ಗವಿಗಂಗಾಧರನಿಗೆ ಸೂರ್ಯಾಭಿಷೇಕ ;ನೂತನ ವರ್ಷ ಶುಭವಾಗಿರಲಿದೆ


Team Udayavani, Jan 15, 2022, 11:08 AM IST

1–dsds

 ಬೆಂಗಳೂರು: ಹನುಮಂತ ನಗರದಲ್ಲಿರುವ ಐತಿಹಾಸಿಕ ಶಿವದೇವಾಲಯ ಗವಿಗಂಗಾಧರೇಶ್ವರನ ಸನ್ನಿಧಿ ಶುಕ್ರವಾರ ಸೂರ್ಯನ ರಶ್ಮಿಯ ಚಮತ್ಕಾರಕ್ಕೆ ಸಾಕ್ಷಿಯಾಯಿತು. ಮಕರ ಸಂಕ್ರಮಣದ ಹಿನ್ನೆಲೆಯಲ್ಲಿ ಸೂರ್ಯರಶ್ಮಿ ಶಿವನ ಪಾದವನ್ನು ಸ್ಪರ್ಶಿಸಿ ಅಚ್ಚರಿ ಸನ್ನಿವೇಶವನ್ನು ಸೃಷ್ಟಿಸಿತು. ಹೀಗಾಗಿ ಕೆಲವು ನಿಮಿಷಗಳ ಕಾಲ ಗವಿಗಂಗಾಧರನಿಗೆ ಸೂರ್ಯಾಭಿಷೇಕವೇ ನಡೆಯಿತು.

ಗರ್ಭ ಗುಡಿಯೊಳಗಿನ ಲಿಂಗದ ಮುಂದಿ ರುವ ನಂದಿಕೊಂಬಿ ನಿಂದ ಹಾದು ಹೋದ ಸೂರ್ಯನ ಕಿರಣಗಳು ನಂತರ ಪಾಣಿ ಪೀಠದ ಮೂಲಕ ಶಿವಲಿಂಗದ ಮೇಲೆ ಪ್ರಕಾಶ ಮಾನವಾಗಿ ಬೆಳಗಿತು. ಸುಮಾರು 2 ನಿಮಿಷ 13 ಸೆಂಕೆಡ್‌ಗಳ ಕಾಲ ಸೂರ್ಯನು ಗವಿಗಂಗಾಧರನ ದರ್ಶನ ಪಡೆದಂತಾಗಿತ್ತು. ಸೂರ್ಯನ ರಶ್ಮಿಗಳು ಶಿವಲಿಂಗವನ್ನು ಸ್ಪರ್ಶಿಸುವ ವೇಳೆ ಬಂಗಾರದ ಬಣ್ಣ ಶಿವಲಿಂಗದ ಸುತ್ತ ಕವಿದು ಭಕ್ತಿ ಲೋಕವನ್ನು ಅನಾವರಣಗೊಳಿಸಿತು. ಓಂ ನಮಃ ಶಿವಾಯ ಮಂತ್ರ ಘೋಷಗಳು ಮೊಳಗಿದವು. ಗಂಟೆ ಸದ್ದಿನ ಜತೆಗೆ ನಾದ ಸ್ವರ ಭಕ್ತರ ಭಕ್ತಿಯನ್ನು ಇಮ್ಮಡಿಗೊಳಿಸಿತು. ಕಳೆದ ಬಾರಿ ಮೋಡಕವಿದ ವಾತಾವರಣದಿಂದ ಸೂರ್ಯರಶ್ಮಿಗಳು ಗಂಗಾಧರನಿಗೆ ತಲುಪಿರಲಿಲ್ಲ.

