Gadag: ಹೆಸರು ಬೆಳೆದವನಿಗೆ ದರ ಸಂಕಷ್ಟ; ಬೆಲೆ’ಯೇ ಇಲ್ಲದೇ ತೊಂದರೆ

ಅಧಿಕ ಪ್ರಮಾಣದಲ್ಲಿ ಹೆಸರು ಬಿತ್ತನೆ; ಬಂಪರ್‌ ಇಳುವರಿ

Team Udayavani, Aug 21, 2024, 2:39 PM IST

Gadag: ಹೆಸರು ಬೆಳೆದವನಿಗೆ ದರ ಸಂಕಷ್ಟ; ಬೆಲೆ’ಯೇ ಇಲ್ಲದೇ ತೊಂದರೆ

ಗದಗ: ಉತ್ತರ ಕರ್ನಾಟಕ ಅದರಲ್ಲೂ ಗದಗ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಬೆಳೆಯುವ ಪ್ರಮುಖ ಬೆಳೆ ಹೆಸರು. ಪ್ರಸಕ್ತ ವರ್ಷ ಮುಂಗಾರಿನಲ್ಲಿ ಜಿಲ್ಲೆಯ ರೈತರು ಅಧಿಕ ಪ್ರಮಾಣದಲ್ಲಿ ಹೆಸರು ಬೆಳೆದಿದ್ದು, ಇಳುವರಿ ಉತ್ತಮವಾಗಿದೆ. ಆದರೆ ಹೆಸರು ಬೆಳೆದ ರೈತರು ಬೆಲೆ ಇರದ ಕಾರಣ ತೊಂದರೆ ಅನುಭವಿಸುವಂತಾಗಿದೆ.

ಕಳೆದ ಕೆಲ ದಿನಗಳಿಂದ ಹೆಸರು ಕಟಾವು ಆರಂಭವಾಗಿದ್ದು, ಮಾರುಕಟ್ಟೆಗೆ ಹೆಸರು ಧಾವಿಸುತ್ತಿದೆ. ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕನಿಷ್ಟ 3,000 ರೂ.ದಿಂದ ಗರಿಷ್ಠ 6,000 ರೂ. ನಿಗದಿಯಾಗಿದೆ. ಹೆಸರು ಬೆಳೆಗೆ ಉತ್ತಮ ಬೆಲೆ ನಿಗದಿಯಾಗದ ಕಾರಣ ರೈತರು ಸಂಕಷ್ಟ ಎದುರಿಸುವಂತಾಗಿದೆ. ಸರಕಾರ ಈಗಾಗಲೇ ಹೆಸರು ಬೆಳೆಗೆ ಪ್ರತಿ ಕ್ವಿಂಟಲ್‌ಗೆ 8,682 ರೂ. ಬೆಂಬಲ ಬೆಲೆ ಘೋಷಿಸಿದೆ. ಆದರೆ ಜಿಲ್ಲಾಡಳಿತ ಹೆಸರು ಖರೀದಿ ಕೇಂದ್ರ ತೆರೆಯಲು ಮುಂದಾಗುತ್ತಿಲ್ಲ. ಕೂಡಲೇ ಬೆಂಬಲ ಬೆಲೆ ಯೋಜನೆಯಡಿ ಹೆಸರು ಕಾಳು ಖರೀದಿ ಕೇಂದ್ರ ತೆರೆಯಬೇಕಿದೆ.

ಹಲ್ಲು ಇದ್ದವನಿಗೆ ಕಡಲೆ ಇಲ್ಲ, ಕಡಲೆ ಇದ್ದವನಿಗೆ ಹಲ್ಲಿಲ್ಲ ಎಂಬಂತಾಗಿದೆ ಜಿಲ್ಲೆಯ ರೈತರ ಪರಿಸ್ಥಿತಿ. ಕಳೆದ ವರ್ಷ ಭೀಕರ ಬರಗಾಲದಿಂದ ಮುಂಗಾರು ಜತೆಗೆ ಹಿಂಗಾರು ಸಂಪೂರ್ಣ ಕೈಕೊಟ್ಟಿತ್ತು. ಪ್ರಸಕ್ತ ವರ್ಷ ಮುಂಗಾರು ಹಂಗಾಮಿನಲ್ಲಿ ಸುರಿದ ಮಳೆಯಿಂದ ಜಿಲ್ಲೆಯಲ್ಲಿ ಹೆಸರು ಇಳುವರಿ ಉತ್ತಮವಾಗಿದೆ. ಆದರೆ ಮಾರುಕಟ್ಟೆಯಲ್ಲಿ ನಿರೀಕ್ಷಿತ ಬೆಲೆ ದೊರೆಯದೇ ಹೆಸರು ಬೆಳೆಗಾರರು ತಲೆ ಮೇಲೆ ಕೈ ಹೊತ್ತು ಕೂರುವಂತಾಗಿದೆ.

