Gangolli ಜಾಮೀನಿನಲ್ಲಿ ಬಂದು ವಾರದಲ್ಲಿ ಕದ್ದು ಸಿಕ್ಕಿಬಿದ್ದ


Team Udayavani, Jun 25, 2024, 12:04 AM IST

Gangolli ಜಾಮೀನಿನಲ್ಲಿ ಬಂದು ವಾರದಲ್ಲಿ ಕದ್ದು ಸಿಕ್ಕಿಬಿದ್ದ

ಗಂಗೊಳ್ಳಿ: ಇಲ್ಲಿನ ಪೊಲೀಸ್‌ ಠಾಣಾ ವ್ಯಾಪ್ತಿಯ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ಬಳಿ ಇರುವ ಪಂಚಗಂಗಾ ಸೊಸೈಟಿಯಲ್ಲಿ ಜೂ. 22ರ ತಡರಾತ್ರಿ ಕಳ್ಳತನ ಮಾಡುತ್ತಿದ್ದಾಗಲೇ ಪೊಲೀಸರು ಬಂಧಿಸಿದ್ದಾರೆ. ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

13 ಕಳವು ಪ್ರಕರಣ
ಆರೋಪಿ ಕೊಲ್ಲಂ ಜಿಲ್ಲೆ ಕರುನಾಗಪಳ್ಳಿ ತಾಲೂಕು ಚೆರಿಯಳ್ಳಿಕಲ್‌ ಅಲಪ್ಪಾಡ್‌ ತಾಝಃಚೆಯಿಲ್‌ ವೀಡು ಪ್ರಕಾಶ್‌ ಬಾಬು ಯಾನೆ‌ ನಿಯಾಝ್ (46) ಕುಂಬಳೆ ಪೊಲೀಸ್‌ ಠಾಣೆಯಲ್ಲಿ, ಕ್ಯಾಲಿಕಟ್‌ನ ಮಾರಾಡ ಠಾಣೆ, ತಲಶೆÏàರಿ ಠಾಣೆ, ಕಣ್ಣೂರು ನಗರ ಠಾಣೆ, ಅಲೆಪ್ಪಿ ಮಾವಿಲಕಾರ ಠಾಣೆ, ಚೆಂಗನೂರು ಠಾಣೆ, ಉಡುಪಿ ಜಿಲ್ಲೆಯ, ಗಂಗೊಳ್ಳಿ ಠಾಣೆ, ಕುಂದಾಪುರ ಠಾಣೆ, ದ.ಕ. ಜಿಲ್ಲೆಯ ಕೊಣಾಜೆ ಠಾಣೆ, ಬೆಂಗಳೂರು ಕುಮಾರಸ್ವಾಮಿ ಲೇ ಔಟ್‌ ಠಾಣೆ ವ್ಯಾಪ್ತಿ ಸೇರಿ 13 ಕಡೆ ಕಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ.

ಸ್ಕೂಟರ್‌ನಲ್ಲಿ ಕೇರಳದಿಂದ ಬಂದಿದ್ದ
ಜೂ. 15ರಂದು ಕೇರಳದ ಮಾವಿಲಕಾರ ಹಾಗೂ ಚೆಂಗನೂರು ಠಾಣಾ ಸರಹದ್ದಿನ ಕಳವು ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಂಗ ಬಂಧನದಿಂದ ಜಾಮೀನಿನ ಮೇಲೆ ಬಿಡುಗಡೆಗೊಂಡು ಬಂದಿದ್ದ ಈತ ಕೇರಳದಿಂದ ಬೆಂಗಳೂರಿಗೆ ಬಂದು, ಅಲ್ಲಿಂದ ಚಿಕ್ಕಮಗಳೂರಿಗೆ ಬಂದು, ಅಲ್ಲಿಂದ ಕುಂದಾಪುರ, ಮುಳ್ಳಿಕಟ್ಟೆಗೆ ಸ್ಕೂಟರ್‌ನಲ್ಲಿ ಬಂದಿದ್ದ.

