ಜರ್ಮನಿ : ಎಲ್ಲೇ ಹೋದರೂ ಮಾಸ್ಕ್ ಕಡ್ಡಾಯ


Team Udayavani, Apr 28, 2020, 4:50 PM IST

ಜರ್ಮನಿ : ಎಲ್ಲೇ ಹೋದರೂ ಮಾಸ್ಕ್ ಕಡ್ಡಾಯ

ಮಣಿಪಾಲ: ಜರ್ಮನಿಯಲ್ಲಿ ಇದೀಗ ಚೇತರಿಕೆ ಗಾಳಿ ಬೀಸುತ್ತಿದೆ. ಆದರೆ ಅಷ್ಟೇ ವೇಗವಾಗಿ ಲಾಕ್‌ಡೌನ್‌ ನಿಯಮಗಳನ್ನು ಈ ದೇಶ ಸಡಿಲಗೊಳಿಸುತ್ತಿದ್ದು, ಆತಂಕದ ನಡುವೆಯೇ ದೇಶವನ್ನು ಸಹಜ ಸ್ಥಿತಿಯತ್ತ ತರಲು ಪ್ರಯತ್ನಿಸುತ್ತಿದೆ.
ಈ ಹಿನ್ನೆಲೆಯಲ್ಲಿ ಲಾಕ್‌ಡೌನ್‌ ಸಂಬಂಧಿಸಿದಂತೆ ಹಲವು ವಿನಾಯಿತಿ ನೀಡಿದರೂ ಸಾರ್ವಜನಿಕ ಸಾರಿಗೆ ವ್ಯಾಪಾರ ಸ್ಥಳ, ಅಂಗಡಿ ಮುಂಗಟ್ಟು ಸೇರಿದಂತೆ ಇತರ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ ನಿಯಮ ಜಾರಿಗೊಳಿಸಲಾಗಿದೆ.

ಪ್ರತಿ ರಾಜ್ಯದ ಸರಕಾರ ಜತೆ ಚರ್ಚೆ
ಪಶ್ಚಿಮ ರಾಜ್ಯವಾದ ನಾರ್ತ್‌ ರೈನ್‌-ವೆಸ್‌ಟಾ#ಲಿಯಾದಲ್ಲಿ, ಬಸ್‌ ನಿಲ್ದಾಣಗಳು, ರೈಲು ನಿಲ್ದಾಣಗಳು, ಬ್ಯಾಂಕುಗಳು, ಅಂಚೆ ಕಚೇರಿಗಳು ಮತ್ತು ಪೆಟ್ರೋಲ್‌ ಬಂಕ್‌ಗಳಲ್ಲಿ ಮಾಸ್ಕ್ ಧರಿಸಿಯೇ ವ್ಯವಹಾರ. ಗ್ರಾಹಕರು ಕಡ್ಡಾಯವಾಗಿ ಮಾಸ್ಕ್ ಧರಿಸಿಯೇ ಬರಬೇಕು. ಆದರೆ ಅದೇ ಬರ್ಲಿನ್‌ನ ಅಂಗಡಿಗಳಲ್ಲಿ ಮಾಸ್ಕ್ ಧಾರಣೆ ನಿಯಮಕ್ಕೆ ವಿನಾಯಿತಿ ನೀಡಿದೆ.

ಆದರೆ ಈ ರೀತಿ ರಾಜ್ಯದಿಂದ ರಾಜ್ಯಕ್ಕೆ ನಿಯಮಗಳು ಭಿನ್ನವಾಗುವುದರಿಂದ ಜನರಲ್ಲಿ ಗೊಂದಲ ಮೂಡಬಹುದು. ಜತೆಗೆ ಸೋಂಕು ಹರಡುವ ಸಾಧ್ಯತೆ ಹೆಚ್ಚಾಗಬಹುದು. ಹಾಗಾಗಿ ಪ್ರತಿ ರಾಜ್ಯಗಳ ಸರಕಾರ ಜತೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳಲು ಸರಕಾರ ಚಿಂತನೆ ನಡೆಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಸರಕಾರ ಸೂಚಿಸಿರುವ ಮಾರ್ಗಸೂಚಿಗಳಿಗೆ ಫೆಡರಲ್‌ ಮತ್ತು ರಾಜ್ಯ ಸರಕಾರಗಳು ಒಪ್ಪಿಗೆ ಸೂಚಿಸಿದ್ದು, ಮುಂದಿನ ಹಂತವಾಗಿ ಅಂಗಡಿ ಮತ್ತು ಶಾಲಾ ತೆರೆಯುವಿಕೆಯ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದೆ.

ಪ್ರಧಾನಿಯಿಂದ ಖಡಕ್‌ ವಾರ್ನಿಂಗ್‌
ಕಳೆದ ವಾರ, ಚಾನ್ಸೆಲರ್‌ಏಂಜೆಲಾ ಮರ್ಕೆಲ್‌ ನಿಯಮಗಳನ್ನು ಸಡಿಲಗೊಳಿಸಿದ್ದರ ಕುರಿತು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದು, ಈ ನಿರ್ಧಾರ ನಮ್ಮ “ಮೂರ್ಖತನ”ವನ್ನು ಸೂಚಿಸಬಹುದು ಎಂದು ಹೇಳುವ ಮೂಲಕ ಸಡಿಲಿಕೆಯ ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದರು.

ನೂರು ಬಾರಿ ಯೋಚಿಸಿ
ದೇಶದಲ್ಲಿ ನೀಡಲಾಗುತ್ತಿರುವ ನಿಯಮಗಳನ್ನು ಕುರಿತಾಗಿ ಮಾತನಾಡಿರುವ ಅವರು, ಸದ್ಯ ಸೋಂಕು ಪ್ರಸರಣ ಕಡಿತವಾಗಿದ್ದರೂ, ಕೆಲವು ದಿನಗಳ ಅನಂತರ ಹೊಸ ಸೋಂಕು ಪ್ರಕರಣಗಳು ಸಾಮಾನ್ಯವಾಗಿ ಪತ್ತೆಯಾಗಬಹುದು. ಆಗ ಇಷ್ಟು ದಿನ ನಾವು ಪಟ್ಟ ಶ್ರಮವೆಲ್ಲಾ ಹಾಳಾಗುತ್ತದೆ. ಹಾಗಾಗಿ ಸಡಿಲಿಕೆಯಲ್ಲಿ ವಿನಾಯಿತಿ ನೀಡುವಾಗ ನೂರು ಬಾರಿ ಯೋಚಿಸಿ ಎಂದು ಪ್ರತಿಯೊಂದು ರಾಜ್ಯದ ಆಡಳಿತಗಾರರಿಗೆ ಕಿವಿಮಾತು ಹೇಳಿದ್ದಾರೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Trump-musk

Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹತ್ಯೆ

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹ*ತ್ಯೆ

India cuts import duty on American Bourbon Whiskey

Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.