ಗುರಿ ಮೀರಿ ಹೆಸರು ಬಿತ್ತನೆ: ಪ್ರಸಕ್ತ ವರ್ಷ ಮುಂಗಾರು ಹಂಗಾಮಿನಲ್ಲಿ ಉತ್ತಮ ಮಳೆಯಾಗಿದ್ದರಿಂದ ಜಿಲ್ಲೆಯಲ್ಲಿ ಕೃಷಿ ಇಲಾಖೆಯ 1.25 ಲಕ್ಷ ಹೆಕ್ಟೇರ್‌ ಬಿತ್ತನೆ ಗುರಿ ಪೈಕಿ 1.31 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಹೆಸರು ಬಿತ್ತನೆಯಾಗಿದೆ. ಶೇ.104.60 ಬಿತ್ತನೆಯಾಗುವ ಮೂಲಕ ಕೃಷಿ ಇಲಾಖೆ ಗುರಿ ಮೀರಿ ಶೇ. 4.60 ಹೆಚ್ಚಿನ ಪ್ರಮಾಣದಲ್ಲಿ ಹೆಸರು ಬಿತ್ತನೆಯಾಗಿದೆ.

ಬೆಲೆ ಇಲ್ಲದೇ ರೈತರ ಪರದಾಟ: ರೈತರು ಈ ಬಾರಿ ಮುಂಗಾರಿನಲ್ಲಿ ಸಾಲ ಮಾಡಿ ಹೆಸರು ಬಿತ್ತಿದ್ದಾರೆ. ಬಳಿಕ ಕಳೆ ತೆಗೆಯುವುದು, ಕ್ರಿಮಿನಾಶಕ ಸಿಂಪರಿಸುವುದು ಸೇರಿದಂತೆ ಬೆಳೆ ಕಟಾವು ಆಗಿ ಮಾರುಕಟ್ಟೆಗೆ ಸಾಗಿಸುವುದರೊಳಗೆ ಸುಮಾರು 13ರಿಂದ 15 ಸಾವಿರ ರೂ. ಖರ್ಚು ಬರುತ್ತದೆ. ಪ್ರತಿ ಎಕರೆಗೆ ಐದರಿಂದ ಆರು ಚೀಲ ಹೆಸರು ಇಳುವರಿ ಬಂದಿದೆ. ಆದರೆ ಜಿಲ್ಲೆಯ ಕೃಷಿ ಉತ್ಪನ್ನ ಮಾರುಕಟ್ಟೆಗಳಲ್ಲಿ 4ರಿಂದ 6 ಸಾವಿರ ರೂ. ದರ ನಿಗದಿಯಾಗಿದೆ. ಅದರಲ್ಲೂ ಬಹುತೇಕ ರೈತರಿಗೆ ಪ್ರತಿ ಕ್ವಿಂಟಲ್‌ಗೆ ಸರಾಸರಿ 3,500 ರೂ.ಕೈಗೆ ಬರುತ್ತಿದ್ದು, ಬೆಳೆಗೆ ಖರ್ಚು ಮಾಡಿದ ಕೂಲಿಯೂ ಮರಳುತ್ತಿಲ್ಲ ಎಂಬುದು ರೈತರ ಅಳಲಾಗಿದೆ.

ಕಳೆದೊಂದು ವಾರದಿಂದ ನಗರದ ಎಪಿಎಂಸಿ ಮಾರುಕಟ್ಟೆಗೆ 10 ಸಾವಿರ ಕ್ವಿಂಟಲ್‌ ಗೂ ಅಧಿಕ ಹೆಸರು ಆವಕವಾಗಿದೆ. ಸುಮಾರು ದಿನಗಳಲ್ಲಿ ಜಿಲ್ಲೆಯ ಬಹುತೇಕ ಹೆಸರು ಕಟಾವು ಮುಗಿಯುತ್ತದೆ. ಆದರೆ ಹೆಸರು ಬೆಲೆ ಮಾತ್ರ ಚೇತರಿಕೆ ಕಂಡಿಲ್ಲ. ಮಾರುಕಟ್ಟೆಯಲ್ಲಿ ಮಾತ್ರ ದಿನದಿಂದ ದಿನಕ್ಕೆ ಬೆಲೆ ಕುಸಿಯುತ್ತದೆ. ಈ ಹಿನ್ನೆಲೆಯಲ್ಲಿ ಹೆಸರು ಬೆಳೆಗಾರರ ರಕ್ಷಣೆಗಾಗಿ ತಕ್ಷಣವೇ ಬೆಂಬಲ ಬೆಲೆಯಲ್ಲಿ ಹೆಸರು ಖರೀದಿ ಕೇಂದ್ರ ಆರಂಭಿಸಬೇಕು.
ಮುತ್ತನಗೌಡ ಚೌಡರಡ್ಡಿ, ಜಿಲ್ಲಾ ರೈತ ಸಂಘದ ಅಧ್ಯಕ್ಷ.