ಲಘುವಾಗಿ ಪರಿಗಣಿಸಿದ್ದನೇ?
ರಾತ್ರಿ ಪಂಚಗಂಗಾ ಸೊಸೈಟಿಯ ಹಿಂಬದಿಯ ಕಿಟಕಿ ಮುರಿದು ಸೊಸೈಟಿಗೆ ನುಗ್ಗಿದ ಕಳ್ಳ ಸಿಸಿ ಟಿವಿ ಕೆಮರಾ ಇರುವುದನ್ನು ಗಮನಿಸಿದ್ದ. ಸ್ವಿಚ್‌ ಹಾಕಿ ಲೈಟ್‌ ಕೂಡಾ ಬೆಳಗಿಸಿ ಕೋಣೆಯೆಲ್ಲ ಬೆಲೆಬಾಳುವ ವಸ್ತು, ಹಣಕ್ಕಾಗಿ ತಡಕಾಡಿದ್ದ. ಆದರೆ ಅಲ್ಲಿದ್ದ ಸಿಸಿ ಟಿವಿ ಕುಂದಾಪುರದ ಸೈನ್‌ ಇನ್‌ ಸೆಕ್ಯುರಿಟಿ ಸಂಸ್ಥೆಯ 24 ತಾಸು ನೇರ ವೀಕ್ಷಣೆಯ ಟಿವಿ ಎಂದು ಗೊತ್ತಾಗದೇ ಸಿಕ್ಕಿಬಿದ್ದ. ನೇರ ವೀಕ್ಷಣೆ ಮಾಡುತ್ತಿದ್ದ ಸೈನ್‌ ಇನ್‌ ಸೆಕ್ಯುರಿಟಿ ಸಂಸ್ಥೆಯ ಸಿಬಂದಿ ತತ್‌ಕ್ಷಣ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿ, ರಾತ್ರಿ ರೌಂಡ್ಸ್‌ನಲ್ಲಿ ಬಂಟ್ವಾಡಿ ಸಮೀಪವಿದ್ದ ಪಿಎಸ್‌ಐ ಬಸವರಾಜ ಕನಶೆಟ್ಟಿ ಅವರು 5 ನಿಮಿಷದ ಒಳಗೆ ತಲುಪುವಂತೆ ಮಾಡಿದರು. ಪೊಲೀಸ್‌ ಸಿಬಂದಿ ಮೋಹನ ಪೂಜಾರಿ ಹಾಗೂ ಎಸ್‌ಐ ಘಟನ ಸ್ಥಳಕ್ಕೆ ತೆರಳಿ ಕಿಟಕಿ ಮೂಲಕವೇ ಕಳ್ಳನಿಗೆ ಪೊಲೀಸ್‌ ಬಂದುದನ್ನು ತಿಳಿಸಿ ಎಚ್ಚರಿಸಿ ಅಲ್ಲೇ ಇರುವಂತೆ ಮಾಡಿದರು. ಬ್ರಾಂಚ್‌ ಮ್ಯಾನೇಜರ್‌ ಹಾಗೂ ಸಿಬಂದಿ ಸ್ಥಳಕ್ಕೆ ಬಂದ ಬಳಿಕ ಬಾಗಿಲು ತೆರೆದು ಕಳವು ಮಾಡುತ್ತಿದ್ದವನನ್ನು ವಶಕ್ಕೆ ಪಡೆದಿದ್ದಾರೆ.

ಸ್ವಾಧೀನ
ಆರೋಪಿಯಿಂದ ಕಳವು ಮಾಡಿದ ನಗದು 2 ಸಾವಿರ ರೂ., ಕಳವು ಮಾಡಲು ಬಂದ ಸುಝುಕಿ ಎಕ್ಸೆಸ್‌ ಮೋಟಾರು ಸೈಕಲ್‌, ಮೊಬೈಲ್‌, ಕೃತ್ಯಕ್ಕೆ ಉಪಯೋಗಿಸಿದ ಮೂರು ರಾಡ್‌, ಕಟ್ಟಿಂಗ್‌ ಪ್ಲೇಯರ್‌ ಇನ್ನಿತರ ವಸ್ತುಗಳನ್ನು ಸ್ವಾಧೀನಪಡಿಸಿಕೊಂಡು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಟಾಪ್ ನ್ಯೂಸ್