ದೇಗುಲಕ್ಕೆ ಅಪಾರಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಿದ್ದ ಕಾರಣ ಟಿ.ವಿ.ಮಾಧ್ಯಮಗಳ ನೇರ ಪ್ರಸಾರ ಮೂಲಕ ಅಸಂಖ್ಯಾತ ಭಕ್ತರು ಗವಿಗಂಗಾಧರೇಶ್ವರನ ಸೂರ್ಯಾಭಿಷೇಕವನ್ನು ಕಣ್ತುಂಬಿಕೊಂಡರು. ಸೂರ್ಯರಶ್ಮಿ ಶಿವಲಿಂಗ ಸ್ಪರ್ಶಿಸಿದ ನಂತರ ಶಿವಲಿಂಗಕ್ಕೆ ಕ್ಷೀರಾಭಿಷೇಕ ಸೇರಿದಂತೆ ವಿಶೇಷ ವಿಶೇಷ ಪೂಜೆಗಳನ್ನು ನೆರವೇರಿಸಲಾಯಿತು. ದೇವಸ್ಥಾನದ ಪ್ರಧಾನ ಅರ್ಚಕ ಸೋಮಸುಂದರ್‌ ದೀಕ್ಷಿತ್‌ ಪ್ರತಿಕ್ರಿಯಿಸಿ, ಸೂರ್ಯ ದೇವ ದಕ್ಷಿಣಾಯನ ಮುಗಿಸಿ ಉತ್ತರಾಯಣದತ್ತ ಹಾದು ಹೋಗಿದ್ದಾನೆ. ಕಳೆದ ಬಾರಿ ಮೋಡದ ಮರೆಯಲ್ಲಿ ಸೂರ್ಯ ಹಾದುಹೋಗಿದ್ದ. ಈ ಬಾರಿ ಸೂರ್ಯ ರಶ್ಮಿ ಚೆನ್ನಾಗಿ ಗೋಚರಿಸಿದೆ.

ಕೊರೊನಾ ಮಹಾಮಾರಿಯಿಂದ ಈ ವರ್ಷ ಭಕ್ತರಿಗೆ ಅವಕಾಶ ಕಲ್ಪಿಸಲಾಗಿರಲಿಲ್ಲ. ದಕ್ಷಿಣ ಪಥದಿಂದ ಉತ್ತರ ಪಥಕ್ಕೆ ಸಾಗುವ ಸೂರ್ಯ ದೇವ ಶಿವದರ್ಶನ ಪಡೆದ ವೇಳೆ ಶಿವನ ವಿಗ್ರಹಕ್ಕೆ ಎಳನೀರು ಮತ್ತು ಕ್ಷೀರಾಭಿಷೇಕ ಮಾಡಲಾಯಿತು ಎಂದರು.

ಈ ನೂತನ ವರ್ಷ ಶುಭವಾಗಿರಲಿದೆ

ಕಳೆದ ಬಾರಿ ಮೋಡದ ಮರೆಯಲ್ಲಿ ಸೂರ್ಯ ಹಾದುಹೋಗಿದ ಹಿನ್ನೆಲೆಯಲ್ಲಿ ಹಲವು ಸಂಕಷ್ಟಗಳನ್ನು ನಾವು ಅನುಭವಿಸಿದ್ದೆವು. ಕೊರೊನಾ ಸಂಕಷ್ಟ ಎದುರಾಯಿತು. ಆದರೆ ಈ ವರ್ಷ ಸೂರ್ಯ ರಶ್ಮಿ ಶಿವಲಿಂಗವನ್ನು ಸಂಪೂರ್ಣ ವಾಗಿ ಸ್ಪರ್ಶಿಸಿದೆ. ಹೀಗಾಗಿ ಎಲ್ಲವೂ ಶುಭವಾಗಿಯೇ ಇರಲಿದೆ ಎಂದು ಸೋಮಸುಂದರ್‌ ದೀಕ್ಷಿತ್‌ ತಿಳಿಸಿದರು. ಕಳೆದ ತಿಂಗಳ ಅಂತ್ಯ ಮತ್ತು ಈ ತಿಂಗಳ ಆರಂಭದಲ್ಲೆ ಕ್ರಮೇಣ ಸೋಂಕು ಏರಿಕೆಯಾಗಿದೆ. ಜಗತ್ತು ಕೋವಿಡ್‌ ಮಹಾಮಾರಿಯಿಂದ ಮುಕ್ತಿಯಾಗಲಿ. ಆ ಮೂಲಕ ವಿಶ್ವಕ್ಕೆ ಒಳಿತಾಗಲಿ ಎಂದು ಆಶಿಸಿದರು.

ಟಾಪ್ ನ್ಯೂಸ್

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.