ ನೀತಿ ಮತ್ತು ವೈಜ್ಞಾನಿಕ ಧೋರಣೆಗಳಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶ ತಲೆ ಎತ್ತಲು ಸಾಧ್ಯವಿದೆ. ಕೇಸರೀಕರಣ, ಕೋಮುವಾದೀಕರಣ ಶಿಕ್ಷಣದಲ್ಲಿ ತೂರದಿರಲಿ, ಶಿಕ್ಷಣ, ಸಮಾನತೆ, ಭ್ರಾತೃತ್ವದಡಿ ಯಲ್ಲಿ ಹೊಸ ಶಿಕ್ಷಣ ನೀತಿ ಮೂಡಿಬರಬೇಕು ಎಂದರು.

ಯುಜಿಸಿ ಮಾಜಿ ಅಧ್ಯಕ್ಷ ಸುಖದೇವ್‌ ಥೋರಟ್‌, ಶಿಕ್ಷಣ ತಜ್ಞ ಡಾ| ಮೈಕೆಲ್‌ ವಿಲಿಯಮ್ಸ್‌, ಕರ್ನಾ ಟಕ ಪ್ರದೇಶಿಕ ಶಿಕ್ಷಣ ಆಯೋಗದ ಕಾರ್ಯದರ್ಶಿ ಫ್ರಾನ್ಸಿಸ್‌ ಅಸ್ಸಿಸಿ ಅಲ್ಮೇಡಾ, ನಿವೃತ್ತ ವಿಜ್ಞಾನಿ ಎಸ್‌. ಮಹಾದೇವನ್‌ ಮತ್ತಿತರರಿದ್ದರು.

ಟಾಪ್ ನ್ಯೂಸ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.