Gangolli ಅಂಗನವಾಡಿಗೆ ಕಿಡಿಗೇಡಿಗಳಿಂದ ಹಾನಿ: ಕೇಂದ್ರದ ಸ್ಥಳಾಂತರಕ್ಕಾಗಿ ನಡೆದ ಕೃತ್ಯ?
Team Udayavani, Aug 13, 2024, 11:47 PM IST
ಗಂಗೊಳ್ಳಿ: ಗಂಗೊಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಂತ ಜೋಸೆಫರ ಶಾಲಾ ವಠಾರದಲ್ಲಿರುವ ಮಲ್ಯರಬೆಟ್ಟು ಅಂಗನವಾಡಿ ಕೇಂದ್ರದ ಕಿಟಕಿಯ ಬಾಗಿಲು ಹಾಗೂ ಮೆಸ್ಗಳಿಗೆ ಕಿಡಿಗೇಡಿಗಳು ಹಾನಿ ಮಾಡಿದ್ದು, ಅಂಗನವಾಡಿ ಕೇಂದ್ರವನ್ನು ಬೇರೆಡೆ ಸ್ಥಳಾಂತರಿಸಬೇಕೆಂಬ ಉದ್ದೇಶದಿಂದ ಈ ಕೃತ್ಯ ಎಸಗಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.
ಅಂಗನವಾಡಿ ಕೇಂದ್ರದ ಕಿಟಕಿ ಬಾಗಿಲುಗಳು ಸಂಪೂರ್ಣ ಹಾಳಾಗಿರುವುದರಿಂದ ಅಂಗನವಾಡಿ ಕೇಂದ್ರದ ಒಳಗಿರುವ ಮಕ್ಕಳ ಪೌಷ್ಟಿಕ ಆಹಾರ ಇನ್ನಿತರ ಇಲಾಖೆ ದಾಖಲೆಗಳ ರಕ್ಷಣೆ ಹಾಗೂ ಭದ್ರತೆಗೋಸ್ಕರ ಕಿಟಕಿ ಬಾಗಿಲುಗಳನ್ನು ಸರಿಪಡಿಸಿಕೊಡುವಂತೆ ಅಂಗನವಾಡಿ ಕೇಂದ್ರದ ಬಾಲವಿಕಾಸ ಸಮಿತಿ ಮಾಡಿದ ಮನವಿ ಮೇರೆಗೆ ಗಂಗೊಳ್ಳಿ ಗ್ರಾಮ ಪಂಚಾಯತ್ ವತಿಯಿಂದ ಕಿಟಕಿ ಬಾಗಿಲುಗಳನ್ನು ಆ. 3ರಂದು ದುರಸ್ತಿಪಡಿಸಿ ಕಿಟಿಕಿಗೆ ಮೆಶ್ ಅಳವಡಿಸಲಾಗಿತ್ತು.
ಕಿಟಕಿ ಸರಿಪಡಿಸಿದ ಮರುದಿನ (ಆ. 4) ಕಿಡಿಗೇಡಿಗಳು ಬ್ಲೇಡಿನಿಂದ ಮೂರು ಕಿಟಕಿಯ ಮೆಶ್ಗಳನ್ನು ಕತ್ತರಿಸಿ ಅಂಗನವಾಡಿ ಒಳಗೆ ಹಾಕಿದ್ದು, ಒಂದು ಕಿಟಿಕಿ ಬಾಗಿಲಿಗೆ ಹಾನಿ ಮಾಡಿದ್ದಾರೆ. ಆ. 13ರಂದು ಅಂಗನವಾಡಿ ಕೇಂದ್ರಕ್ಕೆ ನೀರು ಸರಬರಾಜು ಮಾಡುವ ಪೈಪ್ ಅನ್ನು ಕಿತ್ತು ಹಾಕಿದ್ದು, ಅಂಗನವಾಡಿ ಕೇಂದ್ರದ ಪುಟ್ಟ ಮಕ್ಕಳಿಗೆ ಮೂಲಭೂತ ಸೌಲಭ್ಯ ದೊರೆಯದಂತೆ ಮಾಡಲಾಗಿದೆ ಎಂದು ಅಂಗನವಾಡಿ ಕಾರ್ಯಕರ್ತೆಯರು ಆರೋಪಿಸಿದ್ದಾರೆ.
