ಮೊದಲ ಹಂತದ ಚುನಾವಣೆ: 2,216 ಅಭ್ಯರ್ಥಿಗಳು ಕಣದಲ್ಲಿ


Team Udayavani, Dec 16, 2020, 11:56 AM IST

ಮೊದಲ ಹಂತದ ಚುನಾವಣೆ: 2,216 ಅಭ್ಯರ್ಥಿಗಳು ಕಣದಲ್ಲಿ

ಗದಗ: ಜಿಲ್ಲೆಯಲ್ಲಿ ಮೊದಲ ಹಂತದ ಗ್ರಾಪಂ ಚುನಾವಣೆಯಲ್ಲಿ 53 ಗ್ರಾಪಂಗಳ 801 ಸ್ಥಾನಗಳ ಪೈಕಿ ಏಳು ಸ್ಥಾನಗಳಿಗೆ ನಾಮಪತ್ರಗಳೇ ಸಲ್ಲಿಕೆಯಾಗಿಲ್ಲ. 51 ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇನ್ನುಳಿದಂತೆ 743 ಸ್ಥಾನಗಳಿಗೆ 2,216 ಜನರು ಚುನಾವಣಾ ಕಣದಲ್ಲಿದ್ದಾರೆ. ಗದಗ ತಾಲೂಕಿನ ಚಿಂಚಲಿ ಗ್ರಾಪಂ ವ್ಯಾಪ್ತಿಯ ನೀಲಗುಂದ ಗ್ರಾಮದಿಂದ ಸಲ್ಲಿಕೆಯಾಗಿದ್ದ ಒಂದು ನಾಮಪತ್ರವೂ ಹಿಂಪಡೆದಿದ್ದರಿಂದ ಏಳೂ ಸ್ಥಾನಗಳಿಗೆ ನಾಮಪತ್ರ ಸಲ್ಲಿಕೆಯಾಗಿಲ್ಲ. ನೀಲಗುಂದ ಪ್ರತ್ಯೇಕ ಗ್ರಾಪಂ ಸ್ಥಾಪನೆ ಮಾಡಬೇಕು ಎಂದು ಒತ್ತಾಯಿಸಿ ಗ್ರಾಮಸ್ಥರು ಚುನಾವಣೆ ಬಹಿಷ್ಕರಿಸಿದ್ದಾರೆ.

ಗದಗ ತಾಲೂಕಿನ 26 ಗ್ರಾಪಂಗಳ ಒಟ್ಟು 438 ಸ್ಥಾನಗಳ ಪೈಕಿ 37 ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿದ್ದು, 394 ಸ್ಥಾನಗಳಿಗೆ ಚುನಾವಣೆ ನಡೆಯಲಿವೆ. ಅನುಸೂಚಿತ ಜಾತಿ 207, ಅನುಸೂಚಿತ ಪಂಗಡದ 77, ಹಿಂದುಳಿದ ಅ ವರ್ಗ 216, ಹಿಂದುಳಿದ ಬ ವರ್ಗ 36, ಸಾಮಾನ್ಯ 653 ಸೇರಿ ಒಟ್ಟು 1,189 ಅಭ್ಯರ್ಥಿಗಳು ಸ್ಪರ್ಧೆಯಲ್ಲಿ ಉಳಿದಿದ್ದಾರೆ.

ಲಕ್ಷ್ಮೇಶ್ವರ ತಾಲೂಕಿನ 13 ಗ್ರಾಪಂಗಳ ಒಟ್ಟು 174 ಸ್ಥಾನಗಳಲ್ಲಿ 7 ಸ್ಥಾನಗಳು ಅವಿರೋಧ ಆಯ್ಕೆಯಾಗಿದ್ದು, 167 ಸ್ಥಾನಗಳಿಗೆ ಮತದಾನ ನಡೆಯಲಿದೆ. ಅನುಸೂಚಿತ ಜಾತಿಯ 144, ಅನುಸೂಚಿತ ಪಂಗಡದ 47, ಹಿಂದುಳಿದ ಅ ವರ್ಗ 55, ಹಿಂದುಳಿದ ಬ ವರ್ಗ 9, ಸಾಮಾನ್ಯ 257 ಸೇರಿದಂತೆ 512 ಅಭ್ಯರ್ಥಿಗಳು ಅದೃಷ್ಟ ಪರೀಕ್ಷೆಗಿಳಿದಿದ್ದಾರೆ.