Mann Ki Baat ಕಬ್ಬನ್‌ ಪಾರ್ಕ್‌ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ

Mann Ki Baat ಕಬ್ಬನ್‌ ಪಾರ್ಕ್‌ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ

DK Shivakumar ಅವಳಿ ಹುದ್ದೆ ಮೇಲೆ ಜಿ. ಪರಮೇಶ್ವರ್‌ ಬಾಂಬ್‌!

DK Shivakumar ಅವಳಿ ಹುದ್ದೆ ಮೇಲೆ ಜಿ. ಪರಮೇಶ್ವರ್‌ ಬಾಂಬ್‌!

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

Natural Disaster; ವಿಪತ್ತು ನಿರ್ವಹಣ ಯೋಜನೆ ವಿಕೇಂದ್ರೀಕರಣ : ಡಿಸಿ ಮುಲ್ಲೈ ಮುಗಿಲನ್

Natural Disaster; ವಿಪತ್ತು ನಿರ್ವಹಣ ಯೋಜನೆ ವಿಕೇಂದ್ರೀಕರಣ : ಡಿಸಿ ಮುಲ್ಲೈ ಮುಗಿಲನ್

NIA (2)

NIA ದಾಳಿ; ತಮಿಳುನಾಡಿನಲ್ಲಿ ಉಗ್ರ ಸಂಘಟನೆ ಸೇರಲು ಕುಮ್ಮಕ್ಕು: ಇಬ್ಬರ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vandseಬೆಳ್ಳಾಲ ದುರಂತ: ಮಕ್ಕಳಿಬ್ಬರ ಅಂತ್ಯಸಂಸ್ಕಾರ: ತಾಯಿ ಚೇತರಿಕೆ,ಆಸ್ಪತ್ರೆಯಿಂದ ಬಿಡುಗಡೆ

Vandseಬೆಳ್ಳಾಲ ದುರಂತ: ಮಕ್ಕಳಿಬ್ಬರ ಅಂತ್ಯಸಂಸ್ಕಾರ: ತಾಯಿ ಚೇತರಿಕೆ,ಆಸ್ಪತ್ರೆಯಿಂದ ಬಿಡುಗಡೆ

Udupi ಆಟೋ ರಿಕ್ಷಾ ಢಿಕ್ಕಿ: ಕಾರು ಜಖಂ

Udupi ಆಟೋ ರಿಕ್ಷಾ ಢಿಕ್ಕಿ: ಕಾರು ಜಖಂ

Manipal ಗಸ್ತು ನಿರತ ಪೊಲೀಸ್‌ ಸಿಬಂದಿಗೆ ಸ್ಕೂಟರ್‌ ಢಿಕ್ಕಿ

1-kota

MP ಕೋಟ ಶ್ರೀನಿವಾಸ ಪೂಜಾರಿಯವರಿಗೆ ಮಾತೃವಿಯೋಗ

Parkala: ಕೆರೆದಂಡೆ ನಾಲ್ಕನೇ ಬಾರಿ ಕುಸಿತ; ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

Parkala: ಕೆರೆದಂಡೆ ನಾಲ್ಕನೇ ಬಾರಿ ಕುಸಿತ; ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

Mann Ki Baat ಕಬ್ಬನ್‌ ಪಾರ್ಕ್‌ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ

Mann Ki Baat ಕಬ್ಬನ್‌ ಪಾರ್ಕ್‌ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ

DK Shivakumar ಅವಳಿ ಹುದ್ದೆ ಮೇಲೆ ಜಿ. ಪರಮೇಶ್ವರ್‌ ಬಾಂಬ್‌!

DK Shivakumar ಅವಳಿ ಹುದ್ದೆ ಮೇಲೆ ಜಿ. ಪರಮೇಶ್ವರ್‌ ಬಾಂಬ್‌!

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.