ಆಡಳಿತ ಮಂಡಳಿ ಕೃತ್ಯ
9 ವರ್ಷಗಳಿಂದ ಗಂಗೊಳ್ಳಿಯ ಸಂತ ಜೋಸೆಫರ ಶಾಲೆಯ ಕಟ್ಟಡದ ಒಂದು ಕೊಠಡಿಯಲ್ಲಿ ಮಲ್ಯರಬೆಟ್ಟು ಅಂಗನವಾಡಿ ಕೇಂದ್ರ ಕಾರ್ಯಾಚರಿಸುತ್ತಿದೆ. ಕಳೆದೆರಡು ವರ್ಷಗಳಿಂದ ಮಲ್ಯರಬೆಟ್ಟು ಅಂಗನ ವಾಡಿ ಕೇಂದ್ರವನ್ನು ಸ್ಥಳಾಂತರಿಸ ಬೇಕೆಂದು ಶಾಲೆಯ ಆಡಳಿತ ಮಂಡಳಿ ನಿರಂತರವಾಗಿ ಒತ್ತಡ ಹೇರುತ್ತಿದ್ದು, ಅಂಗನವಾಡಿ ಕಟ್ಟಡ ನಿರ್ಮಿಸಲು ನಿವೇಶನ ದೊರೆಯುವ ತನಕ ಈಗಿರುವ ಕಟ್ಟಡದಲ್ಲಿ ಅಂಗನವಾಡಿ ಕೇಂದ್ರವನ್ನು ನಡೆಸಲು ಅವಕಾಶ ಮಾಡಿಕೊಡುವಂತೆ ಸಂಬಂಧಪಟ್ಟ ಇಲಾಖೆ ಅ ಧಿಕಾರಿಗಳು ಮನವಿ ಮಾಡಿದ್ದರು. ಆದರೆ ಹೇಗಾ¨ರೂ ಮಾಡಿ ಅಂಗನವಾಡಿ ಕೇಂದ್ರವನ್ನು ತೆರವು ಗೊಳಿಸಲೇಬೇಕು ಎಂದು ಹಠಕ್ಕೆ ಬಿದ್ದಂತೆ ಅಂಗನವಾಡಿ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಯಕರ್ತೆಯರ ಮೇಲೆ ಒತ್ತಡ ಹೇರುತ್ತಿರುವ ಶಾಲೆಯ ಆಡಳಿತ ಮಂಡಳಿ ಈ ಕೃತ್ಯ ನಡೆಸಿರಬಹುದೆಂಬ ಶಂಕೆ ವ್ಯಕ್ತವಾಗಿದೆ.
ಕ್ರಮಕ್ಕೆ ಪೋಷಕರ ಆಗ್ರಹ
ಘಟನೆಗೆ ಸಂಬಂಧಿಸಿದಂತೆ ಗಂಗೊಳ್ಳಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಅಂಗನವಾಡಿ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳಬೇಕು ಮತ್ತು ಅಂಗನವಾಡಿ ಕಟ್ಟಡದ ಕಿಟಿಕಿಗಳಿಗೆ ಹಾನಿ ಮಾಡಿದ ಕಿಡಿಗೇಡಿಗಳನ್ನು ಪತ್ತೆ ಹಚ್ಚಿ ಕಠಿನ ಕಾನೂನು ಕ್ರಮ ಜರಗಿಸಬೇಕೆಂದು ಮಕ್ಕಳ ಪೋಷಕರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Katpadi: ಪಾಪನಾಶಿನಿಯಲ್ಲಿ ಮುಳುಗಿದ ದೋಣಿ; ಎಲ್ಲರೂ ಸುರಕ್ಷಿತ!
Mallya; ಸಾಲ ವಸೂಲಾತಿ ಖಾತೆಗಳ ಲೆಕ್ಕ ಕೋರಿ ಹೈಕೋರ್ಟ್ ಮೊರೆ ಹೋದ ವಿಜಯ್ ಮಲ್ಯ
Koppala: ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತ್ಯು…
Actress Pushpalatha: 100ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದ ಹಿರಿಯ ನಟಿ ಪುಷ್ಪಲತಾ ನಿಧನ
Udupi: ಸಂತೆಕಟ್ಟೆ ಶೇ.50, ಅಂಬಲಪಾಡಿ ಶೇ.22 ಕಾಮಗಾರಿ ಪೂರ್ಣ