Kota ಗರಿಕೆಮಠ ಅರ್ಕಗಣಪತಿ ಕ್ಷೇತ್ರ: ಅಪರೂಪದ ಲಕ್ಷ ಲಿಂಗಾರ್ಚನವಿಧಿ ಸಂಪನ್ನ
Team Udayavani, Sep 2, 2024, 12:13 AM IST
ಕೋಟ: ಇತಿಹಾಸ ಪ್ರಸಿದ್ಧ ಗರಿಕೆಮಠ ಅರ್ಕಗಣಪತಿ ಕ್ಷೇತ್ರವು ದಕ್ಷಿಣ ಭಾರತದಲ್ಲೇ ಅಪರೂಪದ ಲಕ್ಷ ಲಿಂಗಾರ್ಚನವಿಧಿ ಧಾರ್ಮಿಕ ಕಾರ್ಯಕ್ರಮಕ್ಕೆ ಶನಿವಾರ ಹಾಗೂ ರವಿವಾರ ಸಾಕ್ಷಿಯಾಯಿತು.
ಗರಿಕೆಮಠ ಕ್ಷೇತ್ರದ ಮುಖ್ಯಸ್ಥ ಆಗಮ ಪ್ರವೀಣ, ವೇ| ಮೂ| ರಾಮಪ್ರಸಾದ ಅಡಿಗರ ನೇತೃತ್ವದಲ್ಲಿ ಇಂಗ್ಲೆಂಡ್ನ ದೀಪೇಶ್ ಎಂ. ದೊಡಿಯಾ ಅವರ ಸೇವೆಯಾಗಿ ಈ ಕಾರ್ಯಕ್ರಮ ನಡೆಯಿತು.
ಅಷ್ಟಮಾತ್ರಿಕೆ ಹಾಗೂ ಮಣ್ಣಿನಿಂದ ಒಂದು ಲಕ್ಷ ಲಿಂಗಗಳನ್ನು ತಯಾರಿಸಿ, ನೂರಾರು ಸಂಖ್ಯೆಯ ಪುರೋಹಿತರು ಧಾರ್ಮಿಕ ವಿಧಿ-ವಿಧಾನಗಳು, ಶತಕಲಶಾಭಿಷೇಕ, ರುದ್ರಯಾಗ, ಲಕ್ಷಲಿಂಗ ಪೂಜಾವೃತ ಮೊದಲಾದ ಕಾರ್ಯಕ್ರಮಗಳನ್ನು ನಡೆಸಿದರು.
ಭಕ್ತರು ಪುಳಕ: ಲಕ್ಷ ಲಿಂಗಾರ್ಚನವಿಧಿ ಹೆಚ್ಚಾಗಿ ಉತ್ತರ ಪ್ರದೇಶ, ಕಾಶಿಯಂತಹ ಮಹಾಕ್ಷೇತ್ರದಲ್ಲಿ ನಡೆಯುತ್ತದೆ. ಕರ್ನಾಟಕದಲ್ಲಿ ಪ್ರಥಮವಾಗಿ ನಡೆದ ಈ ಕಾರ್ಯಕ್ರಮಕ್ಕೆ ಸಾವಿರಾರು ಭಕ್ತರು ಆಗಮಿಸಿ ಕಣ್ತುಂಬಿಕೊಂಡರು. ವೈದಿಕರು ಲಕ್ಷ ಸಂಖ್ಯೆಯ ಲಿಂಗಗಳಿಗೆ ಮತ್ತು ಪ್ರಧಾನ ಲಿಂಗಕ್ಕೆ ಸಲ್ಲಿಸುವ ಪೂಜೆಯನ್ನು ಭಕ್ತರಿಗೆ ಹತ್ತಿರದಲ್ಲೇ ನೋಡಲು ಅವಕಾಶ ಕಲ್ಪಿಸಲಾಗಿತ್ತು.
ಕ್ಷೇತ್ರದಲ್ಲಿ ಲೋಕ ಕಲ್ಯಾಣಕ್ಕಾಗಿ ಶ್ರೀನಿವಾಸ ಕಲ್ಯಾಣ, ಕಾಶೀ ಗಂಗಾರತಿ, ಸೀತಾ ಕಲ್ಯಾಣ ಮೊದಲಾದ ಕಾರ್ಯಕ್ರಮ ನಡೆದಿತ್ತು. ಅದೇ ರೀತಿ ಕ್ಷೇತ್ರದ ಭಕ್ತ ರಾದ ದೀಪೇಶ್ ಎಂ.ದೊಡಿಯಾ ಅವರು ಮೋಕ್ಷ ಪ್ರಾಪ್ತಿಗಾಗಿ ಮತ್ತು ಲೋಕ ಕಲ್ಯಾಣಕ್ಕಾಗಿ ಈ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಎಲ್ಲರ ಸಹಕಾರ ದಿಂದ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿದೆ ಎಂದು ಕ್ಷೇತ್ರದ ಮುಖ್ಯಸ್ಥ ರಾಮಪ್ರಸಾದ ಅಡಿಗರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ
Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
Chaturmasya: ವಿಶ್ವಕರ್ಮ ಮ್ಯೂಸಿಯಂ ಸ್ಥಾಪನೆ ಗುರಿ: ಶ್ರೀ ಕಾಳಹಸ್ತೇಂದ್ರ ಸ್ವಾಮೀಜಿ
Child safety: ಮಕ್ಕಳ ರಕ್ಷಣ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.