ಮುಂದಿನ ಒಂದು ವಾರದೊಳಗೆ ಬೆಂಬಲ ಬೆಲೆ ಯೋಜನೆಯಡಿ ಹೆಸರು ಕಾಳು ಖರೀದಿ ಕೇಂದ್ರ ತೆರೆಯದಿದ್ದಲ್ಲಿ ಜಿಲ್ಲೆಯ ಎಲ್ಲ ತಾಲೂಕು ಹಾಗೂ ಜಿಲ್ಲಾ ಎಪಿಎಂಸಿ ಗೇಟುಗಳಿಗೆ ಬೀಗ ಹಾಕಿ, ವಹಿವಾಟು ಬಂದ್‌ ಮಾಡಿ ಖರೀದಿ ಕೇಂದ್ರ ತೆರೆಯುವರೆಗೆ ಚಳವಳಿ ಮಾಡಲಾಗುವುದು. ಈ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಇದರ ಹೊಣೆಯನ್ನು ಹೊರಬೇಕಾಗುತ್ತದೆ.
-ಮಹಾದೇವಗೌಡ ಪಾಟೀಲ, ಜಿಲ್ಲಾ ರೈತ ಸಂಘದ ಗೌರವಾಧಕ್ಷ.

-ಅರುಣಕುಮಾರ ಹಿರೇಮಠ

ಟಾಪ್ ನ್ಯೂಸ್

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

Yashpal-Udupi

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ

uUdupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

Udupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

MNCY

Development project: ಮಂಗಳೂರು ಪಾಲಿಕೆ; ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

BANDARAKERI

Udupi: ಭಕ್ತರಲ್ಲಿಗೆ ಭಾಗವತ ಭಂಡಾರಕೇರಿ ಶ್ರೀಗಳ ಸಾಧನೆ

Payan

Movie Release: ರಾಜ್ಯಾದ್ಯಂತ “ಪಯಣ್‌’ ಸಿನೆಮಾ ಸೆ.20ರಂದು ತೆರೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag; ಮಾನವ ಸರಪಳಿ ವೇಳೆ ಶಿಕ್ಷಕಿಯರ ಮೇಲೆ ಹೆಜ್ಜೇನು ದಾಳಿ

Gadag; ಮಾನವ ಸರಪಳಿ ವೇಳೆ ಶಿಕ್ಷಕಿಯರ ಮೇಲೆ ಹೆಜ್ಜೇನು ದಾಳಿ

7-mundaragi

ಜನರಿಗೆ ಪ್ರಜಾಪ್ರಭುತ್ವ ಅರಿವು ಮೂಡಿಸಿ, ಬಲ ತುಂಬುವ ಕಾರ್ಯಕ್ರಮ ಪ್ರಜಾಪ್ರಭುತ್ವ ದಿನಾಚರಣೆ

Sudden rise in cooking oil prices

Price Hike; ಅಡುಗೆ ಎಣ್ಣೆ ದರ ದಿಢೀರ್ ಏರಿಕೆ: ಹಬ್ಬದ ಸಂಭ್ರಮದಲ್ಲಿರುವ ಜನತೆಗೆ ಶಾಕ್

ಗದಗ: ಅತಿವೃಷ್ಟಿಯಿಂದ ಬತ್ತಿದ ಕೆರೆಗಳಿಗೆ ಆಸರೆಯಾದ ತುಂಗಭದ್ರೆ!

ಗದಗ: ಅತಿವೃಷ್ಟಿಯಿಂದ ಬತ್ತಿದ ಕೆರೆಗಳಿಗೆ ಆಸರೆಯಾದ ತುಂಗಭದ್ರೆ!

Gadaga: ಸಿಎಂ ಸ್ಥಾನ ಖಾಲಿ ಇಲ್ಲ, ಖಾಲಿಯಾಗುವ ಪ್ರಶ್ನೆಯೂ ಇಲ್ಲ: ಸಚಿವ ಎಚ್‌.ಕೆ.ಪಾಟೀಲ

Gadaga: ಸಿಎಂ ಸ್ಥಾನ ಖಾಲಿ ಇಲ್ಲ, ಖಾಲಿಯಾಗುವ ಪ್ರಶ್ನೆಯೂ ಇಲ್ಲ: ಸಚಿವ ಎಚ್‌.ಕೆ.ಪಾಟೀಲ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

Yashpal-Udupi

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ

uUdupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

Udupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

MNCY

Development project: ಮಂಗಳೂರು ಪಾಲಿಕೆ; ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.