ಇದನ್ನೂ ಓದಿ:ಭಾರೀ ಹಿಮಪಾತ: ಜಮ್ಮು-ಕಾಶ್ಮೀರ ಡಿಡಿಸಿಯ 7ನೇ ಹಂತದ ಮತದಾನ ಮಂದಗತಿ

ಶಿರಹಟ್ಟಿ ತಾಲೂಕಿನ 14 ಗ್ರಾಪಂಗಳ ಒಟ್ಟು 189 ಸ್ಥಾನಗಳಲ್ಲಿ 7 ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದ್ದು, 182 ಸ್ಥಾನಗಳಿಗೆ ಚುನಾವಣೆ ನಡೆಸಲಾಗುತ್ತದೆ. ಅನುಸೂಚಿತ ಜಾತಿಯ 114, ಅನುಸೂಚಿತ ಪಂಗಡದ 55, ಹಿಂದುಳಿದ ಅ ವರ್ಗ 62, ಹಿಂದುಳಿದ ಬ ವರ್ಗ 17, ಸಾಮಾನ್ಯ 267 ಸೇರಿದಂತೆ 515 ಅಭ್ಯರ್ಥಿಗಳು ಅಂತಿಮವಾಗಿ ಚುನಾವಣೆ ಅಖಾಡಕ್ಕೆ ಉಳಿದಿದ್ದಾರೆ ಎಂದು ಜಿಲ್ಲಾ ಧಿಕಾರಿಗಳ ಕಚೇರಿಯ ಚುನಾವಣೆ ವಿಭಾಗ ತಿಳಿಸಿದೆ.

ಚಿಹ್ನೆಗಳೊಂದಿಗೆ ಅಖಾಡಕ್ಕಿಳಿದ ಅಭ್ಯರ್ಥಿಗಳು
ಶಿರಹಟ್ಟಿ: ತಾಲೂಕಿನಲ್ಲಿಯ ಗ್ರಾಪಂ ಚುನಾವಣೆ ಪ್ರಕ್ರಿಯೆಯಲ್ಲಿ ಸೋಮವಾರ ಎಲ್ಲ ಅಭ್ಯರ್ಥಿಗಳಿಗೆ ಚಿಹ್ನೆಗಳನ್ನು ನೀಡಿದ್ದು, ಆ ಚಿಹ್ನೆ ಆಧರಿಸಿ ಮತದಾರರ ಮನಸೆಳೆಯಲು ಅಭ್ಯರ್ಥಿಗಳು ಮಂದಾಗಿದ್ದಾರೆ. ತಾಲೂಕಿನಲ್ಲಿ 14 ಗ್ರಾಪಂಗಳಿದ್ದು, ಈ ಎಲ್ಲ
ಗ್ರಾಪಂಗಳಿಗೆ 189 ಸದಸ್ಯರ ಆಯ್ಕೆಗಾಗಿ ಚುನಾವಣೆ ನಡೆಯುತ್ತಿದೆ. ಪ್ರತಿಯೊಬ್ಬ ಅಭ್ಯರ್ಥಿಗಳು ತಮ್ಮ ಜಾತಿ, ಸಂಬಂಧ ಮತ್ತು ಗೆಳೆತನದ ಲೆಕ್ಕಾಚಾರದಲ್ಲಿ ಗೆಲ್ಲಲು ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ತಾಲೂಕಿನ 14 ಗ್ರಾಪಂಗಳಿಗೆ ಜರುಗುತ್ತಿರುವ ಚುನಾವಣೆ
ಪ್ರಕ್ರಿಯೆಯಲ್ಲಿ ಅಂತಿಮವಾಗಿ 189 ಸ್ಥನಗಳಿಗೆ 515 ಅಭ್ಯರ್ಥಿಗಳು ಕಣದಲ್ಲಿ ಉಳಿದು ಚುನಾವಣೆಗೆ ಮುಂದಾಗಿದ್ದಾರೆ.

ಏಳು ಅಭ್ಯರ್ಥಿಗಳ ಅವಿರೋಧ: ತಾಲೂಕಿನ 14 ಗ್ರಾಪಂಗಳ 189 ಸದಸ್ಯರ ಆಯ್ಕೆಯ ಚುನಾವಣೆ ಪ್ರಕ್ರಿಯೆಯಲ್ಲಿ 7 ಜನ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ತಾಲೂಕಿನ ಕೊಗನೂರ ಗ್ರಾಮದಲ್ಲಿ 3 ಅಭ್ಯರ್ಥಿಗಳು ಮತ್ತು ಕೊಂಚಿಗೇರಿಯಲ್ಲಿ 2 ಅಭ್ಯರ್ಥಿಗಳು ಮತ್ತು ಮಾಗಡಿ-1, ಮತ್ತು ರಣತೂರ ಗ್ರಾಮದಲ್ಲಿ 1 ಅಭ್ಯರ್ಥಿಯು ಅವಿರೋಧವಾಗಿ ಆಯ್ಕೆಯಾಗಿ ಒಟ್ಟು 7 ಜನ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.